Homeಮುಖಪುಟಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

- Advertisement -
- Advertisement -

ಭಾರತ್‌‌ ಜೋಡೋ ಯಾತ್ರೆ ಪ್ರಾರಂಭಿಸಿರುವ ಕಾಂಗ್ರೆಸ್‌ ತನ್ನ ಅದೀಕೃತ ಟ್ವಿಟರ್‌ ಖಾತೆಯಲ್ಲಿ, ಉರಿಯುತ್ತಿರುವ ಆರೆಸ್ಸೆಸ್‌‌ ಚಡ್ಡಿಯ ಚಿತ್ರವನ್ನು ಪೋಸ್ಟ್‌ ಮಾಡಿದೆ. ಚಿತ್ರದಲ್ಲಿ, ‘145 ದಿನಗಳು ಬಾಕಿಯಿದೆ’ ಎಂದು ಬರೆದಿದ್ದು, ಪೋಸ್ಟ್‌‌ನಲ್ಲಿ ‘ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ’ ಎಂದು ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್ ತನ್ನ ಟ್ವಿಟರ್‌ ಖಾತೆಯಲ್ಲಿ, #BharatJodoYatra ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ,“ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ-ಆರ್‌ಎಸ್‌ಎಸ್ ಮಾಡಿದ ಹಾನಿಯನ್ನು ಸರಿಪಡಿಸಲು. ಹಂತ ಹಂತವಾಗಿ, ನಾವು ನಮ್ಮ ಗುರಿಯನ್ನು ತಲುಪುತ್ತೇವೆ” ಎಂದು ಬರೆದುಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 150 ದಿನಗಳ ಯಾತ್ರೆಯನ್ನು ಆರಂಭಿಸಿದ ಸಮಯದಲ್ಲಿಯೇ ಆರೆಸ್ಸೆಸ್ ವಿರುದ್ಧ ಸ್ಪಷ್ಟ ಮತ್ತು ಕಠಿಣವಾದ ನಿಲುವಿಗೆ ಪಕ್ಷವೂ ಬಂದಿದೆ. ಯಾತ್ರೆಯು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಹಾದುಹೋಗಲಿದೆ. 150 ದಿನಗಳ ಅವಧಿಯಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಿಂದ ಜಮ್ಮು ಕಾಶ್ಮೀರದವರೆಗೆ 3,570 ಕಿ.ಮೀ. ಕ್ರಮಿಸಲಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ತಮಿಳು ಹುಡುಗಿಯನ್ನು ಮದುವೆಯಾಗುತ್ತಾರೆ: ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯ ಅಭಿಲಾಷೆ

ಕಾಂಗ್ರೆಸ್‌ ಟ್ವೀಟ್ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಚಿತ್ರವನ್ನು ತಕ್ಷಣ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಆದರೆ ಕಾಂಗ್ರೆಸ್ ಈ ಚಿತ್ರವನ್ನು ಸಮರ್ಥಿಸಿಕೊಂಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ನಾನು ಟಿ-ಶರ್ಟ್‌ಗಳು, ಒಳ ಉಡುಪುಗಳ ಬಗ್ಗೆ ಮಾತನಾಡಲು ಬಯಸುವುದಿಲ್ಲ, ಬಿಜೆಪಿ ಕಂಟೈನರ್, ಶೂ ಅಥವಾ ಟಿ-ಶರ್ಟ್‌ಗಳ ಬಗ್ಗೆ ವಿವಾದ ಮಾಡಲು ಬಯಸಿದರೆ ಅದು ಅವರು ಭಯಪಟ್ಟಿರುವುದನ್ನು ತೋರಿಸುತ್ತದೆ.‘ಸುಳ್ಳಿನ ಕಾರ್ಖಾನೆ’ ಸಾಮಾಜಿಕ ಮಾಧ್ಯಮದಲ್ಲಿ ಓವರ್ಟೈಮ್ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ,“ಈ ಚಿತ್ರವು ದೇಶದಲ್ಲಿ ಬೆಂಕಿ ಹಚ್ಚುತ್ತೇವೆ ಎಂಬ ಕಾಂಗ್ರೆಸ್ ರಾಜಕೀಯದ ಸಂಕೇತವಾಗಿದೆ. ಅವರು ಈ ಹಿಂದೆ ಹಚ್ಚಿದ ಬೆಂಕಿಯು ಭಾರತದ ಹೆಚ್ಚಿನ ಭಾಗಗಳಲ್ಲಿ ಅವರನ್ನು ಸುಟ್ಟುಹಾಕಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗ್ರಾದಲ್ಲಿ ಉಳಿದಿರುವ ಉರಿಗಳು ಸಹ ಶೀಘ್ರದಲ್ಲೇ ಬೂದಿಯಾಗುತ್ತವೆ. ಈ ಟ್ವೀಟ್‌ ಅನ್ನು ಉಳಿಸಿಟ್ಟುಕೊಳ್ಳಿ” ಎಂದು ಸವಾಲೆಸೆದಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು,“ಇದು ಭಾರತ ಜೋಡಿಸುವ ಯಾತ್ರೆ ಅಲ್ಲ, ಭಾರತ ಒಡೆಯುವ ಮತ್ತು ಬೆಂಕಿ ಹಚ್ಚುವ ಯಾತ್ರೆ. ಕಾಂಗ್ರೆಸ್ ಪಕ್ಷವು ಹೀಗೆ ಮಾಡುತ್ತಿರುವುದು ಇದೇ ಮೊದಲಲ್ಲ. ನಾನು ರಾಹುಲ್ ಗಾಂಧಿಯನ್ನು ಕೇಳಲು ಬಯಸುತ್ತೇನೆ. ನಿಮಗೆ ಈ ದೇಶದಲ್ಲಿ ಹಿಂಸಾಚಾರ ಬೇಕೇ? ಕಾಂಗ್ರೆಸ್ ಕೂಡಲೇ ಈ ಚಿತ್ರವನ್ನು ತೆಗೆಯಬೇಕು” ಎಂದು ಆಗ್ರಹಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...