Homeಮುಖಪುಟಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

- Advertisement -
- Advertisement -

ಭಾರತ್‌‌ ಜೋಡೋ ಯಾತ್ರೆ ಪ್ರಾರಂಭಿಸಿರುವ ಕಾಂಗ್ರೆಸ್‌ ತನ್ನ ಅದೀಕೃತ ಟ್ವಿಟರ್‌ ಖಾತೆಯಲ್ಲಿ, ಉರಿಯುತ್ತಿರುವ ಆರೆಸ್ಸೆಸ್‌‌ ಚಡ್ಡಿಯ ಚಿತ್ರವನ್ನು ಪೋಸ್ಟ್‌ ಮಾಡಿದೆ. ಚಿತ್ರದಲ್ಲಿ, ‘145 ದಿನಗಳು ಬಾಕಿಯಿದೆ’ ಎಂದು ಬರೆದಿದ್ದು, ಪೋಸ್ಟ್‌‌ನಲ್ಲಿ ‘ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ’ ಎಂದು ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್ ತನ್ನ ಟ್ವಿಟರ್‌ ಖಾತೆಯಲ್ಲಿ, #BharatJodoYatra ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ,“ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ-ಆರ್‌ಎಸ್‌ಎಸ್ ಮಾಡಿದ ಹಾನಿಯನ್ನು ಸರಿಪಡಿಸಲು. ಹಂತ ಹಂತವಾಗಿ, ನಾವು ನಮ್ಮ ಗುರಿಯನ್ನು ತಲುಪುತ್ತೇವೆ” ಎಂದು ಬರೆದುಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 150 ದಿನಗಳ ಯಾತ್ರೆಯನ್ನು ಆರಂಭಿಸಿದ ಸಮಯದಲ್ಲಿಯೇ ಆರೆಸ್ಸೆಸ್ ವಿರುದ್ಧ ಸ್ಪಷ್ಟ ಮತ್ತು ಕಠಿಣವಾದ ನಿಲುವಿಗೆ ಪಕ್ಷವೂ ಬಂದಿದೆ. ಯಾತ್ರೆಯು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಹಾದುಹೋಗಲಿದೆ. 150 ದಿನಗಳ ಅವಧಿಯಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಿಂದ ಜಮ್ಮು ಕಾಶ್ಮೀರದವರೆಗೆ 3,570 ಕಿ.ಮೀ. ಕ್ರಮಿಸಲಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ತಮಿಳು ಹುಡುಗಿಯನ್ನು ಮದುವೆಯಾಗುತ್ತಾರೆ: ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯ ಅಭಿಲಾಷೆ

ಕಾಂಗ್ರೆಸ್‌ ಟ್ವೀಟ್ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಚಿತ್ರವನ್ನು ತಕ್ಷಣ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಆದರೆ ಕಾಂಗ್ರೆಸ್ ಈ ಚಿತ್ರವನ್ನು ಸಮರ್ಥಿಸಿಕೊಂಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ನಾನು ಟಿ-ಶರ್ಟ್‌ಗಳು, ಒಳ ಉಡುಪುಗಳ ಬಗ್ಗೆ ಮಾತನಾಡಲು ಬಯಸುವುದಿಲ್ಲ, ಬಿಜೆಪಿ ಕಂಟೈನರ್, ಶೂ ಅಥವಾ ಟಿ-ಶರ್ಟ್‌ಗಳ ಬಗ್ಗೆ ವಿವಾದ ಮಾಡಲು ಬಯಸಿದರೆ ಅದು ಅವರು ಭಯಪಟ್ಟಿರುವುದನ್ನು ತೋರಿಸುತ್ತದೆ.‘ಸುಳ್ಳಿನ ಕಾರ್ಖಾನೆ’ ಸಾಮಾಜಿಕ ಮಾಧ್ಯಮದಲ್ಲಿ ಓವರ್ಟೈಮ್ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ,“ಈ ಚಿತ್ರವು ದೇಶದಲ್ಲಿ ಬೆಂಕಿ ಹಚ್ಚುತ್ತೇವೆ ಎಂಬ ಕಾಂಗ್ರೆಸ್ ರಾಜಕೀಯದ ಸಂಕೇತವಾಗಿದೆ. ಅವರು ಈ ಹಿಂದೆ ಹಚ್ಚಿದ ಬೆಂಕಿಯು ಭಾರತದ ಹೆಚ್ಚಿನ ಭಾಗಗಳಲ್ಲಿ ಅವರನ್ನು ಸುಟ್ಟುಹಾಕಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗ್ರಾದಲ್ಲಿ ಉಳಿದಿರುವ ಉರಿಗಳು ಸಹ ಶೀಘ್ರದಲ್ಲೇ ಬೂದಿಯಾಗುತ್ತವೆ. ಈ ಟ್ವೀಟ್‌ ಅನ್ನು ಉಳಿಸಿಟ್ಟುಕೊಳ್ಳಿ” ಎಂದು ಸವಾಲೆಸೆದಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು,“ಇದು ಭಾರತ ಜೋಡಿಸುವ ಯಾತ್ರೆ ಅಲ್ಲ, ಭಾರತ ಒಡೆಯುವ ಮತ್ತು ಬೆಂಕಿ ಹಚ್ಚುವ ಯಾತ್ರೆ. ಕಾಂಗ್ರೆಸ್ ಪಕ್ಷವು ಹೀಗೆ ಮಾಡುತ್ತಿರುವುದು ಇದೇ ಮೊದಲಲ್ಲ. ನಾನು ರಾಹುಲ್ ಗಾಂಧಿಯನ್ನು ಕೇಳಲು ಬಯಸುತ್ತೇನೆ. ನಿಮಗೆ ಈ ದೇಶದಲ್ಲಿ ಹಿಂಸಾಚಾರ ಬೇಕೇ? ಕಾಂಗ್ರೆಸ್ ಕೂಡಲೇ ಈ ಚಿತ್ರವನ್ನು ತೆಗೆಯಬೇಕು” ಎಂದು ಆಗ್ರಹಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...