Homeಮುಖಪುಟಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

ಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

- Advertisement -
- Advertisement -

ಪ್ಯಾನ್-ಇಂಡಿಯಾ ಪಾದಯಾತ್ರೆ ‘ಭಾರತ್ ಜೋಡೋ ಯಾತ್ರೆ’ಯು ಗುರುವಾರ ಪಂಜಾಬ್‌ನಿಂದ ಜಮ್ಮುವಿಗೆ ಪ್ರವೇಶಿಸಿದೆ. ಇದು ಯಾತ್ರೆಯ ಕೊನೆಯ ರಾಜ್ಯವಾಗಿರಲಿದೆ. ಇಂತಹ ಚಳಿಗಾಲದಲ್ಲೂ ಉತ್ತರ ಭಾರತದಾದ್ಯಂತ ಕೇವಲ ಟೀ ಶರ್ಟ್ ಧರಿಸಿಯೇ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮೊದಲ ಬಾರಿಗೆ ಜಾಕೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬೆಳಗ್ಗೆಯಿಂದ ಜಮ್ಮುವಿನ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿರುವುದರಿಂದ ರಾಹುಲ್ ಗಾಂಧಿ ಜಾಕೇಟ್ ಧರಿಸಿದ್ದರು ಎಂದು ಹೇಳಲಾಗುತ್ತದೆ. ನಂತರ ಅವರು ಜಾಕೆಟ್ ತೆಗೆದು, ಎಮದಿನಂತೆ ಬಿಳಿ ಟೀ ಶರ್ಟ್‌ನಲ್ಲಿ ನಡೆಯುತ್ತಿರುವುದು ಕಂಡುಬಂದಿತು.

ಭಾರತ್ ಜೋಡೊ ಯಾತ್ರೆ ಇಂದು 125 ದಿನಗಳನ್ನು ಪೂರೈಸಿದ್ದು, ಒಟ್ಟು 3,400 ಕಿಲೋಮೀಟರ್‌ಗಳ ದೂರ 52ವರ್ಷದ ರಾಹುಲ್ ಗಾಂಧಿಯವರು ಯಾತ್ರೆಯನ್ನು ಮುನ್ನಡೆಸಿದ್ದಾರೆ. ಈ ಯಾತ್ರೆಯುದ್ದಕ್ಕೂ ಬಿಳಿ ಬಣ್ಣದ ಟಿಶರ್ಟ್ಸ್‌ಗಳಿಂದಲೇ ಎಲ್ಲರ ಗಮನ ಸೆಳೆದಿದ್ದ ರಾಹುಲ್ ಅನೇಕರ ಮೆಚ್ಚುಗೆ ಗಳಿಸಿದ್ದಾರೆ. ರಾಹುಲ್ ಗಾಂಧಿಯವರ ಆಕರ್ಷಕ ಉಡುಪು ವಿರೋಧ ಪಕ್ಷಗಳಿಗೆ ಕೆರಳಿಸಿದ್ದಂತು ಸುಳ್ಳಲ್ಲ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ ಎಂದು ತಿರುಚಿದ ವಿಡಿಯೋ ಪೋಸ್ಟ್: ಬಿಜೆಪಿ ಮುಖಂಡನ ಮೇಲೆ FIR

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಜನವರಿ 25 ರಂದು ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್‌ನಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಎರಡು ದಿನಗಳ ನಂತರ – ಜನವರಿ 27 ರಂದು ಅನಂತನಾಗ್ ಮೂಲಕ ಶ್ರೀನಗರವನ್ನು ಪ್ರವೇಶಿಸಲು ನಿರ್ಧರಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಸ್ವಾಗತಿಸುವ ಕಾರ್ಯಕ್ರಮದ ವೇಳೆ ವೇದಿಕೆಗೆ ಜೈರಾಮ್ ರಮೇಶ್, ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್, ಅಬ್ದುಲ್ಲಾ, ಶಿವಸೇನಾ ನಾಯಕ ಸಂಜಯ್ ರಾವುತ್, ಡೋಗ್ರಾ ಸ್ವಾಭಿಮಾನ್ ಸಂಘಟನೆ ಪಕ್ಷ ಮತ್ತು ಮಾಜಿ ಸಚಿವ ಲಾಲ್ ಸಿಂಗ್, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮುಜಾಫರ್ ಶಾ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಸ್ವಾಗತಿಸಲಾಯಿತು.

ಆದರೆ ಲಾಲ್ ಸಿಂಗ್ ಅವರು ತಡವಾಗಿ ಬಂದಿದ್ದರಿಂದ ವೇದಿಕೆಯಲ್ಲಿ ಹಾಜರಿರಲಿಲ್ಲ. ತಡವಾಗಿ ಬಂದ ಅವರು, ಸಮಾರಂಭ ಮುಗಿಯುವವರೆಗೂ ಜನರ ಗುಂಪಿನಲ್ಲಿಯೇ ನಿಂತಿರುವುದು ಕಂಡುಬಂದಿತು. ಕಾರ್ಯಕ್ರಮಕ್ಕೆ ಆಗಮಿಸಿದ ನಾಯಕರಿಗೆ ಕೃತಜ್ಞತೆ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಲಾಲ್ ಸಿಂಗ್ ಹೆಸರನ್ನು ಉಲ್ಲೇಖಿಸಲಿಲ್ಲ. ಹಾಗಾಗಿ ಮುಜುಗರಕ್ಕೀಡಾಗಿ ಅಲ್ಲಿಂದ ಅವರು ಹೊರಟುಹೋದರು.

ಇಂದು ಬೆಳಿಗ್ಗೆ ಕಥುವಾದ ಹಟ್ಲಿ ಮೋರ್ಹ್‌ನಿಂದ ಪುನರಾರಂಭಗೊಂಡ ಯಾತ್ರೆಗೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಗಾಂಧಿ ಕುಟುಂಬ ಮತ್ತು ಅವರ ಸಹ-ಹಿಂಬಾಲರನ್ನು ಸುತ್ತುವರಿದಿವೆ. ಕೆಲವೆಡೆ ಜಾಮರ್‌ಗಳನ್ನೂ ಹಾಕಲಾಗಿದೆ. ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹೆಚ್ಚು ಜನ ಸೇರಿ ಪಾದಯಾತ್ರೆ ನಡೆಸದಂತೆ ಭದ್ರತಾ ಏಜೆನ್ಸಿಗಳು ರಾಹುಲ್ ಗಾಂಧಿಗೆ ಈ ಹಿಂದೆ ಸಲಹೆ ನೀಡಿದ್ದವು.

ರಾಹುಲ್ ಗಾಂಧಿಯವರು ಜಮ್ಮು ಪ್ರವೇಶಿಸಿದಾಗ ಕಾಶ್ಮೀರಿ ಪ್ರಮುಖ ನಾಯಕ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭವ್ಯ ಸ್ವಾಗತ ಕೋರಿದ್ದಾರೆ. ಲಖನ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ, ರಾಹುಲ್ ಗಾಂಧಿ ಅವರು ಜನರೊಂದಿಗೆ ಸ್ವರಮೇಳವನ್ನು ಭಾರಿಸಲು ತಮ್ಮ ಕಾಶ್ಮೀರಿ ಪೂರ್ವಜರನ್ನು ಕರೆದರು. ಈ ವೇಳೆ ಅಲ್ಲಿಯ ನಿವಾಸಿಗಳ ನೋವು ಮತ್ತು ಸಂಕಟಗಳ ಬಗ್ಗೆ ಮಾತನಾಡಿದರು.

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಂಜಾಬ್‌ನ ಮಾಧೋಪುರದಲ್ಲಿ ರಾಹುಲ್ ಗಾಂಧಿಗೆ ಹಾಡು ಮತ್ತು ನೃತ್ಯದ ನಡುವೆ ಭವ್ಯವಾದ ಸ್ವಾಗತವನ್ನು ನೀಡಲಾಯಿತು. ಕೊನೆಯ ಹಂತಕ್ಕೆ ಪ್ರವೇಶಿಸುವ ಯಾತ್ರೆಯನ್ನು ನೂರಾರು ಜನರು ಸೇರಿ ಬರಮಾಡಿಕೊಂಡರು. ಜನವರಿ 30 ರಂದು ಶ್ರೀನಗರದಲ್ಲಿ ಸಮಾರೋಪ ಕಾರ್ಯಕ್ರಮದೊಂದಿಗೆ ಯಾತ್ರೆ ಮುಕ್ತಾಯಗೊಳ್ಳಲಿದೆ.

(ರಾತ್ರಿ ಚಡ್ವಾಲ್‌ನಲ್ಲಿ ಯಾತ್ರೆ ನಿಲ್ಲಲಿದೆ. ನಾಳೆ ಬೆಳಗ್ಗೆ ಹೀರಾನಗರದಿಂದ ದುಗ್ಗರ್ ಹವೇಲಿಗೆ ಹೊರಟು ಜನವರಿ 22ರಂದು ವಿಜಯಪುರದಿಂದ ಸತ್ವಾರಿಗೆ ತೆರಳಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...