Homeಮುಖಪುಟಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

ಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

- Advertisement -
- Advertisement -

ಪ್ಯಾನ್-ಇಂಡಿಯಾ ಪಾದಯಾತ್ರೆ ‘ಭಾರತ್ ಜೋಡೋ ಯಾತ್ರೆ’ಯು ಗುರುವಾರ ಪಂಜಾಬ್‌ನಿಂದ ಜಮ್ಮುವಿಗೆ ಪ್ರವೇಶಿಸಿದೆ. ಇದು ಯಾತ್ರೆಯ ಕೊನೆಯ ರಾಜ್ಯವಾಗಿರಲಿದೆ. ಇಂತಹ ಚಳಿಗಾಲದಲ್ಲೂ ಉತ್ತರ ಭಾರತದಾದ್ಯಂತ ಕೇವಲ ಟೀ ಶರ್ಟ್ ಧರಿಸಿಯೇ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮೊದಲ ಬಾರಿಗೆ ಜಾಕೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬೆಳಗ್ಗೆಯಿಂದ ಜಮ್ಮುವಿನ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿರುವುದರಿಂದ ರಾಹುಲ್ ಗಾಂಧಿ ಜಾಕೇಟ್ ಧರಿಸಿದ್ದರು ಎಂದು ಹೇಳಲಾಗುತ್ತದೆ. ನಂತರ ಅವರು ಜಾಕೆಟ್ ತೆಗೆದು, ಎಮದಿನಂತೆ ಬಿಳಿ ಟೀ ಶರ್ಟ್‌ನಲ್ಲಿ ನಡೆಯುತ್ತಿರುವುದು ಕಂಡುಬಂದಿತು.

ಭಾರತ್ ಜೋಡೊ ಯಾತ್ರೆ ಇಂದು 125 ದಿನಗಳನ್ನು ಪೂರೈಸಿದ್ದು, ಒಟ್ಟು 3,400 ಕಿಲೋಮೀಟರ್‌ಗಳ ದೂರ 52ವರ್ಷದ ರಾಹುಲ್ ಗಾಂಧಿಯವರು ಯಾತ್ರೆಯನ್ನು ಮುನ್ನಡೆಸಿದ್ದಾರೆ. ಈ ಯಾತ್ರೆಯುದ್ದಕ್ಕೂ ಬಿಳಿ ಬಣ್ಣದ ಟಿಶರ್ಟ್ಸ್‌ಗಳಿಂದಲೇ ಎಲ್ಲರ ಗಮನ ಸೆಳೆದಿದ್ದ ರಾಹುಲ್ ಅನೇಕರ ಮೆಚ್ಚುಗೆ ಗಳಿಸಿದ್ದಾರೆ. ರಾಹುಲ್ ಗಾಂಧಿಯವರ ಆಕರ್ಷಕ ಉಡುಪು ವಿರೋಧ ಪಕ್ಷಗಳಿಗೆ ಕೆರಳಿಸಿದ್ದಂತು ಸುಳ್ಳಲ್ಲ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ ಎಂದು ತಿರುಚಿದ ವಿಡಿಯೋ ಪೋಸ್ಟ್: ಬಿಜೆಪಿ ಮುಖಂಡನ ಮೇಲೆ FIR

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಜನವರಿ 25 ರಂದು ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್‌ನಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಎರಡು ದಿನಗಳ ನಂತರ – ಜನವರಿ 27 ರಂದು ಅನಂತನಾಗ್ ಮೂಲಕ ಶ್ರೀನಗರವನ್ನು ಪ್ರವೇಶಿಸಲು ನಿರ್ಧರಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಸ್ವಾಗತಿಸುವ ಕಾರ್ಯಕ್ರಮದ ವೇಳೆ ವೇದಿಕೆಗೆ ಜೈರಾಮ್ ರಮೇಶ್, ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್, ಅಬ್ದುಲ್ಲಾ, ಶಿವಸೇನಾ ನಾಯಕ ಸಂಜಯ್ ರಾವುತ್, ಡೋಗ್ರಾ ಸ್ವಾಭಿಮಾನ್ ಸಂಘಟನೆ ಪಕ್ಷ ಮತ್ತು ಮಾಜಿ ಸಚಿವ ಲಾಲ್ ಸಿಂಗ್, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮುಜಾಫರ್ ಶಾ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಸ್ವಾಗತಿಸಲಾಯಿತು.

ಆದರೆ ಲಾಲ್ ಸಿಂಗ್ ಅವರು ತಡವಾಗಿ ಬಂದಿದ್ದರಿಂದ ವೇದಿಕೆಯಲ್ಲಿ ಹಾಜರಿರಲಿಲ್ಲ. ತಡವಾಗಿ ಬಂದ ಅವರು, ಸಮಾರಂಭ ಮುಗಿಯುವವರೆಗೂ ಜನರ ಗುಂಪಿನಲ್ಲಿಯೇ ನಿಂತಿರುವುದು ಕಂಡುಬಂದಿತು. ಕಾರ್ಯಕ್ರಮಕ್ಕೆ ಆಗಮಿಸಿದ ನಾಯಕರಿಗೆ ಕೃತಜ್ಞತೆ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಲಾಲ್ ಸಿಂಗ್ ಹೆಸರನ್ನು ಉಲ್ಲೇಖಿಸಲಿಲ್ಲ. ಹಾಗಾಗಿ ಮುಜುಗರಕ್ಕೀಡಾಗಿ ಅಲ್ಲಿಂದ ಅವರು ಹೊರಟುಹೋದರು.

ಇಂದು ಬೆಳಿಗ್ಗೆ ಕಥುವಾದ ಹಟ್ಲಿ ಮೋರ್ಹ್‌ನಿಂದ ಪುನರಾರಂಭಗೊಂಡ ಯಾತ್ರೆಗೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಗಾಂಧಿ ಕುಟುಂಬ ಮತ್ತು ಅವರ ಸಹ-ಹಿಂಬಾಲರನ್ನು ಸುತ್ತುವರಿದಿವೆ. ಕೆಲವೆಡೆ ಜಾಮರ್‌ಗಳನ್ನೂ ಹಾಕಲಾಗಿದೆ. ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹೆಚ್ಚು ಜನ ಸೇರಿ ಪಾದಯಾತ್ರೆ ನಡೆಸದಂತೆ ಭದ್ರತಾ ಏಜೆನ್ಸಿಗಳು ರಾಹುಲ್ ಗಾಂಧಿಗೆ ಈ ಹಿಂದೆ ಸಲಹೆ ನೀಡಿದ್ದವು.

ರಾಹುಲ್ ಗಾಂಧಿಯವರು ಜಮ್ಮು ಪ್ರವೇಶಿಸಿದಾಗ ಕಾಶ್ಮೀರಿ ಪ್ರಮುಖ ನಾಯಕ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭವ್ಯ ಸ್ವಾಗತ ಕೋರಿದ್ದಾರೆ. ಲಖನ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ, ರಾಹುಲ್ ಗಾಂಧಿ ಅವರು ಜನರೊಂದಿಗೆ ಸ್ವರಮೇಳವನ್ನು ಭಾರಿಸಲು ತಮ್ಮ ಕಾಶ್ಮೀರಿ ಪೂರ್ವಜರನ್ನು ಕರೆದರು. ಈ ವೇಳೆ ಅಲ್ಲಿಯ ನಿವಾಸಿಗಳ ನೋವು ಮತ್ತು ಸಂಕಟಗಳ ಬಗ್ಗೆ ಮಾತನಾಡಿದರು.

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಂಜಾಬ್‌ನ ಮಾಧೋಪುರದಲ್ಲಿ ರಾಹುಲ್ ಗಾಂಧಿಗೆ ಹಾಡು ಮತ್ತು ನೃತ್ಯದ ನಡುವೆ ಭವ್ಯವಾದ ಸ್ವಾಗತವನ್ನು ನೀಡಲಾಯಿತು. ಕೊನೆಯ ಹಂತಕ್ಕೆ ಪ್ರವೇಶಿಸುವ ಯಾತ್ರೆಯನ್ನು ನೂರಾರು ಜನರು ಸೇರಿ ಬರಮಾಡಿಕೊಂಡರು. ಜನವರಿ 30 ರಂದು ಶ್ರೀನಗರದಲ್ಲಿ ಸಮಾರೋಪ ಕಾರ್ಯಕ್ರಮದೊಂದಿಗೆ ಯಾತ್ರೆ ಮುಕ್ತಾಯಗೊಳ್ಳಲಿದೆ.

(ರಾತ್ರಿ ಚಡ್ವಾಲ್‌ನಲ್ಲಿ ಯಾತ್ರೆ ನಿಲ್ಲಲಿದೆ. ನಾಳೆ ಬೆಳಗ್ಗೆ ಹೀರಾನಗರದಿಂದ ದುಗ್ಗರ್ ಹವೇಲಿಗೆ ಹೊರಟು ಜನವರಿ 22ರಂದು ವಿಜಯಪುರದಿಂದ ಸತ್ವಾರಿಗೆ ತೆರಳಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...