Homeಮುಖಪುಟಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

ಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

- Advertisement -
- Advertisement -

ಪ್ಯಾನ್-ಇಂಡಿಯಾ ಪಾದಯಾತ್ರೆ ‘ಭಾರತ್ ಜೋಡೋ ಯಾತ್ರೆ’ಯು ಗುರುವಾರ ಪಂಜಾಬ್‌ನಿಂದ ಜಮ್ಮುವಿಗೆ ಪ್ರವೇಶಿಸಿದೆ. ಇದು ಯಾತ್ರೆಯ ಕೊನೆಯ ರಾಜ್ಯವಾಗಿರಲಿದೆ. ಇಂತಹ ಚಳಿಗಾಲದಲ್ಲೂ ಉತ್ತರ ಭಾರತದಾದ್ಯಂತ ಕೇವಲ ಟೀ ಶರ್ಟ್ ಧರಿಸಿಯೇ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮೊದಲ ಬಾರಿಗೆ ಜಾಕೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬೆಳಗ್ಗೆಯಿಂದ ಜಮ್ಮುವಿನ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿರುವುದರಿಂದ ರಾಹುಲ್ ಗಾಂಧಿ ಜಾಕೇಟ್ ಧರಿಸಿದ್ದರು ಎಂದು ಹೇಳಲಾಗುತ್ತದೆ. ನಂತರ ಅವರು ಜಾಕೆಟ್ ತೆಗೆದು, ಎಮದಿನಂತೆ ಬಿಳಿ ಟೀ ಶರ್ಟ್‌ನಲ್ಲಿ ನಡೆಯುತ್ತಿರುವುದು ಕಂಡುಬಂದಿತು.

ಭಾರತ್ ಜೋಡೊ ಯಾತ್ರೆ ಇಂದು 125 ದಿನಗಳನ್ನು ಪೂರೈಸಿದ್ದು, ಒಟ್ಟು 3,400 ಕಿಲೋಮೀಟರ್‌ಗಳ ದೂರ 52ವರ್ಷದ ರಾಹುಲ್ ಗಾಂಧಿಯವರು ಯಾತ್ರೆಯನ್ನು ಮುನ್ನಡೆಸಿದ್ದಾರೆ. ಈ ಯಾತ್ರೆಯುದ್ದಕ್ಕೂ ಬಿಳಿ ಬಣ್ಣದ ಟಿಶರ್ಟ್ಸ್‌ಗಳಿಂದಲೇ ಎಲ್ಲರ ಗಮನ ಸೆಳೆದಿದ್ದ ರಾಹುಲ್ ಅನೇಕರ ಮೆಚ್ಚುಗೆ ಗಳಿಸಿದ್ದಾರೆ. ರಾಹುಲ್ ಗಾಂಧಿಯವರ ಆಕರ್ಷಕ ಉಡುಪು ವಿರೋಧ ಪಕ್ಷಗಳಿಗೆ ಕೆರಳಿಸಿದ್ದಂತು ಸುಳ್ಳಲ್ಲ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ ಎಂದು ತಿರುಚಿದ ವಿಡಿಯೋ ಪೋಸ್ಟ್: ಬಿಜೆಪಿ ಮುಖಂಡನ ಮೇಲೆ FIR

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಜನವರಿ 25 ರಂದು ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್‌ನಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಎರಡು ದಿನಗಳ ನಂತರ – ಜನವರಿ 27 ರಂದು ಅನಂತನಾಗ್ ಮೂಲಕ ಶ್ರೀನಗರವನ್ನು ಪ್ರವೇಶಿಸಲು ನಿರ್ಧರಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಸ್ವಾಗತಿಸುವ ಕಾರ್ಯಕ್ರಮದ ವೇಳೆ ವೇದಿಕೆಗೆ ಜೈರಾಮ್ ರಮೇಶ್, ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್, ಅಬ್ದುಲ್ಲಾ, ಶಿವಸೇನಾ ನಾಯಕ ಸಂಜಯ್ ರಾವುತ್, ಡೋಗ್ರಾ ಸ್ವಾಭಿಮಾನ್ ಸಂಘಟನೆ ಪಕ್ಷ ಮತ್ತು ಮಾಜಿ ಸಚಿವ ಲಾಲ್ ಸಿಂಗ್, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮುಜಾಫರ್ ಶಾ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಸ್ವಾಗತಿಸಲಾಯಿತು.

ಆದರೆ ಲಾಲ್ ಸಿಂಗ್ ಅವರು ತಡವಾಗಿ ಬಂದಿದ್ದರಿಂದ ವೇದಿಕೆಯಲ್ಲಿ ಹಾಜರಿರಲಿಲ್ಲ. ತಡವಾಗಿ ಬಂದ ಅವರು, ಸಮಾರಂಭ ಮುಗಿಯುವವರೆಗೂ ಜನರ ಗುಂಪಿನಲ್ಲಿಯೇ ನಿಂತಿರುವುದು ಕಂಡುಬಂದಿತು. ಕಾರ್ಯಕ್ರಮಕ್ಕೆ ಆಗಮಿಸಿದ ನಾಯಕರಿಗೆ ಕೃತಜ್ಞತೆ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಲಾಲ್ ಸಿಂಗ್ ಹೆಸರನ್ನು ಉಲ್ಲೇಖಿಸಲಿಲ್ಲ. ಹಾಗಾಗಿ ಮುಜುಗರಕ್ಕೀಡಾಗಿ ಅಲ್ಲಿಂದ ಅವರು ಹೊರಟುಹೋದರು.

ಇಂದು ಬೆಳಿಗ್ಗೆ ಕಥುವಾದ ಹಟ್ಲಿ ಮೋರ್ಹ್‌ನಿಂದ ಪುನರಾರಂಭಗೊಂಡ ಯಾತ್ರೆಗೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಗಾಂಧಿ ಕುಟುಂಬ ಮತ್ತು ಅವರ ಸಹ-ಹಿಂಬಾಲರನ್ನು ಸುತ್ತುವರಿದಿವೆ. ಕೆಲವೆಡೆ ಜಾಮರ್‌ಗಳನ್ನೂ ಹಾಕಲಾಗಿದೆ. ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹೆಚ್ಚು ಜನ ಸೇರಿ ಪಾದಯಾತ್ರೆ ನಡೆಸದಂತೆ ಭದ್ರತಾ ಏಜೆನ್ಸಿಗಳು ರಾಹುಲ್ ಗಾಂಧಿಗೆ ಈ ಹಿಂದೆ ಸಲಹೆ ನೀಡಿದ್ದವು.

ರಾಹುಲ್ ಗಾಂಧಿಯವರು ಜಮ್ಮು ಪ್ರವೇಶಿಸಿದಾಗ ಕಾಶ್ಮೀರಿ ಪ್ರಮುಖ ನಾಯಕ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭವ್ಯ ಸ್ವಾಗತ ಕೋರಿದ್ದಾರೆ. ಲಖನ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ, ರಾಹುಲ್ ಗಾಂಧಿ ಅವರು ಜನರೊಂದಿಗೆ ಸ್ವರಮೇಳವನ್ನು ಭಾರಿಸಲು ತಮ್ಮ ಕಾಶ್ಮೀರಿ ಪೂರ್ವಜರನ್ನು ಕರೆದರು. ಈ ವೇಳೆ ಅಲ್ಲಿಯ ನಿವಾಸಿಗಳ ನೋವು ಮತ್ತು ಸಂಕಟಗಳ ಬಗ್ಗೆ ಮಾತನಾಡಿದರು.

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಂಜಾಬ್‌ನ ಮಾಧೋಪುರದಲ್ಲಿ ರಾಹುಲ್ ಗಾಂಧಿಗೆ ಹಾಡು ಮತ್ತು ನೃತ್ಯದ ನಡುವೆ ಭವ್ಯವಾದ ಸ್ವಾಗತವನ್ನು ನೀಡಲಾಯಿತು. ಕೊನೆಯ ಹಂತಕ್ಕೆ ಪ್ರವೇಶಿಸುವ ಯಾತ್ರೆಯನ್ನು ನೂರಾರು ಜನರು ಸೇರಿ ಬರಮಾಡಿಕೊಂಡರು. ಜನವರಿ 30 ರಂದು ಶ್ರೀನಗರದಲ್ಲಿ ಸಮಾರೋಪ ಕಾರ್ಯಕ್ರಮದೊಂದಿಗೆ ಯಾತ್ರೆ ಮುಕ್ತಾಯಗೊಳ್ಳಲಿದೆ.

(ರಾತ್ರಿ ಚಡ್ವಾಲ್‌ನಲ್ಲಿ ಯಾತ್ರೆ ನಿಲ್ಲಲಿದೆ. ನಾಳೆ ಬೆಳಗ್ಗೆ ಹೀರಾನಗರದಿಂದ ದುಗ್ಗರ್ ಹವೇಲಿಗೆ ಹೊರಟು ಜನವರಿ 22ರಂದು ವಿಜಯಪುರದಿಂದ ಸತ್ವಾರಿಗೆ ತೆರಳಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...