Homeಮುಖಪುಟಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ ಎಂಬ ಆಶಯದೊಂದಿಗೆ 4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ದೇಶದ ಬಹುದೊಡ್ಡ ಪಾದಾಯಾತ್ರೆಗೆ ಸಜ್ಜಾಗಿದ್ದಾರೆ. ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,500 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಆರಂಭಿಸಲಿದ್ದಾರೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ.

4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದ್ದು, 12 ರಾಜ್ಯಗಳು ಮತ್ತು 02 ಕೇಂದ್ರಾಡಳಿತ ಪ್ರದೇಶಗಳನ್ನು ಯಾತ್ರೆ ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತಿಸಿ ರಾಯಚೂರು ಜಿಲ್ಲೆ ನಂತರ ತೆಲಂಗಾಣಕ್ಕೆ ಕಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

“ಈ ಯಾತ್ರೆ ನನಗೆ ತಪಸ್ಸು ಇದ್ದಂತೆ. ಭಾರತವನ್ನು ಒಟ್ಟುಗೂಡಿಸುವುದು ಧೀರ್ಘಾವಧಿ ಹೋರಾಟ ಎಂಬುದು ನನಗೆ ತಿಳಿದಿದೆ ಮತ್ತು ಅದಕ್ಕೆ ನಾನು ತಯಾರಾಗಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ” ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುವ ಈ ಯಾತ್ರೆಯ ಹಲವು ಕಾರ್ಯಕ್ರಮಗಳಿಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರ ಜೊತೆಗೂಡಲಿದ್ದಾರೆ ಎನ್ನಲಾಗಿದೆ.

1991ರಲ್ಲಿ ಹತ್ಯೆಯಾದ ರಾಜೀವ್ ಗಾಂಧಿಯವರ ಸ್ಮಾರಕವಿರುವ ಶ್ರೀಪೆರಂಬದೂರ್‌ನಲ್ಲಿ ನಮನ ಸಲ್ಲಿಸಿದ ನಂತರ ಸೆಪ್ಟಂಬರ್ 07ರಂದು ಕನ್ಯಾಕುಮಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಉದ್ಘಾಟನೆಯಾಗಲಿದೆ. ಅಲ್ಲಿಂದು ತಿರುವಂತನಪುರಂ, ಕೊಚ್ಚಿ, ನಿಲಾಂಬುರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಾಲಗೂನ್, ಇಂದೋರ್, ಕೋಟಾ, ದುಸ್ಸಾ, ಅಲ್ವರ್, ಬುಲಂದಶಹರ್, ದೆಹಲಿ, ಅಂಬಾಲ, ಜಮ್ಮುಗಳಲ್ಲಿ ಬಹಿರಂಗ ಸಮಾವೇಶಗಳನ್ನು ನಡೆಸುವುದರ ಜೊತೆಗೆ ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ.

ಪಾದಯಾತ್ರೆಗೆ ವಿವಿಧ ಪಕ್ಷದ ಮುಖಂಡರ ಬೆಂಬಲ

ಯೋಗೇಂದ್ರ ಯಾದವ್

ಹಿರಿಯ ಚಿಂತಕ, ರಾಜಕೀಯ ತಜ್ಞ, ಆಪ್ ತೊರೆದು ಸ್ವರಾಜ್ಯ ಇಂಡಿಯಾ ಪಕ್ಷ ಕಟ್ಟಿರುವ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾಗಿರುವ ಯೋಗೇಂದ್ರ ಯಾದವ್‌ರವರು ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿದ್ದು, ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇನೆ ಎಂದಿದ್ದಾರೆ.

ಅರುಣಾ ರಾಯ್

ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರಾದ ಅರುಣಾ ರಾಯ್‌ರವರು 1990ರ ದಶಕದಲ್ಲಿ ನಾಗರೀಕ ಸೇವೆ ತೊರೆದು ಮಜ್ದೂರ್ ಕಿಸಾನ್ ಶಕ್ತಿ ಸಂಘಟನ್ ಕಟ್ಟಿದ್ದರು. ನರೇಗಾ ಯೋಜನೆಗಾಗಿ ಸಾಕಷ್ಟು ದುಡಿದಿರುವ ಅವರು, ದಿನಗೂಲಿ ಕಾರ್ಮಿಕರ ಪರವಾಗಿ ದಿಟ್ಟ ಹೋರಾಟ ನಡೆಸಿದ್ದರು. ಆರ್‌ಟಿಐ ಕಾರ್ಯಕರ್ತರಾಗಿ ಅರವಿಂದ್ ಕೇಜ್ರಿವಾಲ್ ಜೊತೆಗೂಡಿ ಕೆಲಸ ಮಾಡಿದ್ದರು. ಲೋಕಪಾಲ್ ಮಸೂದೆ ಸಂಬಂಧ ಆಪ್ ತೊರೆದು ಹೊರಬಂದ ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ.

ದೇವನೂರ ಮಹದೇವ

ಕನ್ನಡದ ಮಹತ್ವದ ಲೇಖಕರು, ಚಿಂತಕರು ಮತ್ತು ಹೋರಾಟಗಾರರಾದ ದೇವನೂರ ಮಹದೇವರವರು ತಮ್ಮ ಕಥೆಗಳಿಗಾಗಿ ಪ್ರಸಿದ್ದರು. ಅವರ ಇತ್ತೀಚಿಗಿನ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಮಾರಾಟವಾಗಿ ಚರ್ಚೆಗೆ ಕಾರಣವಾಗಿತ್ತು. ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಯಾಗಿ ಸಾಹಿತ್ಯ ಅಕಾಡೆಮಿ ಮತ್ತು ಪ್ರದ್ಮಶ್ರೀ ಪ್ರಶಸ್ತಿಗಳನ್ನು ವಾಪಸ್ ಮಾಡಿದ್ದ ಅವರು ಸ್ವರಾಜ್ ಇಂಡಿಯಾ ಮತ್ತು ಜನಾಂದೋಲನಗಳ ಮಹಾಮೈತ್ರಿ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಗಣೇಶ್ ದೇವಿ

ಭಾಷಾ ತಜ್ಞರು ಮತ್ತು ಸಾಂಸ್ಕೃತಿಕ ಚಿಂತಕರಾದ ಜಿ.ಎನ್ ದೇವಿಯವರು ಭಾರತ್ ಜೋಡೊ ಯಾತ್ರೆ ಜೊತೆ ಕೈಜೋಡಿಸಿದ್ದಾರೆ.

ಅಲ್ಲದೆ ಸಫಾಯಿ ಕರ್ಮಚಾರಿಗಳ ಪರ ಹೋರಾಟ ನಡೆಸಿದ ಬೆಜವಾಡ ವಿಲ್ಸನ್, ಗಾಂಧಿ ಶಾಂತಿ ಪ್ರತಿಷ್ಠಾನದ ಪಿ.ವಿ ರಾಜಗೋಪಾಲ್, ನಿವೃತ್ತ ಐಎಎಸ್ ಅಧಿಕಾರಿ ಶಾರದ್ ಬೆಹರ್, ಮಹಿಳಾವಾದಿ ಹೋರಾಟಗಾರ್ತಿ ಸೈದಾ ಹಮೀದ್, ಆರ್‌ಟಿಐ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಸೇರಿದಂತೆ ಹಲವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಜೊತೆ 100 ಪಾದಯಾತ್ರಿಗಳು ಆರಂಭದಿಂದ ಅಂತ್ಯದವರೆಗೂ ಹೆಜ್ಜೆ ಹಾಕಲಿದ್ದಾರೆ. ಅವರನ್ನು ಭಾರತ್ ಯಾತ್ರಿಗಳು ಎಂದು ಕರೆಯಲಾಗುತ್ತದೆ. ಅಲ್ಲದೆ ಈ ಯಾತ್ರೆ ಯಾವ ರಾಜ್ಯಗಳನ್ನು ತಲುಪುದಿಲ್ಲವೋ ಅಂತಹ ರಾಜ್ಯಗಳಿಂದ ತಲಾ 100 ಜನ ಅತಿಥಿ ಪಾದಯಾತ್ರಿಗಳು ಸಹ ಸೇರಿಕೊಳ್ಳಲಿದ್ದಾರೆ. ಅಲ್ಲದೆ ಪ್ರತಿ ರಾಜ್ಯದ 100 ಪಾದಯಾತ್ರಿಗಳು ಆಯಾ ರಾಜ್ಯದಲ್ಲಿ ಯಾತ್ರೆ ನಡೆಯುವ ಸಂದರ್ಭದಲ್ಲಿ ಜೊತೆಗಿರುತ್ತಾರೆ. ಒಟ್ಟಾರೆಯಾಗಿ ಸ್ಥಳೀಯ ಜನರು, ಹೋರಾಟಗಾರರ ಜೊತೆಗೆ 300 ಜನ ಪಾದಯಾತ್ರಿಗಳು ಪ್ರತಿ ದಿನ ನಡೆಯಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ದೇಶದಲ್ಲಿ ದ್ವೇಷ ಹರಡಲಾಗುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನವನ್ನ ಅಪಮಾನಿಸಲಾಗುತ್ತಿದೆ. ಇದನ್ನು ವಿರೋಧಿಸುತ್ತಾ ಆರ್ಥಿಕ ಅಸಮಾನತೆ ನಿವಾರಣೆಗಾಗಿ, ಸಾಮಾಜಿಕ ದ್ರುವೀಕರಣ ತಪ್ಪಿಸಲು ಭಾರತವನ್ನು ಐಕ್ಯ ದೇಶವನ್ನಾಗಿ ಕಟ್ಟಲು ಭಾರತ್ ಜೋಡೋ ಯಾತ್ರೆ ನಡೆಸಲಾಗುತ್ತಿದೆ ಎಂದು ಸಂಸದರಾದ ಜೈರಾಂ ರಮೇಶ್ ತಿಳಿಸಿದ್ದಾರೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಥವಾ ರಾಹುಲ್ ಗಾಂಧಿಯವರ ಪಾದಯಾತ್ರೆಯಲ್ಲ ಬದಲಿಗೆ ದೇಶದ ಒಳಿತಿಗಾಗಿ ನಡೆಯುತ್ತಿರುವ ಸರ್ವರ ಯಾತ್ರೆ ಎಂದು ಅವರು ಹೇಳಿದ್ದಾರೆ.

150 ಸಂಘಟನೆಗಳು ಬೆಂಬಲ

ಭಾರತ್ ಜೋಡೋ ಯಾತ್ರೆಗೆ ವಿವಿಧ ಪಕ್ಷಗಳು ಸೇರಿದಂತೆ 150 ಸಂಘಟನೆಗಳು, ವ್ಯಕ್ತಿಗಳು ಬೆಂಬಲ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಸಮಾಜದ ವಿವಿಧ ವರ್ಗದ ಜನ ದೇಶದ ಉಳಿವಿಗಾಗಿ ಜೊತೆಗೂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...