Homeಮುಖಪುಟಭಾರತ್ ಜೋಡೋ ಯಾತ್ರೆ; ಬೋಣಿ ಅಂತೂ ಚೆನ್ನಾಗಾಯ್ತು, ಆದರೆ ಮುಂದಿನ ದಾರಿ ದೊಡ್ಡದಿದೆ!

ಭಾರತ್ ಜೋಡೋ ಯಾತ್ರೆ; ಬೋಣಿ ಅಂತೂ ಚೆನ್ನಾಗಾಯ್ತು, ಆದರೆ ಮುಂದಿನ ದಾರಿ ದೊಡ್ಡದಿದೆ!

- Advertisement -
- Advertisement -

ಯಾತ್ರೆ ಹೇಗೆ ನಡೀತಿದೆ? ಏನಾದರೂ ಪರಿಣಾಮ ಆಯ್ತಾ? ಚುನಾವಣೆಯಲ್ಲಿ ಲಾಭ ಆಗಲುಂಟಾ? ಏನಾದರೂ ಸಾಧಿಸ್ತೀರೋ ಇಲ್ವೋ? ಯಾವಾಗ ಕನ್ಯಾಕುಮಾರಿಯಿಂದ ’ಭಾರತ ಜೋಡೊ ಯಾತ್ರಾ’ ಶುರುವಾಯ್ತೋ, ಆವಾಗಿನಿಂದ ಕರೆಗಳು ಬರುತ್ತಲೇ ಇವೆ. ಇಂತಹ ಪರಿಚಿತ ಪ್ರಶ್ನೆಗಳ ಸುರಿಮಳೆಯೇ ಆಗುತ್ತಿದೆ. ಟಿವಿಯಲ್ಲೂ ಕೋಳಿಜಗಳ ಶುರುವಾಗಿದೆಯಂತೆ. ಯಾತ್ರೆಯ ಹಿಂದಿನ ಇರಾದೆ ಏನಿದೆ ಎಂಬುದರ ಮೇಲೆ ಈ ಯಾತ್ರೆ ಏನು ಸಾಧಿಸುವುದು ಎಂಬುದು ನಿಂತಿದೆ. ಪಾದಯಾತ್ರೆಗಳ ಅನೇಕ ರೀತಿಯದ್ದಾಗಬಹುದು; ಕೆಲವರಿಗೆ ನಡಿಗೆಯಾದರೆ, ಕೆಲವರಿಗೆ ಕಸರತ್ತು. ಅಲೆಮಾರಿ ಸಮಾಜದವರಿಗೆ ಜೀವನಶೈಲಿ; ಹಾಗೂ ಬೀದಿ ಸುತ್ತಿ ಸರಕು ಮಾರಾಟ ಮಾಡುವವರಿಗೆ ವ್ಯಾಪಾರ. ಕೆಲವರು ಹರಕೆ ಹೊತ್ತು ನಡೆದರೆ, ಕೆಲವರು ದೇವರ ದರ್ಶನದ ಆಕಾಂಕ್ಷೆಯಿಟ್ಟು ನಡೆಯುತ್ತಾರೆ. ಕೆಲವೇ ಕೆಲವರು ತನ್ನೊಳಗಿನ ದೇವರನ್ನು ಹುಡುಕುತ್ತ ಕಾಲ್ನಡಿಗೆಯ ಯಾತ್ರೆ ಮಾಡುತ್ತಾರೆ.

ಇದೇ ಮಾತು ರಾಜಕೀಯ ಪಾದಯಾತ್ರೆಗಳಿಗೂ ಅನ್ವಯಿಸುತ್ತದೆ. ಇಲ್ಲಿಯೂ ಕೆಲವರು ಪ್ರವಾಸಿಗಳಿದ್ದಾರೆ, ಕೆಲವರಿಗೆ ದರ್ಶನದ ಆಕಾಂಕ್ಷೆಯಿದ್ದರೆ ಕೆಲವರಿಗೆ ಟಿಕೆಟ್‌ದ್ದು. ನಮ್ಮಲ್ಲಿ ಚುನಾವಣಾ ಪಾದಯಾತ್ರೆಗಳ ಇತಿಹಾಸವೂ ತುಂಬಾ ಹಳೆಯದು. ನಮ್ಮಲ್ಲಿ ಆದ ಕೆಲವು ಪಾದಯಾತ್ರೆಗಳಿಂದ ದೇಶವು ತನ್ನನ್ನು ತಾನು ಗುರುತಿಸಿಕೊಂಡಿದೆ, ಕಳೆದುಕೊಂಡ ತನ್ನ ಆತ್ಮಬಲವನ್ನು ಪಡೆದುಕೊಂಡಿದೆ.

ಸ್ವಾಭಾವಿಕವಾಗಿಯೇ ’ಭಾರತ ಜೋಡೊ ಯಾತ್ರೆ’ಯಲ್ಲಿ ಇವೆಲ್ಲವುಗಳ ಒಂದಿಷ್ಟು ಅಂಶಗಳಿವೆ. ಹಾಗಾಗಿ ದೇಶದ ಒಂದು ದೊಡ್ಡ ಪಕ್ಷದಿಂದ ಪ್ರಾಯೋಜಿತವಾದ ಇಂತಹ ಯಾತ್ರೆಗಳಲ್ಲಿ ಪ್ರವಾಸಿಗರೂ ಇರುತ್ತಾರೆ, ಅವರೊಂದಿಗೆ ಪೈಲ್ವಾನರೂ ಇರುತ್ತಾರೆ, ಟಿಕೆಟ್ ಆಕಾಂಕ್ಷಿಗಳೂ ಇರುತ್ತಾರೆ ಹಾಗೂ ದರ್ಶನಾರ್ಥಿಗಳೂ ಇರುತ್ತಾರೆ. ಈ ಯಾತ್ರೆಯ ಯಶಸ್ಸು, ವಿಫಲತೆಗಳನ್ನು ಈ ಸಣ್ಣ ಆಕಾಂಕ್ಷೆಗಳ ತಕ್ಕಡಿಯಲ್ಲಿ ಅಳೆಯಲು ಸಾಧ್ಯವಿಲ್ಲ. ಎಂದಿನಂತೆಯೇ ರಾಜಕೀಯ ಪಂಡಿತರು ಇದನ್ನು ಕಾಂಗ್ರೆಸ್ ಪಕ್ಷ ಅಥವಾ ರಾಹುಲ್ ಗಾಂಧಿಯ ಲಾಭ-ನಷ್ಟಗಳ ಲೆಕ್ಕದಲ್ಲಿ ಒರೆಗೆ ಹಚ್ಚಲಿದ್ದಾರೆ. ಆದರೆ, ಒಂದು ಪಕ್ಷದ ಅಥವಾ ಒಬ್ಬ ನಾಯಕನ ಲಾಭವು ರಾಷ್ಟ್ರದ ಹಿತಾಸಕ್ತಿಯ ಅಳತೆಗೋಲಾಗಲು ಸಾಧ್ಯವಿಲ್ಲ.

ಇಂದಿನ ಸಂದರ್ಭದಲ್ಲಿ ಭಾರತ ಜೋಡೊ ಯಾತ್ರೆಯ ಸಫಲತೆಯ ಒಂದೇ ಒಂದು ಅಳತೆ ಆಗಿರಬಹುದು. ಅದು, ದೇಶದ ಭವಿಷ್ಯದ ಮೇಲೆ ಕವಿದಿರುವ ಕಾರ್ಮೋಡಗಳನ್ನು ಇಲ್ಲವಾಗಿಸುವಲ್ಲಿ ಈ ಯಾತ್ರೆ ಸಹಕಾರಿಯಾಗುವುದೇ? ನಮ್ಮ ಪ್ರಜಾಪ್ರಭುತ್ವ, ಸಂವಿಧಾನ, ಸ್ವಾತಂತ್ರ್ಯ ಆಂದೋಲನ ಹಾಗೂ ಸಭ್ಯತೆಯ ಪರಂಪರೆಯನ್ನು ಉಳಿಸುವಲ್ಲಿ ಏನಾದರೂ ಯೋಗದಾನ ನೀಡುವುದೇ? ರಾಜಕೀಯ ಶಕ್ತಿಯ ಸಮತೋಲನವನ್ನು ಸ್ವಲ್ಪ ಮಟ್ಟಿಗಾದರೂ, ದೇಶವನ್ನು ಜೋಡಿಸುವ ಕಡೆಗೆ ತಿರುಗಿಸಬಲ್ಲದೇ? ನನ್ನಂತಹ ಜನರು ಇದೇ ನಿರೀಕ್ಷೆಯಲ್ಲಿ ಈ ಯಾತ್ರೆಯಲ್ಲಿ ಸೇರಿಕೊಂಡಿದ್ದೇವೆ. ದೇಶದ ಇತಿಹಾಸದಲ್ಲಿ ಸೂಕ್ಷ್ಮವಾದ ಮತ್ತು ನಿರ್ಣಾಯಕವಾದ ಸಮಯದಲ್ಲಿ ನಡೆಯುತ್ತಿರುವ ಈ ಯಾತ್ರೆಯನ್ನು ಬೇರೆ ಯಾವುದೇ ದೃಷ್ಟಿಕೋನದಲ್ಲಿ ನೋಡುವುದು ಒಂದು ದೊಡ್ಡ ಅಸಡ್ಡೆಯೆನಿಸುತ್ತದೆ.

ಸುಮಾರು 5 ತಿಂಗಳು ನಡೆಯಲಿರುವ ಈ ಯಾತ್ರೆಯ ಬಗ್ಗೆ ಮೊದಲ 5 ದಿನದ ಆಧಾರದ ಮೇಲೆ ಯಾವುದೇ ತೀರ್ಮಾನಕ್ಕೆ ಬರುವುದು ಹಾಸ್ಯಾಸ್ಪದವಾಗುವುದು; ಆದರೆ ಈ ಮೊದಲ ಝಲಕ್‌ನಿಂದ ಕೆಲವು ನಿರೀಕ್ಷೆಗಳನ್ನು ಇಟ್ಟುಕೊಳ್ಳಬಹುದು. ಮೊದಲ ವಾರದಲ್ಲಿ ಈ ಯಾತ್ರೆಯು ತಮಿಳುನಾಡಿನ ಕನ್ಯಾಕುಮಾರಿ ಹಾಗೂ ಕೇರಳದ ತಿರುವನಂತಪುರಂ ಜಿಲ್ಲೆಗಳಿಂದ ಹಾದುಹೋಗುತ್ತಿದೆ. ಇವೆರಡೂ ತುಲನಾತ್ಮಕವಾಗಿ ಕಾಂಗ್ರಸ್‌ನ ಪ್ರಬಲ ಕ್ಷೇತ್ರಗಳಾಗಿವೆ. ಹಾಗಾಗಿ ಯಾತ್ರೆಗೆ ಇಷ್ಟು ಬೃಹತ್ತಾಗಿ ಸಿಕ್ಕ ಜನರ ಸಮರ್ಥನೆಯಿಂದ ಅಚ್ಚರಿಯಾಗಲಾರದು. ಆದರೆ, ಗಮನಿಸಬೇಕಾದ ಅಂಶವೇನೆಂದರೆ, ಹೆಚ್ಚುಕಡಿಮೆ ಎಲ್ಲಾ ಸಮಯದಲ್ಲೂ ರಸ್ತೆಯ ಎರಡೂ ಬದಿಗಳಲ್ಲಿ ಈ ಯಾತ್ರೆಯನ್ನು ಸ್ವಾಗತಿಸಲು ಜನರ ನಿಂತಿದ್ದರು, ಹಾಗೂ ಅವರಲ್ಲಿ ಅನೇಕರು ಗಂಟೆಗಳವರೆಗೆ ನಿಂತಿದ್ದರು. ಸ್ವಾಭಾವಿಕವಾಗಿಯೇ, ಈ ಜನಸಮೂಹದಲ್ಲಿ ಹೆಚ್ಚಿನ ಜನರನ್ನು ಪಕ್ಷದ ಕಾರ್ಯಕರ್ತರು ಸೇರಿಸಿರಬಹುದು. ಹಾಗೆ ನೋಡಿದರೂ ಇದೂ ಒಂದು ಸಾಧನೆಯೇ.

ಕೆಲವರು ಕೇವಲ ನೋಡುಗರಾಗಿಯೂ ಇದ್ದರು. ಆದರೆ ಈ ಜನಸಮೂಹದಲ್ಲಿ ಸಾಧಾರಣ ಜನರು ಒಂದು ಭಾಗವೂ ಇತ್ತು, ಅವರನ್ನು ಯಾವುದೇ ಪಕ್ಷದವರು ಅಲ್ಲಿ ಸೇರಿಸಿದ್ದಲ್ಲ, ಅವರು ಖುದ್ದಾಗಿ ಬಂದಿದ್ದರು. ಕತ್ತಲೆಯಲ್ಲಿ ಒಂದು ಪುಟ್ಟ ಆಸೆಯ ಬೆಳಕನ್ನು ಕಂಡಾಗ ಕಾಣುವ ಒಂದು ಹೊಳಪು ಇವರ ಕಣ್ಣುಗಳಲ್ಲಿತ್ತು. ಇವರನ್ನು ಈಗಾಗಲೇ ಕಾಂಗ್ರೆಸ್ ಸಮರ್ಥಕ ಅಥವಾ ಮತದಾರರೆಂಬ ಹೆಸರು ಕೊಡುವುದು ಬೇಡ. ಒಂದು ಪಾದಯಾತ್ರೆಯ ಬಗ್ಗೆ ಗೌರವ ಭಾವನೆ ಇರಲೂ ಸಾಧ್ಯ ಮತ್ತು ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ ಎನ್ನಬಹುದು. ಮುಂದಿನ ಕೆಲವು ದಿನಗಳಲ್ಲೇ ತಿಳಿಯುವುದಾದರೂ, ಈ ಯಾತ್ರೆಯು ಒಂದು ಸಕಾರಾತ್ಮಕವಾದ ಜಾಗೃತಿಯನ್ನು ಮೂಡಿಸುತ್ತಿದೆ ಎಂಬುದನ್ನು ಅಲ್ಲಗಳೆಯಲಾಗದು.

ಚುನಾವಣೆಗಳಲ್ಲಿ ಇದರ ಪರಿಣಾಮ ಏನಾಗುವುದು ಎಂಬುದನ್ನು ಈಗಲೇ ಹೇಳಲು ಬರುವುದಿಲ್ಲ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆ ಮೇಲೆ ಏನು ಪರಿಣಾಮ ಎಂಬ ಬಗ್ಗೆಯೂ ಸ್ವಲ್ಪವೂ ಅಂದಾಜು ಮಾಡಲಾಗುವುದಿಲ್ಲ. ಆದರೆ ಈ ಸಕಾರಾತ್ಮಕತೆಯಿಂದ ಈಗಿರುವ ವಿಕಲ್ಪವಿಲ್ಲದಿರುವ ರಾಜಕೀಯ ವಾತಾವರಣವನ್ನು ಎಲ್ಲಿಯಾದರೂ ಒಡೆಯುವ ಸಾಮರ್ಥ್ಯವಂತೂ ಇದೆ.

ಈಗಲೇ ಈ ಯಾತ್ರೆಯು ದೇಶದ ಮನಸ್ಥಿತಿಯ ಮೇಲೆ ಬೀರುವ ಪರಿಣಾಮದ ಬಗ್ಗೆ ಮಾತನಾಡುವುದೂ ಹುಚ್ಚುತನವಾಗುತ್ತದೆ. ಆದರೆ ಒಂದಂತೂ ಸತ್ಯ; ಕಾಂಗ್ರೆಸ್ ಪಕ್ಷ ಕೈಗೆತ್ತಿಕೊಂಡಿರುವ ಈ ನಡಿಗೆ ದೇಶದ ಮೌನ ಮತ್ತು ಏಕತಾನತೆಯ ಭಾವನೆಯನ್ನು ಮುರಿದುಹಾಕಿದೆ. ತಾವೆಂದೂ ಕಾಂಗ್ರೆಸ್‌ನ ಬೆಂಬಲ ನೀಡದೇ ಇರುವ ಹಾಗೂ ಬೀದಿಗಳಲ್ಲಿ ಕಾಂಗ್ರೆಸ್‌ಅನ್ನು ವಿರೋಧಿಸಿದ ಅನೇಕರು ಈ ಯಾತ್ರೆಗೆ ಸಮರ್ಥನೆ ಮಾಡುತ್ತಿದ್ದಾರೆ. ದೇಶದ ಜನಾಂದೋಲನಗಳ ಒಂದು ಭಾಗವು ಕನ್ಯಾಕುಮಾರಿಯಿಂದಲೇ ಈ ಯಾತ್ರೆಯಲ್ಲಿ ಕೂಡಿಕೊಂಡಿದೆ.

ಹೊರಗಿನಿಂದ ಬಂದ ಈ ಅನಿರೀಕ್ಷಿತ ಸಮರ್ಥನೆಯಿಂದ ಕಾಂಗ್ರೆಸ್‌ನ ಪಾದಯಾತ್ರಿಗಳ ಆತ್ಮಸ್ಥೈರ್ಯವು ಹೆಚ್ಚಿದೆ. ಕಳೆದ ಇಡೀ ವಾರದಲ್ಲಿ ಈ ಯಾತ್ರೆಯಲ್ಲಿ ಜೊತೆಗೂಡುವ ಆಕಾಂಕ್ಷೆ ಇಟ್ಟುಕೊಂಡವರ ಸಂದೇಶಗಳು ಹೆಚ್ಚುತ್ತಿವೆ. ಕನಿಷ್ಠ ಒಂದು ಮಟ್ಟಕ್ಕಂತೂ ನಾವು ಒಬ್ಬಂಟಿಗಳಲ್ಲ ಎಂಬ ಭಾವನೆ ಮೂಡುತ್ತಿದೆ. ದೇಶ ಬದಲಿಸುವ ಮಾತು ಈಗ ಹೇಳಿದರೆ ದೊಡ್ಡ ಮಾತಾಗುತ್ತದೆ, ಆದರೆ ದೇಶವನ್ನು ಜೋಡಿಸುವ ಇಚ್ಛೆ ಹೊಂದಿದ್ದವರಲ್ಲಿ ತಮ್ಮನ್ನು ತಾವು ಬದಲಿಸಿಕೊಳ್ಳುವ ಪ್ರಕ್ರಿಯೆ ಶುರುವಾಗಿದೆ. ಬೋಣಿ ತುಂಬಾ ಚೆನ್ನಾಗಾಗಿದೆ.

ಯೋಗೇಂದ್ರ ಯಾದವ್

(ಕನ್ನಡಕ್ಕೆ): ರಾಜಶೇಖರ ಅಕ್ಕಿ


ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...