Homeಮುಖಪುಟಭಾರತ್ ಜೋಡೋ ಯಾತ್ರೆ; ಬೋಣಿ ಅಂತೂ ಚೆನ್ನಾಗಾಯ್ತು, ಆದರೆ ಮುಂದಿನ ದಾರಿ ದೊಡ್ಡದಿದೆ!

ಭಾರತ್ ಜೋಡೋ ಯಾತ್ರೆ; ಬೋಣಿ ಅಂತೂ ಚೆನ್ನಾಗಾಯ್ತು, ಆದರೆ ಮುಂದಿನ ದಾರಿ ದೊಡ್ಡದಿದೆ!

- Advertisement -
- Advertisement -

ಯಾತ್ರೆ ಹೇಗೆ ನಡೀತಿದೆ? ಏನಾದರೂ ಪರಿಣಾಮ ಆಯ್ತಾ? ಚುನಾವಣೆಯಲ್ಲಿ ಲಾಭ ಆಗಲುಂಟಾ? ಏನಾದರೂ ಸಾಧಿಸ್ತೀರೋ ಇಲ್ವೋ? ಯಾವಾಗ ಕನ್ಯಾಕುಮಾರಿಯಿಂದ ’ಭಾರತ ಜೋಡೊ ಯಾತ್ರಾ’ ಶುರುವಾಯ್ತೋ, ಆವಾಗಿನಿಂದ ಕರೆಗಳು ಬರುತ್ತಲೇ ಇವೆ. ಇಂತಹ ಪರಿಚಿತ ಪ್ರಶ್ನೆಗಳ ಸುರಿಮಳೆಯೇ ಆಗುತ್ತಿದೆ. ಟಿವಿಯಲ್ಲೂ ಕೋಳಿಜಗಳ ಶುರುವಾಗಿದೆಯಂತೆ. ಯಾತ್ರೆಯ ಹಿಂದಿನ ಇರಾದೆ ಏನಿದೆ ಎಂಬುದರ ಮೇಲೆ ಈ ಯಾತ್ರೆ ಏನು ಸಾಧಿಸುವುದು ಎಂಬುದು ನಿಂತಿದೆ. ಪಾದಯಾತ್ರೆಗಳ ಅನೇಕ ರೀತಿಯದ್ದಾಗಬಹುದು; ಕೆಲವರಿಗೆ ನಡಿಗೆಯಾದರೆ, ಕೆಲವರಿಗೆ ಕಸರತ್ತು. ಅಲೆಮಾರಿ ಸಮಾಜದವರಿಗೆ ಜೀವನಶೈಲಿ; ಹಾಗೂ ಬೀದಿ ಸುತ್ತಿ ಸರಕು ಮಾರಾಟ ಮಾಡುವವರಿಗೆ ವ್ಯಾಪಾರ. ಕೆಲವರು ಹರಕೆ ಹೊತ್ತು ನಡೆದರೆ, ಕೆಲವರು ದೇವರ ದರ್ಶನದ ಆಕಾಂಕ್ಷೆಯಿಟ್ಟು ನಡೆಯುತ್ತಾರೆ. ಕೆಲವೇ ಕೆಲವರು ತನ್ನೊಳಗಿನ ದೇವರನ್ನು ಹುಡುಕುತ್ತ ಕಾಲ್ನಡಿಗೆಯ ಯಾತ್ರೆ ಮಾಡುತ್ತಾರೆ.

ಇದೇ ಮಾತು ರಾಜಕೀಯ ಪಾದಯಾತ್ರೆಗಳಿಗೂ ಅನ್ವಯಿಸುತ್ತದೆ. ಇಲ್ಲಿಯೂ ಕೆಲವರು ಪ್ರವಾಸಿಗಳಿದ್ದಾರೆ, ಕೆಲವರಿಗೆ ದರ್ಶನದ ಆಕಾಂಕ್ಷೆಯಿದ್ದರೆ ಕೆಲವರಿಗೆ ಟಿಕೆಟ್‌ದ್ದು. ನಮ್ಮಲ್ಲಿ ಚುನಾವಣಾ ಪಾದಯಾತ್ರೆಗಳ ಇತಿಹಾಸವೂ ತುಂಬಾ ಹಳೆಯದು. ನಮ್ಮಲ್ಲಿ ಆದ ಕೆಲವು ಪಾದಯಾತ್ರೆಗಳಿಂದ ದೇಶವು ತನ್ನನ್ನು ತಾನು ಗುರುತಿಸಿಕೊಂಡಿದೆ, ಕಳೆದುಕೊಂಡ ತನ್ನ ಆತ್ಮಬಲವನ್ನು ಪಡೆದುಕೊಂಡಿದೆ.

ಸ್ವಾಭಾವಿಕವಾಗಿಯೇ ’ಭಾರತ ಜೋಡೊ ಯಾತ್ರೆ’ಯಲ್ಲಿ ಇವೆಲ್ಲವುಗಳ ಒಂದಿಷ್ಟು ಅಂಶಗಳಿವೆ. ಹಾಗಾಗಿ ದೇಶದ ಒಂದು ದೊಡ್ಡ ಪಕ್ಷದಿಂದ ಪ್ರಾಯೋಜಿತವಾದ ಇಂತಹ ಯಾತ್ರೆಗಳಲ್ಲಿ ಪ್ರವಾಸಿಗರೂ ಇರುತ್ತಾರೆ, ಅವರೊಂದಿಗೆ ಪೈಲ್ವಾನರೂ ಇರುತ್ತಾರೆ, ಟಿಕೆಟ್ ಆಕಾಂಕ್ಷಿಗಳೂ ಇರುತ್ತಾರೆ ಹಾಗೂ ದರ್ಶನಾರ್ಥಿಗಳೂ ಇರುತ್ತಾರೆ. ಈ ಯಾತ್ರೆಯ ಯಶಸ್ಸು, ವಿಫಲತೆಗಳನ್ನು ಈ ಸಣ್ಣ ಆಕಾಂಕ್ಷೆಗಳ ತಕ್ಕಡಿಯಲ್ಲಿ ಅಳೆಯಲು ಸಾಧ್ಯವಿಲ್ಲ. ಎಂದಿನಂತೆಯೇ ರಾಜಕೀಯ ಪಂಡಿತರು ಇದನ್ನು ಕಾಂಗ್ರೆಸ್ ಪಕ್ಷ ಅಥವಾ ರಾಹುಲ್ ಗಾಂಧಿಯ ಲಾಭ-ನಷ್ಟಗಳ ಲೆಕ್ಕದಲ್ಲಿ ಒರೆಗೆ ಹಚ್ಚಲಿದ್ದಾರೆ. ಆದರೆ, ಒಂದು ಪಕ್ಷದ ಅಥವಾ ಒಬ್ಬ ನಾಯಕನ ಲಾಭವು ರಾಷ್ಟ್ರದ ಹಿತಾಸಕ್ತಿಯ ಅಳತೆಗೋಲಾಗಲು ಸಾಧ್ಯವಿಲ್ಲ.

ಇಂದಿನ ಸಂದರ್ಭದಲ್ಲಿ ಭಾರತ ಜೋಡೊ ಯಾತ್ರೆಯ ಸಫಲತೆಯ ಒಂದೇ ಒಂದು ಅಳತೆ ಆಗಿರಬಹುದು. ಅದು, ದೇಶದ ಭವಿಷ್ಯದ ಮೇಲೆ ಕವಿದಿರುವ ಕಾರ್ಮೋಡಗಳನ್ನು ಇಲ್ಲವಾಗಿಸುವಲ್ಲಿ ಈ ಯಾತ್ರೆ ಸಹಕಾರಿಯಾಗುವುದೇ? ನಮ್ಮ ಪ್ರಜಾಪ್ರಭುತ್ವ, ಸಂವಿಧಾನ, ಸ್ವಾತಂತ್ರ್ಯ ಆಂದೋಲನ ಹಾಗೂ ಸಭ್ಯತೆಯ ಪರಂಪರೆಯನ್ನು ಉಳಿಸುವಲ್ಲಿ ಏನಾದರೂ ಯೋಗದಾನ ನೀಡುವುದೇ? ರಾಜಕೀಯ ಶಕ್ತಿಯ ಸಮತೋಲನವನ್ನು ಸ್ವಲ್ಪ ಮಟ್ಟಿಗಾದರೂ, ದೇಶವನ್ನು ಜೋಡಿಸುವ ಕಡೆಗೆ ತಿರುಗಿಸಬಲ್ಲದೇ? ನನ್ನಂತಹ ಜನರು ಇದೇ ನಿರೀಕ್ಷೆಯಲ್ಲಿ ಈ ಯಾತ್ರೆಯಲ್ಲಿ ಸೇರಿಕೊಂಡಿದ್ದೇವೆ. ದೇಶದ ಇತಿಹಾಸದಲ್ಲಿ ಸೂಕ್ಷ್ಮವಾದ ಮತ್ತು ನಿರ್ಣಾಯಕವಾದ ಸಮಯದಲ್ಲಿ ನಡೆಯುತ್ತಿರುವ ಈ ಯಾತ್ರೆಯನ್ನು ಬೇರೆ ಯಾವುದೇ ದೃಷ್ಟಿಕೋನದಲ್ಲಿ ನೋಡುವುದು ಒಂದು ದೊಡ್ಡ ಅಸಡ್ಡೆಯೆನಿಸುತ್ತದೆ.

ಸುಮಾರು 5 ತಿಂಗಳು ನಡೆಯಲಿರುವ ಈ ಯಾತ್ರೆಯ ಬಗ್ಗೆ ಮೊದಲ 5 ದಿನದ ಆಧಾರದ ಮೇಲೆ ಯಾವುದೇ ತೀರ್ಮಾನಕ್ಕೆ ಬರುವುದು ಹಾಸ್ಯಾಸ್ಪದವಾಗುವುದು; ಆದರೆ ಈ ಮೊದಲ ಝಲಕ್‌ನಿಂದ ಕೆಲವು ನಿರೀಕ್ಷೆಗಳನ್ನು ಇಟ್ಟುಕೊಳ್ಳಬಹುದು. ಮೊದಲ ವಾರದಲ್ಲಿ ಈ ಯಾತ್ರೆಯು ತಮಿಳುನಾಡಿನ ಕನ್ಯಾಕುಮಾರಿ ಹಾಗೂ ಕೇರಳದ ತಿರುವನಂತಪುರಂ ಜಿಲ್ಲೆಗಳಿಂದ ಹಾದುಹೋಗುತ್ತಿದೆ. ಇವೆರಡೂ ತುಲನಾತ್ಮಕವಾಗಿ ಕಾಂಗ್ರಸ್‌ನ ಪ್ರಬಲ ಕ್ಷೇತ್ರಗಳಾಗಿವೆ. ಹಾಗಾಗಿ ಯಾತ್ರೆಗೆ ಇಷ್ಟು ಬೃಹತ್ತಾಗಿ ಸಿಕ್ಕ ಜನರ ಸಮರ್ಥನೆಯಿಂದ ಅಚ್ಚರಿಯಾಗಲಾರದು. ಆದರೆ, ಗಮನಿಸಬೇಕಾದ ಅಂಶವೇನೆಂದರೆ, ಹೆಚ್ಚುಕಡಿಮೆ ಎಲ್ಲಾ ಸಮಯದಲ್ಲೂ ರಸ್ತೆಯ ಎರಡೂ ಬದಿಗಳಲ್ಲಿ ಈ ಯಾತ್ರೆಯನ್ನು ಸ್ವಾಗತಿಸಲು ಜನರ ನಿಂತಿದ್ದರು, ಹಾಗೂ ಅವರಲ್ಲಿ ಅನೇಕರು ಗಂಟೆಗಳವರೆಗೆ ನಿಂತಿದ್ದರು. ಸ್ವಾಭಾವಿಕವಾಗಿಯೇ, ಈ ಜನಸಮೂಹದಲ್ಲಿ ಹೆಚ್ಚಿನ ಜನರನ್ನು ಪಕ್ಷದ ಕಾರ್ಯಕರ್ತರು ಸೇರಿಸಿರಬಹುದು. ಹಾಗೆ ನೋಡಿದರೂ ಇದೂ ಒಂದು ಸಾಧನೆಯೇ.

ಕೆಲವರು ಕೇವಲ ನೋಡುಗರಾಗಿಯೂ ಇದ್ದರು. ಆದರೆ ಈ ಜನಸಮೂಹದಲ್ಲಿ ಸಾಧಾರಣ ಜನರು ಒಂದು ಭಾಗವೂ ಇತ್ತು, ಅವರನ್ನು ಯಾವುದೇ ಪಕ್ಷದವರು ಅಲ್ಲಿ ಸೇರಿಸಿದ್ದಲ್ಲ, ಅವರು ಖುದ್ದಾಗಿ ಬಂದಿದ್ದರು. ಕತ್ತಲೆಯಲ್ಲಿ ಒಂದು ಪುಟ್ಟ ಆಸೆಯ ಬೆಳಕನ್ನು ಕಂಡಾಗ ಕಾಣುವ ಒಂದು ಹೊಳಪು ಇವರ ಕಣ್ಣುಗಳಲ್ಲಿತ್ತು. ಇವರನ್ನು ಈಗಾಗಲೇ ಕಾಂಗ್ರೆಸ್ ಸಮರ್ಥಕ ಅಥವಾ ಮತದಾರರೆಂಬ ಹೆಸರು ಕೊಡುವುದು ಬೇಡ. ಒಂದು ಪಾದಯಾತ್ರೆಯ ಬಗ್ಗೆ ಗೌರವ ಭಾವನೆ ಇರಲೂ ಸಾಧ್ಯ ಮತ್ತು ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ ಎನ್ನಬಹುದು. ಮುಂದಿನ ಕೆಲವು ದಿನಗಳಲ್ಲೇ ತಿಳಿಯುವುದಾದರೂ, ಈ ಯಾತ್ರೆಯು ಒಂದು ಸಕಾರಾತ್ಮಕವಾದ ಜಾಗೃತಿಯನ್ನು ಮೂಡಿಸುತ್ತಿದೆ ಎಂಬುದನ್ನು ಅಲ್ಲಗಳೆಯಲಾಗದು.

ಚುನಾವಣೆಗಳಲ್ಲಿ ಇದರ ಪರಿಣಾಮ ಏನಾಗುವುದು ಎಂಬುದನ್ನು ಈಗಲೇ ಹೇಳಲು ಬರುವುದಿಲ್ಲ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆ ಮೇಲೆ ಏನು ಪರಿಣಾಮ ಎಂಬ ಬಗ್ಗೆಯೂ ಸ್ವಲ್ಪವೂ ಅಂದಾಜು ಮಾಡಲಾಗುವುದಿಲ್ಲ. ಆದರೆ ಈ ಸಕಾರಾತ್ಮಕತೆಯಿಂದ ಈಗಿರುವ ವಿಕಲ್ಪವಿಲ್ಲದಿರುವ ರಾಜಕೀಯ ವಾತಾವರಣವನ್ನು ಎಲ್ಲಿಯಾದರೂ ಒಡೆಯುವ ಸಾಮರ್ಥ್ಯವಂತೂ ಇದೆ.

ಈಗಲೇ ಈ ಯಾತ್ರೆಯು ದೇಶದ ಮನಸ್ಥಿತಿಯ ಮೇಲೆ ಬೀರುವ ಪರಿಣಾಮದ ಬಗ್ಗೆ ಮಾತನಾಡುವುದೂ ಹುಚ್ಚುತನವಾಗುತ್ತದೆ. ಆದರೆ ಒಂದಂತೂ ಸತ್ಯ; ಕಾಂಗ್ರೆಸ್ ಪಕ್ಷ ಕೈಗೆತ್ತಿಕೊಂಡಿರುವ ಈ ನಡಿಗೆ ದೇಶದ ಮೌನ ಮತ್ತು ಏಕತಾನತೆಯ ಭಾವನೆಯನ್ನು ಮುರಿದುಹಾಕಿದೆ. ತಾವೆಂದೂ ಕಾಂಗ್ರೆಸ್‌ನ ಬೆಂಬಲ ನೀಡದೇ ಇರುವ ಹಾಗೂ ಬೀದಿಗಳಲ್ಲಿ ಕಾಂಗ್ರೆಸ್‌ಅನ್ನು ವಿರೋಧಿಸಿದ ಅನೇಕರು ಈ ಯಾತ್ರೆಗೆ ಸಮರ್ಥನೆ ಮಾಡುತ್ತಿದ್ದಾರೆ. ದೇಶದ ಜನಾಂದೋಲನಗಳ ಒಂದು ಭಾಗವು ಕನ್ಯಾಕುಮಾರಿಯಿಂದಲೇ ಈ ಯಾತ್ರೆಯಲ್ಲಿ ಕೂಡಿಕೊಂಡಿದೆ.

ಹೊರಗಿನಿಂದ ಬಂದ ಈ ಅನಿರೀಕ್ಷಿತ ಸಮರ್ಥನೆಯಿಂದ ಕಾಂಗ್ರೆಸ್‌ನ ಪಾದಯಾತ್ರಿಗಳ ಆತ್ಮಸ್ಥೈರ್ಯವು ಹೆಚ್ಚಿದೆ. ಕಳೆದ ಇಡೀ ವಾರದಲ್ಲಿ ಈ ಯಾತ್ರೆಯಲ್ಲಿ ಜೊತೆಗೂಡುವ ಆಕಾಂಕ್ಷೆ ಇಟ್ಟುಕೊಂಡವರ ಸಂದೇಶಗಳು ಹೆಚ್ಚುತ್ತಿವೆ. ಕನಿಷ್ಠ ಒಂದು ಮಟ್ಟಕ್ಕಂತೂ ನಾವು ಒಬ್ಬಂಟಿಗಳಲ್ಲ ಎಂಬ ಭಾವನೆ ಮೂಡುತ್ತಿದೆ. ದೇಶ ಬದಲಿಸುವ ಮಾತು ಈಗ ಹೇಳಿದರೆ ದೊಡ್ಡ ಮಾತಾಗುತ್ತದೆ, ಆದರೆ ದೇಶವನ್ನು ಜೋಡಿಸುವ ಇಚ್ಛೆ ಹೊಂದಿದ್ದವರಲ್ಲಿ ತಮ್ಮನ್ನು ತಾವು ಬದಲಿಸಿಕೊಳ್ಳುವ ಪ್ರಕ್ರಿಯೆ ಶುರುವಾಗಿದೆ. ಬೋಣಿ ತುಂಬಾ ಚೆನ್ನಾಗಾಗಿದೆ.

ಯೋಗೇಂದ್ರ ಯಾದವ್

(ಕನ್ನಡಕ್ಕೆ): ರಾಜಶೇಖರ ಅಕ್ಕಿ


ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...