Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಭರತ್ ಬೆಂಗಳೂರು ಬುಲ್ಸ್ ತಂಡವನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿಸಿದ್ದಾರೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿನ ಪಂದ್ಯಾವಳಿ ಆರಂಭಗೊಂಡು ಬಿರುಸಿನಿಂದ ಸಾಗುತ್ತಿದೆ. ಬೆಂಗಳೂರು ಬುಲ್ಸ್ ತಂಡವು ಸತತ ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲೊಂದಾಗಿದೆ. ಇದಕ್ಕೆ ಕಾರಣ ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಯುವ ಆಲ್‌ ರೌಂಡರ್ ಆಟಗಾರ ಭರತ್ ನರೇಶ್ ಹೂಡಾ.

ಅಂದು ಅಕ್ಟೋಬರ್ 22. ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ನಡುವಿನ ಕಬಡ್ಡಿ ಪಂದ್ಯ ನಡೆಯುತ್ತಿತ್ತು. ಪಂದ್ಯದ ಆರಂಭದಲ್ಲಿಯೇ ಆಕ್ರಮಣಕಾರಿ ಆಟವಾಡಿದ ಯು ಮುಂಬಾ ಬೆಂಗಳೂರು ತಂಡವನ್ನು ಎರಡು ಬಾರಿ ಆಲೌಟ್ ಮಾಡಿ 16 ಅಂಕಗಳ ಬೃಹತ್ ಮುನ್ನಡೆ ಸಾಧಿಸಿತ್ತು. ಪಂದ್ಯ ಏಕಮುಖವಾಗಿ ಮುಗಿಯುತ್ತದೆ ಯು ಮುಂಬಾ ಸುಲಭವಾಗಿ ಗೆಲ್ಲುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಏಕೆಂದರೆ ಬುಲ್ಸ್ ತಂಡದ ಡಿಫೆಂಡಿಂಗ್ ತೀರಾ ಕಳಪೆಯಾಗಿತ್ತು. ಆಗ ಬಂದ ನೋಡಿ ಆಪತ್ಭಾಂಧವ ಭರತ್.. ತನ್ನ ಮಿಂಚಿನ ರೈಡಿಂಗ್ ಮೂಲಕ ಬೆಂಗಳೂರು ತಂಡಕ್ಕೆ ಸತತ ಪಾಯಿಂಟ್ ತಂದುಕೊಟ್ಟರು. ಪಂದ್ಯದ ಮೊದಲಾರ್ಧ ಮುಗಿದಾಗ ಬೆಂಗಳೂರು 13 ಪಾಯಿಂಟ್‌ಗಳ ಹಿನ್ನಡೆ ಅನುಭವಿಸಿತ್ತು.

ದ್ವಿತಿಯಾರ್ಧ ಆರಂಭವಾದ ಭರತ್ ಚುರುಕಿನ ರೈಡಿಂಗ್ ಮೂಲಕ ಯು ಮುಂಬಾ ತಂಡವನ್ನು ಮೂರು ಬಾರಿ ಆಲೌಟ್ ಮಾಡುವಲ್ಲಿ ಸಹಕಾರಿಯಾದರು. ತನ್ನ ಏಕಾಗ್ರತೆ ಮತ್ತು ಚಾಣಕ್ಷತನದಿಂದ 16 ರೈಡಿಂಗ್ ಪಾಯಿಂಟ್ ಗಳಿಸಿ ಬೆಂಗಳೂರು 10 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಅದೇ ರೀತಿ ದಬಾಂಗ್ ಡೆಲ್ಲಿ ನಡುವಿನ ಪಂದ್ಯದಲ್ಲಿಯೂ ಸಹ ಆಕ್ರಮಣಕಾರಿ ಆಟವಾಡಿದ ಭರತ್ ಕೈಚೆಲ್ಲಿ ಹೋಗಿದ್ದ ಪಂದ್ಯವನ್ನು ಕೊನೆಯ ಒಂದು ನಿಮಿಷದಲ್ಲಿ ತಹಬದಿಗೆ ತಂದು ಬೆಂಗಳೂರು ತಂಡ 4 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಆ ಪಂದ್ಯದಲ್ಲಿ ಭರತ್ 20 ರೈಡ್‌ಗಳಿಂದ 20 ಪಾಯಿಂಟ್ ಗಳಿಸಿ ಮಿಂಚಿದರು.

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಈ ಎಲ್ಲವೂ ಗೆಲುವಿನ ಪಂದ್ಯಗಳಲ್ಲಿಯೇ ಬಂದಿರುವುದು ವಿಶೇಷ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಮೂಲತಃ ಹರ್ಯಾಣದವರಾದ ಭರತ್ ತಮಗಿರುವ ಎತ್ತರವನ್ನು ಸಂಪೂರ್ಣವಾಗಿ ಬಳಸಿಕೊಂಡು ಚಾಕಚಕ್ಯತೆಯಿಂದ ಪಾಯಿಂಟ್ ಗಳಿಸಿ ಮಿಂಚುತ್ತಿದ್ದಾರೆ. 8ನೇ ಸೀಸನ್‌ನಲ್ಲಿ ಪವನ್ ಕುಮಾರ್ ಶೆರಾವತ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...