Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಭರತ್ ಬೆಂಗಳೂರು ಬುಲ್ಸ್ ತಂಡವನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿಸಿದ್ದಾರೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿನ ಪಂದ್ಯಾವಳಿ ಆರಂಭಗೊಂಡು ಬಿರುಸಿನಿಂದ ಸಾಗುತ್ತಿದೆ. ಬೆಂಗಳೂರು ಬುಲ್ಸ್ ತಂಡವು ಸತತ ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲೊಂದಾಗಿದೆ. ಇದಕ್ಕೆ ಕಾರಣ ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಯುವ ಆಲ್‌ ರೌಂಡರ್ ಆಟಗಾರ ಭರತ್ ನರೇಶ್ ಹೂಡಾ.

ಅಂದು ಅಕ್ಟೋಬರ್ 22. ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ನಡುವಿನ ಕಬಡ್ಡಿ ಪಂದ್ಯ ನಡೆಯುತ್ತಿತ್ತು. ಪಂದ್ಯದ ಆರಂಭದಲ್ಲಿಯೇ ಆಕ್ರಮಣಕಾರಿ ಆಟವಾಡಿದ ಯು ಮುಂಬಾ ಬೆಂಗಳೂರು ತಂಡವನ್ನು ಎರಡು ಬಾರಿ ಆಲೌಟ್ ಮಾಡಿ 16 ಅಂಕಗಳ ಬೃಹತ್ ಮುನ್ನಡೆ ಸಾಧಿಸಿತ್ತು. ಪಂದ್ಯ ಏಕಮುಖವಾಗಿ ಮುಗಿಯುತ್ತದೆ ಯು ಮುಂಬಾ ಸುಲಭವಾಗಿ ಗೆಲ್ಲುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಏಕೆಂದರೆ ಬುಲ್ಸ್ ತಂಡದ ಡಿಫೆಂಡಿಂಗ್ ತೀರಾ ಕಳಪೆಯಾಗಿತ್ತು. ಆಗ ಬಂದ ನೋಡಿ ಆಪತ್ಭಾಂಧವ ಭರತ್.. ತನ್ನ ಮಿಂಚಿನ ರೈಡಿಂಗ್ ಮೂಲಕ ಬೆಂಗಳೂರು ತಂಡಕ್ಕೆ ಸತತ ಪಾಯಿಂಟ್ ತಂದುಕೊಟ್ಟರು. ಪಂದ್ಯದ ಮೊದಲಾರ್ಧ ಮುಗಿದಾಗ ಬೆಂಗಳೂರು 13 ಪಾಯಿಂಟ್‌ಗಳ ಹಿನ್ನಡೆ ಅನುಭವಿಸಿತ್ತು.

ದ್ವಿತಿಯಾರ್ಧ ಆರಂಭವಾದ ಭರತ್ ಚುರುಕಿನ ರೈಡಿಂಗ್ ಮೂಲಕ ಯು ಮುಂಬಾ ತಂಡವನ್ನು ಮೂರು ಬಾರಿ ಆಲೌಟ್ ಮಾಡುವಲ್ಲಿ ಸಹಕಾರಿಯಾದರು. ತನ್ನ ಏಕಾಗ್ರತೆ ಮತ್ತು ಚಾಣಕ್ಷತನದಿಂದ 16 ರೈಡಿಂಗ್ ಪಾಯಿಂಟ್ ಗಳಿಸಿ ಬೆಂಗಳೂರು 10 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಅದೇ ರೀತಿ ದಬಾಂಗ್ ಡೆಲ್ಲಿ ನಡುವಿನ ಪಂದ್ಯದಲ್ಲಿಯೂ ಸಹ ಆಕ್ರಮಣಕಾರಿ ಆಟವಾಡಿದ ಭರತ್ ಕೈಚೆಲ್ಲಿ ಹೋಗಿದ್ದ ಪಂದ್ಯವನ್ನು ಕೊನೆಯ ಒಂದು ನಿಮಿಷದಲ್ಲಿ ತಹಬದಿಗೆ ತಂದು ಬೆಂಗಳೂರು ತಂಡ 4 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಆ ಪಂದ್ಯದಲ್ಲಿ ಭರತ್ 20 ರೈಡ್‌ಗಳಿಂದ 20 ಪಾಯಿಂಟ್ ಗಳಿಸಿ ಮಿಂಚಿದರು.

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಈ ಎಲ್ಲವೂ ಗೆಲುವಿನ ಪಂದ್ಯಗಳಲ್ಲಿಯೇ ಬಂದಿರುವುದು ವಿಶೇಷ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಮೂಲತಃ ಹರ್ಯಾಣದವರಾದ ಭರತ್ ತಮಗಿರುವ ಎತ್ತರವನ್ನು ಸಂಪೂರ್ಣವಾಗಿ ಬಳಸಿಕೊಂಡು ಚಾಕಚಕ್ಯತೆಯಿಂದ ಪಾಯಿಂಟ್ ಗಳಿಸಿ ಮಿಂಚುತ್ತಿದ್ದಾರೆ. 8ನೇ ಸೀಸನ್‌ನಲ್ಲಿ ಪವನ್ ಕುಮಾರ್ ಶೆರಾವತ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ನ ಸಿಯುಟಾಕ್ಕೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....