Homeಮುಖಪುಟರಾಹುಲ್‌ ಗಾಂಧಿಯ 'ಭಾರತ ನ್ಯಾಯ ಯಾತ್ರೆ’ಗೆ ಮರು ನಾಮಕರಣ

ರಾಹುಲ್‌ ಗಾಂಧಿಯ ‘ಭಾರತ ನ್ಯಾಯ ಯಾತ್ರೆ’ಗೆ ಮರು ನಾಮಕರಣ

- Advertisement -
- Advertisement -

ಕಾಂಗ್ರೆಸ್‌ ಪಕ್ಷವು ಮಣಿಪುರದಿಂದ ಮಹರಾಷ್ಟ್ರದವರೆಗೆ ಜ.14ರಿಂದ ತೆರಳಲು ಉದ್ದೇಶಿಸಿರುವ ‘ಭಾರತ ನ್ಯಾಯ ಯಾತ್ರೆ’ಯನ್ನು ‘ಭಾರತ ಜೋಡೋ ನ್ಯಾಯ ಯಾತ್ರೆ’ ಎಂದು  ಕಾಂಗ್ರೆಸ್‌ ಮರುನಾಮಕರಣ ಮಾಡಿದ್ದು, ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾಹಿತಿಯನ್ನು ನೀಡಿದ್ದಾರೆ.

ಭಾರತ್ ಜೋಡೋ ಯಾತ್ರೆ ಭಾರತದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಯವನ್ನು ಬರೆದಿತ್ತು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಾಗಿದ ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗಿತ್ತು. ಯಾತ್ರೆಯು ಹಿಮಾಚಲ, ಕರ್ನಾಟಕ, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಅಧಿಕಾರಕ್ಕೆ ಬರುವಲ್ಲಿ ಪಾತ್ರವನ್ನು ವಹಿಸಿತ್ತು. ಯಾತ್ರೆ ಮೂಲಕ ದೇಶದಲ್ಲಿ ಮಕ್ಕಳು, ಯುವಜನರು, ವಿದ್ಯಾರ್ಥಿಗಳು, ಹಿರಿಯರು, ಚಿಂತಕರು ಸೇರಿದಂತೆ ಎಲ್ಲ ವರ್ಗಗಳ ಜನರು ಒಟ್ಟುಗೂಡಿಸಲು ಪ್ರಯತ್ನಿಸಲಾಗಿತ್ತು. ಒಡೆದಿರುವ ಜನರ ಮನಸ್ಸುಗಳನ್ನು ಜೋಡಿಸುವ ಈ ಯಾತ್ರೆ ಇತಿಹಾಸವನ್ನು ನಿರ್ಮಿಸಿತ್ತು. ಆದ್ದರಿಂದ ಆ ಯಾತ್ರೆಯನ್ನು ಮತ್ತೆ ಜನರ ನೆನಪಿನಲ್ಲಿರಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ.

ಕಾಂಗ್ರೆಸ್‌ ಪಕ್ಷದ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು, ರಾಜ್ಯ ಘಟಕದ ಮುಖ್ಯಸ್ಥರು ಮತ್ತು ಸಿಎಲ್‌ಪಿ ನಾಯಕರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಭಾರತ್ ಜೋಡೋ ಯಾತ್ರೆ ಜನರ ಮನಸ್ಸಿನಲ್ಲಿರುವ ಬ್ರ್ಯಾಂಡ್ ಆಗಿದೆ. ನಾವು ಅದನ್ನು ಕಳೆದುಕೊಳ್ಳಬಾರದು ಎಂದು ರಾಹುಲ್ ಗಾಂಧಿಯವರು ಸೆಪ್ಟೆಂಬರ್‌ 2022ರಿಂದ 2023ರ ಜನವರಿವರೆಗೆ ಕನ್ಯಾಕುಮಾರಿಯಿಂದ ಶ್ರೀನಗರದವರೆಗೆ ಹಮ್ಮಿಕೊಂಡಿದ್ದ ಭಾರತ್‌ ಜೋಡೋ ಯಾತ್ರೆಯನ್ನು ಉಲ್ಲೇಖಿಸಿ ಹೇಳಿದ್ದಾರೆ.

‘ಭಾರತ ಜೋಡೋ ನ್ಯಾಯ’ ಯಾತ್ರೆ ಜನವರಿ 14ರಂದು ಹಿಂಸಾಚಾರ ಪೀಡಿತ ಮಣಿಪುರದ ರಾಜಧಾನಿ ಇಂಫಾಲ್‌ನಿಂದ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ. ರಾಹುಲ್ ಗಾಂಧಿ 66 ದಿನಗಳ ಅವಧಿಯಲ್ಲಿ ಪ್ರತಿದಿನ ಎರಡು ಬಾರಿ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ನಾವು ಯಾತ್ರೆಯ ಮಾರ್ಗಗಳನ್ನು ಅಂತಿಮಗೊಳಿಸಿದ್ದೇವೆ. ನಾವು ಯಾವಾಗಲೂ ಅರುಣಾಚಲ ಪ್ರದೇಶವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದೆವು. ‘ಭಾರತ ಜೋಡೋ ನ್ಯಾಯ’ ಯಾತ್ರೆ ಅರುಣಾಚಲ ಸೇರಿದಂತೆ 15 ರಾಜ್ಯಗಳ ಮೂಲಕ ಸಾಗಲಿದೆ ಎಂದು ಜೈರಾಮ್ ರಮೇಶ್‌ ಹೇಳಿದ್ದಾರೆ.

ಮಣಿಪುರದಿಂದ ಆರಂಭವಾಗುವ ಈ ಯಾತ್ರೆಯು 14 ರಾಜ್ಯಗಳ ಒಟ್ಟು 85 ಜಿಲ್ಲೆಗಳಲ್ಲಿ 6,700 ಕಿ.ಮೀ. ಕ್ರಮಿಸಲಿದೆ. ಮಹಾರಾಷ್ಟ್ರ ತಲುಪುವ ಮುನ್ನ ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ, ಛತ್ತೀಸಗಢ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಸಾಗಲಿದೆ. ಯಾತ್ರೆಯ ಬಹುಭಾಗ ಬಸ್‌ನಲ್ಲೇ ಸಾಗಲಿದ್ದು, ಆಯ್ದ ಸ್ಥಳಗಳಲ್ಲಿ ಪಾದಯಾತ್ರೆ ನಡೆಯಲಿದೆ.

ಕಾಂಗ್ರೆಸ್ ಆರಂಭದಲ್ಲಿ ಅರುಣಾಚಲದ ಪಾಸಿಘಾಟ್‌ನಿಂದ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ವರೆಗೆ ಯಾತ್ರೆ ನಡೆಸಲು ಚಿಂತಿಸಿತ್ತು. ಆದರೆ ಮೇ 3 ರಿಂದ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವು ಕಾಂಗ್ರೆಸ್ ಯಾತ್ರೆಯ ದಿಕ್ಕನ್ನು ಬದಲಾಯಿಸುವಂತೆ ಮಾಡಿದೆ.

ಯಾತ್ರೆಯು ಉತ್ತರ ಪ್ರದೇಶದಲ್ಲಿ 1,000 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ, ಅಲ್ಲಿ ಪಕ್ಷವು ಕೇವಲ ಒಬ್ಬ ಲೋಕಸಭಾ ಸಂಸದರನ್ನು ಹೊಂದಿದೆ. ಪಶ್ಚಿಮ ಬಂಗಾಳದಲ್ಲಿ 7 ಜಿಲ್ಲೆಗಳಲ್ಲಿ ಅಂದರೆ 523 ಕಿ.ಮೀ ಗಳಷ್ಟು ದೂರ ಯಾತ್ರೆ ಸಾಗಲಿದೆ. ಮೆರವಣಿಗೆಯು ಒಟ್ಟು 110 ಜಿಲ್ಲೆಗಳನ್ನು ಒಳಗೊಂಡಿದೆ. ಎಲ್ಲಾ INDIA ಮೈತ್ರಿ ಪಕ್ಷಗಳು ಮತ್ತು ನಾಗರಿಕ ಸಂಘಟನೆಗಳನ್ನು ಆಹ್ವಾನಿಸಲಾಗುವುದು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್‌ ಜೋಡೊ ಯಾತ್ರೆಯು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 4,500 ಕಿ.ಮೀ ಕ್ರಮಿಸಿತ್ತು. ರಾಹುಲ್‌ ಅವರು ಹಿಂದಿನ ಯಾತ್ರೆಯಿಂದ ಪಡೆದ ಅನುಭವದೊಂದಿಗೆ ಭಾರತ  ಜೋಡೋ ನ್ಯಾಯ ಯಾತ್ರೆಯನ್ನು ಮುನ್ನಡೆಸಲಿದ್ದಾರೆ. ಯಾತ್ರೆಯ ವೇಳೆ ದೇಶದ ಮಹಿಳೆಯರು, ಯುವಕರು ಹಾಗೂ ಅತ್ಯಂತ ಹಿಂದುಳಿದ ಸಮುದಾಯದವರೊಂದಿಗೆ ಸಂವಾದ ನಡೆಸಲಿದ್ದಾರೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಬಳಿಕ ಕಾಂಗ್ರೆಸ್‌ ದೇಶದಲ್ಲಿ ಯಶಸ್ಸನ್ನು ಪಡೆದಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸಿದರೂ, ಹಿಮಾಚಲ ಪ್ರದೇಶದಲ್ಲಿ ಸರ್ಕಾರ ರಚಿಸುವಲ್ಲಿ ಯಶಸ್ವಿಯಾಯಿತು.  2023ರಲ್ಲಿ ಕರ್ನಾಟಕ ಮತ್ತು ತೆಲಂಗಾಣವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಇದನ್ನು ಓದಿ: ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾದರೂ, ಪೆಟ್ರೋಲ್‌ ಬೆಲೆ ಕಡಿತಗೊಳಿಸಿಲ್ಲ: ಕೇಂದ್ರದ ವಿರುದ್ಧ ಖರ್ಗೆ ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...