Homeಮುಖಪುಟ'ಭಾರತ ಜೋಡೋ ನ್ಯಾಯ ಯಾತ್ರೆ'ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

‘ಭಾರತ ಜೋಡೋ ನ್ಯಾಯ ಯಾತ್ರೆ’ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

- Advertisement -
- Advertisement -

ಮಣಿಪುರದ ಗಡಿ ಪಟ್ಟಣ ಮೊರೆಹ್‌ನಲ್ಲಿನ ಹಿಂಸಾಚಾರ ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಮೇಲೆ ಕರಿನೆರಳು ಬೀರಿದೆ. ಜ.14ರಂದು ಕಾಂಗ್ರೆಸ್‌ ಪಕ್ಷವು ಹಿಂಸಾಚಾರ ಪೀಡಿತ ಮಣಿಪುರದಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಗುರಿಯನ್ನು ಹೊಂದಿತ್ತು. ಆದರೆ ಇದಕ್ಕೆ ಮಣಿಪುರ ರಾಜ್ಯ ಸರಕಾರ ಇನ್ನೂ ಅನುಮತಿ ನೀಡಿಲ್ಲ.

ಇಂಡೋ-ಮ್ಯಾನ್ಮಾರ್ ಗಡಿಯ ಮೊರೆಹ್‌ನಲ್ಲಿ ಮಣಿಪುರ ಪೊಲೀಸರು ಮತ್ತು ಸಶಸ್ತ್ರದಾರಿಗಳ ನಡುವೆ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯಿಂದ ಪರಿಸ್ಥಿತಿ ತಿಳಿಯಾಗಿಲ್ಲ. ಸೋಮವಾರ ಬೆಳಗ್ಗೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮೊರೆಹ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಭಾನುವಾರ ವಾರ್ಡ್ 7 ಮತ್ತು ಮೊರೆಹ್‌ ಬಜಾರ್‌ನಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಗಳು ನಡೆದಿದೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಮಾತನಾಡುತ್ತಾ, ಭದ್ರತಾ ಪಡೆಗಳ ಮೇಲಿನ ದಾಳಿಗೆ ಕಾರಣವಾದ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಬಂಧಿಸಲು ಅಸ್ಸಾಂ ರೈಫಲ್ಸ್, ಬಿಎಸ್ಎಫ್ ಮತ್ತು ರಾಜ್ಯ ಪೊಲೀಸರ ಜಂಟಿ ಪ್ರಯತ್ನದ ಭಾಗವಾಗಿ ಕಾರ್ಯಾಚರಣೆ ನಡೆಯುತ್ತಿದೆ. ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಕುರಿತು ಮಾತನಾಡಿದ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್, ರಾಹುಲ್ ಗಾಂಧಿಯವರ ರ್ಯಾಲಿಗೆ ಅನುಮತಿ ನೀಡುವ ಬಗ್ಗೆ ಪರಿಗಣನೆಯಲ್ಲಿದೆ. ನಾವು ವಿವಿಧ ಭದ್ರತಾ ಏಜೆನ್ಸಿಗಳಿಂದ ವರದಿಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಅವರಿಂದ ವರದಿಗಳನ್ನು ಸ್ವೀಕರಿಸಿದ ನಂತರ ನಾವು ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಜನವರಿ 14ರಂದು ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬುಂಗ್‌ನಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾತನಾಡಿ, ಯಾತ್ರೆಗೆ ಮಣಿಪುರ ಸರ್ಕಾರದಿಂದ ಅನುಮತಿಗಾಗಿ ಪಕ್ಷವು ಕಾಯುತ್ತಿದೆ ಎಂದು ಹೇಳಿದ್ದಾರೆ.

ಭಾರತ ಜೋಡೋ ನ್ಯಾಯ ಯಾತ್ರೆ ಮಣಿಪುರದಿಂದ ಆರಂಭವಾಗುವ ನಿರೀಕ್ಷೆಯಿದ್ದು, ಈ ಯಾತ್ರೆಯು 14 ರಾಜ್ಯಗಳ ಒಟ್ಟು 85 ಜಿಲ್ಲೆಗಳಲ್ಲಿ 6,700 ಕಿ.ಮೀ. ಕ್ರಮಿಸಲಿದೆ. ಮಹಾರಾಷ್ಟ್ರ ತಲುಪುವ ಮುನ್ನ ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ, ಛತ್ತೀಸಗಢ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಸಾಗಲಿದೆ. ಯಾತ್ರೆಯ ಬಹುಭಾಗ ಬಸ್‌ನಲ್ಲಿ ಸಾಗಲಿದ್ದು, ಆಯ್ದ ಸ್ಥಳಗಳಲ್ಲಿ ಪಾದಯಾತ್ರೆ ನಡೆಯಲಿದೆ.

ಕಾಂಗ್ರೆಸ್ ಆರಂಭದಲ್ಲಿ ಅರುಣಾಚಲದ ಪಾಸಿಘಾಟ್‌ನಿಂದ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ವರೆಗೆ ಯಾತ್ರೆ ನಡೆಸಲು ಚಿಂತಿಸಿತ್ತು. ಆದರೆ ಮೇ 3ರಿಂದ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವು ಕಾಂಗ್ರೆಸ್ ಯಾತ್ರೆಯ ದಿಕ್ಕನ್ನು ಬದಲಾಯಿಸುವಂತೆ ಮಾಡಿತ್ತು. ಆದರೆ ಇದೀಗ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆ ಮಣಿಪುರ ಸರಕಾರದಿಂದ ಯಾತ್ರೆಗೆ ಅನುಮತಿ ಈವರೆಗೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...