Homeಮುಖಪುಟ'ಭಾರತ ಜೋಡೋ ನ್ಯಾಯ ಯಾತ್ರೆ'ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

‘ಭಾರತ ಜೋಡೋ ನ್ಯಾಯ ಯಾತ್ರೆ’ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

- Advertisement -
- Advertisement -

ಮಣಿಪುರದ ಗಡಿ ಪಟ್ಟಣ ಮೊರೆಹ್‌ನಲ್ಲಿನ ಹಿಂಸಾಚಾರ ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಮೇಲೆ ಕರಿನೆರಳು ಬೀರಿದೆ. ಜ.14ರಂದು ಕಾಂಗ್ರೆಸ್‌ ಪಕ್ಷವು ಹಿಂಸಾಚಾರ ಪೀಡಿತ ಮಣಿಪುರದಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಗುರಿಯನ್ನು ಹೊಂದಿತ್ತು. ಆದರೆ ಇದಕ್ಕೆ ಮಣಿಪುರ ರಾಜ್ಯ ಸರಕಾರ ಇನ್ನೂ ಅನುಮತಿ ನೀಡಿಲ್ಲ.

ಇಂಡೋ-ಮ್ಯಾನ್ಮಾರ್ ಗಡಿಯ ಮೊರೆಹ್‌ನಲ್ಲಿ ಮಣಿಪುರ ಪೊಲೀಸರು ಮತ್ತು ಸಶಸ್ತ್ರದಾರಿಗಳ ನಡುವೆ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯಿಂದ ಪರಿಸ್ಥಿತಿ ತಿಳಿಯಾಗಿಲ್ಲ. ಸೋಮವಾರ ಬೆಳಗ್ಗೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮೊರೆಹ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಭಾನುವಾರ ವಾರ್ಡ್ 7 ಮತ್ತು ಮೊರೆಹ್‌ ಬಜಾರ್‌ನಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಗಳು ನಡೆದಿದೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಮಾತನಾಡುತ್ತಾ, ಭದ್ರತಾ ಪಡೆಗಳ ಮೇಲಿನ ದಾಳಿಗೆ ಕಾರಣವಾದ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಬಂಧಿಸಲು ಅಸ್ಸಾಂ ರೈಫಲ್ಸ್, ಬಿಎಸ್ಎಫ್ ಮತ್ತು ರಾಜ್ಯ ಪೊಲೀಸರ ಜಂಟಿ ಪ್ರಯತ್ನದ ಭಾಗವಾಗಿ ಕಾರ್ಯಾಚರಣೆ ನಡೆಯುತ್ತಿದೆ. ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಕುರಿತು ಮಾತನಾಡಿದ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್, ರಾಹುಲ್ ಗಾಂಧಿಯವರ ರ್ಯಾಲಿಗೆ ಅನುಮತಿ ನೀಡುವ ಬಗ್ಗೆ ಪರಿಗಣನೆಯಲ್ಲಿದೆ. ನಾವು ವಿವಿಧ ಭದ್ರತಾ ಏಜೆನ್ಸಿಗಳಿಂದ ವರದಿಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಅವರಿಂದ ವರದಿಗಳನ್ನು ಸ್ವೀಕರಿಸಿದ ನಂತರ ನಾವು ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಜನವರಿ 14ರಂದು ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬುಂಗ್‌ನಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾತನಾಡಿ, ಯಾತ್ರೆಗೆ ಮಣಿಪುರ ಸರ್ಕಾರದಿಂದ ಅನುಮತಿಗಾಗಿ ಪಕ್ಷವು ಕಾಯುತ್ತಿದೆ ಎಂದು ಹೇಳಿದ್ದಾರೆ.

ಭಾರತ ಜೋಡೋ ನ್ಯಾಯ ಯಾತ್ರೆ ಮಣಿಪುರದಿಂದ ಆರಂಭವಾಗುವ ನಿರೀಕ್ಷೆಯಿದ್ದು, ಈ ಯಾತ್ರೆಯು 14 ರಾಜ್ಯಗಳ ಒಟ್ಟು 85 ಜಿಲ್ಲೆಗಳಲ್ಲಿ 6,700 ಕಿ.ಮೀ. ಕ್ರಮಿಸಲಿದೆ. ಮಹಾರಾಷ್ಟ್ರ ತಲುಪುವ ಮುನ್ನ ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ, ಛತ್ತೀಸಗಢ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಸಾಗಲಿದೆ. ಯಾತ್ರೆಯ ಬಹುಭಾಗ ಬಸ್‌ನಲ್ಲಿ ಸಾಗಲಿದ್ದು, ಆಯ್ದ ಸ್ಥಳಗಳಲ್ಲಿ ಪಾದಯಾತ್ರೆ ನಡೆಯಲಿದೆ.

ಕಾಂಗ್ರೆಸ್ ಆರಂಭದಲ್ಲಿ ಅರುಣಾಚಲದ ಪಾಸಿಘಾಟ್‌ನಿಂದ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ವರೆಗೆ ಯಾತ್ರೆ ನಡೆಸಲು ಚಿಂತಿಸಿತ್ತು. ಆದರೆ ಮೇ 3ರಿಂದ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವು ಕಾಂಗ್ರೆಸ್ ಯಾತ್ರೆಯ ದಿಕ್ಕನ್ನು ಬದಲಾಯಿಸುವಂತೆ ಮಾಡಿತ್ತು. ಆದರೆ ಇದೀಗ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆ ಮಣಿಪುರ ಸರಕಾರದಿಂದ ಯಾತ್ರೆಗೆ ಅನುಮತಿ ಈವರೆಗೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...