Homeಮುಖಪುಟ'ಭಾರತ ಜೋಡೋ ನ್ಯಾಯ ಯಾತ್ರೆ'ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

‘ಭಾರತ ಜೋಡೋ ನ್ಯಾಯ ಯಾತ್ರೆ’ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

- Advertisement -
- Advertisement -

ಮಣಿಪುರದ ಗಡಿ ಪಟ್ಟಣ ಮೊರೆಹ್‌ನಲ್ಲಿನ ಹಿಂಸಾಚಾರ ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಮೇಲೆ ಕರಿನೆರಳು ಬೀರಿದೆ. ಜ.14ರಂದು ಕಾಂಗ್ರೆಸ್‌ ಪಕ್ಷವು ಹಿಂಸಾಚಾರ ಪೀಡಿತ ಮಣಿಪುರದಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಗುರಿಯನ್ನು ಹೊಂದಿತ್ತು. ಆದರೆ ಇದಕ್ಕೆ ಮಣಿಪುರ ರಾಜ್ಯ ಸರಕಾರ ಇನ್ನೂ ಅನುಮತಿ ನೀಡಿಲ್ಲ.

ಇಂಡೋ-ಮ್ಯಾನ್ಮಾರ್ ಗಡಿಯ ಮೊರೆಹ್‌ನಲ್ಲಿ ಮಣಿಪುರ ಪೊಲೀಸರು ಮತ್ತು ಸಶಸ್ತ್ರದಾರಿಗಳ ನಡುವೆ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯಿಂದ ಪರಿಸ್ಥಿತಿ ತಿಳಿಯಾಗಿಲ್ಲ. ಸೋಮವಾರ ಬೆಳಗ್ಗೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮೊರೆಹ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಭಾನುವಾರ ವಾರ್ಡ್ 7 ಮತ್ತು ಮೊರೆಹ್‌ ಬಜಾರ್‌ನಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಗಳು ನಡೆದಿದೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಮಾತನಾಡುತ್ತಾ, ಭದ್ರತಾ ಪಡೆಗಳ ಮೇಲಿನ ದಾಳಿಗೆ ಕಾರಣವಾದ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಬಂಧಿಸಲು ಅಸ್ಸಾಂ ರೈಫಲ್ಸ್, ಬಿಎಸ್ಎಫ್ ಮತ್ತು ರಾಜ್ಯ ಪೊಲೀಸರ ಜಂಟಿ ಪ್ರಯತ್ನದ ಭಾಗವಾಗಿ ಕಾರ್ಯಾಚರಣೆ ನಡೆಯುತ್ತಿದೆ. ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಕುರಿತು ಮಾತನಾಡಿದ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್, ರಾಹುಲ್ ಗಾಂಧಿಯವರ ರ್ಯಾಲಿಗೆ ಅನುಮತಿ ನೀಡುವ ಬಗ್ಗೆ ಪರಿಗಣನೆಯಲ್ಲಿದೆ. ನಾವು ವಿವಿಧ ಭದ್ರತಾ ಏಜೆನ್ಸಿಗಳಿಂದ ವರದಿಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಅವರಿಂದ ವರದಿಗಳನ್ನು ಸ್ವೀಕರಿಸಿದ ನಂತರ ನಾವು ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಜನವರಿ 14ರಂದು ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬುಂಗ್‌ನಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾತನಾಡಿ, ಯಾತ್ರೆಗೆ ಮಣಿಪುರ ಸರ್ಕಾರದಿಂದ ಅನುಮತಿಗಾಗಿ ಪಕ್ಷವು ಕಾಯುತ್ತಿದೆ ಎಂದು ಹೇಳಿದ್ದಾರೆ.

ಭಾರತ ಜೋಡೋ ನ್ಯಾಯ ಯಾತ್ರೆ ಮಣಿಪುರದಿಂದ ಆರಂಭವಾಗುವ ನಿರೀಕ್ಷೆಯಿದ್ದು, ಈ ಯಾತ್ರೆಯು 14 ರಾಜ್ಯಗಳ ಒಟ್ಟು 85 ಜಿಲ್ಲೆಗಳಲ್ಲಿ 6,700 ಕಿ.ಮೀ. ಕ್ರಮಿಸಲಿದೆ. ಮಹಾರಾಷ್ಟ್ರ ತಲುಪುವ ಮುನ್ನ ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ, ಛತ್ತೀಸಗಢ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಸಾಗಲಿದೆ. ಯಾತ್ರೆಯ ಬಹುಭಾಗ ಬಸ್‌ನಲ್ಲಿ ಸಾಗಲಿದ್ದು, ಆಯ್ದ ಸ್ಥಳಗಳಲ್ಲಿ ಪಾದಯಾತ್ರೆ ನಡೆಯಲಿದೆ.

ಕಾಂಗ್ರೆಸ್ ಆರಂಭದಲ್ಲಿ ಅರುಣಾಚಲದ ಪಾಸಿಘಾಟ್‌ನಿಂದ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ವರೆಗೆ ಯಾತ್ರೆ ನಡೆಸಲು ಚಿಂತಿಸಿತ್ತು. ಆದರೆ ಮೇ 3ರಿಂದ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವು ಕಾಂಗ್ರೆಸ್ ಯಾತ್ರೆಯ ದಿಕ್ಕನ್ನು ಬದಲಾಯಿಸುವಂತೆ ಮಾಡಿತ್ತು. ಆದರೆ ಇದೀಗ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆ ಮಣಿಪುರ ಸರಕಾರದಿಂದ ಯಾತ್ರೆಗೆ ಅನುಮತಿ ಈವರೆಗೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...