Homeಮುಖಪುಟ'ಭಾರತ ಜೋಡೋ ನ್ಯಾಯ ಯಾತ್ರೆ'ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

‘ಭಾರತ ಜೋಡೋ ನ್ಯಾಯ ಯಾತ್ರೆ’ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

- Advertisement -
- Advertisement -

ಮಣಿಪುರದ ಗಡಿ ಪಟ್ಟಣ ಮೊರೆಹ್‌ನಲ್ಲಿನ ಹಿಂಸಾಚಾರ ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಮೇಲೆ ಕರಿನೆರಳು ಬೀರಿದೆ. ಜ.14ರಂದು ಕಾಂಗ್ರೆಸ್‌ ಪಕ್ಷವು ಹಿಂಸಾಚಾರ ಪೀಡಿತ ಮಣಿಪುರದಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಗುರಿಯನ್ನು ಹೊಂದಿತ್ತು. ಆದರೆ ಇದಕ್ಕೆ ಮಣಿಪುರ ರಾಜ್ಯ ಸರಕಾರ ಇನ್ನೂ ಅನುಮತಿ ನೀಡಿಲ್ಲ.

ಇಂಡೋ-ಮ್ಯಾನ್ಮಾರ್ ಗಡಿಯ ಮೊರೆಹ್‌ನಲ್ಲಿ ಮಣಿಪುರ ಪೊಲೀಸರು ಮತ್ತು ಸಶಸ್ತ್ರದಾರಿಗಳ ನಡುವೆ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯಿಂದ ಪರಿಸ್ಥಿತಿ ತಿಳಿಯಾಗಿಲ್ಲ. ಸೋಮವಾರ ಬೆಳಗ್ಗೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮೊರೆಹ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಭಾನುವಾರ ವಾರ್ಡ್ 7 ಮತ್ತು ಮೊರೆಹ್‌ ಬಜಾರ್‌ನಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಗಳು ನಡೆದಿದೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಮಾತನಾಡುತ್ತಾ, ಭದ್ರತಾ ಪಡೆಗಳ ಮೇಲಿನ ದಾಳಿಗೆ ಕಾರಣವಾದ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಬಂಧಿಸಲು ಅಸ್ಸಾಂ ರೈಫಲ್ಸ್, ಬಿಎಸ್ಎಫ್ ಮತ್ತು ರಾಜ್ಯ ಪೊಲೀಸರ ಜಂಟಿ ಪ್ರಯತ್ನದ ಭಾಗವಾಗಿ ಕಾರ್ಯಾಚರಣೆ ನಡೆಯುತ್ತಿದೆ. ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಕುರಿತು ಮಾತನಾಡಿದ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್, ರಾಹುಲ್ ಗಾಂಧಿಯವರ ರ್ಯಾಲಿಗೆ ಅನುಮತಿ ನೀಡುವ ಬಗ್ಗೆ ಪರಿಗಣನೆಯಲ್ಲಿದೆ. ನಾವು ವಿವಿಧ ಭದ್ರತಾ ಏಜೆನ್ಸಿಗಳಿಂದ ವರದಿಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಅವರಿಂದ ವರದಿಗಳನ್ನು ಸ್ವೀಕರಿಸಿದ ನಂತರ ನಾವು ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಜನವರಿ 14ರಂದು ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬುಂಗ್‌ನಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾತನಾಡಿ, ಯಾತ್ರೆಗೆ ಮಣಿಪುರ ಸರ್ಕಾರದಿಂದ ಅನುಮತಿಗಾಗಿ ಪಕ್ಷವು ಕಾಯುತ್ತಿದೆ ಎಂದು ಹೇಳಿದ್ದಾರೆ.

ಭಾರತ ಜೋಡೋ ನ್ಯಾಯ ಯಾತ್ರೆ ಮಣಿಪುರದಿಂದ ಆರಂಭವಾಗುವ ನಿರೀಕ್ಷೆಯಿದ್ದು, ಈ ಯಾತ್ರೆಯು 14 ರಾಜ್ಯಗಳ ಒಟ್ಟು 85 ಜಿಲ್ಲೆಗಳಲ್ಲಿ 6,700 ಕಿ.ಮೀ. ಕ್ರಮಿಸಲಿದೆ. ಮಹಾರಾಷ್ಟ್ರ ತಲುಪುವ ಮುನ್ನ ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ, ಛತ್ತೀಸಗಢ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಸಾಗಲಿದೆ. ಯಾತ್ರೆಯ ಬಹುಭಾಗ ಬಸ್‌ನಲ್ಲಿ ಸಾಗಲಿದ್ದು, ಆಯ್ದ ಸ್ಥಳಗಳಲ್ಲಿ ಪಾದಯಾತ್ರೆ ನಡೆಯಲಿದೆ.

ಕಾಂಗ್ರೆಸ್ ಆರಂಭದಲ್ಲಿ ಅರುಣಾಚಲದ ಪಾಸಿಘಾಟ್‌ನಿಂದ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ವರೆಗೆ ಯಾತ್ರೆ ನಡೆಸಲು ಚಿಂತಿಸಿತ್ತು. ಆದರೆ ಮೇ 3ರಿಂದ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವು ಕಾಂಗ್ರೆಸ್ ಯಾತ್ರೆಯ ದಿಕ್ಕನ್ನು ಬದಲಾಯಿಸುವಂತೆ ಮಾಡಿತ್ತು. ಆದರೆ ಇದೀಗ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆ ಮಣಿಪುರ ಸರಕಾರದಿಂದ ಯಾತ್ರೆಗೆ ಅನುಮತಿ ಈವರೆಗೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...