Homeಮುಖಪುಟ'ಭಾರತ ಜೋಡೋ ನ್ಯಾಯ ಯಾತ್ರೆ'ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

‘ಭಾರತ ಜೋಡೋ ನ್ಯಾಯ ಯಾತ್ರೆ’ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

- Advertisement -
- Advertisement -

ಮಣಿಪುರದ ಗಡಿ ಪಟ್ಟಣ ಮೊರೆಹ್‌ನಲ್ಲಿನ ಹಿಂಸಾಚಾರ ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಮೇಲೆ ಕರಿನೆರಳು ಬೀರಿದೆ. ಜ.14ರಂದು ಕಾಂಗ್ರೆಸ್‌ ಪಕ್ಷವು ಹಿಂಸಾಚಾರ ಪೀಡಿತ ಮಣಿಪುರದಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಗುರಿಯನ್ನು ಹೊಂದಿತ್ತು. ಆದರೆ ಇದಕ್ಕೆ ಮಣಿಪುರ ರಾಜ್ಯ ಸರಕಾರ ಇನ್ನೂ ಅನುಮತಿ ನೀಡಿಲ್ಲ.

ಇಂಡೋ-ಮ್ಯಾನ್ಮಾರ್ ಗಡಿಯ ಮೊರೆಹ್‌ನಲ್ಲಿ ಮಣಿಪುರ ಪೊಲೀಸರು ಮತ್ತು ಸಶಸ್ತ್ರದಾರಿಗಳ ನಡುವೆ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯಿಂದ ಪರಿಸ್ಥಿತಿ ತಿಳಿಯಾಗಿಲ್ಲ. ಸೋಮವಾರ ಬೆಳಗ್ಗೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮೊರೆಹ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಭಾನುವಾರ ವಾರ್ಡ್ 7 ಮತ್ತು ಮೊರೆಹ್‌ ಬಜಾರ್‌ನಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಗಳು ನಡೆದಿದೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಮಾತನಾಡುತ್ತಾ, ಭದ್ರತಾ ಪಡೆಗಳ ಮೇಲಿನ ದಾಳಿಗೆ ಕಾರಣವಾದ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಬಂಧಿಸಲು ಅಸ್ಸಾಂ ರೈಫಲ್ಸ್, ಬಿಎಸ್ಎಫ್ ಮತ್ತು ರಾಜ್ಯ ಪೊಲೀಸರ ಜಂಟಿ ಪ್ರಯತ್ನದ ಭಾಗವಾಗಿ ಕಾರ್ಯಾಚರಣೆ ನಡೆಯುತ್ತಿದೆ. ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಕುರಿತು ಮಾತನಾಡಿದ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್, ರಾಹುಲ್ ಗಾಂಧಿಯವರ ರ್ಯಾಲಿಗೆ ಅನುಮತಿ ನೀಡುವ ಬಗ್ಗೆ ಪರಿಗಣನೆಯಲ್ಲಿದೆ. ನಾವು ವಿವಿಧ ಭದ್ರತಾ ಏಜೆನ್ಸಿಗಳಿಂದ ವರದಿಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಅವರಿಂದ ವರದಿಗಳನ್ನು ಸ್ವೀಕರಿಸಿದ ನಂತರ ನಾವು ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಜನವರಿ 14ರಂದು ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬುಂಗ್‌ನಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾತನಾಡಿ, ಯಾತ್ರೆಗೆ ಮಣಿಪುರ ಸರ್ಕಾರದಿಂದ ಅನುಮತಿಗಾಗಿ ಪಕ್ಷವು ಕಾಯುತ್ತಿದೆ ಎಂದು ಹೇಳಿದ್ದಾರೆ.

ಭಾರತ ಜೋಡೋ ನ್ಯಾಯ ಯಾತ್ರೆ ಮಣಿಪುರದಿಂದ ಆರಂಭವಾಗುವ ನಿರೀಕ್ಷೆಯಿದ್ದು, ಈ ಯಾತ್ರೆಯು 14 ರಾಜ್ಯಗಳ ಒಟ್ಟು 85 ಜಿಲ್ಲೆಗಳಲ್ಲಿ 6,700 ಕಿ.ಮೀ. ಕ್ರಮಿಸಲಿದೆ. ಮಹಾರಾಷ್ಟ್ರ ತಲುಪುವ ಮುನ್ನ ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ, ಛತ್ತೀಸಗಢ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಸಾಗಲಿದೆ. ಯಾತ್ರೆಯ ಬಹುಭಾಗ ಬಸ್‌ನಲ್ಲಿ ಸಾಗಲಿದ್ದು, ಆಯ್ದ ಸ್ಥಳಗಳಲ್ಲಿ ಪಾದಯಾತ್ರೆ ನಡೆಯಲಿದೆ.

ಕಾಂಗ್ರೆಸ್ ಆರಂಭದಲ್ಲಿ ಅರುಣಾಚಲದ ಪಾಸಿಘಾಟ್‌ನಿಂದ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ವರೆಗೆ ಯಾತ್ರೆ ನಡೆಸಲು ಚಿಂತಿಸಿತ್ತು. ಆದರೆ ಮೇ 3ರಿಂದ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವು ಕಾಂಗ್ರೆಸ್ ಯಾತ್ರೆಯ ದಿಕ್ಕನ್ನು ಬದಲಾಯಿಸುವಂತೆ ಮಾಡಿತ್ತು. ಆದರೆ ಇದೀಗ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆ ಮಣಿಪುರ ಸರಕಾರದಿಂದ ಯಾತ್ರೆಗೆ ಅನುಮತಿ ಈವರೆಗೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...