Homeಮುಖಪುಟ'ಭಾರತ ಜೋಡೋ ನ್ಯಾಯ ಯಾತ್ರೆ'ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

‘ಭಾರತ ಜೋಡೋ ನ್ಯಾಯ ಯಾತ್ರೆ’ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

- Advertisement -
- Advertisement -

ಮಣಿಪುರದ ಗಡಿ ಪಟ್ಟಣ ಮೊರೆಹ್‌ನಲ್ಲಿನ ಹಿಂಸಾಚಾರ ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಮೇಲೆ ಕರಿನೆರಳು ಬೀರಿದೆ. ಜ.14ರಂದು ಕಾಂಗ್ರೆಸ್‌ ಪಕ್ಷವು ಹಿಂಸಾಚಾರ ಪೀಡಿತ ಮಣಿಪುರದಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಗುರಿಯನ್ನು ಹೊಂದಿತ್ತು. ಆದರೆ ಇದಕ್ಕೆ ಮಣಿಪುರ ರಾಜ್ಯ ಸರಕಾರ ಇನ್ನೂ ಅನುಮತಿ ನೀಡಿಲ್ಲ.

ಇಂಡೋ-ಮ್ಯಾನ್ಮಾರ್ ಗಡಿಯ ಮೊರೆಹ್‌ನಲ್ಲಿ ಮಣಿಪುರ ಪೊಲೀಸರು ಮತ್ತು ಸಶಸ್ತ್ರದಾರಿಗಳ ನಡುವೆ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯಿಂದ ಪರಿಸ್ಥಿತಿ ತಿಳಿಯಾಗಿಲ್ಲ. ಸೋಮವಾರ ಬೆಳಗ್ಗೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮೊರೆಹ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಭಾನುವಾರ ವಾರ್ಡ್ 7 ಮತ್ತು ಮೊರೆಹ್‌ ಬಜಾರ್‌ನಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಗಳು ನಡೆದಿದೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಮಾತನಾಡುತ್ತಾ, ಭದ್ರತಾ ಪಡೆಗಳ ಮೇಲಿನ ದಾಳಿಗೆ ಕಾರಣವಾದ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಬಂಧಿಸಲು ಅಸ್ಸಾಂ ರೈಫಲ್ಸ್, ಬಿಎಸ್ಎಫ್ ಮತ್ತು ರಾಜ್ಯ ಪೊಲೀಸರ ಜಂಟಿ ಪ್ರಯತ್ನದ ಭಾಗವಾಗಿ ಕಾರ್ಯಾಚರಣೆ ನಡೆಯುತ್ತಿದೆ. ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಕುರಿತು ಮಾತನಾಡಿದ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್, ರಾಹುಲ್ ಗಾಂಧಿಯವರ ರ್ಯಾಲಿಗೆ ಅನುಮತಿ ನೀಡುವ ಬಗ್ಗೆ ಪರಿಗಣನೆಯಲ್ಲಿದೆ. ನಾವು ವಿವಿಧ ಭದ್ರತಾ ಏಜೆನ್ಸಿಗಳಿಂದ ವರದಿಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಅವರಿಂದ ವರದಿಗಳನ್ನು ಸ್ವೀಕರಿಸಿದ ನಂತರ ನಾವು ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಜನವರಿ 14ರಂದು ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬುಂಗ್‌ನಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾತನಾಡಿ, ಯಾತ್ರೆಗೆ ಮಣಿಪುರ ಸರ್ಕಾರದಿಂದ ಅನುಮತಿಗಾಗಿ ಪಕ್ಷವು ಕಾಯುತ್ತಿದೆ ಎಂದು ಹೇಳಿದ್ದಾರೆ.

ಭಾರತ ಜೋಡೋ ನ್ಯಾಯ ಯಾತ್ರೆ ಮಣಿಪುರದಿಂದ ಆರಂಭವಾಗುವ ನಿರೀಕ್ಷೆಯಿದ್ದು, ಈ ಯಾತ್ರೆಯು 14 ರಾಜ್ಯಗಳ ಒಟ್ಟು 85 ಜಿಲ್ಲೆಗಳಲ್ಲಿ 6,700 ಕಿ.ಮೀ. ಕ್ರಮಿಸಲಿದೆ. ಮಹಾರಾಷ್ಟ್ರ ತಲುಪುವ ಮುನ್ನ ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ, ಛತ್ತೀಸಗಢ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಸಾಗಲಿದೆ. ಯಾತ್ರೆಯ ಬಹುಭಾಗ ಬಸ್‌ನಲ್ಲಿ ಸಾಗಲಿದ್ದು, ಆಯ್ದ ಸ್ಥಳಗಳಲ್ಲಿ ಪಾದಯಾತ್ರೆ ನಡೆಯಲಿದೆ.

ಕಾಂಗ್ರೆಸ್ ಆರಂಭದಲ್ಲಿ ಅರುಣಾಚಲದ ಪಾಸಿಘಾಟ್‌ನಿಂದ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ವರೆಗೆ ಯಾತ್ರೆ ನಡೆಸಲು ಚಿಂತಿಸಿತ್ತು. ಆದರೆ ಮೇ 3ರಿಂದ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವು ಕಾಂಗ್ರೆಸ್ ಯಾತ್ರೆಯ ದಿಕ್ಕನ್ನು ಬದಲಾಯಿಸುವಂತೆ ಮಾಡಿತ್ತು. ಆದರೆ ಇದೀಗ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆ ಮಣಿಪುರ ಸರಕಾರದಿಂದ ಯಾತ್ರೆಗೆ ಅನುಮತಿ ಈವರೆಗೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...

ಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಹನಿಟ್ರ್ಯಾಪ್‌ಗೆ ಬಿದ್ದು, ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆಯ (IAF) ಸೇವಾನಿರತ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ...

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...