Homeಮುಖಪುಟ'ಭಾರತ ಜೋಡೋ ನ್ಯಾಯ ಯಾತ್ರೆ'ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

‘ಭಾರತ ಜೋಡೋ ನ್ಯಾಯ ಯಾತ್ರೆ’ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

- Advertisement -
- Advertisement -

ಮಣಿಪುರದ ಗಡಿ ಪಟ್ಟಣ ಮೊರೆಹ್‌ನಲ್ಲಿನ ಹಿಂಸಾಚಾರ ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಮೇಲೆ ಕರಿನೆರಳು ಬೀರಿದೆ. ಜ.14ರಂದು ಕಾಂಗ್ರೆಸ್‌ ಪಕ್ಷವು ಹಿಂಸಾಚಾರ ಪೀಡಿತ ಮಣಿಪುರದಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಗುರಿಯನ್ನು ಹೊಂದಿತ್ತು. ಆದರೆ ಇದಕ್ಕೆ ಮಣಿಪುರ ರಾಜ್ಯ ಸರಕಾರ ಇನ್ನೂ ಅನುಮತಿ ನೀಡಿಲ್ಲ.

ಇಂಡೋ-ಮ್ಯಾನ್ಮಾರ್ ಗಡಿಯ ಮೊರೆಹ್‌ನಲ್ಲಿ ಮಣಿಪುರ ಪೊಲೀಸರು ಮತ್ತು ಸಶಸ್ತ್ರದಾರಿಗಳ ನಡುವೆ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯಿಂದ ಪರಿಸ್ಥಿತಿ ತಿಳಿಯಾಗಿಲ್ಲ. ಸೋಮವಾರ ಬೆಳಗ್ಗೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮೊರೆಹ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಭಾನುವಾರ ವಾರ್ಡ್ 7 ಮತ್ತು ಮೊರೆಹ್‌ ಬಜಾರ್‌ನಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಗಳು ನಡೆದಿದೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಮಾತನಾಡುತ್ತಾ, ಭದ್ರತಾ ಪಡೆಗಳ ಮೇಲಿನ ದಾಳಿಗೆ ಕಾರಣವಾದ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಬಂಧಿಸಲು ಅಸ್ಸಾಂ ರೈಫಲ್ಸ್, ಬಿಎಸ್ಎಫ್ ಮತ್ತು ರಾಜ್ಯ ಪೊಲೀಸರ ಜಂಟಿ ಪ್ರಯತ್ನದ ಭಾಗವಾಗಿ ಕಾರ್ಯಾಚರಣೆ ನಡೆಯುತ್ತಿದೆ. ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಕುರಿತು ಮಾತನಾಡಿದ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್, ರಾಹುಲ್ ಗಾಂಧಿಯವರ ರ್ಯಾಲಿಗೆ ಅನುಮತಿ ನೀಡುವ ಬಗ್ಗೆ ಪರಿಗಣನೆಯಲ್ಲಿದೆ. ನಾವು ವಿವಿಧ ಭದ್ರತಾ ಏಜೆನ್ಸಿಗಳಿಂದ ವರದಿಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಅವರಿಂದ ವರದಿಗಳನ್ನು ಸ್ವೀಕರಿಸಿದ ನಂತರ ನಾವು ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಜನವರಿ 14ರಂದು ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬುಂಗ್‌ನಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾತನಾಡಿ, ಯಾತ್ರೆಗೆ ಮಣಿಪುರ ಸರ್ಕಾರದಿಂದ ಅನುಮತಿಗಾಗಿ ಪಕ್ಷವು ಕಾಯುತ್ತಿದೆ ಎಂದು ಹೇಳಿದ್ದಾರೆ.

ಭಾರತ ಜೋಡೋ ನ್ಯಾಯ ಯಾತ್ರೆ ಮಣಿಪುರದಿಂದ ಆರಂಭವಾಗುವ ನಿರೀಕ್ಷೆಯಿದ್ದು, ಈ ಯಾತ್ರೆಯು 14 ರಾಜ್ಯಗಳ ಒಟ್ಟು 85 ಜಿಲ್ಲೆಗಳಲ್ಲಿ 6,700 ಕಿ.ಮೀ. ಕ್ರಮಿಸಲಿದೆ. ಮಹಾರಾಷ್ಟ್ರ ತಲುಪುವ ಮುನ್ನ ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ, ಛತ್ತೀಸಗಢ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಸಾಗಲಿದೆ. ಯಾತ್ರೆಯ ಬಹುಭಾಗ ಬಸ್‌ನಲ್ಲಿ ಸಾಗಲಿದ್ದು, ಆಯ್ದ ಸ್ಥಳಗಳಲ್ಲಿ ಪಾದಯಾತ್ರೆ ನಡೆಯಲಿದೆ.

ಕಾಂಗ್ರೆಸ್ ಆರಂಭದಲ್ಲಿ ಅರುಣಾಚಲದ ಪಾಸಿಘಾಟ್‌ನಿಂದ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ವರೆಗೆ ಯಾತ್ರೆ ನಡೆಸಲು ಚಿಂತಿಸಿತ್ತು. ಆದರೆ ಮೇ 3ರಿಂದ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವು ಕಾಂಗ್ರೆಸ್ ಯಾತ್ರೆಯ ದಿಕ್ಕನ್ನು ಬದಲಾಯಿಸುವಂತೆ ಮಾಡಿತ್ತು. ಆದರೆ ಇದೀಗ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆ ಮಣಿಪುರ ಸರಕಾರದಿಂದ ಯಾತ್ರೆಗೆ ಅನುಮತಿ ಈವರೆಗೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ಗುಂಡಿಕ್ಕುವ ಬೆದರಿಕೆ: ಬಿಜೆಪಿ ನಾಯಕನ ವಿರುದ್ಧ FIR

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...