Homeಮುಖಪುಟನಿರ್ಲಕ್ಷ್ಯದ ಸಾವು: ವೈದ್ಯರ ಶಿಕ್ಷೆ ಪ್ರಮಾಣ ಕಡಿತಗೊಳಿಸಲಿದೆ ಹೊಸ ಕ್ರಿಮಿನಲ್ ಕಾನೂನು

ನಿರ್ಲಕ್ಷ್ಯದ ಸಾವು: ವೈದ್ಯರ ಶಿಕ್ಷೆ ಪ್ರಮಾಣ ಕಡಿತಗೊಳಿಸಲಿದೆ ಹೊಸ ಕ್ರಿಮಿನಲ್ ಕಾನೂನು

- Advertisement -
- Advertisement -

ಚಿಕಿತ್ಸೆ ವೇಳೆ ನಿರ್ಲಕ್ಷ್ಯದಿಂದ ರೋಗಿಯ ಸಾವು ಸಂಭವಿಸಿದರೆ ವೈದ್ಯರಿಗೆ ನೀಡುವ ಶಿಕ್ಷೆ ಪ್ರಮಾಣವನ್ನು ಕಡಿತಗೊಳಿಸುವ ಅಂಶ ಬುಧವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡ ಭಾರತೀಯ ನ್ಯಾಯ(ಎರಡನೆಯ) ಸಂಹಿತೆ ಒಳಗೊಂಡಿದೆ.

ಭಾರತೀಯ ನ್ಯಾಯ ಸಂಹಿತೆಯ ಪ್ರಕಾರ, ನಿರ್ಲಕ್ಷ್ಯದಿಂದ ರೋಗಿಯು ಸಾವನ್ನಪ್ಪಿದ್ದರೆ ತಪ್ಪಿತಸ್ಥರಿಗೆ ವಿಧಿಸುವ ಶಿಕ್ಷೆ ಪ್ರಮಾಣವನ್ನು 5 ವರ್ಷಗಳ ಜೈಲುವಾಸಕ್ಕೆ ಹೆಚ್ಚಿಸಿದರೆ, ಅಂತಹ ಮರಣವು ವೈದ್ಯರಿಂದ ಸಂಭವಿಸಿದರೆ ವಿಧಿಸುವ ಶಿಕ್ಷೆ ಪ್ರಮಾಣವನ್ನು 2 ವರ್ಷಗಳ ಜೈಲು ಶಿಕ್ಷೆಗೆ ಸೀಮಿತಗೊಳಿಸಲಾಗಿದೆ.

ಪ್ರಸ್ತುತ ಇರುವ ಭಾರತೀಯ ದಂಡ ಸಂಹಿತೆ (ಐಪಿಸಿ) ಕಾನೂನಿನ ಸೆಕ್ಷನ್ 304ಎ ಪ್ರಕಾರ, ನಿರ್ಲಕ್ಷ್ಯದಿಂದ ರೋಗಿ ಸಾವನ್ನಪ್ಪಿದರೆ ತಪ್ಪಿತಸ್ಥರಿಗೆ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು. ಸೆಕ್ಷನ್ 304ಎ ಐಪಿಸಿಯಲ್ಲಿ ವೈದ್ಯರಿಗೆ ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ವಿಧಿಸುವ ಶಿಕ್ಷೆ ಪ್ರಮಾಣದಲ್ಲಿ ಪ್ರತ್ಯೇಕ ವರ್ಗೀಕರಣವಿಲ್ಲ. ಆದರೆ, ಹೊಸ ನ್ಯಾಯ ಸಂಹಿತೆ ವೈದ್ಯರು ಮತ್ತು ಇತರರಿಂದ ಸಂಭವಿಸುವ ಸಾವುಗಳು ಎಂಬ ಎರಡು ವರ್ಗೀಕರಣ ಮಾಡಿದೆ.

ಭಾರತೀಯ ನ್ಯಾಯ ಸಂಹಿತೆಯ ಕಲಂ 106ರ ಪ್ರಕಾರ, ನಿರ್ಲಕ್ಷ್ಯದಿಂದ ರೋಗಿ ಸಾವನ್ನಪ್ಪಿದರೆ ನೀಡಲಾಗುವ ಗರಿಷ್ಠ ಶಿಕ್ಷೆಯನ್ನು 2 ವರ್ಷಗಳ ಜೈಲು ಶಿಕ್ಷೆಯಿಂದ 5 ವರ್ಷಗಳ ಜೈಲು ಶಿಕ್ಷೆಗೆ ಹೆಚ್ಚಿಸಲಾಗಿದೆ. ಆದರೆ, ವೈದ್ಯರಿಗೆ ಗರಿಷ್ಠ ಶಿಕ್ಷೆ 2 ವರ್ಷಗಳ ಜೈಲುವಾಸಕ್ಕೆ ಮಿತಿಗೊಳಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದ ಸಾವಿನ ಪ್ರಕರಣಗಳಲ್ಲಿ ವೈದ್ಯರಿಗೆ ದಂಡವನ್ನೂ ವಿಧಿಸಬಹುದು.

ಚಳಿಗಾಲದ ಅಧಿವೇಶನದದಲ್ಲಿ ಪರಿಚಯಿಸಲಾದ ಭಾರತೀಯ ನ್ಯಾಯ (ಎರಡನೆಯ) ಸಂಹಿತೆಯ ಆರಂಭಿಕ ಆವೃತ್ತಿಯಲ್ಲಿ ವೈದ್ಯರಿಗೆ ಸಂಬಂಧಿಸಿದಂತೆ ನೀಡುವ ಶಿಕ್ಷೆಯಲ್ಲಿ ಯಾವುದೇ ವರ್ಗೀಕರಣವಿರಲಿಲ್ಲ. ಬಳಿಕ ಭಾರತೀಯ ವೈದ್ಯಕೀಯ ಸಂಘದ ಮನವಿಯನ್ನು ಪರಿಗಣಿಸಿ ತಿದ್ದುಪಡಿ ತರಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹೊಸ ಭಾರತೀಯ ನ್ಯಾಯ ಸಂಹಿತೆಯ ಕಲಂ 106ರಲ್ಲಿ ‘ಹಿಟ್ ಅಂಡ್ ರನ್’ ಪ್ರಕರಣಗಳಿಗೂ ಕಠಿಣ ಶಿಕ್ಷೆಯನ್ನು ಸೂಚಿಸಲಾಗಿದೆ. ವಾಹನ ಚಾಲಕ ಅತಿವೇಗದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ವ್ಯಕ್ತಿಯ ಸಾವಿಗೆ ಕಾರಣವಾದರೆ ಮತ್ತು ಅದನ್ನು ಪೊಲೀಸ್ ಅಥವಾ ಮ್ಯಾಜಿಸ್ಟ್ರೇಟ್‌ಗೆ ವರದಿ ಮಾಡದೆ ಪರಾರಿಯಾದರೆ, ಅಂತವರು ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗಲಿದ್ದಾರೆ.

ಮೂರು ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ (ಎರಡನೆಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೆಯ) ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ (ಎರಡನೆಯ) ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಈ ಮೂರು ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ- 1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್- 1898, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-1872 ಅನ್ನು ಬದಲಾಯಿಸುತ್ತದೆ. ಭಾರತೀಯ ನ್ಯಾಯ ಸಂಹಿತೆ ಜಾರಿಯಾದರೆ, ಭಾರತೀಯ ದಂಡ ಸಂಹಿತೆ(IPC) ರದ್ದಾಗಲಿದೆ.

ಇದನ್ನೂ ಓದಿ: ಹೊಸ ಕ್ರಿಮಿನಲ್ ಕಾನೂನುಗಳಡಿ ಗುಂಪು ಹತ್ಯೆಯ ಅಪರಾಧಕ್ಕೆ ಮರಣದಂಡನೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...