Homeಕರ್ನಾಟಕಭಟ್ಕಳದ ಎಮ್ಮೆಲ್ಲೆ ಇಪ್ಪತ್ತೈದೇ ದಿನಕ್ಕೆ ಖಡಕ್ ಎಎಸ್‍ಪಿಯನ್ನು ಎತ್ತಂಗಡಿ ಮಾಡಿಸಿದೇಕೆ? ಶುದ್ದೋಧನ

ಭಟ್ಕಳದ ಎಮ್ಮೆಲ್ಲೆ ಇಪ್ಪತ್ತೈದೇ ದಿನಕ್ಕೆ ಖಡಕ್ ಎಎಸ್‍ಪಿಯನ್ನು ಎತ್ತಂಗಡಿ ಮಾಡಿಸಿದೇಕೆ? ಶುದ್ದೋಧನ

- Advertisement -
- Advertisement -

ಭಟ್ಕಳದ ಎಎಸ್‍ಪಿಯಾಗಿ ಚಾರ್ಜ್‍ತೆಗೆದು ಕೊಂಡ ಕೇವಲ ಇಪ್ಪತ್ತೈದು ದಿನಗಳಲ್ಲೇ ಐಪಿಎಸ್‍ ಅಧಿಕಾರಿ ನಿಖಿಲ್ ಬುಳ್ಳಾ ಅವರ ಎತ್ತಂಗಡಿ ಆಗಿರೋದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ. ಸಮಾಜ ಕಂಟಕರಿಗೆ, ದೋನಂಬರಿನ ದಂಧೆದಾರರ ನಿದ್ದೆಗೆಡಿಸಿದ್ದ ನಿಖಿಲ್‍ರನ್ನು ಸ್ಥಳೀಯ ಬಿಜೆಪಿ ಶಾಸಕನೂ ಸ್ವಯಂಘೋಷಿತ ದೇಶಭಕ್ತ ಹೆಂಡೋದ್ಯಮಿಯೂ ಆಗಿರುವ ಸುನಿಲ್ ನಾಯ್ಕನೇ ಹಠಕ್ಕೆ ಬಿದ್ದು ಜಡಿಸಿದ್ದಾನೆಂಬುದೀಗ ಜಗಜ್ಜಾಹೀರಾಗಿ ಹೋಗಿದೆ! ಖುದ್ದು ಸಿಎಂ ಸಾಹೇಬರ ಅಪ್ಪಣೆಯಂತೆಯೇ ಈ ಎತ್ತಂಗಡಿ ನಡೆದಿರೋದು ಈಗ ರಹಸ್ಯವಾಗುಳಿದಿಲ್ಲ.

 

 

ಅಷ್ಟಕ್ಕೂ ನಿಖಿಲ್, ಶಾಸಕನ ಪಿತ್ತ ನೆತ್ತಿಗೇರಿಸುವಂಥ “ಉದ್ಧಟತನ” ಮಾಡಿದ್ದಾದರೂ ಏನು? ಭಟ್ಕಳದಲ್ಲಿ ಹಾವಳಿ ಎಬ್ಬಿಸಿರುವ ಅಕ್ರಮ ಹೆಂಡ ಮತ್ತು ಜೂಜು ಮಾಫಿಯಾದ ಹೆಡೆಮುರಿಕಟ್ಟುವ ನಿರ್ಧಾರಕ್ಕೆ ಬಂದಿದ್ದ ನಿಖಿಲ್‍ ಅಕ್ರಮ ಮದ್ಯ ಮಾರಾಟದ ಕಿಂಗ್‍ಪಿನ್‍ಗಳ ಮೇಲೆ ಒಂದರಹಿಂದೊಂದರಂತೆ ನಾಲ್ಕು ಪ್ರಕರಣ ದಾಖಲಿಸಿದ್ದರು.ತನ್ನ ಕೃಪಾಶಿರ್ವಾದವಿದ್ದ ನಾಲ್ವರು ಕಳ್ಳ ಹೆಂಡದಂಧೆದಾರರನ್ನು ಜೈಲಿಗಟ್ಟಿದ್ದೇ ಶಾಸಕನ ಪಿತ್ತ ನೆತ್ತಿಗೇರಿಸಿತ್ತು. ಕಮ್ಯುನಲಿ ಸೆನ್ಸಿಟಿವ್ ಎಂಬ ಹಣೆಪಟ್ಟಿಯ ಭಟ್ಕಳದಲ್ಲಿ ಬಲು ನಾಜೂಕಿನಿಂದಲೇ ಕಾರ್ಯಾಚರಣೆಗಿಳಿದಿದ್ದ ನಿಖಿಲ್ “ಪ್ರಭಾವಿಗಳ” ಮೇಲೆ 21 ಜೂಜು ಪ್ರಕರಣಜಡಿದಿದ್ದಲ್ಲದೆ ಸಿಗರೇಟ್ ಮತ್ತು ತಂಬಾಕುಉತ್ಪನ್ನಕಾಯ್ದೆಯಡಿ 93 ಕೇಸು ಹಾಕಿದ್ದರು.

ಈ ಕಾರಣಕ್ಕೇ ನಿಖಿಲ್‍ ಜನರ ನಡುವೆ ಭರ್ಜರಿ ಪ್ರಶಂಸೆಗೆ ಪಾತ್ರರಾಗಿದ್ದರು. ಶಾಸಕರ ಪರಮಾಪ್ತರು, ನೆಂಟರು-ಇಷ್ಟರೇ ಗ್ರಾಮೀಣ ಭಾಗದಲ್ಲಿ ಕಳ್ಳ ಹೆಂಡ ಯಥೇಚ್ಛವಾಗಿ ಸರಬರಾಜು ಮಾಡುತ್ತಿದ್ದುದನ್ನು ನಿಖಿಲ್‍ ಕಂಡುಹಿಡಿದಿದ್ದರು. ಇವರ್ಯಾರಿಗೂ ಆತ ಸೊಪ್ಪು ಹಾಕಲಿಲ್ಲ. ಅಕ್ರಮ ಹೆಂಡ ಹಂಚಿಕೆ ಬಗ್ಗೆ ಸಾರ್ವಜನಿಕರಿಂದ ದೂರೇನಾದರೂ ಬಂದರೆ ಆ ವ್ಯಾಪ್ತಿಯ ಅಧಿಕಾರಿಗಳೇ ಹೊಣೆಯೆಂಬ ಎಚ್ಚರಿಕೆ ತನ್ನ ಅಧೀನ ಸಿಬ್ಬಂದಿಗೆ ಕೊಟ್ಟಿದ್ದರು.ಹೀಗಾಗಿ ಶಾಸಕ ಸುನಿಲ್ ನಾಯ್ಕ ಸೂತ್ರಧಾರತ್ವದ ಮದ್ಯ ಮಾಫಿಯಾ ವಿಲ ವಿಲ ಒದ್ದಾಡುವಂತಾಗಿತ್ತು.

ಶಿರಾಲಿಯ ಬಾಳೆಲೆಚಂದ್ರು ಯಾನೆಚಂದ್ರು ನಾಯ್ಕ ಶಾಸಕ ಸುನಿಲ್ ನಾಯ್ಕನ ಕಷ್ಟ-ಸುಖದ ನಿಷ್ಠ ಸನ್ಮಿತ್ರ! ಹೊಟೇಲ್‍ ಉದ್ಯಮಿಯಾಗಿದ್ದಚಂದ್ರು, ದೋಸ್ತ್‍ ಎಮ್ಮೆಲ್ಲೆ ಆಗಿದ್ದೇತಡ ಸರ್ಕಾರಿಕಾಮಗಾರಿ ನಡೆಸುವ ಲಕ್ಷಾಧೀಶ ಗುತ್ತಿಗೆದಾರನಾಗಿ ಅವತರಿಸಿದ್ದಾನೆ. ಇಂಥಚಂದ್ರುನ ಭಾಮೈದ ಶಿರಾಲಿಯಲ್ಲಿ ನಡೆಸುತ್ತಿದ್ದ ಮೀನು ಊಟದ ಹೊಟೇಲಿನಲ್ಲಿ ಪರವಾನಗಿಇಲ್ಲದ ಹೆಂಡದ ವ್ಯವಹಾರ ಲಕ್ಷದ ಲೆಕ್ಕದಲ್ಲೇ ದಿನವೂ ನಡೆಯುತ್ತಿತ್ತು. ಈ ಹೊಟೇಲಿನ ಮೇಲೆ ರೇಡು ಹಾಕಿದ ಎಎಸ್‍ಪಿ ಪಡೆ ಚಂದ್ರುನ ಭಾಮೈದನ ಎತ್ಹಾಕಿಕೊಂಡು ಬಂದಿತ್ತು! ಆಗ ಶಾಸಕ ಸಾಹೇಬ ಫೋನಾಯಿಸಿದರೂ ಕೇರ್ ಮಾಡಿರಲಿಲ್ಲ.

ಕಂಡಕಂಡಲ್ಲಿ ಎಎಸ್‍ಪಿಗೆ ಬುದ್ಧಿ ಕಲಿಸುವ ಆವಾಜ್ ಹಾಕತೊಡಗಿದ್ದ ಎಮ್ಮೆಲ್ಲೆ ಸುನೀಲ್ ನಾಯ್ಕ ತನ್ನ ಖಾಸಾ ಭಾಮೈದನ ಕಳ್ಳಹೆಂಡದ ವ್ಯವಹಾರಕ್ಕೆ ತೊಂದರೆ ಪೊಲೀಸರಿಂದಾದಾಗ ನಿಗಿ ನಿಗಿ ಬೆಂಕಿಯಾಗಿ ಹೋದ!! ಭಟ್ಕಳದ ಹಳ್ಳಿಗಳ ಗೂಡಂಗಡಿಯಲ್ಲಿ ಹೆಂಡದ ವ್ಯಾಪಾರಜೋರಾಗಿದೆ. ಈ ಗೂಡಂಗಡಿಗಳಿಗೆ ಹೆಂಡ ಪೂರೈಕೆಯಾಗುವುದು ಶಾಸಕನ ಭಾಮೈದನ “ಕಂಪನಿ”ಯಿಂದ. ಹಾಡುವಳ್ಳಿ ಎಂಬಲ್ಲಿ ಗೂಡಂಗಡಿಯಲ್ಲಿ ಅಕ್ರಮವಾಗಿ ಸಾರಾಯಿ ಮಾಡುತ್ತಿದ್ದವನನ್ನು ಎಎಸ್‍ಪಿ ಬಂಧಿಸಿದ್ದರು. ಹೆಂಡ ಮಾರಾಟಗಾರ ಕಾಂಗ್ರೆಸ್‍ನ ಹಿಂದಿನ ಶಾಸಕ ಮಂಕಾಳು ವೈದ್ಯನ ಶಿಷ್ಯನಾದರೆ ಹೆಂಡ ಪೂರೈಸಿದವರು ಬಿಜೆಪಿ ಶಾಸಕನ ನೆಂಟನಗ್ಯಾಂಗಿನವರು. ಎರಡೂ ಕಡೆಯಿಂದ ಎಎಸ್‍ಪಿಗೆ ಫೋನ್ ಹೋಗಿದೆ. “ಇಲ್ಲ…. ಇಲ್ಲಾ…. ಕಾನೂನು ಬಿಟ್ಟು ನಾನು ನಡೆಯುವುದಿಲ್ಲ…..” ಎಂದಿದ್ದಾರೆ ಎಎಸ್‍ಪಿ ನಿಖಿಲ್.

ಈ ಎಎಸ್‍ಪಿಯನ್ನು ಹೀಗೆ ಬಿಟ್ಟರೆ ತಮ್ಮ ಕಳ್ಳ ವ್ಯವಹಾರಕ್ಕೆ ಸಂಚಕಾರ ಬರುತ್ತದೆಂದು ಕಂಗಾಲಾದ ಎಮ್ಮೆಲ್ಲೆ ಪಟಾಲಮ್‍ ಆತನ ಎತ್ತಂಗಡಿಗೆ ಪ್ರಯತ್ನ ಪ್ರಾರಂಭಿಸಿಯೇ ಬಿಟ್ಟರು. “…. ನೀನು ನಿನ್ನಡ್ಯೂಟಿ ಮಾಡಿದೆಯಲ್ಲಾ…. ಈಗ ನಾನು ನನ್ನಡ್ಯೂಟಿ ಮಾಡ್ತೇನೆ ನೋಡು….. ನೀನು ಒಂದು ಮಾತೂ ಕೇಳೋನಲ್ಲ….” ಎಂದು ಎಗರಾಡಿದ್ದ ಸುನಿಲ್ ರಾತ್ರೋರಾತ್ರಿ ಬೆಂಗಳೂರಿಗೆ ಹೋಗಿ, ಸಿಎಂ ಯಡ್ಡಿಗೆ ಗಂಟು ಬಿದ್ದು ಎಎಸ್‍ಪಿ ವರ್ಗ ಮಾಡುವಂತೆ ಅಲವತ್ತುಕೊಂಡಿದ್ದಾನೆ. ಒಂದು ವಾರ ಬೆಂಗಳೂರಲ್ಲೇ ಠಿಕಾಣಿ ಹೂಡಿ ಅಂತಿಮವಾಗಿ ಸಾಕ್ಷಾತ್ ಸಿಎಂ ಸಾಹೇಬರಿಂದಲೇ ಎಎಸ್‍ಪಿ ವರ್ಗಾವಣೆ ಆದೇಶ ಮಾಡಿಸಿದ್ದಾನೆ. ಆ ಜಾಗಕ್ಕೆ ತನ್ನಜಾತಿ ಬಂಧುವಾದ ನಾನ್‍ ಐಪಿಎಸ್‍ ಅಧಿಕಾರಿಯನ್ನು ಹಾಕಿಸಿಕೊಂಡಿದ್ದಾನೆ.
ಶಿರಾಲಿಯಲ್ಲಿ ತನ್ನ ಹೆಂಡದ ಅಂಗಡಿ ಸುತ್ತಲೆಲ್ಲೂ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ತಲೆಯೆತ್ತದಂತೆ ಮಾಡಿರುವ ಸುನಿಲ್ ನಾಯ್ಕ ಅಕ್ರಮ ಸಾರಾಯಿದಂಧೆ ನಿರಾತಂಕ ಮಾಡಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತನ್ನ ಪಕ್ಷದ ಶಾಸಕ ಕಾಯಕಕ್ಕೆ ಅಡ್ಡಿಪಡಿಸಿದ ಅಧಿಕಾರಿಯನ್ನು ಎತ್ತಂಗಡಿ ಮಾಡಿರುವ ಯಡಿಯೂರಪ್ಪನವರ ಸಾಧನೆ ಪ್ರಶಂಸನೀಯ ಮತ್ತು ಅನುಕರಣೆಗೆ ಯೋಗ್ಯವಾದದ್ದು!? ಭೇಷ್ ಯಡಿಯೂರಪ್ಪನವರ ಮರಿ ಸರ್ವಾಧಿಕಾರಕ್ಕೆ ಭೋಪರಾಕ್. ಒಂದು ಕಡೆ ಮಾಧ್ಯಮಕ್ಕೆ ನಿರ್ಬಂಧ. ಮತ್ತೊಂದು ಕಡೆ ಕಾನೂನಿನ ಬಗ್ಗೆ ನಿಷ್ಠೆ ಉಳ್ಳ ಅಧಿಕಾರಿಯ ಎತ್ತಂಗಡಿ. ಇದಕ್ಕಿಂತಲೂ ಒಳ್ಳೆಯ “ರಾಮ ರಾಜ್ಯ” ಯಾರಿಂದಲೂ ಸಾಧ್ಯವಿಲ್ಲ.

  2. ಇಂತಹ ಸುಳ್ಳು ಸುದ್ದಿ ಬಿತ್ತರಿಸುವ ನಿಮ್ಮಂತ ನಾಯಿಗಳನ್ನು ನಡು ಬೀದಿಯಲ್ಲಿ ದುಓಡಗೆ ನಿಲ್ಲಿಸಬೇಕು. ಗೌರಿಯಂತ ಶನಿಯಿಂದ ಮುಕ್ತಿ ಸಿಕ್ಕಿದ್ದರು ಅವಳ ಹೆಸರಿನ ಶನಿ ಕರ್ನಾಟಕವನ್ನು ಕಾಡುತ್ತಲೇ ಇದೆ.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...