Homeಕರ್ನಾಟಕಭಟ್ಕಳದ ಎಮ್ಮೆಲ್ಲೆ ಇಪ್ಪತ್ತೈದೇ ದಿನಕ್ಕೆ ಖಡಕ್ ಎಎಸ್‍ಪಿಯನ್ನು ಎತ್ತಂಗಡಿ ಮಾಡಿಸಿದೇಕೆ? ಶುದ್ದೋಧನ

ಭಟ್ಕಳದ ಎಮ್ಮೆಲ್ಲೆ ಇಪ್ಪತ್ತೈದೇ ದಿನಕ್ಕೆ ಖಡಕ್ ಎಎಸ್‍ಪಿಯನ್ನು ಎತ್ತಂಗಡಿ ಮಾಡಿಸಿದೇಕೆ? ಶುದ್ದೋಧನ

- Advertisement -
- Advertisement -

ಭಟ್ಕಳದ ಎಎಸ್‍ಪಿಯಾಗಿ ಚಾರ್ಜ್‍ತೆಗೆದು ಕೊಂಡ ಕೇವಲ ಇಪ್ಪತ್ತೈದು ದಿನಗಳಲ್ಲೇ ಐಪಿಎಸ್‍ ಅಧಿಕಾರಿ ನಿಖಿಲ್ ಬುಳ್ಳಾ ಅವರ ಎತ್ತಂಗಡಿ ಆಗಿರೋದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ. ಸಮಾಜ ಕಂಟಕರಿಗೆ, ದೋನಂಬರಿನ ದಂಧೆದಾರರ ನಿದ್ದೆಗೆಡಿಸಿದ್ದ ನಿಖಿಲ್‍ರನ್ನು ಸ್ಥಳೀಯ ಬಿಜೆಪಿ ಶಾಸಕನೂ ಸ್ವಯಂಘೋಷಿತ ದೇಶಭಕ್ತ ಹೆಂಡೋದ್ಯಮಿಯೂ ಆಗಿರುವ ಸುನಿಲ್ ನಾಯ್ಕನೇ ಹಠಕ್ಕೆ ಬಿದ್ದು ಜಡಿಸಿದ್ದಾನೆಂಬುದೀಗ ಜಗಜ್ಜಾಹೀರಾಗಿ ಹೋಗಿದೆ! ಖುದ್ದು ಸಿಎಂ ಸಾಹೇಬರ ಅಪ್ಪಣೆಯಂತೆಯೇ ಈ ಎತ್ತಂಗಡಿ ನಡೆದಿರೋದು ಈಗ ರಹಸ್ಯವಾಗುಳಿದಿಲ್ಲ.

 

 

ಅಷ್ಟಕ್ಕೂ ನಿಖಿಲ್, ಶಾಸಕನ ಪಿತ್ತ ನೆತ್ತಿಗೇರಿಸುವಂಥ “ಉದ್ಧಟತನ” ಮಾಡಿದ್ದಾದರೂ ಏನು? ಭಟ್ಕಳದಲ್ಲಿ ಹಾವಳಿ ಎಬ್ಬಿಸಿರುವ ಅಕ್ರಮ ಹೆಂಡ ಮತ್ತು ಜೂಜು ಮಾಫಿಯಾದ ಹೆಡೆಮುರಿಕಟ್ಟುವ ನಿರ್ಧಾರಕ್ಕೆ ಬಂದಿದ್ದ ನಿಖಿಲ್‍ ಅಕ್ರಮ ಮದ್ಯ ಮಾರಾಟದ ಕಿಂಗ್‍ಪಿನ್‍ಗಳ ಮೇಲೆ ಒಂದರಹಿಂದೊಂದರಂತೆ ನಾಲ್ಕು ಪ್ರಕರಣ ದಾಖಲಿಸಿದ್ದರು.ತನ್ನ ಕೃಪಾಶಿರ್ವಾದವಿದ್ದ ನಾಲ್ವರು ಕಳ್ಳ ಹೆಂಡದಂಧೆದಾರರನ್ನು ಜೈಲಿಗಟ್ಟಿದ್ದೇ ಶಾಸಕನ ಪಿತ್ತ ನೆತ್ತಿಗೇರಿಸಿತ್ತು. ಕಮ್ಯುನಲಿ ಸೆನ್ಸಿಟಿವ್ ಎಂಬ ಹಣೆಪಟ್ಟಿಯ ಭಟ್ಕಳದಲ್ಲಿ ಬಲು ನಾಜೂಕಿನಿಂದಲೇ ಕಾರ್ಯಾಚರಣೆಗಿಳಿದಿದ್ದ ನಿಖಿಲ್ “ಪ್ರಭಾವಿಗಳ” ಮೇಲೆ 21 ಜೂಜು ಪ್ರಕರಣಜಡಿದಿದ್ದಲ್ಲದೆ ಸಿಗರೇಟ್ ಮತ್ತು ತಂಬಾಕುಉತ್ಪನ್ನಕಾಯ್ದೆಯಡಿ 93 ಕೇಸು ಹಾಕಿದ್ದರು.

ಈ ಕಾರಣಕ್ಕೇ ನಿಖಿಲ್‍ ಜನರ ನಡುವೆ ಭರ್ಜರಿ ಪ್ರಶಂಸೆಗೆ ಪಾತ್ರರಾಗಿದ್ದರು. ಶಾಸಕರ ಪರಮಾಪ್ತರು, ನೆಂಟರು-ಇಷ್ಟರೇ ಗ್ರಾಮೀಣ ಭಾಗದಲ್ಲಿ ಕಳ್ಳ ಹೆಂಡ ಯಥೇಚ್ಛವಾಗಿ ಸರಬರಾಜು ಮಾಡುತ್ತಿದ್ದುದನ್ನು ನಿಖಿಲ್‍ ಕಂಡುಹಿಡಿದಿದ್ದರು. ಇವರ್ಯಾರಿಗೂ ಆತ ಸೊಪ್ಪು ಹಾಕಲಿಲ್ಲ. ಅಕ್ರಮ ಹೆಂಡ ಹಂಚಿಕೆ ಬಗ್ಗೆ ಸಾರ್ವಜನಿಕರಿಂದ ದೂರೇನಾದರೂ ಬಂದರೆ ಆ ವ್ಯಾಪ್ತಿಯ ಅಧಿಕಾರಿಗಳೇ ಹೊಣೆಯೆಂಬ ಎಚ್ಚರಿಕೆ ತನ್ನ ಅಧೀನ ಸಿಬ್ಬಂದಿಗೆ ಕೊಟ್ಟಿದ್ದರು.ಹೀಗಾಗಿ ಶಾಸಕ ಸುನಿಲ್ ನಾಯ್ಕ ಸೂತ್ರಧಾರತ್ವದ ಮದ್ಯ ಮಾಫಿಯಾ ವಿಲ ವಿಲ ಒದ್ದಾಡುವಂತಾಗಿತ್ತು.

ಶಿರಾಲಿಯ ಬಾಳೆಲೆಚಂದ್ರು ಯಾನೆಚಂದ್ರು ನಾಯ್ಕ ಶಾಸಕ ಸುನಿಲ್ ನಾಯ್ಕನ ಕಷ್ಟ-ಸುಖದ ನಿಷ್ಠ ಸನ್ಮಿತ್ರ! ಹೊಟೇಲ್‍ ಉದ್ಯಮಿಯಾಗಿದ್ದಚಂದ್ರು, ದೋಸ್ತ್‍ ಎಮ್ಮೆಲ್ಲೆ ಆಗಿದ್ದೇತಡ ಸರ್ಕಾರಿಕಾಮಗಾರಿ ನಡೆಸುವ ಲಕ್ಷಾಧೀಶ ಗುತ್ತಿಗೆದಾರನಾಗಿ ಅವತರಿಸಿದ್ದಾನೆ. ಇಂಥಚಂದ್ರುನ ಭಾಮೈದ ಶಿರಾಲಿಯಲ್ಲಿ ನಡೆಸುತ್ತಿದ್ದ ಮೀನು ಊಟದ ಹೊಟೇಲಿನಲ್ಲಿ ಪರವಾನಗಿಇಲ್ಲದ ಹೆಂಡದ ವ್ಯವಹಾರ ಲಕ್ಷದ ಲೆಕ್ಕದಲ್ಲೇ ದಿನವೂ ನಡೆಯುತ್ತಿತ್ತು. ಈ ಹೊಟೇಲಿನ ಮೇಲೆ ರೇಡು ಹಾಕಿದ ಎಎಸ್‍ಪಿ ಪಡೆ ಚಂದ್ರುನ ಭಾಮೈದನ ಎತ್ಹಾಕಿಕೊಂಡು ಬಂದಿತ್ತು! ಆಗ ಶಾಸಕ ಸಾಹೇಬ ಫೋನಾಯಿಸಿದರೂ ಕೇರ್ ಮಾಡಿರಲಿಲ್ಲ.

ಕಂಡಕಂಡಲ್ಲಿ ಎಎಸ್‍ಪಿಗೆ ಬುದ್ಧಿ ಕಲಿಸುವ ಆವಾಜ್ ಹಾಕತೊಡಗಿದ್ದ ಎಮ್ಮೆಲ್ಲೆ ಸುನೀಲ್ ನಾಯ್ಕ ತನ್ನ ಖಾಸಾ ಭಾಮೈದನ ಕಳ್ಳಹೆಂಡದ ವ್ಯವಹಾರಕ್ಕೆ ತೊಂದರೆ ಪೊಲೀಸರಿಂದಾದಾಗ ನಿಗಿ ನಿಗಿ ಬೆಂಕಿಯಾಗಿ ಹೋದ!! ಭಟ್ಕಳದ ಹಳ್ಳಿಗಳ ಗೂಡಂಗಡಿಯಲ್ಲಿ ಹೆಂಡದ ವ್ಯಾಪಾರಜೋರಾಗಿದೆ. ಈ ಗೂಡಂಗಡಿಗಳಿಗೆ ಹೆಂಡ ಪೂರೈಕೆಯಾಗುವುದು ಶಾಸಕನ ಭಾಮೈದನ “ಕಂಪನಿ”ಯಿಂದ. ಹಾಡುವಳ್ಳಿ ಎಂಬಲ್ಲಿ ಗೂಡಂಗಡಿಯಲ್ಲಿ ಅಕ್ರಮವಾಗಿ ಸಾರಾಯಿ ಮಾಡುತ್ತಿದ್ದವನನ್ನು ಎಎಸ್‍ಪಿ ಬಂಧಿಸಿದ್ದರು. ಹೆಂಡ ಮಾರಾಟಗಾರ ಕಾಂಗ್ರೆಸ್‍ನ ಹಿಂದಿನ ಶಾಸಕ ಮಂಕಾಳು ವೈದ್ಯನ ಶಿಷ್ಯನಾದರೆ ಹೆಂಡ ಪೂರೈಸಿದವರು ಬಿಜೆಪಿ ಶಾಸಕನ ನೆಂಟನಗ್ಯಾಂಗಿನವರು. ಎರಡೂ ಕಡೆಯಿಂದ ಎಎಸ್‍ಪಿಗೆ ಫೋನ್ ಹೋಗಿದೆ. “ಇಲ್ಲ…. ಇಲ್ಲಾ…. ಕಾನೂನು ಬಿಟ್ಟು ನಾನು ನಡೆಯುವುದಿಲ್ಲ…..” ಎಂದಿದ್ದಾರೆ ಎಎಸ್‍ಪಿ ನಿಖಿಲ್.

ಈ ಎಎಸ್‍ಪಿಯನ್ನು ಹೀಗೆ ಬಿಟ್ಟರೆ ತಮ್ಮ ಕಳ್ಳ ವ್ಯವಹಾರಕ್ಕೆ ಸಂಚಕಾರ ಬರುತ್ತದೆಂದು ಕಂಗಾಲಾದ ಎಮ್ಮೆಲ್ಲೆ ಪಟಾಲಮ್‍ ಆತನ ಎತ್ತಂಗಡಿಗೆ ಪ್ರಯತ್ನ ಪ್ರಾರಂಭಿಸಿಯೇ ಬಿಟ್ಟರು. “…. ನೀನು ನಿನ್ನಡ್ಯೂಟಿ ಮಾಡಿದೆಯಲ್ಲಾ…. ಈಗ ನಾನು ನನ್ನಡ್ಯೂಟಿ ಮಾಡ್ತೇನೆ ನೋಡು….. ನೀನು ಒಂದು ಮಾತೂ ಕೇಳೋನಲ್ಲ….” ಎಂದು ಎಗರಾಡಿದ್ದ ಸುನಿಲ್ ರಾತ್ರೋರಾತ್ರಿ ಬೆಂಗಳೂರಿಗೆ ಹೋಗಿ, ಸಿಎಂ ಯಡ್ಡಿಗೆ ಗಂಟು ಬಿದ್ದು ಎಎಸ್‍ಪಿ ವರ್ಗ ಮಾಡುವಂತೆ ಅಲವತ್ತುಕೊಂಡಿದ್ದಾನೆ. ಒಂದು ವಾರ ಬೆಂಗಳೂರಲ್ಲೇ ಠಿಕಾಣಿ ಹೂಡಿ ಅಂತಿಮವಾಗಿ ಸಾಕ್ಷಾತ್ ಸಿಎಂ ಸಾಹೇಬರಿಂದಲೇ ಎಎಸ್‍ಪಿ ವರ್ಗಾವಣೆ ಆದೇಶ ಮಾಡಿಸಿದ್ದಾನೆ. ಆ ಜಾಗಕ್ಕೆ ತನ್ನಜಾತಿ ಬಂಧುವಾದ ನಾನ್‍ ಐಪಿಎಸ್‍ ಅಧಿಕಾರಿಯನ್ನು ಹಾಕಿಸಿಕೊಂಡಿದ್ದಾನೆ.
ಶಿರಾಲಿಯಲ್ಲಿ ತನ್ನ ಹೆಂಡದ ಅಂಗಡಿ ಸುತ್ತಲೆಲ್ಲೂ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ತಲೆಯೆತ್ತದಂತೆ ಮಾಡಿರುವ ಸುನಿಲ್ ನಾಯ್ಕ ಅಕ್ರಮ ಸಾರಾಯಿದಂಧೆ ನಿರಾತಂಕ ಮಾಡಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತನ್ನ ಪಕ್ಷದ ಶಾಸಕ ಕಾಯಕಕ್ಕೆ ಅಡ್ಡಿಪಡಿಸಿದ ಅಧಿಕಾರಿಯನ್ನು ಎತ್ತಂಗಡಿ ಮಾಡಿರುವ ಯಡಿಯೂರಪ್ಪನವರ ಸಾಧನೆ ಪ್ರಶಂಸನೀಯ ಮತ್ತು ಅನುಕರಣೆಗೆ ಯೋಗ್ಯವಾದದ್ದು!? ಭೇಷ್ ಯಡಿಯೂರಪ್ಪನವರ ಮರಿ ಸರ್ವಾಧಿಕಾರಕ್ಕೆ ಭೋಪರಾಕ್. ಒಂದು ಕಡೆ ಮಾಧ್ಯಮಕ್ಕೆ ನಿರ್ಬಂಧ. ಮತ್ತೊಂದು ಕಡೆ ಕಾನೂನಿನ ಬಗ್ಗೆ ನಿಷ್ಠೆ ಉಳ್ಳ ಅಧಿಕಾರಿಯ ಎತ್ತಂಗಡಿ. ಇದಕ್ಕಿಂತಲೂ ಒಳ್ಳೆಯ “ರಾಮ ರಾಜ್ಯ” ಯಾರಿಂದಲೂ ಸಾಧ್ಯವಿಲ್ಲ.

  2. ಇಂತಹ ಸುಳ್ಳು ಸುದ್ದಿ ಬಿತ್ತರಿಸುವ ನಿಮ್ಮಂತ ನಾಯಿಗಳನ್ನು ನಡು ಬೀದಿಯಲ್ಲಿ ದುಓಡಗೆ ನಿಲ್ಲಿಸಬೇಕು. ಗೌರಿಯಂತ ಶನಿಯಿಂದ ಮುಕ್ತಿ ಸಿಕ್ಕಿದ್ದರು ಅವಳ ಹೆಸರಿನ ಶನಿ ಕರ್ನಾಟಕವನ್ನು ಕಾಡುತ್ತಲೇ ಇದೆ.

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...