Homeಕರ್ನಾಟಕಭಟ್ಕಳದ ಎಮ್ಮೆಲ್ಲೆ ಇಪ್ಪತ್ತೈದೇ ದಿನಕ್ಕೆ ಖಡಕ್ ಎಎಸ್‍ಪಿಯನ್ನು ಎತ್ತಂಗಡಿ ಮಾಡಿಸಿದೇಕೆ? ಶುದ್ದೋಧನ

ಭಟ್ಕಳದ ಎಮ್ಮೆಲ್ಲೆ ಇಪ್ಪತ್ತೈದೇ ದಿನಕ್ಕೆ ಖಡಕ್ ಎಎಸ್‍ಪಿಯನ್ನು ಎತ್ತಂಗಡಿ ಮಾಡಿಸಿದೇಕೆ? ಶುದ್ದೋಧನ

- Advertisement -
- Advertisement -

ಭಟ್ಕಳದ ಎಎಸ್‍ಪಿಯಾಗಿ ಚಾರ್ಜ್‍ತೆಗೆದು ಕೊಂಡ ಕೇವಲ ಇಪ್ಪತ್ತೈದು ದಿನಗಳಲ್ಲೇ ಐಪಿಎಸ್‍ ಅಧಿಕಾರಿ ನಿಖಿಲ್ ಬುಳ್ಳಾ ಅವರ ಎತ್ತಂಗಡಿ ಆಗಿರೋದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ. ಸಮಾಜ ಕಂಟಕರಿಗೆ, ದೋನಂಬರಿನ ದಂಧೆದಾರರ ನಿದ್ದೆಗೆಡಿಸಿದ್ದ ನಿಖಿಲ್‍ರನ್ನು ಸ್ಥಳೀಯ ಬಿಜೆಪಿ ಶಾಸಕನೂ ಸ್ವಯಂಘೋಷಿತ ದೇಶಭಕ್ತ ಹೆಂಡೋದ್ಯಮಿಯೂ ಆಗಿರುವ ಸುನಿಲ್ ನಾಯ್ಕನೇ ಹಠಕ್ಕೆ ಬಿದ್ದು ಜಡಿಸಿದ್ದಾನೆಂಬುದೀಗ ಜಗಜ್ಜಾಹೀರಾಗಿ ಹೋಗಿದೆ! ಖುದ್ದು ಸಿಎಂ ಸಾಹೇಬರ ಅಪ್ಪಣೆಯಂತೆಯೇ ಈ ಎತ್ತಂಗಡಿ ನಡೆದಿರೋದು ಈಗ ರಹಸ್ಯವಾಗುಳಿದಿಲ್ಲ.

 

 

ಅಷ್ಟಕ್ಕೂ ನಿಖಿಲ್, ಶಾಸಕನ ಪಿತ್ತ ನೆತ್ತಿಗೇರಿಸುವಂಥ “ಉದ್ಧಟತನ” ಮಾಡಿದ್ದಾದರೂ ಏನು? ಭಟ್ಕಳದಲ್ಲಿ ಹಾವಳಿ ಎಬ್ಬಿಸಿರುವ ಅಕ್ರಮ ಹೆಂಡ ಮತ್ತು ಜೂಜು ಮಾಫಿಯಾದ ಹೆಡೆಮುರಿಕಟ್ಟುವ ನಿರ್ಧಾರಕ್ಕೆ ಬಂದಿದ್ದ ನಿಖಿಲ್‍ ಅಕ್ರಮ ಮದ್ಯ ಮಾರಾಟದ ಕಿಂಗ್‍ಪಿನ್‍ಗಳ ಮೇಲೆ ಒಂದರಹಿಂದೊಂದರಂತೆ ನಾಲ್ಕು ಪ್ರಕರಣ ದಾಖಲಿಸಿದ್ದರು.ತನ್ನ ಕೃಪಾಶಿರ್ವಾದವಿದ್ದ ನಾಲ್ವರು ಕಳ್ಳ ಹೆಂಡದಂಧೆದಾರರನ್ನು ಜೈಲಿಗಟ್ಟಿದ್ದೇ ಶಾಸಕನ ಪಿತ್ತ ನೆತ್ತಿಗೇರಿಸಿತ್ತು. ಕಮ್ಯುನಲಿ ಸೆನ್ಸಿಟಿವ್ ಎಂಬ ಹಣೆಪಟ್ಟಿಯ ಭಟ್ಕಳದಲ್ಲಿ ಬಲು ನಾಜೂಕಿನಿಂದಲೇ ಕಾರ್ಯಾಚರಣೆಗಿಳಿದಿದ್ದ ನಿಖಿಲ್ “ಪ್ರಭಾವಿಗಳ” ಮೇಲೆ 21 ಜೂಜು ಪ್ರಕರಣಜಡಿದಿದ್ದಲ್ಲದೆ ಸಿಗರೇಟ್ ಮತ್ತು ತಂಬಾಕುಉತ್ಪನ್ನಕಾಯ್ದೆಯಡಿ 93 ಕೇಸು ಹಾಕಿದ್ದರು.

ಈ ಕಾರಣಕ್ಕೇ ನಿಖಿಲ್‍ ಜನರ ನಡುವೆ ಭರ್ಜರಿ ಪ್ರಶಂಸೆಗೆ ಪಾತ್ರರಾಗಿದ್ದರು. ಶಾಸಕರ ಪರಮಾಪ್ತರು, ನೆಂಟರು-ಇಷ್ಟರೇ ಗ್ರಾಮೀಣ ಭಾಗದಲ್ಲಿ ಕಳ್ಳ ಹೆಂಡ ಯಥೇಚ್ಛವಾಗಿ ಸರಬರಾಜು ಮಾಡುತ್ತಿದ್ದುದನ್ನು ನಿಖಿಲ್‍ ಕಂಡುಹಿಡಿದಿದ್ದರು. ಇವರ್ಯಾರಿಗೂ ಆತ ಸೊಪ್ಪು ಹಾಕಲಿಲ್ಲ. ಅಕ್ರಮ ಹೆಂಡ ಹಂಚಿಕೆ ಬಗ್ಗೆ ಸಾರ್ವಜನಿಕರಿಂದ ದೂರೇನಾದರೂ ಬಂದರೆ ಆ ವ್ಯಾಪ್ತಿಯ ಅಧಿಕಾರಿಗಳೇ ಹೊಣೆಯೆಂಬ ಎಚ್ಚರಿಕೆ ತನ್ನ ಅಧೀನ ಸಿಬ್ಬಂದಿಗೆ ಕೊಟ್ಟಿದ್ದರು.ಹೀಗಾಗಿ ಶಾಸಕ ಸುನಿಲ್ ನಾಯ್ಕ ಸೂತ್ರಧಾರತ್ವದ ಮದ್ಯ ಮಾಫಿಯಾ ವಿಲ ವಿಲ ಒದ್ದಾಡುವಂತಾಗಿತ್ತು.

ಶಿರಾಲಿಯ ಬಾಳೆಲೆಚಂದ್ರು ಯಾನೆಚಂದ್ರು ನಾಯ್ಕ ಶಾಸಕ ಸುನಿಲ್ ನಾಯ್ಕನ ಕಷ್ಟ-ಸುಖದ ನಿಷ್ಠ ಸನ್ಮಿತ್ರ! ಹೊಟೇಲ್‍ ಉದ್ಯಮಿಯಾಗಿದ್ದಚಂದ್ರು, ದೋಸ್ತ್‍ ಎಮ್ಮೆಲ್ಲೆ ಆಗಿದ್ದೇತಡ ಸರ್ಕಾರಿಕಾಮಗಾರಿ ನಡೆಸುವ ಲಕ್ಷಾಧೀಶ ಗುತ್ತಿಗೆದಾರನಾಗಿ ಅವತರಿಸಿದ್ದಾನೆ. ಇಂಥಚಂದ್ರುನ ಭಾಮೈದ ಶಿರಾಲಿಯಲ್ಲಿ ನಡೆಸುತ್ತಿದ್ದ ಮೀನು ಊಟದ ಹೊಟೇಲಿನಲ್ಲಿ ಪರವಾನಗಿಇಲ್ಲದ ಹೆಂಡದ ವ್ಯವಹಾರ ಲಕ್ಷದ ಲೆಕ್ಕದಲ್ಲೇ ದಿನವೂ ನಡೆಯುತ್ತಿತ್ತು. ಈ ಹೊಟೇಲಿನ ಮೇಲೆ ರೇಡು ಹಾಕಿದ ಎಎಸ್‍ಪಿ ಪಡೆ ಚಂದ್ರುನ ಭಾಮೈದನ ಎತ್ಹಾಕಿಕೊಂಡು ಬಂದಿತ್ತು! ಆಗ ಶಾಸಕ ಸಾಹೇಬ ಫೋನಾಯಿಸಿದರೂ ಕೇರ್ ಮಾಡಿರಲಿಲ್ಲ.

ಕಂಡಕಂಡಲ್ಲಿ ಎಎಸ್‍ಪಿಗೆ ಬುದ್ಧಿ ಕಲಿಸುವ ಆವಾಜ್ ಹಾಕತೊಡಗಿದ್ದ ಎಮ್ಮೆಲ್ಲೆ ಸುನೀಲ್ ನಾಯ್ಕ ತನ್ನ ಖಾಸಾ ಭಾಮೈದನ ಕಳ್ಳಹೆಂಡದ ವ್ಯವಹಾರಕ್ಕೆ ತೊಂದರೆ ಪೊಲೀಸರಿಂದಾದಾಗ ನಿಗಿ ನಿಗಿ ಬೆಂಕಿಯಾಗಿ ಹೋದ!! ಭಟ್ಕಳದ ಹಳ್ಳಿಗಳ ಗೂಡಂಗಡಿಯಲ್ಲಿ ಹೆಂಡದ ವ್ಯಾಪಾರಜೋರಾಗಿದೆ. ಈ ಗೂಡಂಗಡಿಗಳಿಗೆ ಹೆಂಡ ಪೂರೈಕೆಯಾಗುವುದು ಶಾಸಕನ ಭಾಮೈದನ “ಕಂಪನಿ”ಯಿಂದ. ಹಾಡುವಳ್ಳಿ ಎಂಬಲ್ಲಿ ಗೂಡಂಗಡಿಯಲ್ಲಿ ಅಕ್ರಮವಾಗಿ ಸಾರಾಯಿ ಮಾಡುತ್ತಿದ್ದವನನ್ನು ಎಎಸ್‍ಪಿ ಬಂಧಿಸಿದ್ದರು. ಹೆಂಡ ಮಾರಾಟಗಾರ ಕಾಂಗ್ರೆಸ್‍ನ ಹಿಂದಿನ ಶಾಸಕ ಮಂಕಾಳು ವೈದ್ಯನ ಶಿಷ್ಯನಾದರೆ ಹೆಂಡ ಪೂರೈಸಿದವರು ಬಿಜೆಪಿ ಶಾಸಕನ ನೆಂಟನಗ್ಯಾಂಗಿನವರು. ಎರಡೂ ಕಡೆಯಿಂದ ಎಎಸ್‍ಪಿಗೆ ಫೋನ್ ಹೋಗಿದೆ. “ಇಲ್ಲ…. ಇಲ್ಲಾ…. ಕಾನೂನು ಬಿಟ್ಟು ನಾನು ನಡೆಯುವುದಿಲ್ಲ…..” ಎಂದಿದ್ದಾರೆ ಎಎಸ್‍ಪಿ ನಿಖಿಲ್.

ಈ ಎಎಸ್‍ಪಿಯನ್ನು ಹೀಗೆ ಬಿಟ್ಟರೆ ತಮ್ಮ ಕಳ್ಳ ವ್ಯವಹಾರಕ್ಕೆ ಸಂಚಕಾರ ಬರುತ್ತದೆಂದು ಕಂಗಾಲಾದ ಎಮ್ಮೆಲ್ಲೆ ಪಟಾಲಮ್‍ ಆತನ ಎತ್ತಂಗಡಿಗೆ ಪ್ರಯತ್ನ ಪ್ರಾರಂಭಿಸಿಯೇ ಬಿಟ್ಟರು. “…. ನೀನು ನಿನ್ನಡ್ಯೂಟಿ ಮಾಡಿದೆಯಲ್ಲಾ…. ಈಗ ನಾನು ನನ್ನಡ್ಯೂಟಿ ಮಾಡ್ತೇನೆ ನೋಡು….. ನೀನು ಒಂದು ಮಾತೂ ಕೇಳೋನಲ್ಲ….” ಎಂದು ಎಗರಾಡಿದ್ದ ಸುನಿಲ್ ರಾತ್ರೋರಾತ್ರಿ ಬೆಂಗಳೂರಿಗೆ ಹೋಗಿ, ಸಿಎಂ ಯಡ್ಡಿಗೆ ಗಂಟು ಬಿದ್ದು ಎಎಸ್‍ಪಿ ವರ್ಗ ಮಾಡುವಂತೆ ಅಲವತ್ತುಕೊಂಡಿದ್ದಾನೆ. ಒಂದು ವಾರ ಬೆಂಗಳೂರಲ್ಲೇ ಠಿಕಾಣಿ ಹೂಡಿ ಅಂತಿಮವಾಗಿ ಸಾಕ್ಷಾತ್ ಸಿಎಂ ಸಾಹೇಬರಿಂದಲೇ ಎಎಸ್‍ಪಿ ವರ್ಗಾವಣೆ ಆದೇಶ ಮಾಡಿಸಿದ್ದಾನೆ. ಆ ಜಾಗಕ್ಕೆ ತನ್ನಜಾತಿ ಬಂಧುವಾದ ನಾನ್‍ ಐಪಿಎಸ್‍ ಅಧಿಕಾರಿಯನ್ನು ಹಾಕಿಸಿಕೊಂಡಿದ್ದಾನೆ.
ಶಿರಾಲಿಯಲ್ಲಿ ತನ್ನ ಹೆಂಡದ ಅಂಗಡಿ ಸುತ್ತಲೆಲ್ಲೂ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ತಲೆಯೆತ್ತದಂತೆ ಮಾಡಿರುವ ಸುನಿಲ್ ನಾಯ್ಕ ಅಕ್ರಮ ಸಾರಾಯಿದಂಧೆ ನಿರಾತಂಕ ಮಾಡಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತನ್ನ ಪಕ್ಷದ ಶಾಸಕ ಕಾಯಕಕ್ಕೆ ಅಡ್ಡಿಪಡಿಸಿದ ಅಧಿಕಾರಿಯನ್ನು ಎತ್ತಂಗಡಿ ಮಾಡಿರುವ ಯಡಿಯೂರಪ್ಪನವರ ಸಾಧನೆ ಪ್ರಶಂಸನೀಯ ಮತ್ತು ಅನುಕರಣೆಗೆ ಯೋಗ್ಯವಾದದ್ದು!? ಭೇಷ್ ಯಡಿಯೂರಪ್ಪನವರ ಮರಿ ಸರ್ವಾಧಿಕಾರಕ್ಕೆ ಭೋಪರಾಕ್. ಒಂದು ಕಡೆ ಮಾಧ್ಯಮಕ್ಕೆ ನಿರ್ಬಂಧ. ಮತ್ತೊಂದು ಕಡೆ ಕಾನೂನಿನ ಬಗ್ಗೆ ನಿಷ್ಠೆ ಉಳ್ಳ ಅಧಿಕಾರಿಯ ಎತ್ತಂಗಡಿ. ಇದಕ್ಕಿಂತಲೂ ಒಳ್ಳೆಯ “ರಾಮ ರಾಜ್ಯ” ಯಾರಿಂದಲೂ ಸಾಧ್ಯವಿಲ್ಲ.

  2. ಇಂತಹ ಸುಳ್ಳು ಸುದ್ದಿ ಬಿತ್ತರಿಸುವ ನಿಮ್ಮಂತ ನಾಯಿಗಳನ್ನು ನಡು ಬೀದಿಯಲ್ಲಿ ದುಓಡಗೆ ನಿಲ್ಲಿಸಬೇಕು. ಗೌರಿಯಂತ ಶನಿಯಿಂದ ಮುಕ್ತಿ ಸಿಕ್ಕಿದ್ದರು ಅವಳ ಹೆಸರಿನ ಶನಿ ಕರ್ನಾಟಕವನ್ನು ಕಾಡುತ್ತಲೇ ಇದೆ.

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...