Homeಕರ್ನಾಟಕಭಟ್ಕಳದ ಎಮ್ಮೆಲ್ಲೆ ಇಪ್ಪತ್ತೈದೇ ದಿನಕ್ಕೆ ಖಡಕ್ ಎಎಸ್‍ಪಿಯನ್ನು ಎತ್ತಂಗಡಿ ಮಾಡಿಸಿದೇಕೆ? ಶುದ್ದೋಧನ

ಭಟ್ಕಳದ ಎಮ್ಮೆಲ್ಲೆ ಇಪ್ಪತ್ತೈದೇ ದಿನಕ್ಕೆ ಖಡಕ್ ಎಎಸ್‍ಪಿಯನ್ನು ಎತ್ತಂಗಡಿ ಮಾಡಿಸಿದೇಕೆ? ಶುದ್ದೋಧನ

- Advertisement -
- Advertisement -

ಭಟ್ಕಳದ ಎಎಸ್‍ಪಿಯಾಗಿ ಚಾರ್ಜ್‍ತೆಗೆದು ಕೊಂಡ ಕೇವಲ ಇಪ್ಪತ್ತೈದು ದಿನಗಳಲ್ಲೇ ಐಪಿಎಸ್‍ ಅಧಿಕಾರಿ ನಿಖಿಲ್ ಬುಳ್ಳಾ ಅವರ ಎತ್ತಂಗಡಿ ಆಗಿರೋದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ. ಸಮಾಜ ಕಂಟಕರಿಗೆ, ದೋನಂಬರಿನ ದಂಧೆದಾರರ ನಿದ್ದೆಗೆಡಿಸಿದ್ದ ನಿಖಿಲ್‍ರನ್ನು ಸ್ಥಳೀಯ ಬಿಜೆಪಿ ಶಾಸಕನೂ ಸ್ವಯಂಘೋಷಿತ ದೇಶಭಕ್ತ ಹೆಂಡೋದ್ಯಮಿಯೂ ಆಗಿರುವ ಸುನಿಲ್ ನಾಯ್ಕನೇ ಹಠಕ್ಕೆ ಬಿದ್ದು ಜಡಿಸಿದ್ದಾನೆಂಬುದೀಗ ಜಗಜ್ಜಾಹೀರಾಗಿ ಹೋಗಿದೆ! ಖುದ್ದು ಸಿಎಂ ಸಾಹೇಬರ ಅಪ್ಪಣೆಯಂತೆಯೇ ಈ ಎತ್ತಂಗಡಿ ನಡೆದಿರೋದು ಈಗ ರಹಸ್ಯವಾಗುಳಿದಿಲ್ಲ.

 

 

ಅಷ್ಟಕ್ಕೂ ನಿಖಿಲ್, ಶಾಸಕನ ಪಿತ್ತ ನೆತ್ತಿಗೇರಿಸುವಂಥ “ಉದ್ಧಟತನ” ಮಾಡಿದ್ದಾದರೂ ಏನು? ಭಟ್ಕಳದಲ್ಲಿ ಹಾವಳಿ ಎಬ್ಬಿಸಿರುವ ಅಕ್ರಮ ಹೆಂಡ ಮತ್ತು ಜೂಜು ಮಾಫಿಯಾದ ಹೆಡೆಮುರಿಕಟ್ಟುವ ನಿರ್ಧಾರಕ್ಕೆ ಬಂದಿದ್ದ ನಿಖಿಲ್‍ ಅಕ್ರಮ ಮದ್ಯ ಮಾರಾಟದ ಕಿಂಗ್‍ಪಿನ್‍ಗಳ ಮೇಲೆ ಒಂದರಹಿಂದೊಂದರಂತೆ ನಾಲ್ಕು ಪ್ರಕರಣ ದಾಖಲಿಸಿದ್ದರು.ತನ್ನ ಕೃಪಾಶಿರ್ವಾದವಿದ್ದ ನಾಲ್ವರು ಕಳ್ಳ ಹೆಂಡದಂಧೆದಾರರನ್ನು ಜೈಲಿಗಟ್ಟಿದ್ದೇ ಶಾಸಕನ ಪಿತ್ತ ನೆತ್ತಿಗೇರಿಸಿತ್ತು. ಕಮ್ಯುನಲಿ ಸೆನ್ಸಿಟಿವ್ ಎಂಬ ಹಣೆಪಟ್ಟಿಯ ಭಟ್ಕಳದಲ್ಲಿ ಬಲು ನಾಜೂಕಿನಿಂದಲೇ ಕಾರ್ಯಾಚರಣೆಗಿಳಿದಿದ್ದ ನಿಖಿಲ್ “ಪ್ರಭಾವಿಗಳ” ಮೇಲೆ 21 ಜೂಜು ಪ್ರಕರಣಜಡಿದಿದ್ದಲ್ಲದೆ ಸಿಗರೇಟ್ ಮತ್ತು ತಂಬಾಕುಉತ್ಪನ್ನಕಾಯ್ದೆಯಡಿ 93 ಕೇಸು ಹಾಕಿದ್ದರು.

ಈ ಕಾರಣಕ್ಕೇ ನಿಖಿಲ್‍ ಜನರ ನಡುವೆ ಭರ್ಜರಿ ಪ್ರಶಂಸೆಗೆ ಪಾತ್ರರಾಗಿದ್ದರು. ಶಾಸಕರ ಪರಮಾಪ್ತರು, ನೆಂಟರು-ಇಷ್ಟರೇ ಗ್ರಾಮೀಣ ಭಾಗದಲ್ಲಿ ಕಳ್ಳ ಹೆಂಡ ಯಥೇಚ್ಛವಾಗಿ ಸರಬರಾಜು ಮಾಡುತ್ತಿದ್ದುದನ್ನು ನಿಖಿಲ್‍ ಕಂಡುಹಿಡಿದಿದ್ದರು. ಇವರ್ಯಾರಿಗೂ ಆತ ಸೊಪ್ಪು ಹಾಕಲಿಲ್ಲ. ಅಕ್ರಮ ಹೆಂಡ ಹಂಚಿಕೆ ಬಗ್ಗೆ ಸಾರ್ವಜನಿಕರಿಂದ ದೂರೇನಾದರೂ ಬಂದರೆ ಆ ವ್ಯಾಪ್ತಿಯ ಅಧಿಕಾರಿಗಳೇ ಹೊಣೆಯೆಂಬ ಎಚ್ಚರಿಕೆ ತನ್ನ ಅಧೀನ ಸಿಬ್ಬಂದಿಗೆ ಕೊಟ್ಟಿದ್ದರು.ಹೀಗಾಗಿ ಶಾಸಕ ಸುನಿಲ್ ನಾಯ್ಕ ಸೂತ್ರಧಾರತ್ವದ ಮದ್ಯ ಮಾಫಿಯಾ ವಿಲ ವಿಲ ಒದ್ದಾಡುವಂತಾಗಿತ್ತು.

ಶಿರಾಲಿಯ ಬಾಳೆಲೆಚಂದ್ರು ಯಾನೆಚಂದ್ರು ನಾಯ್ಕ ಶಾಸಕ ಸುನಿಲ್ ನಾಯ್ಕನ ಕಷ್ಟ-ಸುಖದ ನಿಷ್ಠ ಸನ್ಮಿತ್ರ! ಹೊಟೇಲ್‍ ಉದ್ಯಮಿಯಾಗಿದ್ದಚಂದ್ರು, ದೋಸ್ತ್‍ ಎಮ್ಮೆಲ್ಲೆ ಆಗಿದ್ದೇತಡ ಸರ್ಕಾರಿಕಾಮಗಾರಿ ನಡೆಸುವ ಲಕ್ಷಾಧೀಶ ಗುತ್ತಿಗೆದಾರನಾಗಿ ಅವತರಿಸಿದ್ದಾನೆ. ಇಂಥಚಂದ್ರುನ ಭಾಮೈದ ಶಿರಾಲಿಯಲ್ಲಿ ನಡೆಸುತ್ತಿದ್ದ ಮೀನು ಊಟದ ಹೊಟೇಲಿನಲ್ಲಿ ಪರವಾನಗಿಇಲ್ಲದ ಹೆಂಡದ ವ್ಯವಹಾರ ಲಕ್ಷದ ಲೆಕ್ಕದಲ್ಲೇ ದಿನವೂ ನಡೆಯುತ್ತಿತ್ತು. ಈ ಹೊಟೇಲಿನ ಮೇಲೆ ರೇಡು ಹಾಕಿದ ಎಎಸ್‍ಪಿ ಪಡೆ ಚಂದ್ರುನ ಭಾಮೈದನ ಎತ್ಹಾಕಿಕೊಂಡು ಬಂದಿತ್ತು! ಆಗ ಶಾಸಕ ಸಾಹೇಬ ಫೋನಾಯಿಸಿದರೂ ಕೇರ್ ಮಾಡಿರಲಿಲ್ಲ.

ಕಂಡಕಂಡಲ್ಲಿ ಎಎಸ್‍ಪಿಗೆ ಬುದ್ಧಿ ಕಲಿಸುವ ಆವಾಜ್ ಹಾಕತೊಡಗಿದ್ದ ಎಮ್ಮೆಲ್ಲೆ ಸುನೀಲ್ ನಾಯ್ಕ ತನ್ನ ಖಾಸಾ ಭಾಮೈದನ ಕಳ್ಳಹೆಂಡದ ವ್ಯವಹಾರಕ್ಕೆ ತೊಂದರೆ ಪೊಲೀಸರಿಂದಾದಾಗ ನಿಗಿ ನಿಗಿ ಬೆಂಕಿಯಾಗಿ ಹೋದ!! ಭಟ್ಕಳದ ಹಳ್ಳಿಗಳ ಗೂಡಂಗಡಿಯಲ್ಲಿ ಹೆಂಡದ ವ್ಯಾಪಾರಜೋರಾಗಿದೆ. ಈ ಗೂಡಂಗಡಿಗಳಿಗೆ ಹೆಂಡ ಪೂರೈಕೆಯಾಗುವುದು ಶಾಸಕನ ಭಾಮೈದನ “ಕಂಪನಿ”ಯಿಂದ. ಹಾಡುವಳ್ಳಿ ಎಂಬಲ್ಲಿ ಗೂಡಂಗಡಿಯಲ್ಲಿ ಅಕ್ರಮವಾಗಿ ಸಾರಾಯಿ ಮಾಡುತ್ತಿದ್ದವನನ್ನು ಎಎಸ್‍ಪಿ ಬಂಧಿಸಿದ್ದರು. ಹೆಂಡ ಮಾರಾಟಗಾರ ಕಾಂಗ್ರೆಸ್‍ನ ಹಿಂದಿನ ಶಾಸಕ ಮಂಕಾಳು ವೈದ್ಯನ ಶಿಷ್ಯನಾದರೆ ಹೆಂಡ ಪೂರೈಸಿದವರು ಬಿಜೆಪಿ ಶಾಸಕನ ನೆಂಟನಗ್ಯಾಂಗಿನವರು. ಎರಡೂ ಕಡೆಯಿಂದ ಎಎಸ್‍ಪಿಗೆ ಫೋನ್ ಹೋಗಿದೆ. “ಇಲ್ಲ…. ಇಲ್ಲಾ…. ಕಾನೂನು ಬಿಟ್ಟು ನಾನು ನಡೆಯುವುದಿಲ್ಲ…..” ಎಂದಿದ್ದಾರೆ ಎಎಸ್‍ಪಿ ನಿಖಿಲ್.

ಈ ಎಎಸ್‍ಪಿಯನ್ನು ಹೀಗೆ ಬಿಟ್ಟರೆ ತಮ್ಮ ಕಳ್ಳ ವ್ಯವಹಾರಕ್ಕೆ ಸಂಚಕಾರ ಬರುತ್ತದೆಂದು ಕಂಗಾಲಾದ ಎಮ್ಮೆಲ್ಲೆ ಪಟಾಲಮ್‍ ಆತನ ಎತ್ತಂಗಡಿಗೆ ಪ್ರಯತ್ನ ಪ್ರಾರಂಭಿಸಿಯೇ ಬಿಟ್ಟರು. “…. ನೀನು ನಿನ್ನಡ್ಯೂಟಿ ಮಾಡಿದೆಯಲ್ಲಾ…. ಈಗ ನಾನು ನನ್ನಡ್ಯೂಟಿ ಮಾಡ್ತೇನೆ ನೋಡು….. ನೀನು ಒಂದು ಮಾತೂ ಕೇಳೋನಲ್ಲ….” ಎಂದು ಎಗರಾಡಿದ್ದ ಸುನಿಲ್ ರಾತ್ರೋರಾತ್ರಿ ಬೆಂಗಳೂರಿಗೆ ಹೋಗಿ, ಸಿಎಂ ಯಡ್ಡಿಗೆ ಗಂಟು ಬಿದ್ದು ಎಎಸ್‍ಪಿ ವರ್ಗ ಮಾಡುವಂತೆ ಅಲವತ್ತುಕೊಂಡಿದ್ದಾನೆ. ಒಂದು ವಾರ ಬೆಂಗಳೂರಲ್ಲೇ ಠಿಕಾಣಿ ಹೂಡಿ ಅಂತಿಮವಾಗಿ ಸಾಕ್ಷಾತ್ ಸಿಎಂ ಸಾಹೇಬರಿಂದಲೇ ಎಎಸ್‍ಪಿ ವರ್ಗಾವಣೆ ಆದೇಶ ಮಾಡಿಸಿದ್ದಾನೆ. ಆ ಜಾಗಕ್ಕೆ ತನ್ನಜಾತಿ ಬಂಧುವಾದ ನಾನ್‍ ಐಪಿಎಸ್‍ ಅಧಿಕಾರಿಯನ್ನು ಹಾಕಿಸಿಕೊಂಡಿದ್ದಾನೆ.
ಶಿರಾಲಿಯಲ್ಲಿ ತನ್ನ ಹೆಂಡದ ಅಂಗಡಿ ಸುತ್ತಲೆಲ್ಲೂ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ತಲೆಯೆತ್ತದಂತೆ ಮಾಡಿರುವ ಸುನಿಲ್ ನಾಯ್ಕ ಅಕ್ರಮ ಸಾರಾಯಿದಂಧೆ ನಿರಾತಂಕ ಮಾಡಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತನ್ನ ಪಕ್ಷದ ಶಾಸಕ ಕಾಯಕಕ್ಕೆ ಅಡ್ಡಿಪಡಿಸಿದ ಅಧಿಕಾರಿಯನ್ನು ಎತ್ತಂಗಡಿ ಮಾಡಿರುವ ಯಡಿಯೂರಪ್ಪನವರ ಸಾಧನೆ ಪ್ರಶಂಸನೀಯ ಮತ್ತು ಅನುಕರಣೆಗೆ ಯೋಗ್ಯವಾದದ್ದು!? ಭೇಷ್ ಯಡಿಯೂರಪ್ಪನವರ ಮರಿ ಸರ್ವಾಧಿಕಾರಕ್ಕೆ ಭೋಪರಾಕ್. ಒಂದು ಕಡೆ ಮಾಧ್ಯಮಕ್ಕೆ ನಿರ್ಬಂಧ. ಮತ್ತೊಂದು ಕಡೆ ಕಾನೂನಿನ ಬಗ್ಗೆ ನಿಷ್ಠೆ ಉಳ್ಳ ಅಧಿಕಾರಿಯ ಎತ್ತಂಗಡಿ. ಇದಕ್ಕಿಂತಲೂ ಒಳ್ಳೆಯ “ರಾಮ ರಾಜ್ಯ” ಯಾರಿಂದಲೂ ಸಾಧ್ಯವಿಲ್ಲ.

  2. ಇಂತಹ ಸುಳ್ಳು ಸುದ್ದಿ ಬಿತ್ತರಿಸುವ ನಿಮ್ಮಂತ ನಾಯಿಗಳನ್ನು ನಡು ಬೀದಿಯಲ್ಲಿ ದುಓಡಗೆ ನಿಲ್ಲಿಸಬೇಕು. ಗೌರಿಯಂತ ಶನಿಯಿಂದ ಮುಕ್ತಿ ಸಿಕ್ಕಿದ್ದರು ಅವಳ ಹೆಸರಿನ ಶನಿ ಕರ್ನಾಟಕವನ್ನು ಕಾಡುತ್ತಲೇ ಇದೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...