Homeಮುಖಪುಟಕಾಡು ಬೆಳೆಸಲು ಜೀವ ಮುಡುಪಿಟ್ಟ ಭಟ್ರಳ್ಳಿ ಗೂಳೆಪ್ಪನವರಿಗೆ ವಾಲ್ಮೀಕಿ ಪ್ರಶಸ್ತಿ

ಕಾಡು ಬೆಳೆಸಲು ಜೀವ ಮುಡುಪಿಟ್ಟ ಭಟ್ರಳ್ಳಿ ಗೂಳೆಪ್ಪನವರಿಗೆ ವಾಲ್ಮೀಕಿ ಪ್ರಶಸ್ತಿ

- Advertisement -
- Advertisement -

ಸಂಶೋಧಕ, ಯುವ ಬರಹಗಾರ ಅರುಣ್ ಜೋಳದಕೂಡ್ಲಿಗಿಯವರು ತಮ್ಮ ಎಲೆ ಮರೆ-7ರ ಅಂಕಣದಲ್ಲಿ ಭಟ್ರಳ್ಳಿ ಗೂಳೆಪ್ಪನವರ ಬಗ್ಗೆ ಬರೆದಿದ್ದರು. ಈಗ ಭಟ್ರಳ್ಳಿ ಗೂಳೆಪ್ಪನವರಿಗೆ ವಾಲ್ಮೀಕಿ ಪ್ರಶಸ್ತಿ ದೊರೆತಿದೆ.

ನಂಜುಂಡಪ್ಪ ಅವರ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕುಗಳಲ್ಲಿ ಚಳ್ಳಕೆರೆ ಒಳಗೊಂಡಂತೆ ಮೊಳಕಾಲ್ಮೂರು ತಾಲೂಕು ಸೇರುತ್ತದೆ. ಹಾಗೆ ನೋಡಿದರೆ ಇದು ಕರ್ನಾಟಕದ ನಡುಮಧ್ಯೆ ಬರುವ ಭೂಭಾಗ. ಈ ಬಯಲ ಬಿಸಿಲಿಗೆ ಬಿರುಕುಬಿಟ್ಟ ನೆಲದಂತೆಯೂ, ಬಟ್ಟಂಬಯಲ ಆಲಯದಂತೆಯೂ ಇದೆ. ಹಿರಿಯೂರು ಚಳ್ಳಕೆರೆ ಮಾರ್ಗವಾಗಿ ಬಳ್ಳಾರಿಗೆ ಚಲಿಸುತ್ತಿದ್ದರೆ ಈ ಭಾಗದ ಬಂಡೆಗಳಿಂದ ಸುತ್ತುವರಿದ ಬೆಟ್ಟಗಳು ಎದುರಾಗುತ್ತವೆ. ಬಿತ್ತನೆ ಇಲ್ಲದ ಹೊಲಗಳು ಬಿಸಿಲ ಉಡುಪುತೊಟ್ಟು ದುಃಖಿಸುತ್ತಿರುವಂತೆ ಭಾಸವಾಗುತ್ತದೆ. ಸಂಗಾತಿಯಾಗಿ ಪೌಷ್ಠಿಕಾಂಶದ ಕೊರತೆಯಿಂದ ನರಳುತ್ತಿರುವ ಮಕ್ಕಳಂತಹ ಕುರುಚಲು ಕಾಡು ಅಲ್ಲಲ್ಲಿ ಕುಪ್ಪೆಕುಪ್ಪೆಯಾಗಿ ಕಾಣುತ್ತದೆ. ಈ ಮಧ್ಯೆಯೂ ಜೀವಚೈತನ್ಯದ ಕುರುಹು ಎಂಬಂತೆ ಹಾಡುವ ಹಕ್ಕಿಗಳು ಸುಳಿದಾಡುವ ಜೀವರಾಶಿ. ಉಳಿದಂತೆ ಬಯಲೆಂಬ ಬಯಲ ಜತೆ ಬಿಸಿಲೆಂಬ ಬಿಸಿಲು. ಇಂತಹ ಪರಿಸರದಲ್ಲಿ ಹಸಿರಿನ ಕನಸೊತ್ತು ಕಾಡಿನ ಕಾವಲಿಗೆ ತನ್ನ ಜೀವವನ್ನೆ ತೇದು ಗಂಧದ ವಾಸನೆ ಬೀರಿದಾತ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಭಟ್ರಳ್ಳಿಯ ತಳವಾರ ಗೂಳೆಪ್ಪ.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹಾಲಸಾಗರ ವ್ಯಾಪ್ತಿಯ ರಕ್ಷಿತ ಅರಣ್ಯವನ್ನು ಪ್ರವೇಶಿಸುತ್ತಿದ್ದಂತೆ ಭಟ್ರಳ್ಳಿ ಗೂಳೆಪ್ಪ ಕಣ್ಣಲ್ಲಿ ಕಣ್ಣಿಟ್ಟು ಬೆಳೆಸಿದ ಹಚ್ಚಹಸಿರಿನ ಕಾಡು ಸಿಗುತ್ತದೆ. ನಾನೊಮ್ಮೆ ಗೂಳೆಪ್ಪನನ್ನು ಭೇಟಿ ಮಾಡಲೆಂದು ಹೋದಾಗ ಗೂಳೆಪ್ಪ ಮಾತನಾಡುತ್ತಾ ಕಾಡಿನೊಳಗೆ ಕರೆದುಕೊಂಡು ಹೋಗತೊಡಗಿದರು. ತಾನು ಅಲ್ಲಲ್ಲಿ ತೋಡಿದ ನೀರುಗುಂಡಿಗಳನ್ನು ತೋರಿಸುತ್ತಾ ನೀರು ನಿಲ್ಲಿಸುವ ಸಾಹಸದ ಕಥೆಗಳನ್ನು ಹೇಳತೊಡಗಿದರು. ನಡಿಗೆಯ ಆರಂಭದಲ್ಲಿ ಬಿಡಿಬಿಡಿಯಾಗಿದ್ದ ಗಿಡಮರಗಳು ನಿಧಾನಕ್ಕೆ ಹೆಚ್ಚಾಗತೊಡಗಿದವು. ಮುಂದೆ ಸ್ವಲ್ಪ ದೂರದಲ್ಲಿ ಸಾಲುಸಾಲು ಆಸಿನ (ಆರಿಗಿಡ) ಮರಗಳು ಕಾಣತೊಡಗಿದವು. 50 ಹೆಕ್ಟೇರ್ ಪ್ರದೇಶದ ಈ ಕಾಡನ್ನು ಗೂಳೆಪ್ಪ ಕಣ್ಣಲ್ಲಿ ಕಣ್ಣಿಟ್ಟು ಕಾಪಿಟ್ಟಿದ್ದಾನೆ.
ಗೂಳೆಪ್ಪ ಈ ಮರಗಳನ್ನು ಯಾವಾಗ ನೆಟ್ಟವು ಎಂದು ಲೆಕ್ಕ ಇಟ್ಟು ಹೇಳುತ್ತಾರೆ. ಕೆಲವು 1995 ರಲ್ಲಿ ನೆಟ್ಟವಾಗಿದ್ದರೆ ಮತ್ತೆ ಕೆಲವು 1997 ರಲ್ಲಿ ನೆಟ್ಟವುಗಳು. ಅವೆಲ್ಲಾ ಈಗ ಎತ್ತರಕ್ಕೆ ಬೆಳೆದು ಗೂಳೆಪ್ಪನ ಹೆಸರೇಳುತ್ತಿವೆ. ಇಡೀ ಕಾಡಿನ ಜೀವನಾಡಿಯನ್ನು ಕೇಳಿಸಿಕೊಳ್ಳುವಷ್ಟು ಈ ಕಾಡಿನ ಜತೆ ಈತ ಬೆಸೆದುಕೊಂಡಿದ್ದಾನೆ. ಈ ಕಾಡನ್ನು ಸುತ್ತಿದ್ದರೆ ಕಡಿದು ಮೊಟಕಾದ ಒಂದೇ ಒಂದು ಬೊಡ್ಡೆಯೂ ಕಾಣಲು ಸಿಗುವುದಿಲ್ಲ. ಅಷ್ಟರಮಟ್ಟಿಗೆ ಗೂಳೆಪ್ಪನ ಕಾವಲು ಕಾಡನ್ನು ಸಂರಕ್ಷಿಸಿದೆ. ಆಲ, ಬೇವು, ಅರಳಿ, ನೇರಲ, ಬಿಕ್ಕೆ, ಕಮರ, ತಪ್ಸೆ, ದೊಂಡು ಜಾಲಿ, ಉಲಿಪೆ, ಸಪಳೆ, ಆಸು ಹೀಗೆ ಹತ್ತಾರು ಜಾತಿಯ ಮರಗಿಡಗಳು ನಿರಾತಂಕವಾಗಿ ಬೆಳೆಯುತ್ತಿವೆ. ಕವಳೆ, ಸೀತಾಫಲ, ಬಿಕ್ಕೆ, ಕಾರೆ, ಬರಗಿ, ಬೆಳವಿ, ಹುಣಸೆ, ಹತ್ತಿ ಮುಂತಾದ ಹಣ್ಣಿನ ಮರಗಿಡಗಳು ಕಾಲಾನುಸಾರ ಹಣ್ಣು ಕೊಡುತ್ತಿವೆ. ಕರಡಿ, ಕಾಡುಹಂದಿ, ಚಿರತೆ, ನರಿ, ಮೊಲ, ತೋಳ ಮೊದಲಾದ ಪ್ರಾಣಿಗಳು, ನವಿಲು, ಬೆಳವ, ಕೋಗಿಲೆ, ಕೌಜುಗ, ಗಿಡುಗ, ಕಾಜಾಣ, ಚಿವುಟ ಗುಬ್ಬಿ ಮೊದಲಾದ ಪಕ್ಷಿಗಳು ಒಳಗೊಂಡಂತೆ ಒಂದು ಕುಟುಂಬದ ಸದಸ್ಯರಂತೆ ನಲಿದಾಡಿಕೊಂಡಿವೆ.

ಹೀಗೆ ಗೂಳೆಪ್ಪ ಕಾಡಿಗೆ ಅಂಟಿಕೊಂಡ ಕಥೆಯೂ ಕುತೂಹಲಕಾರಿಯಾಗಿದೆ. ಸರಿಸುಮಾರು 30 ವರ್ಷದ ಹಿಂದೆ ಅರಣ್ಯ ಇಲಾಖೆಯು ಕಾಡಿನಲ್ಲಿ ಸಸಿ ನೆಡುವ ಕೆಲಸಕ್ಕೆ ದಿನಗೂಲಿ ಲೆಕ್ಕದಲ್ಲಿ ಗೂಳೆಪ್ಪನನ್ನು ಒಳಗೊಂಡಂತೆ ಅನೇಕರನ್ನು ಕೆಲಸಕ್ಕೆ ಹಚ್ಚಿತು. ಹೀಗೆ ಎಲ್ಲರಂತೆ ಗೂಳೆಪ್ಪನೂ ಸಸಿ ನೆಡುತ್ತಾ ಕಾಡಿನ ನಂಟಿಗೆ ಬಿದ್ದ. ಕೆಲಸ ಕಡಿಮೆಯಾದಂತೆ ಇಲಾಖೆ ಕೆಲಸಗಾರರ ಸಂಖ್ಯೆಯನ್ನು ಕಡಿತಗೊಳಿಸುತ್ತಾ ಬಂತು. ನಂತರ ಮಳೆಗಾಲದ ಆರಂಭಕ್ಕಷ್ಟೇ ಒಂದೆರಡು ತಿಂಗಳುಗಳಿಗೆ ಈ ಕೆಲಸ ಸೀಮಿತವಾಯಿತು. ಬರುಬರುತ್ತಾ ನಿಂತೇ ಹೋಯಿತು. ಹೀಗಿರುವಾಗ ಗೂಳೆಪ್ಪನಿಗೆ ಕಾಡಿನ ನಂಟು ಅಷ್ಟೊತ್ತಿಗೆ ಗಟ್ಟಿಯಾಗಿತ್ತು. ಇಲಾಖೆಯವರು ಕೂಲಿ ಕೊಟ್ರೆಷ್ಟು ಬಿಟ್ರೆಷ್ಟು ಸಸಿ ನೆಡುತ್ತಾ ಕಾಡನ್ನ ಕಾಯ್ತೀನಿ ಎಂಬ ನಿರ್ಧಾರಕ್ಕೆ ಬಂದರು. ಈ ಮಧ್ಯೆ ಅರಣ್ಯ ಇಲಾಖೆಯು ನೇಮಿಸಿದ ಕಾಡಿನ ವಾಚರುಗಳು ತಮ್ಮ ಎಂದಿನ ಸಂಬಳಕ್ಕಾಗಿ ಡ್ಯೂಟಿ ಮಾಡುತ್ತಿದ್ದರೆ, ಗೂಳೆಪ್ಪ ಕೂಲಿಯೂ ಇಲ್ಲದೆ ಕಾಡು ಕಾಯುವುದನ್ನು ತನ್ನ ನಿತ್ಯದ ಕರ್ಮವನ್ನಾಗಿಸಿಕೊಂಡ.

ದಿನವೂ ಗೂಳೆಪ್ಪನ ದಿನಚರಿ ಶುರುವಾಗುವುದು ಬೆಳಗ್ಗೆ 5 ಗಂಟೆಗೆ. ಅಷ್ಟೊತ್ತಿಗೆ ಊಟ ಮಾಡಿ, ಬುತ್ತಿ ನೀರು ತಗೊಂದು ಕೈಲೊಂದು ಮಚ್ಚು ಕೋಲಿಡಿದು ಕಾಡಿಗೆ ಹೊರಟರೆ ಮತ್ತೆ ಬರುವುದು ಸಂಜೆ ಏಳರ ಹೊತ್ತಿಗೆ. ಇಂತಹ ದಿನಚರಿಯನ್ನು ಈಗ್ಗೆ 30 ವರ್ಷಗಳಿಂದ ಮಾಡುತ್ತಾ ಬಂದಿರುವುದೇ ಒಂದು ಅಪರೂಪದ ಸಂಗತಿಯಾಗಿದೆ. ಗೂಳೆಪ್ಪ ಕಾಡಿಗೆ ಹೋಗುವುದನ್ನು ನೋಡಿದರೆ ಸಾಕು ಯಾರೂ ಆ ಕಡೆ ಸುಳಿಯುವುದಿಲ್ಲ. ಮರ ಕಡಿಯುವುದಿರಲಿ ಆಡು ಕುರಿ ದನಕರು ಮೇಯಿಸುವುದೂ ಇಲ್ಲಿ ನಿಷಿದ್ಧ. ಕೆಲವೊಮ್ಮೆ ಈತನ ಕಣ್ತಪ್ಪಿಸಿ ಮರ ಕಡಿವ ಕೆಲವರನ್ನು ರೇಂಜರರಿಗೆ ಹಿಡಿದುಕೊಟ್ಟದ್ದಕ್ಕೆ ಗೂಳೆಪ್ಪ ಊರವರ ವಿರೋಧವನ್ನೂ ಎದುರಿಸಬೇಕಾಯಿತು. ಇದರಿಂದಾಗಿ ಸುತ್ತಮುತ್ತಣ ಊರವರ ಜತೆ ಸಣ್ಣಪುಟ್ಟ ಜಗಳಗಳೂ ಮನಸ್ತಾಪಗಳೂ ನಡೆದವು. ಇದೀಗ ಇಂತಹ ಯಾವ ಸಂಘರ್ಷಗಳೂ ನಡೆಯುವಂತಿಲ್ಲ. ಸುತ್ತಮುತ್ತಣ ಊರವರಿಗೆ ಗೂಳೆಪ್ಪನ ಬಗ್ಗೆ ಎಂಥದೋ ಪ್ರೀತಿಸ್ನೇಹದ ಬೆಸುಗೆ ಸಾಧ್ಯವಾಗಿದೆ.

ಗೂಳೆಪ್ಪನ ಮನದಲ್ಲಿ ಅವಿತು ಕುಳಿತು ಬಿಕ್ಕಳಿಸುವ ದುಃಖದ ಕಡಲೊಂದಿದೆ. ಅದು ಗೂಳೆಪ್ಪನನ್ನು ಇನ್ನಷ್ಟು ಗಟ್ಟಿಗೊಳಿಸಿದಂತಿದೆ. ಆರು ಜನ ಮಕ್ಕಳು ಚಿಕ್ಕವರಿರುವಾಗಲೆ ಮಡದಿ ಅಕಾಲಿಕ ಮರಣವನ್ನಪ್ಪುತ್ತಾಳೆ. ಮಡದಿಯ ಸಾವು ಗೂಳೆಪ್ಪನನ್ನು ಇನ್ನಿಲ್ಲದ ಕಷ್ಟಕ್ಕೆ ಸಿಲುಕಿಸುತ್ತದೆ. ಇಂತಹ ಕಡುಕಷ್ಟದಲ್ಲಿ ಗೂಳೆಪ್ಪ ಮಕ್ಕಳಿಗೆ ಅಡುಗೆ ಮಾಡಿಟ್ಟು, ಅವರನ್ನೆಲ್ಲಾ ಶಾಲೆಗೆ ಕಳಿಸಿ ಮತ್ತೆ ತನ್ನ ಕಾಡುಕಾಯುವ ಕಾಯಕಕ್ಕೆ ಹೋಗುತ್ತಿದ್ದರು. ಈ ಮಧ್ಯೆ ಮರುಮದುವೆಗೆ ಸಲಹೆಗಳು ಬಂದರೂ ಗೂಳೆಪ್ಪ ಅತ್ತ ಕಡೆ ಗಮನ ಹರಿಸಲಿಲ್ಲ. ಬಹುಶಃ ಕಾಡಿನ ಗಿಡ ಮರ ಬಳ್ಳಿಗಳ ಜತೆಗಿನ ಒಡನಾಟವೇ ಅವರ ಒಂಟಿತನವನ್ನು ನೀಗಿ ಜೀವನೋತ್ಸಾಹವನ್ನು ತುಂಬಿದಂತಿದೆ.

ಗೂಳೆಪ್ಪನ ಈತನಕದ ಅನುಭವದಲ್ಲಿ ಹತ್ತು ಜನ ರೇಂಜರುಗಳು ಬಂದುಹೋಗಿದ್ದಾರೆ. ಇದರಲ್ಲಿ ದಿದಿಗಿ ಸಾಹೇಬರು ಎನ್ನುವ ರೇಂಜರನ್ನು ಗೂಳೆಪ್ಪ ಪ್ರೀತಿಯಿಂದ ನೆನೆಯುತ್ತಾರೆ. ಅವರು ತುಂಬಾ ಸ್ಟ್ರಿಕ್ಟ್ ಆಫೀಸರ್ ಆಗಿದ್ದರು ಯಾವ ಪಿಳ್ಳೆ ನರಿಯೂ ಕಾಡನ್ನು ಪ್ರವೇಶ ಮಾಡುವಂತಿರಲಿಲ್ಲ ಎನ್ನುವುದು ಆತನ ಅಭಿಪ್ರಾಯ. ಹಾಗಾಗಿ ಇವರಿದ್ದಾಗ ಗೂಳೆಪ್ಪನಿಗೆ ಆನೆಯ ಬಲ ಬಂದಂತಾಗಿತ್ತು. ಈ ಸಂದರ್ಭದಲ್ಲಿಯೇ ಗೂಳೆಪ್ಪನ ದಿನಗೂಲಿಯು ಸಂಬಳವಾಗಿ ಪರಿವರ್ತನೆ ಹೊಂದಿತು. ಇದರಿಂದಾಗಿ ಇದೀಗ ಗೂಳೆಪ್ಪ ನಿಯಮಿತವಾಗಿ ಒಂದಷ್ಟು ಸಂಬಳವನ್ನು ಪಡೆಯುವಂತಾಗಿದೆ. ಗೂಳೆಪ್ಪ ಕಾಯುವ ಕಾಡು ಗುಡೆಕೋಟೆ ಕರಡಿಧಾಮದ ವ್ಯಾಪ್ತಿಗೆ ಬಂದಿದೆ. ಎಂದಿನಂತೆ ಕಾಡಿನ ಮರ ಗಿಡ ಬಳ್ಳಿ ಹಕ್ಕಿ ಕ್ರಿಮಿಕೀಟ ಪ್ರಾಣಿಗಳ ಜತೆ ಪಿಸುಮಾತನ್ನಾಡುತ್ತಾ ಗೂಳೆಪ್ಪ ಕಾಡು ಕಾಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.

  • ಅರುಣ್ ಜೋಳದ ಕೂಡ್ಲಿಗಿ

ಇದನ್ನೂ ಓದಿ: ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...