Homeಕರ್ನಾಟಕಸ್ಲಂ ನಲ್ಲಿ ಅರಳಿದ `ಭಾವೈಕ್ಯತಾ ವೇದಿಕೆ’

ಸ್ಲಂ ನಲ್ಲಿ ಅರಳಿದ `ಭಾವೈಕ್ಯತಾ ವೇದಿಕೆ’

ಅಬ್ದುಲ್ ಅವರ ಇಡೀ ಕುಟುಂಬವೇ ರಂಗಭೂಮಿಯಲ್ಲಿ ಸಕ್ರಿಯವಾಗಿದೆ. ಹೀಗೆ ಮುಸ್ಲೀಂ ಧರ್ಮದ ಒಂದು ಪಂಗಡವಾದ ಪಿಂಜಾರ ಸಮುದಾಯದ ಇಡೀ ಕುಟುಂಬವೇ ರಂಗದ ಮೇಲೆ ಕಾಣಿಸಿಕೊಳ್ಳುವುದು ಕೂಡ ವಿಶಿಷ್ಠ ಸಂಗತಿಯಾಗಿದೆ.

- Advertisement -
- Advertisement -

| ಅರುಣ್ ಜೋಳದಕೂಡ್ಲಿಗಿ |

ಹೊಸಪೇಟೆಯ ಸಿದ್ಧಲಿಂಗಪ್ಪ ಚೌಕಿಯ 2ನೇ ಕ್ರಾಸ್ ಕೊನೆಯ ಅರಳಿ ಮರದ ಹತ್ತಿರವಿರುವ `ಭಾವೈಕ್ಯತಾ ವೇದಿಕೆ’ಯ ಸಂತ ಶಿಶುನಾಳ ಶರೀಫ ರಂಗಮಂದಿರವಿದೆ. ಇಂಥದ್ದೊಂದು ಕೊಳಗೇರಿಯಲ್ಲಿ ಅರಳಿದ `ಭಾವೈಕ್ಯತಾ ವೇದಿಕೆ’ ರೂಪುಗೊಂಡದ್ದು ಹೇಗೆ ಎನ್ನುವ ಪ್ರಶ್ನೆಯನ್ನು ಮುಂದಿಟ್ಟುಕೊಂಡರೆ, ವೇದಿಕೆಯನ್ನು ರೂಪಿಸುವಲ್ಲಿ ತನ್ನನ್ನೇ ತೇಯ್ದುಕೊಂಡ ಪಿ.ಅಬ್ದುಲ್ ಅವರು ತಮ್ಮದೇ ಆತ್ಮಕಥನದ ಮುಖ್ಯ ಎಳೆ ಎಂಬಂತೆ `ಪಯಣ’ ದ ಹೆಜ್ಜೆಗಳನ್ನು ವಿವರಿಸುತ್ತಾರೆ. ಇದು ವೇದಿಕೆಯ ಆತ್ಮಕಥನದಂತೆಯೂ ಕೇಳಿಸತೊಡಗುತ್ತದೆ.

ಅಬ್ದುಲ್ ಅವರು `ಪಿಂಜಾರ’ ಸಮುದಾಯದವರು. ಹತ್ತಿಯನ್ನು ಹದಗೊಳಿಸಿ ದಿಂಬು, ಗಾದಿಯನ್ನು ಹೊಲೆಯುವ `ಪಿಂಜಾರ’ ಸಮುದಾಯ ಮೂಲತಃ ಧಾರ್ಮಿಕ ಸಂಕರತೆಯ ಸೃಷ್ಠಿ. ಅಂತೆಯೇ ಇವರು ಹಿಂದೂಮುಸ್ಲಿಂ ಬೆಸುಗೆಯ ಸಾಂಸ್ಕೃತಿಕ ವಕ್ತಾರರಂತೆ ಕಾಣುತ್ತಾರೆ. ಹಾಗಾಗಿ ಮುಸ್ಲಿಂ ಧರ್ಮದಲ್ಲಿ ಪಿಂಜಾರರು ಒಂದು ಬಗೆಯಲ್ಲಿ ಅಸ್ಪೃಶ್ಯರು. ಮೂಲತಃ ಎರಡು ಸಂಗತಿಗಳನ್ನು ಹೊಲೆದು ಜೋಡಿಸುವ ಈ ಸಮುದಾಯ ಎರಡು ಧರ್ಮಗಳ ಜನರನ್ನು `ಬಂದುತ್ವ’ `ಸಾಮರಸ್ಯ’ದ ನೆಲೆಯಲ್ಲಿ ಹೊಲೆಯುವ ಕೆಲಸವನ್ನೂ ಮಾಡುತ್ತಿದೆ. ಈ ಬಗೆಯ ಸಮುದಾಯಿಕ ಪ್ರಜ್ಞೆಯ ಉತ್ಪನ್ನವಾಗಿಯೂ `ಭಾವೈಕ್ಯತಾ ವೇದಿಕೆ’ ರೂಪುಗೊಂಡಿದೆ.

ಉತ್ತಮ ಪರಿಸರದ ಭಾಗವಾಗಿ ಅಬ್ದುಲ್ ಅವರ ಬಾಲ್ಯ ರೂಪುಗೊಂಡಿತು. ಆಗಲೆ ಅವರ ಒಳಗೊಂದು ಸೌಹಾರ್ಧದ ಕನಸಿನ ಕೂಸು ಮೊಳಕೆಯೊಡೆಯಿತು. ರಂಗಭೂಮಿಯ ಜತೆಗಿನ ನಂಟು ಗಾಢವಾಯಿತು, ಹೋರಾಟದ ಪ್ರಾಥಮಿಕ ಪಾಠವೆಂಬಂತೆ ಗೋಕಾಕ್ ಚಳವಳಿಯಲ್ಲಿ ಉಪವಾಸ ಕೈಗೊಂಡು ಜೈಲುವಾಸವನ್ನೂ ಅನುಭವಿಸಿದರು. ಹೀಗೆ ಅಬ್ದುಲ್ ಅವರಿಗೆ ಪ್ರೇರಕ ಶಕ್ತಿಯಾಗಿದ್ದ ಹೆಚ್.ಇಬ್ರಾಹಿಂ ಸಾಹೇಬರು ಆಗಸ್ಟ್ 1, 2014 ರಲ್ಲಿ ದೇಹತ್ಯಜಿಸಿದರು. ಆ ಹೊತ್ತಿಗೆ ಅವರ ಸೌಹಾರ್ಧದ ಕನಸು ಭಾವೈಕ್ಯತಾ ವೇದಿಕೆ 23 ವರ್ಷ ಪೂರೈಸಿ ಬೆಳ್ಳಿಹಬ್ಬದತ್ತ ಹೆಜ್ಜೆ ಇಟ್ಟಿತ್ತು.

ಇಬ್ರಾಹಿಂ ಸಾಹೇಬ್ರು

ಹೀಗೆ ಅಬ್ದುಲ್ ಅವರು ಇಂತಹ ಸಾಂಸ್ಕೃತಿಕ ವಾತಾವರಣದಲ್ಲಿ ಬೆಳೆದು, ಪದವಿವರೆಗೂ ಓದಿ ಕ್ರಾಂತಿಯ ಕನಸೊತ್ತು, ಸಮಾಜವನ್ನು ಬದಲಿಸಬೇಕೆಂಬ ಉತ್ಸಾಹದಲ್ಲಿ ತಾನು ಹುಟ್ಟಿದ ಇದೇ ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿಗೆ ವಾಪಾಸಾದರು. ಮಹಿಳೆಯರ ಕಳ್ಳ ಸಾಗಣೆ ವಿರುದ್ಧ ಸಮುದಾಯದವರು ಹೇಳಿದ ದೂರನ್ನು ದಾಖಲಿಸಿದ್ದಕ್ಕೆ ಹಲ್ಲೆಗೆ ಒಳಗಾದರು, ಊರು ಬಿಟ್ಟು ಓಡಿದರು. ಸುಳ್ಳು ಕೇಸುಗಳ ಜಾಲದಲ್ಲಿ ಸಿಲುಕಿ ಕೆಲಕಾಲ ತಲೆಮರೆಸಿಕೊಂಡರು, ಇಷ್ಟಾಗಿಯೂ ಇದೇ ಚೌಕಿಯಲ್ಲಿ ಏನನ್ನಾದರೂ ಮಾಡಬೇಕೆಂದು ಪಣತೊಟ್ಟರು.

1991 ರಲ್ಲಿ ಹೊಸಪೇಟೆ ಭಾಗದಲ್ಲಿ ನಡೆದ ಕೋಮುಗಲಬೆಯಿಂದಾಗಿ ಇಡೀ ನಗರ ಮತ್ತು ಸುತ್ತಮುತ್ತಣ ಹಳ್ಳಿಗಳಲ್ಲಿ ಆತಂಕದ ಛಾಯೆಯಿತ್ತು. ಸೌಹಾರ್ಧದಿಂದ ಬದುಕುವ ಜನಬದುಕಿನಲ್ಲಿ ದೊಡ್ಡದೊಂದು ಗಾಯವಾಗಿ ನೋಯತೊಡಗಿತ್ತು. ಇಂತಹದ್ದೊಂದು ಗಾಯಕ್ಕೆ ಮುಲಾಮು ಹುಡುಕುವ ಯೋಚನೆ ಅಬ್ದುಲ್ ಅವರನ್ನು ನಿದ್ದೆಗೆಡಿಸಿತು. ಫಲವಾಗಿ ಹೊಸಪೇಟೆಯ ಜಂಬಯ್ಯ ನಾಯಕ, ನಾರಾಯಣ ಭಟ್, ಕಲ್ಲಂಭಟ್, ಪರುಷರಾಮ ಕಲಾಲ್ ಮೊದಲಾದವರು ಸೇರಿ ಚರ್ಚಿಸಿದರು. ಹಿಂದು ಮುಸ್ಲಿಂ ಸೌಹಾರ್ಧತೆಯ ಕುರುಹಾದ ಮೊಹರಂ ಹಾಡುಗಳ ಸ್ಪರ್ಧೆಯನ್ನು ಆಯೋಜಿಸಿದರು. ಈ ಸಮಾವೇಶಕ್ಕೆ ಹೆಸರಿಡುವ ಚರ್ಚೆ ಬಂದಾಗ ಜಂಬಯ್ಯನಾಯಕ ಸೂಚಿಸಿದ `ಭಾವೈಕ್ಯತೆ’ ಎನ್ನುವ ಹೆಸರು ಅಂತಿಮವಾಯ್ತು. ಮುಂದೆ ಅದೇ ಹೆಸರಿನ ವೇದಿಕೆಯೊಂದು ರೂಪುಗೊಂಡಿತು. ಅಬ್ದುಲ್ ವೇದಿಕೆಯ ಖಜಾಂಚಿಯಾದರು. ಇದೀಗ ಇಪ್ಪತ್ತೇಳರ ಹರೆಯದಲ್ಲಿ ವೇದಿಕೆ ತನ್ನದೇ ಆದ ಛಾಪು ಮೂಡಿಸುತ್ತಿದೆ.

ಒಮ್ಮೆ ಚೌಕಿಯಲ್ಲಿ ಹೆಣ್ಣೊಬ್ಬಳ ಅಸಹಜ ಸಾವು ಕೊಲೆಯಾಗಿರಬಹುದೆಂಬ ಪಿಸುಮಾತುಗಳು ಧ್ವನಿಗೂಡಿದಾಗ, ಈ ಘಟನೆ ಅಬ್ದುಲ್ರನ್ನು ಕಾಡುತ್ತದೆ. ಕೂಡಲೆ ತಮ್ಮ ಓಣಿಯ ಹುಡುಗರಿಂದ ಜಾಗೃತಿ ಮೂಡಿಸಲು ಬೀದಿ ನಾಟಕ ರೂಪಿಸುತ್ತಾರೆ. ಅದು ಮನೆಯಿಂದ ಮನೆಗೆ ಹಬ್ಬುತ್ತದೆ. `ಈ ಸಾವು ನ್ಯಾಯವೇ? ಎನ್ನುವ ಪ್ರತಿಧ್ವನಿಯನ್ನು ಮೂಡಿಸುತ್ತದೆ. ಪರಿಣಾಮವಾಗಿ ಇಡೀ ಚೌಕಿಯಲ್ಲಿ ಮಹಿಳೆಯ ಸಾವಿನ ಬಗ್ಗೆ ತಳೆದಿದ್ದ ಮೌನದ ಕಟ್ಟೊಡೆದು, ಪೊಲೀಸರಿಗೆ ದೂರು ಕೊಡಲು ಜನರು ಮುಂದಾಗುತ್ತಾರೆ. ಈ ಪ್ರಯೋಗ ಹೆಣ್ಣಿನ ದಾರುಣ ಅಂತ್ಯಕ್ಕೆ ಹೋರಾಟದ ಆಯಾಮ ನೀಡುತ್ತದೆ. ಈ ಘಟನೆಯೇ ಭಾವೈಕ್ಯತಾ ವೇದಿಕೆಯ ಬಹುಮುಖ್ಯ ಸಂವಹನದ ಗುರುತಾಗಿ `ಬೀದಿನಾಟಕ’ ಮುನ್ನಲೆಗೆ ಬರುತ್ತದೆ.

ಪಿ. ಅಬ್ದುಲ್ಲಾ

ಈತನಕದ ವೇದಿಕೆಯ ಪಯಣದಲ್ಲಿ ಅಭಿನಯಗೊಂಡ ಬೀದಿ ನಾಟಕಗಳ ಸಂಖ್ಯೆ ದೊಡ್ಡದಿದೆ. ಮುಖ್ಯವಾದ ಸಂಗತಿಯೆಂದರೆ ಈ ಯಾವುದೇ ನಾಟಕಗಳು ಕಲೆಗಾಗಿ ಕಲೆ ಎನ್ನುವಂತೆ ಹುಟ್ಟಿದವುಗಳಲ್ಲ. ಬದಲಾಗಿ ಆಯಾ ಕಾಲದ ಬಿಕ್ಕಟ್ಟಿನ ಹೊಟ್ಟೆಯೊಡೆದು ಜೀವತಳೆದವುಗಳು. ಅವುಗಳೆಂದರೆ, ವಿಸರ್ಜನೆ, ಹುಡುಗಿ ಓದಲೇಬೇಕು, `ಕಾಲರಾ’ `ನಾವು ಮನುಜರು’ `ಈ ನೆಲ-ಈ ಜಲ’ `ಅರಿವು’ `ಜೀತಪದ್ದತಿ’ `ಭಾವೈಕ್ಯತೆ’ `ಚುನಾವಣೆ’ `ಏಡ್ಸ್’ `ಫಲ್ಸ್ ಫೋಲಿಯೋ’ `ಓ ಮತದಾರ ಪ್ರಭುವೆ’ `ಕೂಡಿ ಬಾಳೋಣ’ `ಮಗಳು ಮಾತನಾಡಿದಳು’ `ಅಲ್ಲೆ ಇದ್ದೋರು’ `ದೌಡ್ ಗಾಂಧಿ ದೌಡ್’ `ವಿಶ್ವರೂಪ ದರ್ಶನ’ ಹೀಗೆ ಸಾಮಾಜಿಕ ಸಮಸ್ಯೆಗಳಿಗೆ ನಾಟಕದ ಸ್ವರೂಪ ನೀಡಿ ಅದನ್ನು ಬೀದಿಗೆ ತಂದು ಜನರೆದುರು ಅಭಿನಯಿಸಿ ಗೆದ್ದಿದ್ದಾರೆ.

ವೇದಿಕೆಯ ಮುಖ್ಯವಾದ ಅಭಿವ್ಯಕ್ತಿ ಬೀದಿನಾಟಕವಾದರೂ, ರಂಗದಲ್ಲಿ ವಿಶಿಷ್ಠ ಗಮನಾರ್ಹ ನಾಟಕಗಳ ಪ್ರಯೋಗಗಳನ್ನೂ ಮಾಡಿದೆ. ಕುವೆಂಪು ಅವರ `ಧನ್ವಂತರಿ ಚಿಕಿತ್ಸೆ’ ಸಪ್ದಾರ್ ಹಷ್ಮಿಯ `ಕೆಂಪು ಹೂ’ ಲಂಕೇಶರ `ಮುಟ್ಟಿಸಿಕೊಂಡವರು’ ದೇವನೂರು ಮಹಾದೇವ ಅವರ `ಡಾಂಬರು ಬಂದುದು’ ಪರುಶುರಾಮ ಕಲಾಲರ `ಅಕ್ಕ’, ದ.ರಾ. ಬೇಂದ್ರೆಯವರ `ಕುಣಿಯೋಣ ಬಾರಾ’ ರೂಪಕ, ವಿಜ್ಞಾನಿ ಗೆಲಿಲಿಯೋ ಜೀವನ ಆಧಾರಿತ ನಾಟಕ ಹೀಗೆ ಇಂತಹ ಪ್ರಯೋಗಾತ್ಮಕ ನಾಟಕಗಳ ಪಟ್ಟಿಯೂ ದೊಡ್ಡದಿದೆ. ಇದಕ್ಕೆ ಮುಖ್ಯ ಕಾರಣ ಕರ್ನಾಟಕದ ರಂಗಭೂಮಿಯ ಬಹುಮುಖ್ಯರ ಜತೆಗಿನ ಒಡನಾಟ. ಬಿ.ವಿ.ಕಾರಂತ, ಸಿಜಿಕೆ, ಮದೇನೂರು ಸಂಗಣ್ಣ, ಬಸವರಾಜ ಮಲಶೆಟ್ಟಿ, ಸಿ.ಬಸವಲಿಂಗಯ್ಯ, ಶಶಿಧರ ಅಡಪ, ಪ್ರಸನ್ನ, ಮರಿಯಮ್ಮನಹಳ್ಳಿ ಕೆ. ನಾಗರತ್ನಮ್ಮ, ವಿಜಯಾ ಮೊದಲಾದ ರಂಗಕರ್ಮಿಗಳ ಒಡನಾಟವನ್ನು ಪಡೆದಿದೆ. ಅವರೆಲ್ಲರ ಸಲಹೆ ಸೂಚನೆಗಳಿಗೂ ವೇದಿಕೆ ಕಿವಿಗೊಟ್ಟಿದೆ.

ಇದನ್ನು ಓದಿ: 20ನೆ ಶತಮಾನದ ಭಾರತದ ಮುಸ್ಲಿಂ ಮಹಿಳೆಯರ ಅನನ್ಯ ಸಾಧನೆಗಳು

ಅಂತೆಯೇ ನಾನಾಸಂ, ಶಿವಸಂಚಾರ, ರಂಗಾಯಣ ಮುಂತಾದ ನಾಟಕ ಸಂಸ್ಥೆಗಳ ಜತೆಗೂ ಅನೋನ್ಯ ಸಂಬಂಧವಿಟ್ಟುಕೊಂಡಿದೆ. ಭಾವೈಕ್ಯತಾ ವೇದಿಕೆಯ ಮತ್ತೊಂದು ಮುಖ್ಯ ಗುರುತೆಂದರೆ, ಮಕ್ಕಳ ರಂಗಭೂಮಿ. ಮಕ್ಕಳ ಮನೋವಿಕಾಸವನ್ನು ರೂಪಿಸುವ ಮೂಲಕ ಅವರನ್ನು ಆರೋಗ್ಯಕರ ಪ್ರಜೆಯನ್ನಾಗಿಸುವ ಗುರುತರವಾದ ಜವಾಬ್ದಾರಿಯನ್ನು ವೇದಿಕೆ ಸದಾ ನಿರ್ವಹಿಸಿಕೊಂಡು ಬಂದಿದೆ. ಅರ್ಧಕ್ಕೆ ಓದು ನಿಲ್ಲಿಸಿದ ಬಡವರ ಮನೆ ಮಕ್ಕಳು, ಚಿಂದಿ ಆಯುವ ಮಕ್ಕಳು, ಜಾತಿ, ಧರ್ಮದ ಭೇದ ತೊರೆದ ಮಕ್ಕಳಿವರು. ಅವರೆಲ್ಲ ಕೊಳಗೇರಿಯಲ್ಲಿ ಅರಳಿದ ಹೂವಿನಂಥವರು. ಸ್ಕೂಲಿಗೆ ಹೋಗಲು ಪಡಿಪಾಟಲು ಪಡುವಂಥಹ ಈ ಮಕ್ಕಳಿಗೆ ವೇದಿಕೆ ತಾಯಿಯಾಗಿ ಸಾಂತ್ವಾನ ನೀಡುತ್ತದೆ. ಅವರನ್ನೆಲ್ಲ ಕಿನ್ನರಲೋಕಕ್ಕೆ ಕರೆದೊಯ್ದು ಬದುಕಿನ ಕಷ್ಟಗಳನ್ನು ಕೆಲದಿನಗಳಾದರೂ ಮರೆಸುತ್ತದೆ.

ಅಬ್ದುಲ್ ಅವರ ಜತೆ ನಿಂತು ಭಾವೈಕ್ಯತಾ ವೇದಿಕೆಯನ್ನು ರೂಪಿಸಿದವರು ಹಲವರು. ಆರಂಭಕ್ಕೆ ಜಂಬಯ್ಯ ನಾಯಕ, ಕಲ್ಲಂಭಟ್ಟ, ಪರುಶುರಾಮ ಕಲಾಲ ಮೊದಲಾದ ಹಿರಿಯ ಸಂಗಾತಿಗಳು ಜೊತೆಯಾದರೆ, ನಂತರದಲ್ಲಿ ಕಿರಿಯರು ಮಕ್ಕಳು ವೇದಿಕೆಯ ಭಾಗವಾಗತೊಡಗಿದರು. ಕೆಲವೊಮ್ಮೆ ಅಬ್ದುಲ್ ಅವರ ಇಡೀ ಕುಟುಂಬವೇ ರಂಗಭೂಮಿಯಲ್ಲಿ ಸಕ್ರಿಯವಾಗಿದೆ. ಹೀಗೆ ಮುಸ್ಲೀಂ ಧರ್ಮದ ಒಂದು ಪಂಗಡವಾದ ಪಿಂಜಾರ ಸಮುದಾಯದ ಇಡೀ ಕುಟುಂಬವೇ ರಂಗದ ಮೇಲೆ ಕಾಣಿಸಿಕೊಳ್ಳುವುದು ಕೂಡ ವಿಶಿಷ್ಠ ಸಂಗತಿಯಾಗಿದೆ.
ಹೀಗೆ ಬಿಸಿಲನಾಡು ಬಳ್ಳಾರಿಯಲ್ಲಿ ಬೆಳದಿಂಗಳಂತೆ ರೂಪುಗೊಂಡ ಭಾವೈಕ್ಯತಾ ವೇದಿಕೆ. ಹತ್ತಾರು ಹೊಸ ಸಾಧ್ಯತೆಗಳಿಗೆ ಸಾಕ್ಷಿಯಾಗಿದೆ. ಅಂತೆಯೇ ರಂಗಭೂಮಿಯನ್ನು ಜನಸಾಮಾನ್ಯರ ಕಡುಕಷ್ಟಗಳ ಒಳಗಿಂದಲೂ ತರಬಹುದೆಂಬ ಆತ್ಮವಿಶ್ವಾಸವನ್ನು ಮೂಡಿಸಿದೆ. ಕೋಮು ಸೌಹಾರ್ಧತೆಯನ್ನು ತರುವ ಕಾಣಕ್ಕೆ ಹುಟ್ಟಿಕೊಂಡ ಈ ವೇದಿಕೆ ಮತ್ತೆ ಸೌಹಾರ್ಧ ಕದಡುತ್ತಿರುವ ಈ ಹೊತ್ತಲ್ಲಿ ಮೂಲ ಆಶಯಕ್ಕೆ ಮರಳಬೇಕಿದೆ. ಅಂತೆಯೇ ರಂಗಭೂಮಿಯ ಮೇಲೆ ಸೌಹಾರ್ಧದ ಕಥನಗಳಿಗೆ ಜೀವತುಂಬಬೇಕಿದೆ. ದಣಿವರಿಯದ ರಂಗಕರ್ಮಿ ಪಿ.ಅಬ್ದುಲ್ ಅವರ ಕನಸಿನ ಈ ವೇದಿಕೆ ಮತ್ತಷ್ಟು ರೆಕ್ಕೆಗಳನ್ನು ಹೊಂದಿ ಹಾರಬೇಕಿದೆ. ಜನಪದ ರಂಗಭೂಮಿಗೆ ಹೊಸ ಚೈತನ್ಯ ತುಂಬುವ ಪ್ರಯೋಗಶೀಲತೆಗೂ ಮತ್ತಷ್ಟು ತನ್ನನ್ನು ತೆರೆದುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...