Homeಚಳವಳಿಪೌರತ್ವ ವಿರೋಧಿ ಹೋರಾಟ: ಪೊಲೀಸರಿಂದ ಲಾಠಿಚಾರ್ಜ್‌, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ ಬಂಧನ

ಪೌರತ್ವ ವಿರೋಧಿ ಹೋರಾಟ: ಪೊಲೀಸರಿಂದ ಲಾಠಿಚಾರ್ಜ್‌, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ ಬಂಧನ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರೋಧಿಸಿ ದೆಹಲಿಯ ಜಮಾ ಮಸೀದಿಯಲ್ಲಿ ನಿನ್ನೆ ನಡೆದ ಬೃಹತ್‌ ನಿರಂತರ ಹೋರಾಟ ಈಗ ಛಿದ್ರಗೊಂಡಿದೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠೀ ಚಾರ್ಜ್‌ ಮಾಡಿ ನೇತೃತ್ವ ವಹಿಸಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ರವರನ್ನು ಬಂಧಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಚಂದ್ರಶೇಖರ್‌ ಅಜಾದ್‌ರೊಂದಿಗೆ 40 ಜನರನ್ನು ಬಂಧಿಸಿದ್ದು ಅದರಲ್ಲಿ ಎಳೆಯ ಹುಡುಗರು ಸಹ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ನಮಾಜ್‌ನ ನಂತರ ಜಮಾ ಮಸೀದಿಯಿಂದ ಜಂತರ್ ಮಂತರ್ ಕಡೆಗೆ ಮೆರವಣಿಗೆ ಹೊರಟ ಪ್ರತಿಭಟನಾಕಾರರನ್ನು ದೆಹಲಿ ಗೇಟ್ ಬಳಿ ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ತಡೆದರು. ಇದೇ ಸಮಯದಲ್ಲಿ ದರಿಯಗಂಜ್‌ನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಘಟನೆ ಜರುಗಿದೆ. ತದನಂತರ ಪ್ರತಿಭಟನೆ ಹಿಂಸಾತ್ಮಕವಾಯಿತು, ಇದರಿಂದಾಗಿ ಪೊಲೀಸರು ಲಾಠಿ ಚಾರ್ಜ್ ಮತ್ತು ನೀರಿನ ಫಿರಂಗಿಗಳನ್ನು ಸಿಡಿಸಿದ್ದಾರೆ.

ದೆಹಲಿ ಮಾತ್ರವಲ್ಲದೇ, ಉತ್ತರ ಪ್ರದೇಶ ಸೇರಿದಂತೆ ದೇಶದ ಅನೇಕ ಪಕ್ಷಗಳಲ್ಲಿ ಪ್ರತಿಭಟನೆ ಅಬಾಧಿತವಾಗಿ ಮುಂದುವರೆದಿದ್ದು, ಹಿಂಸಾಚಾರದಲ್ಲಿ ಶುಕ್ರವಾರ ಆರು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ.

“ಕಾಯ್ದೆಯನ್ನು ವಾಪಸ್‌ ಪಡೆಯುವಂತೆ ಮಾಡಲು ನಾವು ಯಾವ ತ್ಯಾಗಕ್ಕೂ ಸಿದ್ದರಾಗಿದ್ದೇವೆ. ಆದರೆ ನಾವೆಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ. ನಾವು ಶುಕ್ರವಾರ ಬೆಳಿಗ್ಗೆಯಿಂದ ಮಸೀದಿಯೊಳಗೆ ಕುಳಿತಿದ್ದೆವು. ಹಾಗಾಗಿ ನಮ್ಮ ಜನರು ಹಿಂಸಾಚಾರದಲ್ಲಿ ಭಾಗಿಯಾಗಿಲ್ಲ. ಪೊಲೀಸರು ಅನಾವಶ್ಯಕವಾಗಿ ನಮ್ಮನ್ನು ಬಂಧಿಸಿದ್ದಾರೆ” ಎಂದು ಆಜಾದ್ ಹೇಳಿದ್ದಾರೆ.

ಆದರೆ ಪೊಲೀಸರು ಪ್ರತಿಭಟನಾಕಾರರು ದರಿಯಗಂಜ್‌ನ ಸುಭಾಷ್ ಮಾರ್ಗದಲ್ಲಿ ನಿಲ್ಲಿಸಿದ್ದ ಖಾಸಗಿ ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದ್ದಾರೆ. ಕಲ್ಲು ತೂರಾಟ ಮತ್ತು ಪೊಲೀಸ್ ಕ್ರಮದಲ್ಲಿ ಕನಿಷ್ಠ 46 ಜನರು ಗಾಯಗೊಂಡಿದ್ದಾರೆ.

ಪೊಲೀಸ್ ಅಂದಾಜಿನ ಪ್ರಕಾರ ಸಂಜೆ 5 ಗಂಟೆಗೆ ಪ್ರತಿಭಟನಾಕಾರರ ಸಂಖ್ಯೆ ಸುಮಾರು 15,000 ಕ್ಕೆ ಏರಿತು ಮತ್ತು ಅವರು ಬ್ಯಾರಿಕೇಡ್‌ಗಳನ್ನು ಅನ್ನು ಮುರಿಯಲು ಪ್ರಾರಂಭಿಸಿದರು ಎಂದಿದ್ದರೆ. ಪೊಲೀಸ್ ವಕ್ತಾರ ಎಂ.ಎಸ್. ರಾಂಧವಾ ಮಾತನಾಡಿ, ಭದ್ರತಾ ಸಿಬ್ಬಂದಿ ಮೊದಲು ಜನಸಮೂಹವನ್ನು ಚದುರಿಸಲು ನೀರಿನ ಫಿರಂಗಿಗಳನ್ನು ಉಡಾಯಿಸಿದರು ಮತ್ತು ಆನಂತರ ಆಂದೋಲನಕಾರರು ಖಾಸಗಿ ವಾಹನವನ್ನು ಸುಟ್ಟು, ಕಲ್ಲುಗಳನ್ನು ಹೊಡೆಯಲು ಪ್ರಾರಂಭಿಸಿದರು ಎಂದಿದ್ದಾರೆ.

ಆದಾಗ್ಯೂ, ಈ ಪ್ರದೇಶದ ಕೆಲವು ಸ್ಥಳೀಯ ಜನರು ಪೊಲೀಸರ ಪ್ರತಿಕ್ರಿಯೆ ಅಸಮರ್ಪಕ ಮತ್ತು ವಿವೇಚನೆಯಿಂದ ಕೂಡಿರಲಿಲ್ಲ. ಹಿಂಸೆಗೆ ಪೊಲೀಸರೆ ಕಾರಣ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...