Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಆರೋಪಿಗಳ ಡಿವೈಸ್‌ಗಳಿಗೆ ಪೊಲೀಸರಿಂದಲೇ ನಕಲಿ ದಾಖಲೆ ವರ್ಗಾವಣೆ!?

ಭೀಮಾ ಕೋರೆಗಾಂವ್ ಪ್ರಕರಣ: ಆರೋಪಿಗಳ ಡಿವೈಸ್‌ಗಳಿಗೆ ಪೊಲೀಸರಿಂದಲೇ ನಕಲಿ ದಾಖಲೆ ವರ್ಗಾವಣೆ!?

ರೋನಾ ವಿಲ್ಸನ್, ವರವರ ರಾವ್ ಮತ್ತು ಹನಿ ಬಾಬು ಅವರ ಎಲೆಕ್ಟ್ರಾನಿಕ್‌ ಡಿವೈಸ್‌ಗಳಿಗೆ ಪೊಲೀಸರೇ ನಕಲಿ ದಾಖಲೆಗಳನ್ನು ತುರುಕಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮ ‘ವೈರ್ಡ್ ಮ್ಯಾಗಜೀನ್’ ವರದಿ ಮಾಡಿದೆ.

- Advertisement -
- Advertisement -

ಹೋರಾಟಗಾರರಾದ ರೋನಾ ವಿಲ್ಸನ್, ವರವರ ರಾವ್ ಮತ್ತು ಹನಿ ಬಾಬು ಅವರಿಗೆ ಸೇರಿದ ಎಲೆಕ್ಟ್ರಾನಿಕ್ ಸಾಧನಗಳನ್ನು ಹ್ಯಾಕ್ ಮಾಡಿದ ಪುಣೆ ಪೊಲೀಸರು, ಅವುಗಳಲ್ಲಿ ನಕಲಿ ಪುರಾವೆಗಳನ್ನು ಹಾಕಿದ್ದಾರೆ ಎಂದು ಯುಎಸ್ ಮೂಲದ ಸೈಬರ್ ಸೆಕ್ಯುರಿಟಿ ಕಂಪನಿಯೊಂದು ಹೇಳಿರುವುದಾಗಿ ಅಮೆರಿಕ ಮೂಲದ ‘ವೈರ್ಡ್ ಮ್ಯಾಗಜೀನ್’ ವರದಿ ಮಾಡಿದೆ.

2018ರ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಚು ರೂಪಿಸಿದ ಆರೋಪವನ್ನು ವಿಲ್ಸನ್, ರಾವ್ ಮತ್ತು ಬಾಬು ಅವರ ಮೇಲೆ ಹೊರಿಸಲಾಗಿದೆ.

ಈ ಹೋರಾಟಗಾರರನ್ನು ಬಂಧಿಸಿದ ವ್ಯಕ್ತಿಗಳಿಗೂ, ನಕಲಿ ಪುರಾವೆಗಳನ್ನು ವಾಮಮಾರ್ಗದಲ್ಲಿ ಎಲೆಕ್ಟ್ರಾನಿಕ್‌ ಡಿವೈಸ್‌ಗಳಿಗೆ ಹಾಕಿದ ವ್ಯಕ್ತಿಗಳಿಗೂ ಸಂಬಂಧವಿದೆ ಎಂದು ಸೈಬರ್‌ ಸೆಕ್ಯುರಿಟಿ ಸಂಸ್ಥೆ ಸೆಂಟಿನೆಲ್‌ಒನ್‌ನ ಭದ್ರತಾ ಸಂಶೋಧಕ ಜುವಾನ್ ಆಂಡ್ರೆಸ್ ಗೆರೆರೊ-ಸಾಡೆ ಅವರು ‘ದಿ ವೈರ್ಡ್‌’ಗೆ ತಿಳಿಸಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ವಕೀಲರು, ಹೋರಾಟಗಾರರು ಸೇರಿದಂತೆ 16 ಮಂದಿಯನ್ನು ಪುಣೆ ಪೊಲೀಸರು ಬಂಧಿಸಿದ್ದರು.

ಯುನೈಟೆಡ್ ಸ್ಟೇಟ್ಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯಾದ ಆರ್ಸೆನಲ್ ಕನ್ಸಲ್ಟಿಂಗ್, ಫೆಬ್ರವರಿ 2021ರಲ್ಲಿ ಆತಂಕಕಾರಿ ಸಂಗತಿಯೊಂದನ್ನು ಹೊರಗೆಡವಿತ್ತು. ವಿಲ್ಸನ್ ಅವರ ಲ್ಯಾಪ್‌ಟಾಪ್‌ಗೆ ನುಸುಳಲು ಹ್ಯಾಕರ್‌ಗಳು ಮಾಲ್‌ವೇರ್ ಬಳಸಿದ್ದಾರೆ. ಕನಿಷ್ಠ 10 ದೋಷಾರೋಪಣೆ ಪತ್ರಗಳನ್ನು ಡಿವೈಸ್‌ನಲ್ಲಿ ಇರಿಸಿದ್ದಾರೆ ಎಂದು ವರದಿ ಹೇಳಿತ್ತು.

ಬಂದೂಕು ಮತ್ತು ಮದ್ದುಗುಂಡುಗಳ ಅಗತ್ಯವನ್ನು ಚರ್ಚಿಸಿ ನಿಷೇಧಿತ ಮಾವೋವಾದಿ ಉಗ್ರಗಾಮಿ ಗುಂಪಿಗೆ ಉದ್ದೇಶಿಸಿ ಬರೆದ ಪತ್ರ, ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ವಿವರಗಳೂ ಈ ದಾಖಲೆಗಳಲ್ಲಿ ಇದ್ದವು.

ಜೂನ್ 2018ರಲ್ಲಿ ಬಂಧಿಸುವ ಮೊದಲು ವಿಲ್ಸನ್ ಅವರನ್ನು ಎರಡು ಪ್ರತ್ಯೇಕ ಹ್ಯಾಕರ್‌ಗಳ ಗುಂಪುಗಳು ಟಾರ್ಗೆಟ್ ಮಾಡಿಕೊಂಡಿದ್ದವು ಎಂದು ಸೆಂಟಿನೆಲ್ ಒನ್ ಹೇಳಿಕೊಂಡಿದೆ.

ಸೆಂಟಿನೆಲ್ ಒನ್ ಪ್ರಕಾರ, ಹ್ಯಾಕಿಂಗ್ ನಡೆಸಿದ ಗುಂಪುಗಳಲ್ಲಿ ಒಂದಾದ ModifiedElephant (ಮಾಡಿಫೈಯ್ಡ್‌‌ ಎಲಿಫೆಂಟ್‌) ವಿಲ್ಸನ್ ಅವರ ಎಲೆಕ್ಟ್ರಾನಿಕ್‌ ಸಾಧನಗಳಲ್ಲಿ ನಕಲಿ ದಾಖಲೆಗಳನ್ನು ತುರುಕಿದೆ. ಇನ್ನೊಂದು ಗುಂಪನ್ನು ಸೈಬರ್‌ ಸೆಕ್ಯುರಿಟಿ ಸಂಸ್ಥೆಯು ‘ಸೈಡ್‌ವಿಂಡರ್‌’ ಎಂದು ಗುರುತಿಸಿರುವುದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ದಾಳಿಯನ್ನು ಯಾರು ನಡೆಸಿದರು ಅಥವಾ ದಾಳಿ ನಡೆಸಲು ಯಾರು ಆದೇಶಿಸಿದರು ಎಂದು ಸೆಂಟಿನೆಲ್ ಒನ್ ಸಂಸ್ಥೆ ಹೇಳಿಲ್ಲ. ಆದರೆ ಮಾಡಿಫೈಯ್ಡ್‌‌ ಎಲಿಫೆಂಟ್‌ ಗುಂಪಿನ ಚಟುವಟಿಕೆಯು ಭಾರತ ಸರ್ಕಾರದೊಂದಿಗೆ ಹಿಸಾಸಕ್ತಿ ಹೊಂದಿರುವಂತೆ ಕಾಣುತ್ತಿರುವುದಾಗಿ ತನಿಖೆ ಬಹಿರಂಗಪಡಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿರುವ ಪುಣೆ ಪೊಲೀಸ್ ಅಧಿಕಾರಿಯೊಬ್ಬರು  ಹ್ಯಾಕಿಂಗ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಸೆಂಟಿನೆಲ್ ಒನ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...