Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಆರೋಪಿಗಳ ಡಿವೈಸ್‌ಗಳಿಗೆ ಪೊಲೀಸರಿಂದಲೇ ನಕಲಿ ದಾಖಲೆ ವರ್ಗಾವಣೆ!?

ಭೀಮಾ ಕೋರೆಗಾಂವ್ ಪ್ರಕರಣ: ಆರೋಪಿಗಳ ಡಿವೈಸ್‌ಗಳಿಗೆ ಪೊಲೀಸರಿಂದಲೇ ನಕಲಿ ದಾಖಲೆ ವರ್ಗಾವಣೆ!?

ರೋನಾ ವಿಲ್ಸನ್, ವರವರ ರಾವ್ ಮತ್ತು ಹನಿ ಬಾಬು ಅವರ ಎಲೆಕ್ಟ್ರಾನಿಕ್‌ ಡಿವೈಸ್‌ಗಳಿಗೆ ಪೊಲೀಸರೇ ನಕಲಿ ದಾಖಲೆಗಳನ್ನು ತುರುಕಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮ ‘ವೈರ್ಡ್ ಮ್ಯಾಗಜೀನ್’ ವರದಿ ಮಾಡಿದೆ.

- Advertisement -
- Advertisement -

ಹೋರಾಟಗಾರರಾದ ರೋನಾ ವಿಲ್ಸನ್, ವರವರ ರಾವ್ ಮತ್ತು ಹನಿ ಬಾಬು ಅವರಿಗೆ ಸೇರಿದ ಎಲೆಕ್ಟ್ರಾನಿಕ್ ಸಾಧನಗಳನ್ನು ಹ್ಯಾಕ್ ಮಾಡಿದ ಪುಣೆ ಪೊಲೀಸರು, ಅವುಗಳಲ್ಲಿ ನಕಲಿ ಪುರಾವೆಗಳನ್ನು ಹಾಕಿದ್ದಾರೆ ಎಂದು ಯುಎಸ್ ಮೂಲದ ಸೈಬರ್ ಸೆಕ್ಯುರಿಟಿ ಕಂಪನಿಯೊಂದು ಹೇಳಿರುವುದಾಗಿ ಅಮೆರಿಕ ಮೂಲದ ‘ವೈರ್ಡ್ ಮ್ಯಾಗಜೀನ್’ ವರದಿ ಮಾಡಿದೆ.

2018ರ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಚು ರೂಪಿಸಿದ ಆರೋಪವನ್ನು ವಿಲ್ಸನ್, ರಾವ್ ಮತ್ತು ಬಾಬು ಅವರ ಮೇಲೆ ಹೊರಿಸಲಾಗಿದೆ.

ಈ ಹೋರಾಟಗಾರರನ್ನು ಬಂಧಿಸಿದ ವ್ಯಕ್ತಿಗಳಿಗೂ, ನಕಲಿ ಪುರಾವೆಗಳನ್ನು ವಾಮಮಾರ್ಗದಲ್ಲಿ ಎಲೆಕ್ಟ್ರಾನಿಕ್‌ ಡಿವೈಸ್‌ಗಳಿಗೆ ಹಾಕಿದ ವ್ಯಕ್ತಿಗಳಿಗೂ ಸಂಬಂಧವಿದೆ ಎಂದು ಸೈಬರ್‌ ಸೆಕ್ಯುರಿಟಿ ಸಂಸ್ಥೆ ಸೆಂಟಿನೆಲ್‌ಒನ್‌ನ ಭದ್ರತಾ ಸಂಶೋಧಕ ಜುವಾನ್ ಆಂಡ್ರೆಸ್ ಗೆರೆರೊ-ಸಾಡೆ ಅವರು ‘ದಿ ವೈರ್ಡ್‌’ಗೆ ತಿಳಿಸಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ವಕೀಲರು, ಹೋರಾಟಗಾರರು ಸೇರಿದಂತೆ 16 ಮಂದಿಯನ್ನು ಪುಣೆ ಪೊಲೀಸರು ಬಂಧಿಸಿದ್ದರು.

ಯುನೈಟೆಡ್ ಸ್ಟೇಟ್ಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯಾದ ಆರ್ಸೆನಲ್ ಕನ್ಸಲ್ಟಿಂಗ್, ಫೆಬ್ರವರಿ 2021ರಲ್ಲಿ ಆತಂಕಕಾರಿ ಸಂಗತಿಯೊಂದನ್ನು ಹೊರಗೆಡವಿತ್ತು. ವಿಲ್ಸನ್ ಅವರ ಲ್ಯಾಪ್‌ಟಾಪ್‌ಗೆ ನುಸುಳಲು ಹ್ಯಾಕರ್‌ಗಳು ಮಾಲ್‌ವೇರ್ ಬಳಸಿದ್ದಾರೆ. ಕನಿಷ್ಠ 10 ದೋಷಾರೋಪಣೆ ಪತ್ರಗಳನ್ನು ಡಿವೈಸ್‌ನಲ್ಲಿ ಇರಿಸಿದ್ದಾರೆ ಎಂದು ವರದಿ ಹೇಳಿತ್ತು.

ಬಂದೂಕು ಮತ್ತು ಮದ್ದುಗುಂಡುಗಳ ಅಗತ್ಯವನ್ನು ಚರ್ಚಿಸಿ ನಿಷೇಧಿತ ಮಾವೋವಾದಿ ಉಗ್ರಗಾಮಿ ಗುಂಪಿಗೆ ಉದ್ದೇಶಿಸಿ ಬರೆದ ಪತ್ರ, ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ವಿವರಗಳೂ ಈ ದಾಖಲೆಗಳಲ್ಲಿ ಇದ್ದವು.

ಜೂನ್ 2018ರಲ್ಲಿ ಬಂಧಿಸುವ ಮೊದಲು ವಿಲ್ಸನ್ ಅವರನ್ನು ಎರಡು ಪ್ರತ್ಯೇಕ ಹ್ಯಾಕರ್‌ಗಳ ಗುಂಪುಗಳು ಟಾರ್ಗೆಟ್ ಮಾಡಿಕೊಂಡಿದ್ದವು ಎಂದು ಸೆಂಟಿನೆಲ್ ಒನ್ ಹೇಳಿಕೊಂಡಿದೆ.

ಸೆಂಟಿನೆಲ್ ಒನ್ ಪ್ರಕಾರ, ಹ್ಯಾಕಿಂಗ್ ನಡೆಸಿದ ಗುಂಪುಗಳಲ್ಲಿ ಒಂದಾದ ModifiedElephant (ಮಾಡಿಫೈಯ್ಡ್‌‌ ಎಲಿಫೆಂಟ್‌) ವಿಲ್ಸನ್ ಅವರ ಎಲೆಕ್ಟ್ರಾನಿಕ್‌ ಸಾಧನಗಳಲ್ಲಿ ನಕಲಿ ದಾಖಲೆಗಳನ್ನು ತುರುಕಿದೆ. ಇನ್ನೊಂದು ಗುಂಪನ್ನು ಸೈಬರ್‌ ಸೆಕ್ಯುರಿಟಿ ಸಂಸ್ಥೆಯು ‘ಸೈಡ್‌ವಿಂಡರ್‌’ ಎಂದು ಗುರುತಿಸಿರುವುದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ದಾಳಿಯನ್ನು ಯಾರು ನಡೆಸಿದರು ಅಥವಾ ದಾಳಿ ನಡೆಸಲು ಯಾರು ಆದೇಶಿಸಿದರು ಎಂದು ಸೆಂಟಿನೆಲ್ ಒನ್ ಸಂಸ್ಥೆ ಹೇಳಿಲ್ಲ. ಆದರೆ ಮಾಡಿಫೈಯ್ಡ್‌‌ ಎಲಿಫೆಂಟ್‌ ಗುಂಪಿನ ಚಟುವಟಿಕೆಯು ಭಾರತ ಸರ್ಕಾರದೊಂದಿಗೆ ಹಿಸಾಸಕ್ತಿ ಹೊಂದಿರುವಂತೆ ಕಾಣುತ್ತಿರುವುದಾಗಿ ತನಿಖೆ ಬಹಿರಂಗಪಡಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿರುವ ಪುಣೆ ಪೊಲೀಸ್ ಅಧಿಕಾರಿಯೊಬ್ಬರು  ಹ್ಯಾಕಿಂಗ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಸೆಂಟಿನೆಲ್ ಒನ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...