Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಆರೋಪಿಗಳ ಡಿವೈಸ್‌ಗಳಿಗೆ ಪೊಲೀಸರಿಂದಲೇ ನಕಲಿ ದಾಖಲೆ ವರ್ಗಾವಣೆ!?

ಭೀಮಾ ಕೋರೆಗಾಂವ್ ಪ್ರಕರಣ: ಆರೋಪಿಗಳ ಡಿವೈಸ್‌ಗಳಿಗೆ ಪೊಲೀಸರಿಂದಲೇ ನಕಲಿ ದಾಖಲೆ ವರ್ಗಾವಣೆ!?

ರೋನಾ ವಿಲ್ಸನ್, ವರವರ ರಾವ್ ಮತ್ತು ಹನಿ ಬಾಬು ಅವರ ಎಲೆಕ್ಟ್ರಾನಿಕ್‌ ಡಿವೈಸ್‌ಗಳಿಗೆ ಪೊಲೀಸರೇ ನಕಲಿ ದಾಖಲೆಗಳನ್ನು ತುರುಕಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮ ‘ವೈರ್ಡ್ ಮ್ಯಾಗಜೀನ್’ ವರದಿ ಮಾಡಿದೆ.

- Advertisement -
- Advertisement -

ಹೋರಾಟಗಾರರಾದ ರೋನಾ ವಿಲ್ಸನ್, ವರವರ ರಾವ್ ಮತ್ತು ಹನಿ ಬಾಬು ಅವರಿಗೆ ಸೇರಿದ ಎಲೆಕ್ಟ್ರಾನಿಕ್ ಸಾಧನಗಳನ್ನು ಹ್ಯಾಕ್ ಮಾಡಿದ ಪುಣೆ ಪೊಲೀಸರು, ಅವುಗಳಲ್ಲಿ ನಕಲಿ ಪುರಾವೆಗಳನ್ನು ಹಾಕಿದ್ದಾರೆ ಎಂದು ಯುಎಸ್ ಮೂಲದ ಸೈಬರ್ ಸೆಕ್ಯುರಿಟಿ ಕಂಪನಿಯೊಂದು ಹೇಳಿರುವುದಾಗಿ ಅಮೆರಿಕ ಮೂಲದ ‘ವೈರ್ಡ್ ಮ್ಯಾಗಜೀನ್’ ವರದಿ ಮಾಡಿದೆ.

2018ರ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಚು ರೂಪಿಸಿದ ಆರೋಪವನ್ನು ವಿಲ್ಸನ್, ರಾವ್ ಮತ್ತು ಬಾಬು ಅವರ ಮೇಲೆ ಹೊರಿಸಲಾಗಿದೆ.

ಈ ಹೋರಾಟಗಾರರನ್ನು ಬಂಧಿಸಿದ ವ್ಯಕ್ತಿಗಳಿಗೂ, ನಕಲಿ ಪುರಾವೆಗಳನ್ನು ವಾಮಮಾರ್ಗದಲ್ಲಿ ಎಲೆಕ್ಟ್ರಾನಿಕ್‌ ಡಿವೈಸ್‌ಗಳಿಗೆ ಹಾಕಿದ ವ್ಯಕ್ತಿಗಳಿಗೂ ಸಂಬಂಧವಿದೆ ಎಂದು ಸೈಬರ್‌ ಸೆಕ್ಯುರಿಟಿ ಸಂಸ್ಥೆ ಸೆಂಟಿನೆಲ್‌ಒನ್‌ನ ಭದ್ರತಾ ಸಂಶೋಧಕ ಜುವಾನ್ ಆಂಡ್ರೆಸ್ ಗೆರೆರೊ-ಸಾಡೆ ಅವರು ‘ದಿ ವೈರ್ಡ್‌’ಗೆ ತಿಳಿಸಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ವಕೀಲರು, ಹೋರಾಟಗಾರರು ಸೇರಿದಂತೆ 16 ಮಂದಿಯನ್ನು ಪುಣೆ ಪೊಲೀಸರು ಬಂಧಿಸಿದ್ದರು.

ಯುನೈಟೆಡ್ ಸ್ಟೇಟ್ಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯಾದ ಆರ್ಸೆನಲ್ ಕನ್ಸಲ್ಟಿಂಗ್, ಫೆಬ್ರವರಿ 2021ರಲ್ಲಿ ಆತಂಕಕಾರಿ ಸಂಗತಿಯೊಂದನ್ನು ಹೊರಗೆಡವಿತ್ತು. ವಿಲ್ಸನ್ ಅವರ ಲ್ಯಾಪ್‌ಟಾಪ್‌ಗೆ ನುಸುಳಲು ಹ್ಯಾಕರ್‌ಗಳು ಮಾಲ್‌ವೇರ್ ಬಳಸಿದ್ದಾರೆ. ಕನಿಷ್ಠ 10 ದೋಷಾರೋಪಣೆ ಪತ್ರಗಳನ್ನು ಡಿವೈಸ್‌ನಲ್ಲಿ ಇರಿಸಿದ್ದಾರೆ ಎಂದು ವರದಿ ಹೇಳಿತ್ತು.

ಬಂದೂಕು ಮತ್ತು ಮದ್ದುಗುಂಡುಗಳ ಅಗತ್ಯವನ್ನು ಚರ್ಚಿಸಿ ನಿಷೇಧಿತ ಮಾವೋವಾದಿ ಉಗ್ರಗಾಮಿ ಗುಂಪಿಗೆ ಉದ್ದೇಶಿಸಿ ಬರೆದ ಪತ್ರ, ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ವಿವರಗಳೂ ಈ ದಾಖಲೆಗಳಲ್ಲಿ ಇದ್ದವು.

ಜೂನ್ 2018ರಲ್ಲಿ ಬಂಧಿಸುವ ಮೊದಲು ವಿಲ್ಸನ್ ಅವರನ್ನು ಎರಡು ಪ್ರತ್ಯೇಕ ಹ್ಯಾಕರ್‌ಗಳ ಗುಂಪುಗಳು ಟಾರ್ಗೆಟ್ ಮಾಡಿಕೊಂಡಿದ್ದವು ಎಂದು ಸೆಂಟಿನೆಲ್ ಒನ್ ಹೇಳಿಕೊಂಡಿದೆ.

ಸೆಂಟಿನೆಲ್ ಒನ್ ಪ್ರಕಾರ, ಹ್ಯಾಕಿಂಗ್ ನಡೆಸಿದ ಗುಂಪುಗಳಲ್ಲಿ ಒಂದಾದ ModifiedElephant (ಮಾಡಿಫೈಯ್ಡ್‌‌ ಎಲಿಫೆಂಟ್‌) ವಿಲ್ಸನ್ ಅವರ ಎಲೆಕ್ಟ್ರಾನಿಕ್‌ ಸಾಧನಗಳಲ್ಲಿ ನಕಲಿ ದಾಖಲೆಗಳನ್ನು ತುರುಕಿದೆ. ಇನ್ನೊಂದು ಗುಂಪನ್ನು ಸೈಬರ್‌ ಸೆಕ್ಯುರಿಟಿ ಸಂಸ್ಥೆಯು ‘ಸೈಡ್‌ವಿಂಡರ್‌’ ಎಂದು ಗುರುತಿಸಿರುವುದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ದಾಳಿಯನ್ನು ಯಾರು ನಡೆಸಿದರು ಅಥವಾ ದಾಳಿ ನಡೆಸಲು ಯಾರು ಆದೇಶಿಸಿದರು ಎಂದು ಸೆಂಟಿನೆಲ್ ಒನ್ ಸಂಸ್ಥೆ ಹೇಳಿಲ್ಲ. ಆದರೆ ಮಾಡಿಫೈಯ್ಡ್‌‌ ಎಲಿಫೆಂಟ್‌ ಗುಂಪಿನ ಚಟುವಟಿಕೆಯು ಭಾರತ ಸರ್ಕಾರದೊಂದಿಗೆ ಹಿಸಾಸಕ್ತಿ ಹೊಂದಿರುವಂತೆ ಕಾಣುತ್ತಿರುವುದಾಗಿ ತನಿಖೆ ಬಹಿರಂಗಪಡಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿರುವ ಪುಣೆ ಪೊಲೀಸ್ ಅಧಿಕಾರಿಯೊಬ್ಬರು  ಹ್ಯಾಕಿಂಗ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಸೆಂಟಿನೆಲ್ ಒನ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...