Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

ಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

- Advertisement -
- Advertisement -

2018 ರಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಫಾದರ್ ಸ್ಟಾನ್ ಸ್ವಾಮಿ ಅವರಿಗೆ ಜಾಮೀನು ನೀಡಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ವಿಶೇಷ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.

2018 ರಲ್ಲಿ ಭೀಮಾ ಕೋರೆಗಾಂವ್‌ನಲ್ಲಿ ಗಲಭೆಗಳನ್ನು ಪ್ರಚೋದಿಸುವಲ್ಲಿ ಪಾತ್ರವಹಿಸಿದ ಆರೋಪದ ಮೇಲೆ ಸ್ವಾಮಿ ಅವರನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಾಲೋಜ ಜೈಲಿನಲ್ಲಿರಿಸಲಾಯಿತು. 83 ವರ್ಷದ ರಾಂಚಿ ನಿವಾಸಿ ಸ್ವಾಮಿ ಕಳೆದ ಐದು ತಿಂಗಳಿನಿಂದ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ.

ಎನ್‌ಐಎ ಸ್ವಾಮಿಯವರನ್ನು ಅಕ್ಟೋಬರ್ 7 ರಂದು ರಾಂಚಿಯಲ್ಲಿ ಬಂಧಿಸಿ, ಮರುದಿನ ಮುಂಬೈಗೆ ಕರೆತಂದು ಅವರು ಮತ್ತು ಇತರ ಏಳು ಜನರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸ್ವಾಮಿ ಅವರು ಪ್ರಕರಣದ ಅರ್ಹತೆಗಳ ಜೊತೆಗೆ ಪ್ರಾಥಮಿಕವಾಗಿ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿದ್ದರು.

ತನ್ನ ಜಾಮೀನು ಅರ್ಜಿಯಲ್ಲಿ, ಸ್ವಾಮಿ ತನ್ನ ಬಂಧನವು ಅಸಮರ್ಪಕವಾಗಿದೆ ಮತ್ತು ದೊಷಪೂರಿತವಾಗಿದೆ ಎಂದು ಹೇಳಿದ್ದರು. ಎಫ್‌ಐಆರ್ ದಾಖಲಾದ ಎರಡು ವರ್ಷಗಳ ನಂತರವೂ ಬಂಧನ ಮಾಡಿರಲಿಲ್ಲ. ಅವರು ವಿದೇಶಕ್ಕೆ ಪರಾರಿಯಾಗಬಲ್ಲರು ಅಥವಾ ಸಾಕ್ಷಾಧಾರಗಳನ್ನು ಹಾಳುಮಾಡುವ ವ್ಯಕ್ತಿಯೆಂದು ಪರಿಗಣಿಸಲಾಗಿಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

ಈ ಹಿರಿಯ ನಾಗರಿಕರರಾದ ಸ್ಟಾನ್ ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅವರ ವಕೀಲ ಷರೀಫ್ ಶೇಖ್ ವರದಿ ಸಲ್ಲಿಸಿದರು ಮತ್ತು ಆರೋಗ್ಯ ಕಾರಣಗಳಿಂದಾಗಿ ಅವರನ್ನು ಜೈಲು ಆಸ್ಪತ್ರೆಗೆ ವರ್ಗಾಯಿಸಬೇಕಾಯಿತು ಎಂಬುದನ್ನು ಎತ್ತಿ ತೋರಿಸಿದರು.

ನವೆಂಬರ್‌ನಲ್ಲಿ ಅವರ ವಕೀಲ ಷರೀಫ್ ಶೇಖ್ ಅವರ ಮೂಲಕ ಸಲ್ಲಿಸಲಾದ 31 ಪುಟಗಳ ಜಾಮೀನು ಅರ್ಜಿಯಲ್ಲಿ, ಭಾರತದಲ್ಲಿ ಸ್ವಾಮಿ ಅವರು ಕೈಗೊಂಡ ಜಾತಿ ಮತ್ತು ಭೂ ಹೋರಾಟಗಳು, ಆದಿವಾಸಿಗಳ ಹೋರಾಟಗಳು ಹಾಗೂ ಅವರ ಬರಹಗಳ ಕಾರಣದಿಂದ ತನಿಖಾ ಸಂಸ್ಥೆ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ತಿಳಿಸಿತ್ತು.

ಸ್ವಾಮಿಯವರ ಸಂಘಟನೆ ಪರ್‌ಸುಕ್ಯುಟೆಡ್ ಪ್ರಿಸರ್ಸ್‌ ಸಾಲಿಡೆಟರಿ ಕಮೀಟಿ (ಪಿಪಿಎಸ್‌ಸಿ) ಜೊತೆಗೆ ವಿವಿದ ಶೋಷಿತ ಜನರು ಕಾನೂನು ನೆರವು ಪಡೆಯಲು ನಡೆಸಿದ ಪತ್ರ ವ್ಯವಹಾರಗಳೇ ಪುರಾವೆಗಳು ಎಂದು ಎನ್‌ಐಎ ಹೇಳಿಕೊಂಡಿದೆ. ಪಿಪಿಎಸ್‌ಸಿ ಸಂಘಟನೆಯು ಮಾವೋವಾದಿಗಳೆಂದು ಸುಳ್ಳು ಆರೋಪ ಹೊರಿಸಿರುವ ವಿಚಾರಣಾಧೀನ ಆದಿವಾಸಿಗಳು ಮತ್ತು ದಲಿತರಿಗಾಗಿ ಕೆಲಸ ಮಾಡುತ್ತದೆ ಎಂದು ವಕೀಲರು ವಿವರಿಸಿದ್ದರು.

ಸ್ವಾಮಿ ಅವರ ನಿವಾಸದಲ್ಲಿ ಎರಡು ದಾಳಿಗಳನ್ನು ನಡೆಸಿದ ನಂತರ ಏನೂ ಕಂಡುಬಂದಿಲ್ಲ. ವಾಸ್ತವವಾಗಿ, ಬಾಂಬೆ ಹೈಕೋರ್ಟ್‌ನಲ್ಲಿ ಸ್ವಾಮಿ ಸಲ್ಲಿಸಿದ್ದ ಮನವಿಯಲ್ಲಿ ಪುಣೆ ಪೊಲೀಸರು ದಾಖಲೆಯಲ್ಲಿ “ಅವರು ಆರೋಪಿಯಲ್ಲದ ಕಾರಣ ಅವರನ್ನು ಬಂಧಿಸುವ ಉದ್ದೇಶವಿರಲಿಲ್ಲ” ಎಂದು ಹೇಳಿದ್ದಾರೆ.

ಸ್ವಾಮಿ ವಿರುದ್ಧ ದಾಖಲಾದ ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ವಾಮಿಯವರು ನಿಷೇಧಿತ ಸಂಘಟನೆಯ ಸಿಪಿಐ (ಮಾವೋವಾದಿ) ಸದಸ್ಯರೆಂದು ಅಪಾದಿಸಿದ್ದು, ಪಕ್ಷದ ಅನೇಕ ಸದಸ್ಯರ ಬಂಧನದ ನಂತರ ಅದರ ಚಟುವಟಿಕೆಗಳನ್ನು ಹರಡುವ ಜವಾಬ್ದಾರಿಯನ್ನು ಅವನಿಗೆ ನೀಡಲಾಗಿತ್ತು ಎಂದೂ ಆರೋಪ ಮಾಡಿದೆ. ಸ್ವಾಮಿ ವಿಸ್ತಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನಂತಹ ಸಿಪಿಐ (ಮಾವೋವಾದಿಗಳ) ಬೆಂಬಲಿತ ಸಂಘಟನೆಗಳ ತೀವ್ರ ಬೆಂಬಲಿಗರಾಗಿದ್ದರು ಎಂದು ಆರೋಪ ಮಾಡಲಾಗಿದೆ.

ಜಾರ್ಖಂಡ್‌ನಲ್ಲಿ ಎನ್‌ಜಿಒ ನಡೆಸುತ್ತಿರುವ ಸ್ವಾಮಿ, ತಮ್ಮ ಲ್ಯಾಪ್‌ಟಾಪ್‌ನಲ್ಲಿ ಕಂಡುಬರುವ ಪುರಾವೆಗಳನ್ನು “ಸುಲಭವಾಗಿ ಕುಶಲತೆಯಿಂದ ಸೇರಿಸಬಹುದು” ಎಂದು ವಿವರಿಸಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.

ಡಿಸೆಂಬರ್ 31, 2017 ರಂದು ಎಲ್ಗರ್ ಪರಿಷತ್ ಕಾರ್ಯಕ್ರಮದ ಸಂಘಟನೆಯೊಂದಿಗೆ ಅವರು ಎಲ್ಲಿಯೂ ಸಂಪರ್ಕ ಹೊಂದಿಲ್ಲ ಎಂದು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ ಇತರರ ಬಂಧನವನ್ನು ಖಂಡಿಸಿ ಸ್ವಾಮಿ ಸಭೆಗಳನ್ನು ನಡೆಸುತ್ತಿದ್ದುದು ಕಂಡುಬಂದಿದೆ ಎಂದು ಎನ್‌ಐಎ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಶೆಟ್ಟಿ ಮೂಲಕ ತಿಳಿಸಿತ್ತು ಮತ್ತು ಅವರ ಎನ್‌ಜಿಒ ವಿದೇಶಿ ಹಣವನ್ನು ಪಡೆದಿರುವುದಕ್ಕೆ ಪುರಾವೆಗಳಿವೆ ಎಂದು ಆರೋಪಿಸಿತ್ತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ನೇಮಕಗೊಂಡ ಉನ್ನತ ಸಮಿತಿಯು ಕೊವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಜೈಲುಗಳಲ್ಲಿ ಸಂದಣಿಯನ್ನು ನಿಯಂತ್ರಿಸಲು ಶಿಫಾರಸು ಮಾಡಿದ್ದ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಸ್ವಾಮಿ ಮಧ್ಯಂತರ ಜಾಮೀನು ಕೋರಿದ್ದರು.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...