Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

ಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

- Advertisement -
- Advertisement -

2018 ರಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಫಾದರ್ ಸ್ಟಾನ್ ಸ್ವಾಮಿ ಅವರಿಗೆ ಜಾಮೀನು ನೀಡಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ವಿಶೇಷ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.

2018 ರಲ್ಲಿ ಭೀಮಾ ಕೋರೆಗಾಂವ್‌ನಲ್ಲಿ ಗಲಭೆಗಳನ್ನು ಪ್ರಚೋದಿಸುವಲ್ಲಿ ಪಾತ್ರವಹಿಸಿದ ಆರೋಪದ ಮೇಲೆ ಸ್ವಾಮಿ ಅವರನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಾಲೋಜ ಜೈಲಿನಲ್ಲಿರಿಸಲಾಯಿತು. 83 ವರ್ಷದ ರಾಂಚಿ ನಿವಾಸಿ ಸ್ವಾಮಿ ಕಳೆದ ಐದು ತಿಂಗಳಿನಿಂದ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ.

ಎನ್‌ಐಎ ಸ್ವಾಮಿಯವರನ್ನು ಅಕ್ಟೋಬರ್ 7 ರಂದು ರಾಂಚಿಯಲ್ಲಿ ಬಂಧಿಸಿ, ಮರುದಿನ ಮುಂಬೈಗೆ ಕರೆತಂದು ಅವರು ಮತ್ತು ಇತರ ಏಳು ಜನರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸ್ವಾಮಿ ಅವರು ಪ್ರಕರಣದ ಅರ್ಹತೆಗಳ ಜೊತೆಗೆ ಪ್ರಾಥಮಿಕವಾಗಿ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿದ್ದರು.

ತನ್ನ ಜಾಮೀನು ಅರ್ಜಿಯಲ್ಲಿ, ಸ್ವಾಮಿ ತನ್ನ ಬಂಧನವು ಅಸಮರ್ಪಕವಾಗಿದೆ ಮತ್ತು ದೊಷಪೂರಿತವಾಗಿದೆ ಎಂದು ಹೇಳಿದ್ದರು. ಎಫ್‌ಐಆರ್ ದಾಖಲಾದ ಎರಡು ವರ್ಷಗಳ ನಂತರವೂ ಬಂಧನ ಮಾಡಿರಲಿಲ್ಲ. ಅವರು ವಿದೇಶಕ್ಕೆ ಪರಾರಿಯಾಗಬಲ್ಲರು ಅಥವಾ ಸಾಕ್ಷಾಧಾರಗಳನ್ನು ಹಾಳುಮಾಡುವ ವ್ಯಕ್ತಿಯೆಂದು ಪರಿಗಣಿಸಲಾಗಿಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

ಈ ಹಿರಿಯ ನಾಗರಿಕರರಾದ ಸ್ಟಾನ್ ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅವರ ವಕೀಲ ಷರೀಫ್ ಶೇಖ್ ವರದಿ ಸಲ್ಲಿಸಿದರು ಮತ್ತು ಆರೋಗ್ಯ ಕಾರಣಗಳಿಂದಾಗಿ ಅವರನ್ನು ಜೈಲು ಆಸ್ಪತ್ರೆಗೆ ವರ್ಗಾಯಿಸಬೇಕಾಯಿತು ಎಂಬುದನ್ನು ಎತ್ತಿ ತೋರಿಸಿದರು.

ನವೆಂಬರ್‌ನಲ್ಲಿ ಅವರ ವಕೀಲ ಷರೀಫ್ ಶೇಖ್ ಅವರ ಮೂಲಕ ಸಲ್ಲಿಸಲಾದ 31 ಪುಟಗಳ ಜಾಮೀನು ಅರ್ಜಿಯಲ್ಲಿ, ಭಾರತದಲ್ಲಿ ಸ್ವಾಮಿ ಅವರು ಕೈಗೊಂಡ ಜಾತಿ ಮತ್ತು ಭೂ ಹೋರಾಟಗಳು, ಆದಿವಾಸಿಗಳ ಹೋರಾಟಗಳು ಹಾಗೂ ಅವರ ಬರಹಗಳ ಕಾರಣದಿಂದ ತನಿಖಾ ಸಂಸ್ಥೆ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ತಿಳಿಸಿತ್ತು.

ಸ್ವಾಮಿಯವರ ಸಂಘಟನೆ ಪರ್‌ಸುಕ್ಯುಟೆಡ್ ಪ್ರಿಸರ್ಸ್‌ ಸಾಲಿಡೆಟರಿ ಕಮೀಟಿ (ಪಿಪಿಎಸ್‌ಸಿ) ಜೊತೆಗೆ ವಿವಿದ ಶೋಷಿತ ಜನರು ಕಾನೂನು ನೆರವು ಪಡೆಯಲು ನಡೆಸಿದ ಪತ್ರ ವ್ಯವಹಾರಗಳೇ ಪುರಾವೆಗಳು ಎಂದು ಎನ್‌ಐಎ ಹೇಳಿಕೊಂಡಿದೆ. ಪಿಪಿಎಸ್‌ಸಿ ಸಂಘಟನೆಯು ಮಾವೋವಾದಿಗಳೆಂದು ಸುಳ್ಳು ಆರೋಪ ಹೊರಿಸಿರುವ ವಿಚಾರಣಾಧೀನ ಆದಿವಾಸಿಗಳು ಮತ್ತು ದಲಿತರಿಗಾಗಿ ಕೆಲಸ ಮಾಡುತ್ತದೆ ಎಂದು ವಕೀಲರು ವಿವರಿಸಿದ್ದರು.

ಸ್ವಾಮಿ ಅವರ ನಿವಾಸದಲ್ಲಿ ಎರಡು ದಾಳಿಗಳನ್ನು ನಡೆಸಿದ ನಂತರ ಏನೂ ಕಂಡುಬಂದಿಲ್ಲ. ವಾಸ್ತವವಾಗಿ, ಬಾಂಬೆ ಹೈಕೋರ್ಟ್‌ನಲ್ಲಿ ಸ್ವಾಮಿ ಸಲ್ಲಿಸಿದ್ದ ಮನವಿಯಲ್ಲಿ ಪುಣೆ ಪೊಲೀಸರು ದಾಖಲೆಯಲ್ಲಿ “ಅವರು ಆರೋಪಿಯಲ್ಲದ ಕಾರಣ ಅವರನ್ನು ಬಂಧಿಸುವ ಉದ್ದೇಶವಿರಲಿಲ್ಲ” ಎಂದು ಹೇಳಿದ್ದಾರೆ.

ಸ್ವಾಮಿ ವಿರುದ್ಧ ದಾಖಲಾದ ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ವಾಮಿಯವರು ನಿಷೇಧಿತ ಸಂಘಟನೆಯ ಸಿಪಿಐ (ಮಾವೋವಾದಿ) ಸದಸ್ಯರೆಂದು ಅಪಾದಿಸಿದ್ದು, ಪಕ್ಷದ ಅನೇಕ ಸದಸ್ಯರ ಬಂಧನದ ನಂತರ ಅದರ ಚಟುವಟಿಕೆಗಳನ್ನು ಹರಡುವ ಜವಾಬ್ದಾರಿಯನ್ನು ಅವನಿಗೆ ನೀಡಲಾಗಿತ್ತು ಎಂದೂ ಆರೋಪ ಮಾಡಿದೆ. ಸ್ವಾಮಿ ವಿಸ್ತಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನಂತಹ ಸಿಪಿಐ (ಮಾವೋವಾದಿಗಳ) ಬೆಂಬಲಿತ ಸಂಘಟನೆಗಳ ತೀವ್ರ ಬೆಂಬಲಿಗರಾಗಿದ್ದರು ಎಂದು ಆರೋಪ ಮಾಡಲಾಗಿದೆ.

ಜಾರ್ಖಂಡ್‌ನಲ್ಲಿ ಎನ್‌ಜಿಒ ನಡೆಸುತ್ತಿರುವ ಸ್ವಾಮಿ, ತಮ್ಮ ಲ್ಯಾಪ್‌ಟಾಪ್‌ನಲ್ಲಿ ಕಂಡುಬರುವ ಪುರಾವೆಗಳನ್ನು “ಸುಲಭವಾಗಿ ಕುಶಲತೆಯಿಂದ ಸೇರಿಸಬಹುದು” ಎಂದು ವಿವರಿಸಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.

ಡಿಸೆಂಬರ್ 31, 2017 ರಂದು ಎಲ್ಗರ್ ಪರಿಷತ್ ಕಾರ್ಯಕ್ರಮದ ಸಂಘಟನೆಯೊಂದಿಗೆ ಅವರು ಎಲ್ಲಿಯೂ ಸಂಪರ್ಕ ಹೊಂದಿಲ್ಲ ಎಂದು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ ಇತರರ ಬಂಧನವನ್ನು ಖಂಡಿಸಿ ಸ್ವಾಮಿ ಸಭೆಗಳನ್ನು ನಡೆಸುತ್ತಿದ್ದುದು ಕಂಡುಬಂದಿದೆ ಎಂದು ಎನ್‌ಐಎ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಶೆಟ್ಟಿ ಮೂಲಕ ತಿಳಿಸಿತ್ತು ಮತ್ತು ಅವರ ಎನ್‌ಜಿಒ ವಿದೇಶಿ ಹಣವನ್ನು ಪಡೆದಿರುವುದಕ್ಕೆ ಪುರಾವೆಗಳಿವೆ ಎಂದು ಆರೋಪಿಸಿತ್ತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ನೇಮಕಗೊಂಡ ಉನ್ನತ ಸಮಿತಿಯು ಕೊವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಜೈಲುಗಳಲ್ಲಿ ಸಂದಣಿಯನ್ನು ನಿಯಂತ್ರಿಸಲು ಶಿಫಾರಸು ಮಾಡಿದ್ದ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಸ್ವಾಮಿ ಮಧ್ಯಂತರ ಜಾಮೀನು ಕೋರಿದ್ದರು.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...