Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

ಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

- Advertisement -
- Advertisement -

2018 ರಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಫಾದರ್ ಸ್ಟಾನ್ ಸ್ವಾಮಿ ಅವರಿಗೆ ಜಾಮೀನು ನೀಡಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ವಿಶೇಷ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.

2018 ರಲ್ಲಿ ಭೀಮಾ ಕೋರೆಗಾಂವ್‌ನಲ್ಲಿ ಗಲಭೆಗಳನ್ನು ಪ್ರಚೋದಿಸುವಲ್ಲಿ ಪಾತ್ರವಹಿಸಿದ ಆರೋಪದ ಮೇಲೆ ಸ್ವಾಮಿ ಅವರನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಾಲೋಜ ಜೈಲಿನಲ್ಲಿರಿಸಲಾಯಿತು. 83 ವರ್ಷದ ರಾಂಚಿ ನಿವಾಸಿ ಸ್ವಾಮಿ ಕಳೆದ ಐದು ತಿಂಗಳಿನಿಂದ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ.

ಎನ್‌ಐಎ ಸ್ವಾಮಿಯವರನ್ನು ಅಕ್ಟೋಬರ್ 7 ರಂದು ರಾಂಚಿಯಲ್ಲಿ ಬಂಧಿಸಿ, ಮರುದಿನ ಮುಂಬೈಗೆ ಕರೆತಂದು ಅವರು ಮತ್ತು ಇತರ ಏಳು ಜನರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸ್ವಾಮಿ ಅವರು ಪ್ರಕರಣದ ಅರ್ಹತೆಗಳ ಜೊತೆಗೆ ಪ್ರಾಥಮಿಕವಾಗಿ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿದ್ದರು.

ತನ್ನ ಜಾಮೀನು ಅರ್ಜಿಯಲ್ಲಿ, ಸ್ವಾಮಿ ತನ್ನ ಬಂಧನವು ಅಸಮರ್ಪಕವಾಗಿದೆ ಮತ್ತು ದೊಷಪೂರಿತವಾಗಿದೆ ಎಂದು ಹೇಳಿದ್ದರು. ಎಫ್‌ಐಆರ್ ದಾಖಲಾದ ಎರಡು ವರ್ಷಗಳ ನಂತರವೂ ಬಂಧನ ಮಾಡಿರಲಿಲ್ಲ. ಅವರು ವಿದೇಶಕ್ಕೆ ಪರಾರಿಯಾಗಬಲ್ಲರು ಅಥವಾ ಸಾಕ್ಷಾಧಾರಗಳನ್ನು ಹಾಳುಮಾಡುವ ವ್ಯಕ್ತಿಯೆಂದು ಪರಿಗಣಿಸಲಾಗಿಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

ಈ ಹಿರಿಯ ನಾಗರಿಕರರಾದ ಸ್ಟಾನ್ ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅವರ ವಕೀಲ ಷರೀಫ್ ಶೇಖ್ ವರದಿ ಸಲ್ಲಿಸಿದರು ಮತ್ತು ಆರೋಗ್ಯ ಕಾರಣಗಳಿಂದಾಗಿ ಅವರನ್ನು ಜೈಲು ಆಸ್ಪತ್ರೆಗೆ ವರ್ಗಾಯಿಸಬೇಕಾಯಿತು ಎಂಬುದನ್ನು ಎತ್ತಿ ತೋರಿಸಿದರು.

ನವೆಂಬರ್‌ನಲ್ಲಿ ಅವರ ವಕೀಲ ಷರೀಫ್ ಶೇಖ್ ಅವರ ಮೂಲಕ ಸಲ್ಲಿಸಲಾದ 31 ಪುಟಗಳ ಜಾಮೀನು ಅರ್ಜಿಯಲ್ಲಿ, ಭಾರತದಲ್ಲಿ ಸ್ವಾಮಿ ಅವರು ಕೈಗೊಂಡ ಜಾತಿ ಮತ್ತು ಭೂ ಹೋರಾಟಗಳು, ಆದಿವಾಸಿಗಳ ಹೋರಾಟಗಳು ಹಾಗೂ ಅವರ ಬರಹಗಳ ಕಾರಣದಿಂದ ತನಿಖಾ ಸಂಸ್ಥೆ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ತಿಳಿಸಿತ್ತು.

ಸ್ವಾಮಿಯವರ ಸಂಘಟನೆ ಪರ್‌ಸುಕ್ಯುಟೆಡ್ ಪ್ರಿಸರ್ಸ್‌ ಸಾಲಿಡೆಟರಿ ಕಮೀಟಿ (ಪಿಪಿಎಸ್‌ಸಿ) ಜೊತೆಗೆ ವಿವಿದ ಶೋಷಿತ ಜನರು ಕಾನೂನು ನೆರವು ಪಡೆಯಲು ನಡೆಸಿದ ಪತ್ರ ವ್ಯವಹಾರಗಳೇ ಪುರಾವೆಗಳು ಎಂದು ಎನ್‌ಐಎ ಹೇಳಿಕೊಂಡಿದೆ. ಪಿಪಿಎಸ್‌ಸಿ ಸಂಘಟನೆಯು ಮಾವೋವಾದಿಗಳೆಂದು ಸುಳ್ಳು ಆರೋಪ ಹೊರಿಸಿರುವ ವಿಚಾರಣಾಧೀನ ಆದಿವಾಸಿಗಳು ಮತ್ತು ದಲಿತರಿಗಾಗಿ ಕೆಲಸ ಮಾಡುತ್ತದೆ ಎಂದು ವಕೀಲರು ವಿವರಿಸಿದ್ದರು.

ಸ್ವಾಮಿ ಅವರ ನಿವಾಸದಲ್ಲಿ ಎರಡು ದಾಳಿಗಳನ್ನು ನಡೆಸಿದ ನಂತರ ಏನೂ ಕಂಡುಬಂದಿಲ್ಲ. ವಾಸ್ತವವಾಗಿ, ಬಾಂಬೆ ಹೈಕೋರ್ಟ್‌ನಲ್ಲಿ ಸ್ವಾಮಿ ಸಲ್ಲಿಸಿದ್ದ ಮನವಿಯಲ್ಲಿ ಪುಣೆ ಪೊಲೀಸರು ದಾಖಲೆಯಲ್ಲಿ “ಅವರು ಆರೋಪಿಯಲ್ಲದ ಕಾರಣ ಅವರನ್ನು ಬಂಧಿಸುವ ಉದ್ದೇಶವಿರಲಿಲ್ಲ” ಎಂದು ಹೇಳಿದ್ದಾರೆ.

ಸ್ವಾಮಿ ವಿರುದ್ಧ ದಾಖಲಾದ ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ವಾಮಿಯವರು ನಿಷೇಧಿತ ಸಂಘಟನೆಯ ಸಿಪಿಐ (ಮಾವೋವಾದಿ) ಸದಸ್ಯರೆಂದು ಅಪಾದಿಸಿದ್ದು, ಪಕ್ಷದ ಅನೇಕ ಸದಸ್ಯರ ಬಂಧನದ ನಂತರ ಅದರ ಚಟುವಟಿಕೆಗಳನ್ನು ಹರಡುವ ಜವಾಬ್ದಾರಿಯನ್ನು ಅವನಿಗೆ ನೀಡಲಾಗಿತ್ತು ಎಂದೂ ಆರೋಪ ಮಾಡಿದೆ. ಸ್ವಾಮಿ ವಿಸ್ತಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನಂತಹ ಸಿಪಿಐ (ಮಾವೋವಾದಿಗಳ) ಬೆಂಬಲಿತ ಸಂಘಟನೆಗಳ ತೀವ್ರ ಬೆಂಬಲಿಗರಾಗಿದ್ದರು ಎಂದು ಆರೋಪ ಮಾಡಲಾಗಿದೆ.

ಜಾರ್ಖಂಡ್‌ನಲ್ಲಿ ಎನ್‌ಜಿಒ ನಡೆಸುತ್ತಿರುವ ಸ್ವಾಮಿ, ತಮ್ಮ ಲ್ಯಾಪ್‌ಟಾಪ್‌ನಲ್ಲಿ ಕಂಡುಬರುವ ಪುರಾವೆಗಳನ್ನು “ಸುಲಭವಾಗಿ ಕುಶಲತೆಯಿಂದ ಸೇರಿಸಬಹುದು” ಎಂದು ವಿವರಿಸಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.

ಡಿಸೆಂಬರ್ 31, 2017 ರಂದು ಎಲ್ಗರ್ ಪರಿಷತ್ ಕಾರ್ಯಕ್ರಮದ ಸಂಘಟನೆಯೊಂದಿಗೆ ಅವರು ಎಲ್ಲಿಯೂ ಸಂಪರ್ಕ ಹೊಂದಿಲ್ಲ ಎಂದು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ ಇತರರ ಬಂಧನವನ್ನು ಖಂಡಿಸಿ ಸ್ವಾಮಿ ಸಭೆಗಳನ್ನು ನಡೆಸುತ್ತಿದ್ದುದು ಕಂಡುಬಂದಿದೆ ಎಂದು ಎನ್‌ಐಎ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಶೆಟ್ಟಿ ಮೂಲಕ ತಿಳಿಸಿತ್ತು ಮತ್ತು ಅವರ ಎನ್‌ಜಿಒ ವಿದೇಶಿ ಹಣವನ್ನು ಪಡೆದಿರುವುದಕ್ಕೆ ಪುರಾವೆಗಳಿವೆ ಎಂದು ಆರೋಪಿಸಿತ್ತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ನೇಮಕಗೊಂಡ ಉನ್ನತ ಸಮಿತಿಯು ಕೊವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಜೈಲುಗಳಲ್ಲಿ ಸಂದಣಿಯನ್ನು ನಿಯಂತ್ರಿಸಲು ಶಿಫಾರಸು ಮಾಡಿದ್ದ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಸ್ವಾಮಿ ಮಧ್ಯಂತರ ಜಾಮೀನು ಕೋರಿದ್ದರು.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...