Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

ಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

- Advertisement -
- Advertisement -

2018 ರಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಫಾದರ್ ಸ್ಟಾನ್ ಸ್ವಾಮಿ ಅವರಿಗೆ ಜಾಮೀನು ನೀಡಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ವಿಶೇಷ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.

2018 ರಲ್ಲಿ ಭೀಮಾ ಕೋರೆಗಾಂವ್‌ನಲ್ಲಿ ಗಲಭೆಗಳನ್ನು ಪ್ರಚೋದಿಸುವಲ್ಲಿ ಪಾತ್ರವಹಿಸಿದ ಆರೋಪದ ಮೇಲೆ ಸ್ವಾಮಿ ಅವರನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಾಲೋಜ ಜೈಲಿನಲ್ಲಿರಿಸಲಾಯಿತು. 83 ವರ್ಷದ ರಾಂಚಿ ನಿವಾಸಿ ಸ್ವಾಮಿ ಕಳೆದ ಐದು ತಿಂಗಳಿನಿಂದ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ.

ಎನ್‌ಐಎ ಸ್ವಾಮಿಯವರನ್ನು ಅಕ್ಟೋಬರ್ 7 ರಂದು ರಾಂಚಿಯಲ್ಲಿ ಬಂಧಿಸಿ, ಮರುದಿನ ಮುಂಬೈಗೆ ಕರೆತಂದು ಅವರು ಮತ್ತು ಇತರ ಏಳು ಜನರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸ್ವಾಮಿ ಅವರು ಪ್ರಕರಣದ ಅರ್ಹತೆಗಳ ಜೊತೆಗೆ ಪ್ರಾಥಮಿಕವಾಗಿ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿದ್ದರು.

ತನ್ನ ಜಾಮೀನು ಅರ್ಜಿಯಲ್ಲಿ, ಸ್ವಾಮಿ ತನ್ನ ಬಂಧನವು ಅಸಮರ್ಪಕವಾಗಿದೆ ಮತ್ತು ದೊಷಪೂರಿತವಾಗಿದೆ ಎಂದು ಹೇಳಿದ್ದರು. ಎಫ್‌ಐಆರ್ ದಾಖಲಾದ ಎರಡು ವರ್ಷಗಳ ನಂತರವೂ ಬಂಧನ ಮಾಡಿರಲಿಲ್ಲ. ಅವರು ವಿದೇಶಕ್ಕೆ ಪರಾರಿಯಾಗಬಲ್ಲರು ಅಥವಾ ಸಾಕ್ಷಾಧಾರಗಳನ್ನು ಹಾಳುಮಾಡುವ ವ್ಯಕ್ತಿಯೆಂದು ಪರಿಗಣಿಸಲಾಗಿಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

ಈ ಹಿರಿಯ ನಾಗರಿಕರರಾದ ಸ್ಟಾನ್ ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅವರ ವಕೀಲ ಷರೀಫ್ ಶೇಖ್ ವರದಿ ಸಲ್ಲಿಸಿದರು ಮತ್ತು ಆರೋಗ್ಯ ಕಾರಣಗಳಿಂದಾಗಿ ಅವರನ್ನು ಜೈಲು ಆಸ್ಪತ್ರೆಗೆ ವರ್ಗಾಯಿಸಬೇಕಾಯಿತು ಎಂಬುದನ್ನು ಎತ್ತಿ ತೋರಿಸಿದರು.

ನವೆಂಬರ್‌ನಲ್ಲಿ ಅವರ ವಕೀಲ ಷರೀಫ್ ಶೇಖ್ ಅವರ ಮೂಲಕ ಸಲ್ಲಿಸಲಾದ 31 ಪುಟಗಳ ಜಾಮೀನು ಅರ್ಜಿಯಲ್ಲಿ, ಭಾರತದಲ್ಲಿ ಸ್ವಾಮಿ ಅವರು ಕೈಗೊಂಡ ಜಾತಿ ಮತ್ತು ಭೂ ಹೋರಾಟಗಳು, ಆದಿವಾಸಿಗಳ ಹೋರಾಟಗಳು ಹಾಗೂ ಅವರ ಬರಹಗಳ ಕಾರಣದಿಂದ ತನಿಖಾ ಸಂಸ್ಥೆ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ತಿಳಿಸಿತ್ತು.

ಸ್ವಾಮಿಯವರ ಸಂಘಟನೆ ಪರ್‌ಸುಕ್ಯುಟೆಡ್ ಪ್ರಿಸರ್ಸ್‌ ಸಾಲಿಡೆಟರಿ ಕಮೀಟಿ (ಪಿಪಿಎಸ್‌ಸಿ) ಜೊತೆಗೆ ವಿವಿದ ಶೋಷಿತ ಜನರು ಕಾನೂನು ನೆರವು ಪಡೆಯಲು ನಡೆಸಿದ ಪತ್ರ ವ್ಯವಹಾರಗಳೇ ಪುರಾವೆಗಳು ಎಂದು ಎನ್‌ಐಎ ಹೇಳಿಕೊಂಡಿದೆ. ಪಿಪಿಎಸ್‌ಸಿ ಸಂಘಟನೆಯು ಮಾವೋವಾದಿಗಳೆಂದು ಸುಳ್ಳು ಆರೋಪ ಹೊರಿಸಿರುವ ವಿಚಾರಣಾಧೀನ ಆದಿವಾಸಿಗಳು ಮತ್ತು ದಲಿತರಿಗಾಗಿ ಕೆಲಸ ಮಾಡುತ್ತದೆ ಎಂದು ವಕೀಲರು ವಿವರಿಸಿದ್ದರು.

ಸ್ವಾಮಿ ಅವರ ನಿವಾಸದಲ್ಲಿ ಎರಡು ದಾಳಿಗಳನ್ನು ನಡೆಸಿದ ನಂತರ ಏನೂ ಕಂಡುಬಂದಿಲ್ಲ. ವಾಸ್ತವವಾಗಿ, ಬಾಂಬೆ ಹೈಕೋರ್ಟ್‌ನಲ್ಲಿ ಸ್ವಾಮಿ ಸಲ್ಲಿಸಿದ್ದ ಮನವಿಯಲ್ಲಿ ಪುಣೆ ಪೊಲೀಸರು ದಾಖಲೆಯಲ್ಲಿ “ಅವರು ಆರೋಪಿಯಲ್ಲದ ಕಾರಣ ಅವರನ್ನು ಬಂಧಿಸುವ ಉದ್ದೇಶವಿರಲಿಲ್ಲ” ಎಂದು ಹೇಳಿದ್ದಾರೆ.

ಸ್ವಾಮಿ ವಿರುದ್ಧ ದಾಖಲಾದ ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ವಾಮಿಯವರು ನಿಷೇಧಿತ ಸಂಘಟನೆಯ ಸಿಪಿಐ (ಮಾವೋವಾದಿ) ಸದಸ್ಯರೆಂದು ಅಪಾದಿಸಿದ್ದು, ಪಕ್ಷದ ಅನೇಕ ಸದಸ್ಯರ ಬಂಧನದ ನಂತರ ಅದರ ಚಟುವಟಿಕೆಗಳನ್ನು ಹರಡುವ ಜವಾಬ್ದಾರಿಯನ್ನು ಅವನಿಗೆ ನೀಡಲಾಗಿತ್ತು ಎಂದೂ ಆರೋಪ ಮಾಡಿದೆ. ಸ್ವಾಮಿ ವಿಸ್ತಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನಂತಹ ಸಿಪಿಐ (ಮಾವೋವಾದಿಗಳ) ಬೆಂಬಲಿತ ಸಂಘಟನೆಗಳ ತೀವ್ರ ಬೆಂಬಲಿಗರಾಗಿದ್ದರು ಎಂದು ಆರೋಪ ಮಾಡಲಾಗಿದೆ.

ಜಾರ್ಖಂಡ್‌ನಲ್ಲಿ ಎನ್‌ಜಿಒ ನಡೆಸುತ್ತಿರುವ ಸ್ವಾಮಿ, ತಮ್ಮ ಲ್ಯಾಪ್‌ಟಾಪ್‌ನಲ್ಲಿ ಕಂಡುಬರುವ ಪುರಾವೆಗಳನ್ನು “ಸುಲಭವಾಗಿ ಕುಶಲತೆಯಿಂದ ಸೇರಿಸಬಹುದು” ಎಂದು ವಿವರಿಸಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.

ಡಿಸೆಂಬರ್ 31, 2017 ರಂದು ಎಲ್ಗರ್ ಪರಿಷತ್ ಕಾರ್ಯಕ್ರಮದ ಸಂಘಟನೆಯೊಂದಿಗೆ ಅವರು ಎಲ್ಲಿಯೂ ಸಂಪರ್ಕ ಹೊಂದಿಲ್ಲ ಎಂದು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ ಇತರರ ಬಂಧನವನ್ನು ಖಂಡಿಸಿ ಸ್ವಾಮಿ ಸಭೆಗಳನ್ನು ನಡೆಸುತ್ತಿದ್ದುದು ಕಂಡುಬಂದಿದೆ ಎಂದು ಎನ್‌ಐಎ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಶೆಟ್ಟಿ ಮೂಲಕ ತಿಳಿಸಿತ್ತು ಮತ್ತು ಅವರ ಎನ್‌ಜಿಒ ವಿದೇಶಿ ಹಣವನ್ನು ಪಡೆದಿರುವುದಕ್ಕೆ ಪುರಾವೆಗಳಿವೆ ಎಂದು ಆರೋಪಿಸಿತ್ತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ನೇಮಕಗೊಂಡ ಉನ್ನತ ಸಮಿತಿಯು ಕೊವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಜೈಲುಗಳಲ್ಲಿ ಸಂದಣಿಯನ್ನು ನಿಯಂತ್ರಿಸಲು ಶಿಫಾರಸು ಮಾಡಿದ್ದ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಸ್ವಾಮಿ ಮಧ್ಯಂತರ ಜಾಮೀನು ಕೋರಿದ್ದರು.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...