Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

ಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

- Advertisement -
- Advertisement -

2018 ರಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಫಾದರ್ ಸ್ಟಾನ್ ಸ್ವಾಮಿ ಅವರಿಗೆ ಜಾಮೀನು ನೀಡಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ವಿಶೇಷ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.

2018 ರಲ್ಲಿ ಭೀಮಾ ಕೋರೆಗಾಂವ್‌ನಲ್ಲಿ ಗಲಭೆಗಳನ್ನು ಪ್ರಚೋದಿಸುವಲ್ಲಿ ಪಾತ್ರವಹಿಸಿದ ಆರೋಪದ ಮೇಲೆ ಸ್ವಾಮಿ ಅವರನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಾಲೋಜ ಜೈಲಿನಲ್ಲಿರಿಸಲಾಯಿತು. 83 ವರ್ಷದ ರಾಂಚಿ ನಿವಾಸಿ ಸ್ವಾಮಿ ಕಳೆದ ಐದು ತಿಂಗಳಿನಿಂದ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ.

ಎನ್‌ಐಎ ಸ್ವಾಮಿಯವರನ್ನು ಅಕ್ಟೋಬರ್ 7 ರಂದು ರಾಂಚಿಯಲ್ಲಿ ಬಂಧಿಸಿ, ಮರುದಿನ ಮುಂಬೈಗೆ ಕರೆತಂದು ಅವರು ಮತ್ತು ಇತರ ಏಳು ಜನರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸ್ವಾಮಿ ಅವರು ಪ್ರಕರಣದ ಅರ್ಹತೆಗಳ ಜೊತೆಗೆ ಪ್ರಾಥಮಿಕವಾಗಿ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿದ್ದರು.

ತನ್ನ ಜಾಮೀನು ಅರ್ಜಿಯಲ್ಲಿ, ಸ್ವಾಮಿ ತನ್ನ ಬಂಧನವು ಅಸಮರ್ಪಕವಾಗಿದೆ ಮತ್ತು ದೊಷಪೂರಿತವಾಗಿದೆ ಎಂದು ಹೇಳಿದ್ದರು. ಎಫ್‌ಐಆರ್ ದಾಖಲಾದ ಎರಡು ವರ್ಷಗಳ ನಂತರವೂ ಬಂಧನ ಮಾಡಿರಲಿಲ್ಲ. ಅವರು ವಿದೇಶಕ್ಕೆ ಪರಾರಿಯಾಗಬಲ್ಲರು ಅಥವಾ ಸಾಕ್ಷಾಧಾರಗಳನ್ನು ಹಾಳುಮಾಡುವ ವ್ಯಕ್ತಿಯೆಂದು ಪರಿಗಣಿಸಲಾಗಿಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

ಈ ಹಿರಿಯ ನಾಗರಿಕರರಾದ ಸ್ಟಾನ್ ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅವರ ವಕೀಲ ಷರೀಫ್ ಶೇಖ್ ವರದಿ ಸಲ್ಲಿಸಿದರು ಮತ್ತು ಆರೋಗ್ಯ ಕಾರಣಗಳಿಂದಾಗಿ ಅವರನ್ನು ಜೈಲು ಆಸ್ಪತ್ರೆಗೆ ವರ್ಗಾಯಿಸಬೇಕಾಯಿತು ಎಂಬುದನ್ನು ಎತ್ತಿ ತೋರಿಸಿದರು.

ನವೆಂಬರ್‌ನಲ್ಲಿ ಅವರ ವಕೀಲ ಷರೀಫ್ ಶೇಖ್ ಅವರ ಮೂಲಕ ಸಲ್ಲಿಸಲಾದ 31 ಪುಟಗಳ ಜಾಮೀನು ಅರ್ಜಿಯಲ್ಲಿ, ಭಾರತದಲ್ಲಿ ಸ್ವಾಮಿ ಅವರು ಕೈಗೊಂಡ ಜಾತಿ ಮತ್ತು ಭೂ ಹೋರಾಟಗಳು, ಆದಿವಾಸಿಗಳ ಹೋರಾಟಗಳು ಹಾಗೂ ಅವರ ಬರಹಗಳ ಕಾರಣದಿಂದ ತನಿಖಾ ಸಂಸ್ಥೆ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ತಿಳಿಸಿತ್ತು.

ಸ್ವಾಮಿಯವರ ಸಂಘಟನೆ ಪರ್‌ಸುಕ್ಯುಟೆಡ್ ಪ್ರಿಸರ್ಸ್‌ ಸಾಲಿಡೆಟರಿ ಕಮೀಟಿ (ಪಿಪಿಎಸ್‌ಸಿ) ಜೊತೆಗೆ ವಿವಿದ ಶೋಷಿತ ಜನರು ಕಾನೂನು ನೆರವು ಪಡೆಯಲು ನಡೆಸಿದ ಪತ್ರ ವ್ಯವಹಾರಗಳೇ ಪುರಾವೆಗಳು ಎಂದು ಎನ್‌ಐಎ ಹೇಳಿಕೊಂಡಿದೆ. ಪಿಪಿಎಸ್‌ಸಿ ಸಂಘಟನೆಯು ಮಾವೋವಾದಿಗಳೆಂದು ಸುಳ್ಳು ಆರೋಪ ಹೊರಿಸಿರುವ ವಿಚಾರಣಾಧೀನ ಆದಿವಾಸಿಗಳು ಮತ್ತು ದಲಿತರಿಗಾಗಿ ಕೆಲಸ ಮಾಡುತ್ತದೆ ಎಂದು ವಕೀಲರು ವಿವರಿಸಿದ್ದರು.

ಸ್ವಾಮಿ ಅವರ ನಿವಾಸದಲ್ಲಿ ಎರಡು ದಾಳಿಗಳನ್ನು ನಡೆಸಿದ ನಂತರ ಏನೂ ಕಂಡುಬಂದಿಲ್ಲ. ವಾಸ್ತವವಾಗಿ, ಬಾಂಬೆ ಹೈಕೋರ್ಟ್‌ನಲ್ಲಿ ಸ್ವಾಮಿ ಸಲ್ಲಿಸಿದ್ದ ಮನವಿಯಲ್ಲಿ ಪುಣೆ ಪೊಲೀಸರು ದಾಖಲೆಯಲ್ಲಿ “ಅವರು ಆರೋಪಿಯಲ್ಲದ ಕಾರಣ ಅವರನ್ನು ಬಂಧಿಸುವ ಉದ್ದೇಶವಿರಲಿಲ್ಲ” ಎಂದು ಹೇಳಿದ್ದಾರೆ.

ಸ್ವಾಮಿ ವಿರುದ್ಧ ದಾಖಲಾದ ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ವಾಮಿಯವರು ನಿಷೇಧಿತ ಸಂಘಟನೆಯ ಸಿಪಿಐ (ಮಾವೋವಾದಿ) ಸದಸ್ಯರೆಂದು ಅಪಾದಿಸಿದ್ದು, ಪಕ್ಷದ ಅನೇಕ ಸದಸ್ಯರ ಬಂಧನದ ನಂತರ ಅದರ ಚಟುವಟಿಕೆಗಳನ್ನು ಹರಡುವ ಜವಾಬ್ದಾರಿಯನ್ನು ಅವನಿಗೆ ನೀಡಲಾಗಿತ್ತು ಎಂದೂ ಆರೋಪ ಮಾಡಿದೆ. ಸ್ವಾಮಿ ವಿಸ್ತಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನಂತಹ ಸಿಪಿಐ (ಮಾವೋವಾದಿಗಳ) ಬೆಂಬಲಿತ ಸಂಘಟನೆಗಳ ತೀವ್ರ ಬೆಂಬಲಿಗರಾಗಿದ್ದರು ಎಂದು ಆರೋಪ ಮಾಡಲಾಗಿದೆ.

ಜಾರ್ಖಂಡ್‌ನಲ್ಲಿ ಎನ್‌ಜಿಒ ನಡೆಸುತ್ತಿರುವ ಸ್ವಾಮಿ, ತಮ್ಮ ಲ್ಯಾಪ್‌ಟಾಪ್‌ನಲ್ಲಿ ಕಂಡುಬರುವ ಪುರಾವೆಗಳನ್ನು “ಸುಲಭವಾಗಿ ಕುಶಲತೆಯಿಂದ ಸೇರಿಸಬಹುದು” ಎಂದು ವಿವರಿಸಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.

ಡಿಸೆಂಬರ್ 31, 2017 ರಂದು ಎಲ್ಗರ್ ಪರಿಷತ್ ಕಾರ್ಯಕ್ರಮದ ಸಂಘಟನೆಯೊಂದಿಗೆ ಅವರು ಎಲ್ಲಿಯೂ ಸಂಪರ್ಕ ಹೊಂದಿಲ್ಲ ಎಂದು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ ಇತರರ ಬಂಧನವನ್ನು ಖಂಡಿಸಿ ಸ್ವಾಮಿ ಸಭೆಗಳನ್ನು ನಡೆಸುತ್ತಿದ್ದುದು ಕಂಡುಬಂದಿದೆ ಎಂದು ಎನ್‌ಐಎ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಶೆಟ್ಟಿ ಮೂಲಕ ತಿಳಿಸಿತ್ತು ಮತ್ತು ಅವರ ಎನ್‌ಜಿಒ ವಿದೇಶಿ ಹಣವನ್ನು ಪಡೆದಿರುವುದಕ್ಕೆ ಪುರಾವೆಗಳಿವೆ ಎಂದು ಆರೋಪಿಸಿತ್ತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ನೇಮಕಗೊಂಡ ಉನ್ನತ ಸಮಿತಿಯು ಕೊವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಜೈಲುಗಳಲ್ಲಿ ಸಂದಣಿಯನ್ನು ನಿಯಂತ್ರಿಸಲು ಶಿಫಾರಸು ಮಾಡಿದ್ದ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಸ್ವಾಮಿ ಮಧ್ಯಂತರ ಜಾಮೀನು ಕೋರಿದ್ದರು.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...