Homeಮುಖಪುಟಮಹರ್ ಸೈನಿಕರ 'ಭೀಮಾ ಕೋರೆಗಾಂವ್' ಹೋರಾಟ ನೆನಪಿಸುವ ಕನ್ನಡ ಹಾಡು...

ಮಹರ್ ಸೈನಿಕರ ‘ಭೀಮಾ ಕೋರೆಗಾಂವ್’ ಹೋರಾಟ ನೆನಪಿಸುವ ಕನ್ನಡ ಹಾಡು…

ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳಿಗಾಗಿ ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟವೇ ಈ ಭೀಮಾ ಕೋರೆಗಾಂವ್

- Advertisement -
- Advertisement -

ಇತ್ತೀಚೆಗೆ ಪ್ರಮುಖ ಐತಿಹಾಸಿಕ ‘ಭೀಮಾ ಕೋರೆಗಾಂವ್’ ಘಟನೆಯನ್ನು ಆಧರಿಸಿದ ಚಲನಚಿತ್ರ ಬಾಲಿವುಡ್‌ನಲ್ಲಿ ನಿರ್ಮಾಣವಾಗುತ್ತಿರುವ ಸುದ್ದಿ ವೈರಲ್ ಆಗಿತ್ತು. ಈಗ ಭೀಮಾ ಕೋರೆಗಾಂವ್ ಘಟನೆಯನ್ನು ನೆನಪಿಸುವ ಕನ್ನಡದ ಹಾಡು ಯೂಟೂಬ್‌ನಲ್ಲಿ ಬಿಡುಗಡೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಹಾಡಿಗೆ ಅಶೋಕ್ ಜೋಟವರ್ ಸಂಗೀತ ಸಂಯೋಜನೆ ಮಾಡಿ ಹಾಡಿದ್ದು, ಸಂದೀಪ್ ಮತಿವಾಡೆ ಸಾಹಿತ್ಯ ರಚನೆ ಮಾಡಿದ್ದಾರೆ. ಇದರ ನಿರ್ಮಾಣದ ಹೊಣೆಯನ್ನು ಜೀತೇಂದ್ರ ಮರಡಿ ವಹಿಸಿಕೊಂಡಿದ್ದಾರೆ. ವೀಡಿಯೋ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ 1500 ಕ್ಕೂ ಹೆಚ್ಚು ಜನ ಇದನ್ನು ವೀಕ್ಷಿಸಿದ್ದಾರೆ.

 ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಇತ್ತೀಚಿನ ದಿನಗಳಲ್ಲಿ ಭೀಮಾ ಕೋರೆಗಾಂವ್ ಎಂಬ ಹೆಸರು ಸಾಕಷ್ಟು ಪ್ರಚಲಿತದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಈ ಐತಿಹಾಸಿಕ ಘಟನೆಯ ನೆನಪಿಗಾಗಿ ಮಹಾರಾ‍ಷ್ಟ್ರದಲ್ಲಿ ಉತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ಸವದಲ್ಲಿ ಗಲಭೆ ಆರಂಭವಾಗಿತ್ತು. ಇದರ ಭಾಗವಾಗಿ ಹತ್ತಾರು ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸಲಾಗಿದೆ. ಇದನ್ನು ವಿರೋಧಿಸಿ ದೇಶದಾದ್ಯಂತ ನೂರಾರು ಪ್ರತಿಭಟನೆಗಳು ನಡೆದಿವೆ.

ಏನಿದು ಕೋರೆಗಾಂವ್ ಯುದ್ಧ;

ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆ. ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳಿಗಾಗಿ ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ.


 ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

0
'ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ' ಮತ್ತು 'ನನ್ನ ಅಜ್ಜಿ ಆಡಳಿತದಲ್ಲಿ ದೇಶದ ಯುದ್ಧಕ್ಕಾಗಿ ತಮ್ಮ ಚಿನ್ನವನ್ನು ದಾನ ಮಾಡಿದ್ದಾರೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದು, ಪ್ರಧಾನಿ...