Homeಚಳವಳಿಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ..

ಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ..

- Advertisement -
- Advertisement -

1818 ರ ಆಂಗ್ಲೋ-ಮರಾಠಾ ಯುದ್ಧದ ನೆನಪಿಗಾಗಿ ಪುಣೆಯಿಂದ 40 ಕಿ.ಮೀ ದೂರದಲ್ಲಿರುವ ಭೀಮಾ ಕೋರೆಗಾಂವ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು ಐದು ಲಕ್ಷ ದಲಿತರು ಒಟ್ಟುಗೂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರವು ಸುಮಾರು 10,000 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿದೆ ಮತ್ತು ಇಂಟರ್ನೆಟ್ ಪ್ರವೇಶವನ್ನು ಸ್ಥಗಿತಗೊಳಿಸಿದೆ ಎಂದು ಪುಣೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವದಂತಿಯನ್ನು ತಡೆಯಲು ಸರ್ಕಾರವು ಕಾರ್ಯಕ್ರಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂತರ್ಜಾಲವನ್ನು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಪುಣೆ ಜಿಲ್ಲಾಧಿಕಾರಿ ನೇವಲ್ ಕಿಶೋರ್ ರಾಮ್ ಈ ಹಿಂದೆ ಸೂಚಿಸಿದ್ದರು. ಸುಮಾರು ಐದು ಲಕ್ಷ ಜನರು ಈಗಾಗಲೇ ಸ್ಥಳದಲ್ಲಿ ಜಮಾಯಿಸಿದ್ದಾರೆ ಎಂದು ವಿಶೇಷ ಇನ್ಸ್‌ಪೆಕ್ಟರ್ ಜನರಲ್ (ಕೊಲ್ಹಾಪುರ ಶ್ರೇಣಿ) ಸುಹಾಸ್ ವಾಡ್ಕೆ ತಿಳಿಸಿದ್ದಾರೆ. ಸ್ಮಾರಕದ ಬಳಿ ಒಟ್ಟು ಸೇರುವ ಜನರ ಸಂಖ್ಯೆ ಇನ್ನು ಸಹ ಏರಿಕೆಯಾಗುವ ನಿರೀಕ್ಷೆಯಿದೆ. ಕಳೆದ ವರ್ಷ ಇಲ್ಲಿ 10 ಲಕ್ಷ ಜನರು ಭಾಗವಹಿಸಿದ್ದರು.

ಇಂದು ಮುಂಜಾನೆಯೆ ಸ್ಮಾರಕಕ್ಕೆ ಭೇಟಿ ನೀಡಿ ಹೂ ಅರ್ಪಿಸಿದವರಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಪ್ರಮುಖ ದಲಿತ ಮುಖಂಡ ಪ್ರಕಾಶ್ ಅಂಬೇಡ್ಕರ್ ಸೇರಿದ್ದಾರೆ. ಹಲವು ಮಂತ್ರಿಗಳು ಸಹ ಭಾಗವಹಿಸುವ ನಿರೀಕ್ಷೆಯಿದೆ.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ಆ ಯುದ್ಧದ ವಿಜಯದ ನೆನಪಿಗಾಗಿ ಭೀಮಾ ಕೋರೆಗಾಂವ್‌ನಲ್ಲಿ ಸ್ಮಾರಕ ‘ಜೈ ಸ್ತಂಭ’ ಸ್ಥಾಪಿಸಲಾಗಿದೆ. ಅಲ್ಲಿ ವಿಜಯದ 202 ನೇ ವಾರ್ಷಿಕೋತ್ಸವವನ್ನು ಇಂದು ಆಚರಿಸಲಾಗುತ್ತಿದೆ. ಆದರೆ ಎರಡು ವರ್ಷಗಳ ಹಿಂದೆ ಭೀಮಾ ಕೋರೆಗಾಂವ್‌ನಲ್ಲಿ 2018 ರ ಸಂಭ್ರಮಾಚರಣೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇದರಲ್ಲಿ ಒಬ್ಬರು ಸಾವನ್ನಪ್ಪಿದ್ದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು.

ಈ ಕುರಿತು ಹಲವಾರು ದಲಿತ ಚಿಂತಕರ ಮೇಲೆ ಕೇಸುಗಳು ದಾಖಲಾಗಿವೆ. ಅವೆಲ್ಲವೂ ಸುಳ್ಳು ಕೇಸುಗಳಾಗಿದ್ದು, ಅವುಗಳನ್ನು ಹಿಂಪಡೆಯಬೇಕೆಂದು ಬಹಳಷ್ಟು ಹೋರಾಟಗಾರರು ಒತ್ತಾಯಿಸುತ್ತಲೇ ಇದ್ದಾರೆ.

ಈ ಬಾರಿಯ ಭದ್ರತೆ ಮತ್ತು ಜನಸಮೂಹ ನಿರ್ವಹಣಾ ವ್ಯವಸ್ಥೆಗಳು ತೃಪ್ತಿದಾಯಕವಾಗಿದ್ದವು ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...