Homeಮುಖಪುಟಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

ಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

- Advertisement -
- Advertisement -

ಈ ಕೇಸನ್ನು ಕೇಂದ್ರ ಸರ್ಕಾರದ ಕೆಳಗೆ ಕೆಲಸ ಮಾಡುವ ಎನ್.ಐ.ಎ.ಗೆ ವಹಿಸಿಕೊಡುತ್ತಿರುವ ಸಂದರ್ಭ ಮತ್ತು ಸಮಯ ಎರಡೂ ಪ್ರಶ್ನಾರ್ಹ.

ಎಲ್ಗಾರ್ ಪರಿಷತ್- ಭೀಮಾ ಕೋರೆಗಾಂವ್ ಕೇಸಿನ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಗೆ ವಹಿಸಿಕೊಡುತ್ತಿರುವ ಕ್ರಮ ನಿಂದನೀಯ. ಕಾನೂನು ಪ್ರಕಾರ ಹೀಗೆ ರಾಜ್ಯ ಸರ್ಕಾರದ ಪರಿಧಿಯಲ್ಲಿದ್ದ ಕೇಸೊಂದನ್ನು, ಆ ರಾಜ್ಯದ ಅನುಮೋದನೆ ಇಲ್ಲದೆ ಏಕಪಕ್ಷೀಯವಾಗಿ ಎನ್.ಐ.ಎ.ಗೆ ವಹಿಸಿಕೊಡುವ ಕ್ರಮ ಕಾನೂನುಬಾಹಿರವೇನೂ ಅಲ್ಲ. ಕಾನೂನಿನಲ್ಲಿ ಇಂತಹ ಹಸ್ತಾಂತರಕ್ಕೆ ಅವಕಾಶವಿದೆ. ಆದರೆ ಈ ಕೇಸನ್ನು ಕೇಂದ್ರ ಸರ್ಕಾರದ ಕೆಳಗೆ ಕೆಲಸ ಮಾಡುವ ಎನ್.ಐ.ಎ.ಗೆ ವಹಿಸಿಕೊಡುತ್ತಿರುವ ಸಂದರ್ಭ ಮತ್ತು ಸಮಯ ಎರಡೂ ಪ್ರಶ್ನಾರ್ಹ.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ತನಗಿರುವ ಅಧಿಕಾರವನ್ನು ಹೆಚ್ಚು ಎಚ್ಚರಿಕೆಯಿಂದ ಪ್ರಯೋಗಿಸಬೇಕಾಗುತ್ತದೆ. ಅಧಿಕಾರವಿದೆ ಎಂದ ಮಾತ್ರಕ್ಕೆ ರಾಜ್ಯ ಸರ್ಕಾರಗಳನ್ನು ಧಿಕ್ಕರಿಸಿ ನಡೆದುಕೊಳ್ಳುವುದು ಸಲ್ಲದು. ಕೇಂದ್ರ ಮತ್ತು ರಾಜ್ಯದ ನಡುವಣ ಸಂಬಂಧಗಳು ಸೌಹಾರ್ದಯುತವಾಗಿರಬೇಕು. ಈ ಸಂಬಂಧ ಕೆಟ್ಟರೆ ಅದರ ಫಲವನ್ನು ಕೇವಲ ನಿರ್ದಿಷ್ಟ ರಾಜ್ಯ ಮಾತ್ರವೇ ಅಲ್ಲದೆ ಪ್ರತ್ಯಕ್ಷ-ಪರೋಕ್ಷವಾಗಿ ಇಡೀ ದೇಶವೇ ಅನುಭವಿಸಬೇಕಾಗುತ್ತದೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೂಡಲಾದ ಈ ಕೇಸಿನಲ್ಲಿ ಮಾಡಲಾಗಿರುವ ಆಪಾದನೆಗಳಿಗೆ ಬಲವಾದ ಸಾಕ್ಷ್ಯ ಪುರಾವೆಗಳಿಲ್ಲ ಎಂಬುದು ಮಹಾರಾಷ್ಟ್ರದ ಈಗಿನ ಸಮ್ಮಿಶ್ರ ಸರ್ಕಾರದ ಸ್ಪಷ್ಟ ನಿಲುವು. ಬಂಧಿತ ಸಾಮಾಜಿಕ ಹೋರಾಟಗಾರರು ಭೀಮಾ ಕೋರೆಗಾಂವ್ ಹಿಂಸೆಯನ್ನು ಪ್ರಚೋದಿಸಿದ್ದರು ಎಂಬುದು ಪುಣೆ ಪೋಲಿಸರ ಆರೋಪ. ಆದಕ್ಕೆ ಅವರು ಒದಗಿಸಿರುವ ಪುರಾವೆಗಳು ಕೇವಲ ಕೆಲ ಪುಸ್ತಕಗಳು ಮತ್ತು ಸಿ.ಡಿ.ಗಳು. ಕೇಸನ್ನು ಎನ್.ಐ.ಎ.ಗೆ ವರ್ಗಾಯಿಸುವ ಕೇಂದ್ರದ ಕ್ರಮ ಕುರಿತು ಮಹಾರಾಷ್ಟ್ರ ಸರ್ಕಾರ ಕಾನೂನು ಸಲಹೆ ಕೋರಿದೆ.

ಮಹಾರಾಷ್ಟ್ರ ಸರ್ಕಾರ ಈ ಕೇಸಿನ ಆರೋಪಪಟ್ಟಿಯನ್ನು ಮರುವಿಮರ್ಶೆ ಮಾಡುವ ನಿರ್ಧಾರ ಕೈಗೊಂಡ ಮರುದಿನವೇ ಹೊರಬಿದ್ದಿರುವ ಕೇಂದ್ರ ಸರ್ಕಾರದ ನಿರ್ಧಾರ ಕೇವಲ ಕಾಕತಾಳೀಯ ಆಗಿರುವುದು ಸಾಧ್ಯವಿಲ್ಲ. ಈ ಕೇಸಿನ ತನಿಖೆಯನ್ನು 2018ರಿಂದ ಪುಣೆಯ ಪೋಲಿಸರು ನಡೆಸುತ್ತಿದ್ದಾರೆ. ಈ ತನಿಖೆಯನ್ನು ಪುಣೆ ಪೋಲಿಸರಿಂದ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರ ಮಾಡುವ ಇಂಗಿತವನ್ನು ರಾಜ್ಯ ಸರ್ಕಾರ ನೀಡಿತ್ತು. ರಾಜ್ಯ ಸರ್ಕಾರ ಈ ಕೇಸನ್ನು ಮರುವಿಮರ್ಶೆಗೆ ಒಳಪಡಿಸುವ ನಿರ್ಧಾರ ತೆಗೆದುಕೊಂಡರೆ ಆ ನಿರ್ಧಾರವೇ ಅಂತಿಮ ಅಲ್ಲ. ಅಂತಹ ನಿರ್ಧಾರವು ನ್ಯಾಯಾಲಯದ ಪರೀಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನಾ-ಎನ್.ಸಿ.ಪಿ.- ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿತ್ತು. ಈ ಸರ್ಕಾರದ ಹಿಂದಿನ ಶಕ್ತಿಯಾಗಿರುವ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಈ ಕೇಸಿನಲ್ಲಿ ಸಾಮಾಜಿಕ ಹೋರಾಟಗಾರರು ಮತ್ತು ಬುದ್ಧಿಜೀವಿಗಳನ್ನು ಸಿಕ್ಕಿಸಿ ಜೈಲಿಗೆ ತಳ್ಳಿದ ಕ್ರಮವನ್ನು ಕಟುವಾಗಿ ಟೀಕಿಸಿದ್ದರು. ಪುಣೆ ಪೋಲಿಸರಾಗಲಿ, ಉದ್ದೇಶಿತ ವಿಶೇಷ ತನಿಖಾ ತಂಡವಾಗಲಿ ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತವೆ. ಆದರೆ ಎನ್.ಐ.ಎ. ನೇರವಾಗಿ ಕೇಂದ್ರ ಸರ್ಕಾರದ ಗೃಹಮಂತ್ರಿ ಅಮಿತ್ ಶಾ ಅವರ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂಬುದು ಗಮನಿಸಬೇಕಿರುವ ಅಂಶ. ಎಲ್ಗಾರ್ ಪರಿಷತ್ ಕೇಸು ಈಗಾಗಲೆ ತನಿಖೆಯ ಹಂತವನ್ನು ಹಾದು ನ್ಯಾಯಾಲಯವನ್ನು ಮುಟ್ಟಿದೆ. ಈ ಹಂತದಲ್ಲಿ ಕೇಂದ್ರ ಸರ್ಕಾರ ಮೂಗು ತೂರಿಸಿರುವುದು ಶಂಕೆಗೆ ಆಸ್ಪದ ಮಾಡಿದೆ. ಈ ಹಿಂದಿನ ಬಿಜೆಪಿ ಸರ್ಕಾರವನ್ನು ರಕ್ಷಿಸುವ ಹುನ್ನಾರವಿದು ಎಂದು ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಪಕ್ಷಗಳು ಕೇಂದ್ರದ ಹಸ್ತಕ್ಷೇಪವನ್ನು ಟೀಕಿಸಿವೆ. ಎನ್.ಐ.ಎ. ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ತನಿಖಾ ಸಂಸ್ಥೆಯಲ್ಲ, ಸಿ.ಬಿ.ಐ. ಸಂಸ್ಥೆಯಂತೆಯೇ ಕೇಂದ್ರ ಸರ್ಕಾರದ ಇಷಾರೆಯಂತೆ ನಡೆದುಕೊಳ್ಳುವ ಪಂಜರದ ಗಿಳಿ ಎಂಬ ಟೀಕೆಗಳನ್ನು ಎದುರಿಸಿದೆ. ಸಂವಿಧಾನ ಎತ್ತಿ ಹಿಡಿದಿರುವ ಒಕ್ಕೂಟ ವ್ಯವಸ್ಥೆಯ ಆಶಯವನ್ನು ಈ ಕ್ರಮ ಬೀಳುಗಳೆದಿದೆ. ಮಾಲೇಗಾಂವ್ ಸ್ಫೋಟಗಳ ಸಂಬಂಧದಲ್ಲಿ ಬಂಧಿಸಲಾಗಿದ್ದ ಸಾಧ್ವಿ ಪ್ರಗ್ಯಾ ಮತ್ತಿತರರ ಕುರಿತು ಮೆದು ಧೋರಣೆ ತಳೆಯುವಂತೆ ಎನ್.ಐ.ಎ. ತಮಗೆ ಸೂಚಿಸಿತ್ತೆಂದು ಈ ಕೇಸಿನ ಸರ್ಕಾರಿ ವಕೀಲರಾದ ರೋಹಿಣಿ ಸಾಲಿಯಾನ್ ದೂರು ಕೆಲ ವರ್ಷಗಳ ಹಿಂದೆ ಭಾರೀ ಸದ್ದು ಮಾಡಿತ್ತು.

ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಈ ಕೇಸಿನ ಕುರಿತು ಪುಣೆ ಪೋಲೀಸರು ನಡೆಸಿದ ತನಿಖೆಯ ಪ್ರಗತಿ ಕುರಿತು ಎನ್.ಐ.ಎ. ತೃಪ್ತಿ ವ್ಯಕ್ತಪಡಿಸಿತ್ತು ಎಂಬುದು ಗಮನಾರ್ಹ ಅಂಶ.

ಎಲ್ಗಾರ್ ಪರಿಷತ್- ಭೀಮಾ ಕೋರೆಗಾಂವ್ ಕೇಸಿಗೆ ರಾಜಕೀಯ ದುರುದ್ದೇಶವಿದೆ ಎಂಬ ಆಪಾದನೆ ಆರಂಭದಿಂದಲೂ ಕೇಳಿ ಬಂದಿತ್ತು. ಈ ಪ್ರಕರಣವು ಮಾವೋವಾದಿಗಳ ಒಳಸಂಚು ಎಂಬುದು ಪುಣೆ ಪೋಲೀಸರ ಆರೋಪ. ಈ ಆರೋಪದಲ್ಲಿ ಹುರುಳಿಲ್ಲವೆಂದು ಗಟ್ಟಿ ದನಿಗಳು ಕೇಳಿ ಬಂದಿವೆ. ಭೀಮಾ ಕೋರೆಗಾಂವ್‍ನಲ್ಲಿ ಜರುಗಿದ ಹಿಂಸೆಯನ್ನು ಪ್ರಚೋದಿಸಿದ್ದು ಹಿಂದೂ ಕಟ್ಟರ್‍ವಾದಿ ಸಂಘಟನೆಗಳು. ಈ ಗುಂಪುಗಳನ್ನು ರಕ್ಷಿಸಲು ಸಾಮಾಜಿಕ ಕಾರ್ಯಕರ್ತರು ಮತ್ತು ಮಾನವಹಕ್ಕುಗಳ ಹೋರಾಟಗಾರರ ಮೇಲೆ ಹುಸಿ ಆರೋಪಗಳನ್ನು ಹೊರಿಸಲಾಗಿದೆ ಎಂದು ಬಿಜೆಪಿಯೇತರ ರಾಜಕೀಯ- ಸಾಮಾಜಿಕ ಸಂಘಟನೆಗಳು ವಾದಿಸಿವೆ. ಈಗಾಗಲೆ ರಾಜಕೀಯಗೊಳಿಸಿರುವ ಈ ಕೇಸನ್ನು ಕೇಂದ್ರದ ಕ್ರಮವು ಮತ್ತಷ್ಟು ರಾಜಕೀಯಗೊಳಿಸಲಿದೆ.

ಈ ಕೇಸಿನ ಮರುವಿಮರ್ಶೆಯನ್ನು ತಪ್ಪಿಸುವುದೇ ಕೇಂದ್ರದ ಉದ್ದೇಶ. 2017ರ ಡಿಸೆಂಬರ್ 31ರಂದು ಎಲ್ಗಾರ್ ಪರಿಷತ್ತಿನ ಸಭೆಯಲ್ಲಿ ಮಾಡಲಾದ ಭಾಷಣಗಳನ್ನು ಆಧರಿಸಿ ಈ ಕೇಸನ್ನು ದುರುದ್ದೇಶಪೂರ್ವಕವಾಗಿ ಬೃಹದಾಕಾರವಾಗಿ ಬೆಳೆಸಲಾಗಿದೆ. 200 ವರ್ಷಗಳ ಹಿಂದೆ ದಲಿತ ಪೀಡಕ ಪೇಶ್ವೆಗಳ ಸೈನ್ಯದ ವಿರುದ್ಧ ದಲಿತರು ಗಳಿಸಿದ ವಿಜಯವನ್ನು ಪರಿಷತ್ ಸಭೆಯಲ್ಲಿ ಆಚರಿಸಲಾಗಿತ್ತು. ಮರುದಿನ ಈ ಸಭೆಗೆ ಪ್ರತಿಕ್ರಿಯೆಯಾಗಿ ಹಿಂದೂ ಕಟ್ಟರ್ ಪಂಥೀಯ ಗುಂಪುಗಳು ಗಲಭೆಯನ್ನು ಪ್ರಚೋದಿಸಿದ್ದವು. ಈ ಹಿನ್ನೆಲೆಯನ್ನು ಇಟ್ಟುಕೊಂಡು ಕೇಂದ್ರ ಸರ್ಕಾರವನ್ನು ಉರುಳಿಸುವ ಸಂಚಿನ ಆರೋಪವನ್ನು ಹೊರಿಸಲಾಯಿತು. ಪ್ರಧಾನಿಯವರ ಹತ್ಯೆಯ ಆರೋಪವನ್ನು ಮಾಡಲಾದರೂ, ಈ ಆರೋಪ ಎಫ್.ಐ.ಆರ್.ನಲ್ಲಿ ನಮೂದಾಗಲಿಲ್ಲ. ಪೋಲೀಸರ ಆರಂಭಿಕ ತನಿಖೆಯಲ್ಲಿ ಹಿಂಸೆಯ ಹಿಂದೆ ಹಿಂದೂ ಕಟ್ಟರ್‍ವಾದಿ ಗುಂಪುಗಳ ಕೈವಾಡ ಕಂಡುಬಂದಿತ್ತು. ಆನಂತರ ಈ ತನಿಖೆಯ ದಾರಿ ವಿರುದ್ಧ ದಿಕ್ಕು ಹಿಡಿಯಿತು. ಈ ಕೇಸಿನ ಸ್ವತಂತ್ರ ತನಿಖೆ ಸುಪ್ರೀಮ್ ಕೋರ್ಟ್ ಉಸ್ತುವಾರಿಯಲ್ಲಿ ನಡೆಯಬೇಕೆಂಬ ವಾದವನ್ನು ಅಂದಿನ ಮಹಾರಾಷ್ಟ್ರ ಸರ್ಕಾರ ಬಲವಾಗಿ ವಿರೋಧಿಸಿತ್ತು. ಆ ಸಂದರ್ಭದಲ್ಲಿ ಈ ಕೇಸನ್ನು ಎನ್.ಐ.ಎ.ಗೆ ವಹಿಸಿಕೊಡುವ ಇರಾದೆ ಕೇಂದ್ರ ಸರ್ಕಾರಕ್ಕೆ ಇರಲಿಲ್ಲ.

ಮಾನವಹಕ್ಕುಗಳ ಪ್ರತಿಪಾದಕರು ಮತ್ತು ಸಾಮಾಜಿಕ ಹೋರಾಟಗಾರರನ್ನು ಜೈಲಿಗೆ ತಳ್ಳಲು ಮತ್ತು ಮೋದಿ ಸರ್ಕಾರದ ವಿರುದ್ಧದ ಭಿನ್ನಮತದ ದನಿಗಳನ್ನು ಅಡಗಿಸಲು ಹೂಡಲಾಗಿರುವ ದುರುದ್ದೇಶಪೂರಿತ ಮೊಕದ್ದಮೆಯಿದು. ಇಂತಹ ಕೇಸಿನಲ್ಲಿ ನ್ಯಾಯವಾದ ಮತ್ತು ನಿಷ್ಪಕ್ಷಪಾತದ ತನಿಖೆಯ ಅವಕಾಶವನ್ನು ನಿರಾಕರಿಸಿರುವುದು ಖಂಡನೀಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತನ್ನ ವಿರುದ್ಧ ದನಿ ಎತ್ತುವವರಿಗೆಲ್ಲಾ, “ದೇಶದ್ರೋಹಿ” ಎಂಬ ಹಣೆಪಟ್ಟಿಯನ್ನು ಹಚ್ಚಿ ಅವರನ್ನು ಜೈಲಿನಲ್ಲಿ ಕೊಳೆಯುವಂತೆ ಮಾಡಿದರೆ, ವಿರೋಧದ ದನಿ ಅಡಗುತ್ತದೆ ಎಂದು, ಕೇಂದ್ರ ಸರ್ಕಾರ ತಿಳಿದಿರುವಂತಿದೆ. ಆದರೆ, ಕೇಂದ್ರ ಸರ್ಕಾರದ ಈ ತಿಳುವಳಿಕೆ ‘ತಪ್ಪು’ ಎಂಬುದು ಪ್ರಪಂಚದ ಇತಿಹಾಸದಲ್ಲಿ ಅನೇಕ ಬಾರಿ ಸಾಬೀತಾಗಿದೆ. ಎಂತೆಂತಹ ಸರ್ವಾಧಿಕಾರಿಗಳೂ ಮಣ್ಣುಮುಕ್ಕಿ ವಿಫಲರಾಗಿರುವ ಇತಿಹಾಸ ನಮ್ಮ ಕಣ್ಮುಂದೆ ಇರುವಾಗ, ಈ ಮನುವಾದಿಗಳ ಆಟ ಹೆಚ್ಚುದಿನ ನಡೆಯುವುದಿಲ್ಲ. ಆದರೆ ಇವರಿಂದ ಅನ್ಯಾಯವಾಗಿ ಜೈಲುಪಾಲಾಗಿರುವ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರ ಪರವಾಗಿ ಈ ದೇಶದ ಪ್ರಜ್ಞಾವಂತರೆಲ್ಲರೂ ಒಕ್ಕೊರಲಿನಿಂದ ದನಿ ಎತ್ತಬೇಕು. ಆಗ ಮಾತ್ರ ಅಮಾಯಕರಿಗೆ ಈ ಮನುವಾದಿಗಳಿಂದ ಆಗುತ್ತಿರುವ ಅನ್ಯಾಯವನ್ನು ನಾವು ತಡೆಗಟ್ಟಬಹುದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...