Homeಮುಖಪುಟಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

ಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

- Advertisement -
- Advertisement -

ಈ ಕೇಸನ್ನು ಕೇಂದ್ರ ಸರ್ಕಾರದ ಕೆಳಗೆ ಕೆಲಸ ಮಾಡುವ ಎನ್.ಐ.ಎ.ಗೆ ವಹಿಸಿಕೊಡುತ್ತಿರುವ ಸಂದರ್ಭ ಮತ್ತು ಸಮಯ ಎರಡೂ ಪ್ರಶ್ನಾರ್ಹ.

ಎಲ್ಗಾರ್ ಪರಿಷತ್- ಭೀಮಾ ಕೋರೆಗಾಂವ್ ಕೇಸಿನ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಗೆ ವಹಿಸಿಕೊಡುತ್ತಿರುವ ಕ್ರಮ ನಿಂದನೀಯ. ಕಾನೂನು ಪ್ರಕಾರ ಹೀಗೆ ರಾಜ್ಯ ಸರ್ಕಾರದ ಪರಿಧಿಯಲ್ಲಿದ್ದ ಕೇಸೊಂದನ್ನು, ಆ ರಾಜ್ಯದ ಅನುಮೋದನೆ ಇಲ್ಲದೆ ಏಕಪಕ್ಷೀಯವಾಗಿ ಎನ್.ಐ.ಎ.ಗೆ ವಹಿಸಿಕೊಡುವ ಕ್ರಮ ಕಾನೂನುಬಾಹಿರವೇನೂ ಅಲ್ಲ. ಕಾನೂನಿನಲ್ಲಿ ಇಂತಹ ಹಸ್ತಾಂತರಕ್ಕೆ ಅವಕಾಶವಿದೆ. ಆದರೆ ಈ ಕೇಸನ್ನು ಕೇಂದ್ರ ಸರ್ಕಾರದ ಕೆಳಗೆ ಕೆಲಸ ಮಾಡುವ ಎನ್.ಐ.ಎ.ಗೆ ವಹಿಸಿಕೊಡುತ್ತಿರುವ ಸಂದರ್ಭ ಮತ್ತು ಸಮಯ ಎರಡೂ ಪ್ರಶ್ನಾರ್ಹ.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ತನಗಿರುವ ಅಧಿಕಾರವನ್ನು ಹೆಚ್ಚು ಎಚ್ಚರಿಕೆಯಿಂದ ಪ್ರಯೋಗಿಸಬೇಕಾಗುತ್ತದೆ. ಅಧಿಕಾರವಿದೆ ಎಂದ ಮಾತ್ರಕ್ಕೆ ರಾಜ್ಯ ಸರ್ಕಾರಗಳನ್ನು ಧಿಕ್ಕರಿಸಿ ನಡೆದುಕೊಳ್ಳುವುದು ಸಲ್ಲದು. ಕೇಂದ್ರ ಮತ್ತು ರಾಜ್ಯದ ನಡುವಣ ಸಂಬಂಧಗಳು ಸೌಹಾರ್ದಯುತವಾಗಿರಬೇಕು. ಈ ಸಂಬಂಧ ಕೆಟ್ಟರೆ ಅದರ ಫಲವನ್ನು ಕೇವಲ ನಿರ್ದಿಷ್ಟ ರಾಜ್ಯ ಮಾತ್ರವೇ ಅಲ್ಲದೆ ಪ್ರತ್ಯಕ್ಷ-ಪರೋಕ್ಷವಾಗಿ ಇಡೀ ದೇಶವೇ ಅನುಭವಿಸಬೇಕಾಗುತ್ತದೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೂಡಲಾದ ಈ ಕೇಸಿನಲ್ಲಿ ಮಾಡಲಾಗಿರುವ ಆಪಾದನೆಗಳಿಗೆ ಬಲವಾದ ಸಾಕ್ಷ್ಯ ಪುರಾವೆಗಳಿಲ್ಲ ಎಂಬುದು ಮಹಾರಾಷ್ಟ್ರದ ಈಗಿನ ಸಮ್ಮಿಶ್ರ ಸರ್ಕಾರದ ಸ್ಪಷ್ಟ ನಿಲುವು. ಬಂಧಿತ ಸಾಮಾಜಿಕ ಹೋರಾಟಗಾರರು ಭೀಮಾ ಕೋರೆಗಾಂವ್ ಹಿಂಸೆಯನ್ನು ಪ್ರಚೋದಿಸಿದ್ದರು ಎಂಬುದು ಪುಣೆ ಪೋಲಿಸರ ಆರೋಪ. ಆದಕ್ಕೆ ಅವರು ಒದಗಿಸಿರುವ ಪುರಾವೆಗಳು ಕೇವಲ ಕೆಲ ಪುಸ್ತಕಗಳು ಮತ್ತು ಸಿ.ಡಿ.ಗಳು. ಕೇಸನ್ನು ಎನ್.ಐ.ಎ.ಗೆ ವರ್ಗಾಯಿಸುವ ಕೇಂದ್ರದ ಕ್ರಮ ಕುರಿತು ಮಹಾರಾಷ್ಟ್ರ ಸರ್ಕಾರ ಕಾನೂನು ಸಲಹೆ ಕೋರಿದೆ.

ಮಹಾರಾಷ್ಟ್ರ ಸರ್ಕಾರ ಈ ಕೇಸಿನ ಆರೋಪಪಟ್ಟಿಯನ್ನು ಮರುವಿಮರ್ಶೆ ಮಾಡುವ ನಿರ್ಧಾರ ಕೈಗೊಂಡ ಮರುದಿನವೇ ಹೊರಬಿದ್ದಿರುವ ಕೇಂದ್ರ ಸರ್ಕಾರದ ನಿರ್ಧಾರ ಕೇವಲ ಕಾಕತಾಳೀಯ ಆಗಿರುವುದು ಸಾಧ್ಯವಿಲ್ಲ. ಈ ಕೇಸಿನ ತನಿಖೆಯನ್ನು 2018ರಿಂದ ಪುಣೆಯ ಪೋಲಿಸರು ನಡೆಸುತ್ತಿದ್ದಾರೆ. ಈ ತನಿಖೆಯನ್ನು ಪುಣೆ ಪೋಲಿಸರಿಂದ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರ ಮಾಡುವ ಇಂಗಿತವನ್ನು ರಾಜ್ಯ ಸರ್ಕಾರ ನೀಡಿತ್ತು. ರಾಜ್ಯ ಸರ್ಕಾರ ಈ ಕೇಸನ್ನು ಮರುವಿಮರ್ಶೆಗೆ ಒಳಪಡಿಸುವ ನಿರ್ಧಾರ ತೆಗೆದುಕೊಂಡರೆ ಆ ನಿರ್ಧಾರವೇ ಅಂತಿಮ ಅಲ್ಲ. ಅಂತಹ ನಿರ್ಧಾರವು ನ್ಯಾಯಾಲಯದ ಪರೀಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನಾ-ಎನ್.ಸಿ.ಪಿ.- ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿತ್ತು. ಈ ಸರ್ಕಾರದ ಹಿಂದಿನ ಶಕ್ತಿಯಾಗಿರುವ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಈ ಕೇಸಿನಲ್ಲಿ ಸಾಮಾಜಿಕ ಹೋರಾಟಗಾರರು ಮತ್ತು ಬುದ್ಧಿಜೀವಿಗಳನ್ನು ಸಿಕ್ಕಿಸಿ ಜೈಲಿಗೆ ತಳ್ಳಿದ ಕ್ರಮವನ್ನು ಕಟುವಾಗಿ ಟೀಕಿಸಿದ್ದರು. ಪುಣೆ ಪೋಲಿಸರಾಗಲಿ, ಉದ್ದೇಶಿತ ವಿಶೇಷ ತನಿಖಾ ತಂಡವಾಗಲಿ ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತವೆ. ಆದರೆ ಎನ್.ಐ.ಎ. ನೇರವಾಗಿ ಕೇಂದ್ರ ಸರ್ಕಾರದ ಗೃಹಮಂತ್ರಿ ಅಮಿತ್ ಶಾ ಅವರ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂಬುದು ಗಮನಿಸಬೇಕಿರುವ ಅಂಶ. ಎಲ್ಗಾರ್ ಪರಿಷತ್ ಕೇಸು ಈಗಾಗಲೆ ತನಿಖೆಯ ಹಂತವನ್ನು ಹಾದು ನ್ಯಾಯಾಲಯವನ್ನು ಮುಟ್ಟಿದೆ. ಈ ಹಂತದಲ್ಲಿ ಕೇಂದ್ರ ಸರ್ಕಾರ ಮೂಗು ತೂರಿಸಿರುವುದು ಶಂಕೆಗೆ ಆಸ್ಪದ ಮಾಡಿದೆ. ಈ ಹಿಂದಿನ ಬಿಜೆಪಿ ಸರ್ಕಾರವನ್ನು ರಕ್ಷಿಸುವ ಹುನ್ನಾರವಿದು ಎಂದು ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಪಕ್ಷಗಳು ಕೇಂದ್ರದ ಹಸ್ತಕ್ಷೇಪವನ್ನು ಟೀಕಿಸಿವೆ. ಎನ್.ಐ.ಎ. ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ತನಿಖಾ ಸಂಸ್ಥೆಯಲ್ಲ, ಸಿ.ಬಿ.ಐ. ಸಂಸ್ಥೆಯಂತೆಯೇ ಕೇಂದ್ರ ಸರ್ಕಾರದ ಇಷಾರೆಯಂತೆ ನಡೆದುಕೊಳ್ಳುವ ಪಂಜರದ ಗಿಳಿ ಎಂಬ ಟೀಕೆಗಳನ್ನು ಎದುರಿಸಿದೆ. ಸಂವಿಧಾನ ಎತ್ತಿ ಹಿಡಿದಿರುವ ಒಕ್ಕೂಟ ವ್ಯವಸ್ಥೆಯ ಆಶಯವನ್ನು ಈ ಕ್ರಮ ಬೀಳುಗಳೆದಿದೆ. ಮಾಲೇಗಾಂವ್ ಸ್ಫೋಟಗಳ ಸಂಬಂಧದಲ್ಲಿ ಬಂಧಿಸಲಾಗಿದ್ದ ಸಾಧ್ವಿ ಪ್ರಗ್ಯಾ ಮತ್ತಿತರರ ಕುರಿತು ಮೆದು ಧೋರಣೆ ತಳೆಯುವಂತೆ ಎನ್.ಐ.ಎ. ತಮಗೆ ಸೂಚಿಸಿತ್ತೆಂದು ಈ ಕೇಸಿನ ಸರ್ಕಾರಿ ವಕೀಲರಾದ ರೋಹಿಣಿ ಸಾಲಿಯಾನ್ ದೂರು ಕೆಲ ವರ್ಷಗಳ ಹಿಂದೆ ಭಾರೀ ಸದ್ದು ಮಾಡಿತ್ತು.

ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಈ ಕೇಸಿನ ಕುರಿತು ಪುಣೆ ಪೋಲೀಸರು ನಡೆಸಿದ ತನಿಖೆಯ ಪ್ರಗತಿ ಕುರಿತು ಎನ್.ಐ.ಎ. ತೃಪ್ತಿ ವ್ಯಕ್ತಪಡಿಸಿತ್ತು ಎಂಬುದು ಗಮನಾರ್ಹ ಅಂಶ.

ಎಲ್ಗಾರ್ ಪರಿಷತ್- ಭೀಮಾ ಕೋರೆಗಾಂವ್ ಕೇಸಿಗೆ ರಾಜಕೀಯ ದುರುದ್ದೇಶವಿದೆ ಎಂಬ ಆಪಾದನೆ ಆರಂಭದಿಂದಲೂ ಕೇಳಿ ಬಂದಿತ್ತು. ಈ ಪ್ರಕರಣವು ಮಾವೋವಾದಿಗಳ ಒಳಸಂಚು ಎಂಬುದು ಪುಣೆ ಪೋಲೀಸರ ಆರೋಪ. ಈ ಆರೋಪದಲ್ಲಿ ಹುರುಳಿಲ್ಲವೆಂದು ಗಟ್ಟಿ ದನಿಗಳು ಕೇಳಿ ಬಂದಿವೆ. ಭೀಮಾ ಕೋರೆಗಾಂವ್‍ನಲ್ಲಿ ಜರುಗಿದ ಹಿಂಸೆಯನ್ನು ಪ್ರಚೋದಿಸಿದ್ದು ಹಿಂದೂ ಕಟ್ಟರ್‍ವಾದಿ ಸಂಘಟನೆಗಳು. ಈ ಗುಂಪುಗಳನ್ನು ರಕ್ಷಿಸಲು ಸಾಮಾಜಿಕ ಕಾರ್ಯಕರ್ತರು ಮತ್ತು ಮಾನವಹಕ್ಕುಗಳ ಹೋರಾಟಗಾರರ ಮೇಲೆ ಹುಸಿ ಆರೋಪಗಳನ್ನು ಹೊರಿಸಲಾಗಿದೆ ಎಂದು ಬಿಜೆಪಿಯೇತರ ರಾಜಕೀಯ- ಸಾಮಾಜಿಕ ಸಂಘಟನೆಗಳು ವಾದಿಸಿವೆ. ಈಗಾಗಲೆ ರಾಜಕೀಯಗೊಳಿಸಿರುವ ಈ ಕೇಸನ್ನು ಕೇಂದ್ರದ ಕ್ರಮವು ಮತ್ತಷ್ಟು ರಾಜಕೀಯಗೊಳಿಸಲಿದೆ.

ಈ ಕೇಸಿನ ಮರುವಿಮರ್ಶೆಯನ್ನು ತಪ್ಪಿಸುವುದೇ ಕೇಂದ್ರದ ಉದ್ದೇಶ. 2017ರ ಡಿಸೆಂಬರ್ 31ರಂದು ಎಲ್ಗಾರ್ ಪರಿಷತ್ತಿನ ಸಭೆಯಲ್ಲಿ ಮಾಡಲಾದ ಭಾಷಣಗಳನ್ನು ಆಧರಿಸಿ ಈ ಕೇಸನ್ನು ದುರುದ್ದೇಶಪೂರ್ವಕವಾಗಿ ಬೃಹದಾಕಾರವಾಗಿ ಬೆಳೆಸಲಾಗಿದೆ. 200 ವರ್ಷಗಳ ಹಿಂದೆ ದಲಿತ ಪೀಡಕ ಪೇಶ್ವೆಗಳ ಸೈನ್ಯದ ವಿರುದ್ಧ ದಲಿತರು ಗಳಿಸಿದ ವಿಜಯವನ್ನು ಪರಿಷತ್ ಸಭೆಯಲ್ಲಿ ಆಚರಿಸಲಾಗಿತ್ತು. ಮರುದಿನ ಈ ಸಭೆಗೆ ಪ್ರತಿಕ್ರಿಯೆಯಾಗಿ ಹಿಂದೂ ಕಟ್ಟರ್ ಪಂಥೀಯ ಗುಂಪುಗಳು ಗಲಭೆಯನ್ನು ಪ್ರಚೋದಿಸಿದ್ದವು. ಈ ಹಿನ್ನೆಲೆಯನ್ನು ಇಟ್ಟುಕೊಂಡು ಕೇಂದ್ರ ಸರ್ಕಾರವನ್ನು ಉರುಳಿಸುವ ಸಂಚಿನ ಆರೋಪವನ್ನು ಹೊರಿಸಲಾಯಿತು. ಪ್ರಧಾನಿಯವರ ಹತ್ಯೆಯ ಆರೋಪವನ್ನು ಮಾಡಲಾದರೂ, ಈ ಆರೋಪ ಎಫ್.ಐ.ಆರ್.ನಲ್ಲಿ ನಮೂದಾಗಲಿಲ್ಲ. ಪೋಲೀಸರ ಆರಂಭಿಕ ತನಿಖೆಯಲ್ಲಿ ಹಿಂಸೆಯ ಹಿಂದೆ ಹಿಂದೂ ಕಟ್ಟರ್‍ವಾದಿ ಗುಂಪುಗಳ ಕೈವಾಡ ಕಂಡುಬಂದಿತ್ತು. ಆನಂತರ ಈ ತನಿಖೆಯ ದಾರಿ ವಿರುದ್ಧ ದಿಕ್ಕು ಹಿಡಿಯಿತು. ಈ ಕೇಸಿನ ಸ್ವತಂತ್ರ ತನಿಖೆ ಸುಪ್ರೀಮ್ ಕೋರ್ಟ್ ಉಸ್ತುವಾರಿಯಲ್ಲಿ ನಡೆಯಬೇಕೆಂಬ ವಾದವನ್ನು ಅಂದಿನ ಮಹಾರಾಷ್ಟ್ರ ಸರ್ಕಾರ ಬಲವಾಗಿ ವಿರೋಧಿಸಿತ್ತು. ಆ ಸಂದರ್ಭದಲ್ಲಿ ಈ ಕೇಸನ್ನು ಎನ್.ಐ.ಎ.ಗೆ ವಹಿಸಿಕೊಡುವ ಇರಾದೆ ಕೇಂದ್ರ ಸರ್ಕಾರಕ್ಕೆ ಇರಲಿಲ್ಲ.

ಮಾನವಹಕ್ಕುಗಳ ಪ್ರತಿಪಾದಕರು ಮತ್ತು ಸಾಮಾಜಿಕ ಹೋರಾಟಗಾರರನ್ನು ಜೈಲಿಗೆ ತಳ್ಳಲು ಮತ್ತು ಮೋದಿ ಸರ್ಕಾರದ ವಿರುದ್ಧದ ಭಿನ್ನಮತದ ದನಿಗಳನ್ನು ಅಡಗಿಸಲು ಹೂಡಲಾಗಿರುವ ದುರುದ್ದೇಶಪೂರಿತ ಮೊಕದ್ದಮೆಯಿದು. ಇಂತಹ ಕೇಸಿನಲ್ಲಿ ನ್ಯಾಯವಾದ ಮತ್ತು ನಿಷ್ಪಕ್ಷಪಾತದ ತನಿಖೆಯ ಅವಕಾಶವನ್ನು ನಿರಾಕರಿಸಿರುವುದು ಖಂಡನೀಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತನ್ನ ವಿರುದ್ಧ ದನಿ ಎತ್ತುವವರಿಗೆಲ್ಲಾ, “ದೇಶದ್ರೋಹಿ” ಎಂಬ ಹಣೆಪಟ್ಟಿಯನ್ನು ಹಚ್ಚಿ ಅವರನ್ನು ಜೈಲಿನಲ್ಲಿ ಕೊಳೆಯುವಂತೆ ಮಾಡಿದರೆ, ವಿರೋಧದ ದನಿ ಅಡಗುತ್ತದೆ ಎಂದು, ಕೇಂದ್ರ ಸರ್ಕಾರ ತಿಳಿದಿರುವಂತಿದೆ. ಆದರೆ, ಕೇಂದ್ರ ಸರ್ಕಾರದ ಈ ತಿಳುವಳಿಕೆ ‘ತಪ್ಪು’ ಎಂಬುದು ಪ್ರಪಂಚದ ಇತಿಹಾಸದಲ್ಲಿ ಅನೇಕ ಬಾರಿ ಸಾಬೀತಾಗಿದೆ. ಎಂತೆಂತಹ ಸರ್ವಾಧಿಕಾರಿಗಳೂ ಮಣ್ಣುಮುಕ್ಕಿ ವಿಫಲರಾಗಿರುವ ಇತಿಹಾಸ ನಮ್ಮ ಕಣ್ಮುಂದೆ ಇರುವಾಗ, ಈ ಮನುವಾದಿಗಳ ಆಟ ಹೆಚ್ಚುದಿನ ನಡೆಯುವುದಿಲ್ಲ. ಆದರೆ ಇವರಿಂದ ಅನ್ಯಾಯವಾಗಿ ಜೈಲುಪಾಲಾಗಿರುವ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರ ಪರವಾಗಿ ಈ ದೇಶದ ಪ್ರಜ್ಞಾವಂತರೆಲ್ಲರೂ ಒಕ್ಕೊರಲಿನಿಂದ ದನಿ ಎತ್ತಬೇಕು. ಆಗ ಮಾತ್ರ ಅಮಾಯಕರಿಗೆ ಈ ಮನುವಾದಿಗಳಿಂದ ಆಗುತ್ತಿರುವ ಅನ್ಯಾಯವನ್ನು ನಾವು ತಡೆಗಟ್ಟಬಹುದು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...