Homeಮುಖಪುಟಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

ಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

- Advertisement -
- Advertisement -

ಈ ಕೇಸನ್ನು ಕೇಂದ್ರ ಸರ್ಕಾರದ ಕೆಳಗೆ ಕೆಲಸ ಮಾಡುವ ಎನ್.ಐ.ಎ.ಗೆ ವಹಿಸಿಕೊಡುತ್ತಿರುವ ಸಂದರ್ಭ ಮತ್ತು ಸಮಯ ಎರಡೂ ಪ್ರಶ್ನಾರ್ಹ.

ಎಲ್ಗಾರ್ ಪರಿಷತ್- ಭೀಮಾ ಕೋರೆಗಾಂವ್ ಕೇಸಿನ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಗೆ ವಹಿಸಿಕೊಡುತ್ತಿರುವ ಕ್ರಮ ನಿಂದನೀಯ. ಕಾನೂನು ಪ್ರಕಾರ ಹೀಗೆ ರಾಜ್ಯ ಸರ್ಕಾರದ ಪರಿಧಿಯಲ್ಲಿದ್ದ ಕೇಸೊಂದನ್ನು, ಆ ರಾಜ್ಯದ ಅನುಮೋದನೆ ಇಲ್ಲದೆ ಏಕಪಕ್ಷೀಯವಾಗಿ ಎನ್.ಐ.ಎ.ಗೆ ವಹಿಸಿಕೊಡುವ ಕ್ರಮ ಕಾನೂನುಬಾಹಿರವೇನೂ ಅಲ್ಲ. ಕಾನೂನಿನಲ್ಲಿ ಇಂತಹ ಹಸ್ತಾಂತರಕ್ಕೆ ಅವಕಾಶವಿದೆ. ಆದರೆ ಈ ಕೇಸನ್ನು ಕೇಂದ್ರ ಸರ್ಕಾರದ ಕೆಳಗೆ ಕೆಲಸ ಮಾಡುವ ಎನ್.ಐ.ಎ.ಗೆ ವಹಿಸಿಕೊಡುತ್ತಿರುವ ಸಂದರ್ಭ ಮತ್ತು ಸಮಯ ಎರಡೂ ಪ್ರಶ್ನಾರ್ಹ.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ತನಗಿರುವ ಅಧಿಕಾರವನ್ನು ಹೆಚ್ಚು ಎಚ್ಚರಿಕೆಯಿಂದ ಪ್ರಯೋಗಿಸಬೇಕಾಗುತ್ತದೆ. ಅಧಿಕಾರವಿದೆ ಎಂದ ಮಾತ್ರಕ್ಕೆ ರಾಜ್ಯ ಸರ್ಕಾರಗಳನ್ನು ಧಿಕ್ಕರಿಸಿ ನಡೆದುಕೊಳ್ಳುವುದು ಸಲ್ಲದು. ಕೇಂದ್ರ ಮತ್ತು ರಾಜ್ಯದ ನಡುವಣ ಸಂಬಂಧಗಳು ಸೌಹಾರ್ದಯುತವಾಗಿರಬೇಕು. ಈ ಸಂಬಂಧ ಕೆಟ್ಟರೆ ಅದರ ಫಲವನ್ನು ಕೇವಲ ನಿರ್ದಿಷ್ಟ ರಾಜ್ಯ ಮಾತ್ರವೇ ಅಲ್ಲದೆ ಪ್ರತ್ಯಕ್ಷ-ಪರೋಕ್ಷವಾಗಿ ಇಡೀ ದೇಶವೇ ಅನುಭವಿಸಬೇಕಾಗುತ್ತದೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೂಡಲಾದ ಈ ಕೇಸಿನಲ್ಲಿ ಮಾಡಲಾಗಿರುವ ಆಪಾದನೆಗಳಿಗೆ ಬಲವಾದ ಸಾಕ್ಷ್ಯ ಪುರಾವೆಗಳಿಲ್ಲ ಎಂಬುದು ಮಹಾರಾಷ್ಟ್ರದ ಈಗಿನ ಸಮ್ಮಿಶ್ರ ಸರ್ಕಾರದ ಸ್ಪಷ್ಟ ನಿಲುವು. ಬಂಧಿತ ಸಾಮಾಜಿಕ ಹೋರಾಟಗಾರರು ಭೀಮಾ ಕೋರೆಗಾಂವ್ ಹಿಂಸೆಯನ್ನು ಪ್ರಚೋದಿಸಿದ್ದರು ಎಂಬುದು ಪುಣೆ ಪೋಲಿಸರ ಆರೋಪ. ಆದಕ್ಕೆ ಅವರು ಒದಗಿಸಿರುವ ಪುರಾವೆಗಳು ಕೇವಲ ಕೆಲ ಪುಸ್ತಕಗಳು ಮತ್ತು ಸಿ.ಡಿ.ಗಳು. ಕೇಸನ್ನು ಎನ್.ಐ.ಎ.ಗೆ ವರ್ಗಾಯಿಸುವ ಕೇಂದ್ರದ ಕ್ರಮ ಕುರಿತು ಮಹಾರಾಷ್ಟ್ರ ಸರ್ಕಾರ ಕಾನೂನು ಸಲಹೆ ಕೋರಿದೆ.

ಮಹಾರಾಷ್ಟ್ರ ಸರ್ಕಾರ ಈ ಕೇಸಿನ ಆರೋಪಪಟ್ಟಿಯನ್ನು ಮರುವಿಮರ್ಶೆ ಮಾಡುವ ನಿರ್ಧಾರ ಕೈಗೊಂಡ ಮರುದಿನವೇ ಹೊರಬಿದ್ದಿರುವ ಕೇಂದ್ರ ಸರ್ಕಾರದ ನಿರ್ಧಾರ ಕೇವಲ ಕಾಕತಾಳೀಯ ಆಗಿರುವುದು ಸಾಧ್ಯವಿಲ್ಲ. ಈ ಕೇಸಿನ ತನಿಖೆಯನ್ನು 2018ರಿಂದ ಪುಣೆಯ ಪೋಲಿಸರು ನಡೆಸುತ್ತಿದ್ದಾರೆ. ಈ ತನಿಖೆಯನ್ನು ಪುಣೆ ಪೋಲಿಸರಿಂದ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರ ಮಾಡುವ ಇಂಗಿತವನ್ನು ರಾಜ್ಯ ಸರ್ಕಾರ ನೀಡಿತ್ತು. ರಾಜ್ಯ ಸರ್ಕಾರ ಈ ಕೇಸನ್ನು ಮರುವಿಮರ್ಶೆಗೆ ಒಳಪಡಿಸುವ ನಿರ್ಧಾರ ತೆಗೆದುಕೊಂಡರೆ ಆ ನಿರ್ಧಾರವೇ ಅಂತಿಮ ಅಲ್ಲ. ಅಂತಹ ನಿರ್ಧಾರವು ನ್ಯಾಯಾಲಯದ ಪರೀಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನಾ-ಎನ್.ಸಿ.ಪಿ.- ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿತ್ತು. ಈ ಸರ್ಕಾರದ ಹಿಂದಿನ ಶಕ್ತಿಯಾಗಿರುವ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಈ ಕೇಸಿನಲ್ಲಿ ಸಾಮಾಜಿಕ ಹೋರಾಟಗಾರರು ಮತ್ತು ಬುದ್ಧಿಜೀವಿಗಳನ್ನು ಸಿಕ್ಕಿಸಿ ಜೈಲಿಗೆ ತಳ್ಳಿದ ಕ್ರಮವನ್ನು ಕಟುವಾಗಿ ಟೀಕಿಸಿದ್ದರು. ಪುಣೆ ಪೋಲಿಸರಾಗಲಿ, ಉದ್ದೇಶಿತ ವಿಶೇಷ ತನಿಖಾ ತಂಡವಾಗಲಿ ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತವೆ. ಆದರೆ ಎನ್.ಐ.ಎ. ನೇರವಾಗಿ ಕೇಂದ್ರ ಸರ್ಕಾರದ ಗೃಹಮಂತ್ರಿ ಅಮಿತ್ ಶಾ ಅವರ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂಬುದು ಗಮನಿಸಬೇಕಿರುವ ಅಂಶ. ಎಲ್ಗಾರ್ ಪರಿಷತ್ ಕೇಸು ಈಗಾಗಲೆ ತನಿಖೆಯ ಹಂತವನ್ನು ಹಾದು ನ್ಯಾಯಾಲಯವನ್ನು ಮುಟ್ಟಿದೆ. ಈ ಹಂತದಲ್ಲಿ ಕೇಂದ್ರ ಸರ್ಕಾರ ಮೂಗು ತೂರಿಸಿರುವುದು ಶಂಕೆಗೆ ಆಸ್ಪದ ಮಾಡಿದೆ. ಈ ಹಿಂದಿನ ಬಿಜೆಪಿ ಸರ್ಕಾರವನ್ನು ರಕ್ಷಿಸುವ ಹುನ್ನಾರವಿದು ಎಂದು ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಪಕ್ಷಗಳು ಕೇಂದ್ರದ ಹಸ್ತಕ್ಷೇಪವನ್ನು ಟೀಕಿಸಿವೆ. ಎನ್.ಐ.ಎ. ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ತನಿಖಾ ಸಂಸ್ಥೆಯಲ್ಲ, ಸಿ.ಬಿ.ಐ. ಸಂಸ್ಥೆಯಂತೆಯೇ ಕೇಂದ್ರ ಸರ್ಕಾರದ ಇಷಾರೆಯಂತೆ ನಡೆದುಕೊಳ್ಳುವ ಪಂಜರದ ಗಿಳಿ ಎಂಬ ಟೀಕೆಗಳನ್ನು ಎದುರಿಸಿದೆ. ಸಂವಿಧಾನ ಎತ್ತಿ ಹಿಡಿದಿರುವ ಒಕ್ಕೂಟ ವ್ಯವಸ್ಥೆಯ ಆಶಯವನ್ನು ಈ ಕ್ರಮ ಬೀಳುಗಳೆದಿದೆ. ಮಾಲೇಗಾಂವ್ ಸ್ಫೋಟಗಳ ಸಂಬಂಧದಲ್ಲಿ ಬಂಧಿಸಲಾಗಿದ್ದ ಸಾಧ್ವಿ ಪ್ರಗ್ಯಾ ಮತ್ತಿತರರ ಕುರಿತು ಮೆದು ಧೋರಣೆ ತಳೆಯುವಂತೆ ಎನ್.ಐ.ಎ. ತಮಗೆ ಸೂಚಿಸಿತ್ತೆಂದು ಈ ಕೇಸಿನ ಸರ್ಕಾರಿ ವಕೀಲರಾದ ರೋಹಿಣಿ ಸಾಲಿಯಾನ್ ದೂರು ಕೆಲ ವರ್ಷಗಳ ಹಿಂದೆ ಭಾರೀ ಸದ್ದು ಮಾಡಿತ್ತು.

ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಈ ಕೇಸಿನ ಕುರಿತು ಪುಣೆ ಪೋಲೀಸರು ನಡೆಸಿದ ತನಿಖೆಯ ಪ್ರಗತಿ ಕುರಿತು ಎನ್.ಐ.ಎ. ತೃಪ್ತಿ ವ್ಯಕ್ತಪಡಿಸಿತ್ತು ಎಂಬುದು ಗಮನಾರ್ಹ ಅಂಶ.

ಎಲ್ಗಾರ್ ಪರಿಷತ್- ಭೀಮಾ ಕೋರೆಗಾಂವ್ ಕೇಸಿಗೆ ರಾಜಕೀಯ ದುರುದ್ದೇಶವಿದೆ ಎಂಬ ಆಪಾದನೆ ಆರಂಭದಿಂದಲೂ ಕೇಳಿ ಬಂದಿತ್ತು. ಈ ಪ್ರಕರಣವು ಮಾವೋವಾದಿಗಳ ಒಳಸಂಚು ಎಂಬುದು ಪುಣೆ ಪೋಲೀಸರ ಆರೋಪ. ಈ ಆರೋಪದಲ್ಲಿ ಹುರುಳಿಲ್ಲವೆಂದು ಗಟ್ಟಿ ದನಿಗಳು ಕೇಳಿ ಬಂದಿವೆ. ಭೀಮಾ ಕೋರೆಗಾಂವ್‍ನಲ್ಲಿ ಜರುಗಿದ ಹಿಂಸೆಯನ್ನು ಪ್ರಚೋದಿಸಿದ್ದು ಹಿಂದೂ ಕಟ್ಟರ್‍ವಾದಿ ಸಂಘಟನೆಗಳು. ಈ ಗುಂಪುಗಳನ್ನು ರಕ್ಷಿಸಲು ಸಾಮಾಜಿಕ ಕಾರ್ಯಕರ್ತರು ಮತ್ತು ಮಾನವಹಕ್ಕುಗಳ ಹೋರಾಟಗಾರರ ಮೇಲೆ ಹುಸಿ ಆರೋಪಗಳನ್ನು ಹೊರಿಸಲಾಗಿದೆ ಎಂದು ಬಿಜೆಪಿಯೇತರ ರಾಜಕೀಯ- ಸಾಮಾಜಿಕ ಸಂಘಟನೆಗಳು ವಾದಿಸಿವೆ. ಈಗಾಗಲೆ ರಾಜಕೀಯಗೊಳಿಸಿರುವ ಈ ಕೇಸನ್ನು ಕೇಂದ್ರದ ಕ್ರಮವು ಮತ್ತಷ್ಟು ರಾಜಕೀಯಗೊಳಿಸಲಿದೆ.

ಈ ಕೇಸಿನ ಮರುವಿಮರ್ಶೆಯನ್ನು ತಪ್ಪಿಸುವುದೇ ಕೇಂದ್ರದ ಉದ್ದೇಶ. 2017ರ ಡಿಸೆಂಬರ್ 31ರಂದು ಎಲ್ಗಾರ್ ಪರಿಷತ್ತಿನ ಸಭೆಯಲ್ಲಿ ಮಾಡಲಾದ ಭಾಷಣಗಳನ್ನು ಆಧರಿಸಿ ಈ ಕೇಸನ್ನು ದುರುದ್ದೇಶಪೂರ್ವಕವಾಗಿ ಬೃಹದಾಕಾರವಾಗಿ ಬೆಳೆಸಲಾಗಿದೆ. 200 ವರ್ಷಗಳ ಹಿಂದೆ ದಲಿತ ಪೀಡಕ ಪೇಶ್ವೆಗಳ ಸೈನ್ಯದ ವಿರುದ್ಧ ದಲಿತರು ಗಳಿಸಿದ ವಿಜಯವನ್ನು ಪರಿಷತ್ ಸಭೆಯಲ್ಲಿ ಆಚರಿಸಲಾಗಿತ್ತು. ಮರುದಿನ ಈ ಸಭೆಗೆ ಪ್ರತಿಕ್ರಿಯೆಯಾಗಿ ಹಿಂದೂ ಕಟ್ಟರ್ ಪಂಥೀಯ ಗುಂಪುಗಳು ಗಲಭೆಯನ್ನು ಪ್ರಚೋದಿಸಿದ್ದವು. ಈ ಹಿನ್ನೆಲೆಯನ್ನು ಇಟ್ಟುಕೊಂಡು ಕೇಂದ್ರ ಸರ್ಕಾರವನ್ನು ಉರುಳಿಸುವ ಸಂಚಿನ ಆರೋಪವನ್ನು ಹೊರಿಸಲಾಯಿತು. ಪ್ರಧಾನಿಯವರ ಹತ್ಯೆಯ ಆರೋಪವನ್ನು ಮಾಡಲಾದರೂ, ಈ ಆರೋಪ ಎಫ್.ಐ.ಆರ್.ನಲ್ಲಿ ನಮೂದಾಗಲಿಲ್ಲ. ಪೋಲೀಸರ ಆರಂಭಿಕ ತನಿಖೆಯಲ್ಲಿ ಹಿಂಸೆಯ ಹಿಂದೆ ಹಿಂದೂ ಕಟ್ಟರ್‍ವಾದಿ ಗುಂಪುಗಳ ಕೈವಾಡ ಕಂಡುಬಂದಿತ್ತು. ಆನಂತರ ಈ ತನಿಖೆಯ ದಾರಿ ವಿರುದ್ಧ ದಿಕ್ಕು ಹಿಡಿಯಿತು. ಈ ಕೇಸಿನ ಸ್ವತಂತ್ರ ತನಿಖೆ ಸುಪ್ರೀಮ್ ಕೋರ್ಟ್ ಉಸ್ತುವಾರಿಯಲ್ಲಿ ನಡೆಯಬೇಕೆಂಬ ವಾದವನ್ನು ಅಂದಿನ ಮಹಾರಾಷ್ಟ್ರ ಸರ್ಕಾರ ಬಲವಾಗಿ ವಿರೋಧಿಸಿತ್ತು. ಆ ಸಂದರ್ಭದಲ್ಲಿ ಈ ಕೇಸನ್ನು ಎನ್.ಐ.ಎ.ಗೆ ವಹಿಸಿಕೊಡುವ ಇರಾದೆ ಕೇಂದ್ರ ಸರ್ಕಾರಕ್ಕೆ ಇರಲಿಲ್ಲ.

ಮಾನವಹಕ್ಕುಗಳ ಪ್ರತಿಪಾದಕರು ಮತ್ತು ಸಾಮಾಜಿಕ ಹೋರಾಟಗಾರರನ್ನು ಜೈಲಿಗೆ ತಳ್ಳಲು ಮತ್ತು ಮೋದಿ ಸರ್ಕಾರದ ವಿರುದ್ಧದ ಭಿನ್ನಮತದ ದನಿಗಳನ್ನು ಅಡಗಿಸಲು ಹೂಡಲಾಗಿರುವ ದುರುದ್ದೇಶಪೂರಿತ ಮೊಕದ್ದಮೆಯಿದು. ಇಂತಹ ಕೇಸಿನಲ್ಲಿ ನ್ಯಾಯವಾದ ಮತ್ತು ನಿಷ್ಪಕ್ಷಪಾತದ ತನಿಖೆಯ ಅವಕಾಶವನ್ನು ನಿರಾಕರಿಸಿರುವುದು ಖಂಡನೀಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತನ್ನ ವಿರುದ್ಧ ದನಿ ಎತ್ತುವವರಿಗೆಲ್ಲಾ, “ದೇಶದ್ರೋಹಿ” ಎಂಬ ಹಣೆಪಟ್ಟಿಯನ್ನು ಹಚ್ಚಿ ಅವರನ್ನು ಜೈಲಿನಲ್ಲಿ ಕೊಳೆಯುವಂತೆ ಮಾಡಿದರೆ, ವಿರೋಧದ ದನಿ ಅಡಗುತ್ತದೆ ಎಂದು, ಕೇಂದ್ರ ಸರ್ಕಾರ ತಿಳಿದಿರುವಂತಿದೆ. ಆದರೆ, ಕೇಂದ್ರ ಸರ್ಕಾರದ ಈ ತಿಳುವಳಿಕೆ ‘ತಪ್ಪು’ ಎಂಬುದು ಪ್ರಪಂಚದ ಇತಿಹಾಸದಲ್ಲಿ ಅನೇಕ ಬಾರಿ ಸಾಬೀತಾಗಿದೆ. ಎಂತೆಂತಹ ಸರ್ವಾಧಿಕಾರಿಗಳೂ ಮಣ್ಣುಮುಕ್ಕಿ ವಿಫಲರಾಗಿರುವ ಇತಿಹಾಸ ನಮ್ಮ ಕಣ್ಮುಂದೆ ಇರುವಾಗ, ಈ ಮನುವಾದಿಗಳ ಆಟ ಹೆಚ್ಚುದಿನ ನಡೆಯುವುದಿಲ್ಲ. ಆದರೆ ಇವರಿಂದ ಅನ್ಯಾಯವಾಗಿ ಜೈಲುಪಾಲಾಗಿರುವ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರ ಪರವಾಗಿ ಈ ದೇಶದ ಪ್ರಜ್ಞಾವಂತರೆಲ್ಲರೂ ಒಕ್ಕೊರಲಿನಿಂದ ದನಿ ಎತ್ತಬೇಕು. ಆಗ ಮಾತ್ರ ಅಮಾಯಕರಿಗೆ ಈ ಮನುವಾದಿಗಳಿಂದ ಆಗುತ್ತಿರುವ ಅನ್ಯಾಯವನ್ನು ನಾವು ತಡೆಗಟ್ಟಬಹುದು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...