Homeಮುಖಪುಟಭಿಲ್ವಾರಾ ಸಾಮೂಹಿಕ ಅತ್ಯಾಚಾರ: ಬಾಲಕಿಯ ಸಜೀವ ದಹನ; ಚಾರ್ಜ್‌ಶೀಟ್ ಸಲ್ಲಿಕೆ

ಭಿಲ್ವಾರಾ ಸಾಮೂಹಿಕ ಅತ್ಯಾಚಾರ: ಬಾಲಕಿಯ ಸಜೀವ ದಹನ; ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಕಳೆದ ತಿಂಗಳು ಭಿಲ್ವಾರಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬಾಲಕಿಯ ಮೇಲೆ ಗುಂಪೊಂದು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ ನಂತರ ಆಕೆಗೆ ಬೆಂಕಿ ಹಚ್ಚಿದ್ದಾರೆ. ಶವ ಆಗಸ್ಟ್ 2 ರಂದು ಕುಲುಮೆಯ ಬಳಿ ಪತ್ತೆಯಾಗಿತ್ತು.

ಕೊಟಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಶ್ಯಾಮ್ ಸುಂದರ್ ಬಿಷ್ಣೋಯ್ ಅವರು ಶಹಪುರ ಜಿಲ್ಲೆಯ ವಿಶೇಷ ನ್ಯಾಯಾಲಯದ ಮುಂದೆ 400 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದಾರೆ. ಆರೋಪಪಟ್ಟಿಯಲ್ಲಿ ಒಂಬತ್ತು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಇಬ್ಬರು ಅಪ್ರಾಪ್ತ ಆರೋಪಿಗಳ ವಿರುದ್ಧ ಪ್ರತ್ಯೇಕ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

”ಆರೋಪಿಗಳು ಕುಲುಮೆಗೆ ಹಾಕಿದಾಗ ಬಾಲಕಿ ಇನ್ನೂ ಜೀವಂತವಾಗಿದ್ದಳು ಎಂದು ಫೋರೆನ್ಸಿಕ್ ಪರೀಕ್ಷೆಯು ಸೂಚಿಸಿದೆ. ಅವಳು ಪ್ರಜ್ಞಾಹೀನಳಾಗಿರಬಹುದು ಆದರೆ ಅವಳು ಜೀವಂತವಾಗಿದ್ದಳು. ಆದ್ದರಿಂದ, ಐಪಿಸಿ ಸೆಕ್ಷನ್ 326 [ಸ್ವಯಂಪ್ರೇರಿತವಾಗಿ ಘೋರವಾದ ಗಾಯವನ್ನು ಉಂಟುಮಾಡುತ್ತದೆ] ಅಡಿಯಲ್ಲಿ ಈ ಪ್ರಕರಣವನ್ನು ಸೇರಿಸಲಾಗಿದೆ” ಎಂದು ಬಿಷ್ಣೋಯ್ ಹೇಳಿದ್ದಾರೆ.

”ಆಕೆಯ ದೇಹವನ್ನು ಸುಟ್ಟು ಹಾಕುವ ಮುನ್ನ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬೆಂಕಿ ಹಚ್ಚುವ ಮೊದಲು ಆಕೆಯ ದೇಹದ ಮೇಲೆ ಪೆಟ್ರೋಲಿಯಂ ಆಧಾರಿತ ರಾಸಾಯನಿಕವನ್ನು ಸುರಿಯಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 8 ರಂದು ನಿಗದಿಪಡಿಸಲಾಗಿದೆ.

ಪೊಲೀಸರ ಕರ್ತವ್ಯಲೋಪ: ಕುಟುಂಬಸ್ಥರ ಆರೋಪ

ಕಳೆದ ತಿಂಗಳು ಬಾಲಕಿಯು ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ ನಂತರವೂ ಪೊಲೀಸರು ಸಕಾಲಿಕ ಕ್ರಮ ಕೈಗೊಂಡಿಲ್ಲ ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದರೆ, ಬಾಲಕಿ ಈಗ ಬದುಕಿದ್ದಿರಬಹುದು, ಇಲ್ಲವೇ ಅಂತಿಮ ಸಂಸ್ಕಾರಕ್ಕಾಗಿ ಆಕೆಯ ದೇಹವನ್ನು ಪಡೆಯುತ್ತಿದ್ದೆವು ಎಂದು ಆಕೆಯ ಚಿಕ್ಕಪ್ಪ ಹೇಳಿಕೊಂಡಿದ್ದಾರೆ.

”ಪೊಲೀಸರಿಗೆ ದೂರು ನೀಡಲು ಹೋದಾಗ, ಅಧಿಕಾರಿಗಳು ಆರಂಭದಲ್ಲಿ ದೂರನ್ನು ದಾಖಲಿಸಲಿಲ್ಲ, ಆದರೆ ಹುಡುಗಿಯ ವಯಸ್ಸಿನ ಪುರಾವೆಗಳು, ಅಂಕಪಟ್ಟಿ ಮತ್ತು ಇತರ ದಾಖಲೆಗಳನ್ನು ತೆಗೆದುಕೊಂಡುಬರುವಂತೆ ನಮ್ಮನ್ನು ಕಳುಹಿಸಿದರು” ಎಂದು ಬಾಲಕಿಯ ಕುಟುಂಬದವರು ಹೇಳಿದ್ದಾರೆ.

ಆನಂತರ ಮನೆಯವರೇ ಬಾಲಕಿಗಾಗಿ ಹುಡುಕಾಟ ನಡೆಸಿದ್ದಾರೆ. ಆಗ ಕೊಟಾರಿ ಪ್ರದೇಶದಲ್ಲಿ ಕಲ್ಲಿದ್ದಲು ಕುಲುಮೆಯಲ್ಲಿ ಕೆಲವು ಮೂಳೆಗಳು ಮತ್ತು ಆಭರಣಗಳು ಪತ್ತೆಯಾಗಿವೆ.

ಈ ಘಟನೆಯು ರಾಜಕೀಯ ಆಕ್ರೋಶಕ್ಕೆ ಕಾರಣವಾಗಿತ್ತು, ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳಾ ಭದ್ರತೆಯ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ಇದನ್ನೂ ಓದಿ: ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರ ಕರ್ತವ್ಯಲೋಪವೆಂದು ಕುಟುಂಬಸ್ಥರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...