Homeಮುಖಪುಟಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ಆರೋಪ!

ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ಆರೋಪ!

ಬುಲಂದ್‌ ಶಹರ್‌ನ ಉಪಚುನಾವಣೆಗೆ ಆಜಾದ್ ಸಮಾಜ್ ಪಕ್ಷ ಧುಮುಕಿದೆ. ಇದು ಎದುರಾಳಿ ಪಕ್ಷಗಳನ್ನು ಭಯಭೀತರನ್ನಾಗಿಸಿದೆ. ಹಾಗಾಗಿ ಅವರು ನಮ್ಮ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದ್ದಾರೆ -ಆಜಾದ್

- Advertisement -
- Advertisement -

ಆಜಾದ್ ಸಮಾಜ್ ಪಕ್ಷದ ಪರವಾಗಿ ಉತ್ತರ ಪ್ರದೇಶದ ಬುಲಂದ್‌ಶಹರ್‌ ನಲ್ಲಿ ಪ್ರಚಾರ ಮುಗಿಸಿ ವಾಪಸಾಗುತ್ತಿದ್ದಾಗ ಚಂದ್ರಶೇಖರ್ ಆಜಾದ್‌ರವರ ಬೆಂಗಾವಲು ವಾಹನದ ಮೇಲೆ ಕೆಲ ಅಪರಿಚಿತ ಗೂಂಡಾಗಳು ಗುಂಡು ಹಾರಿಸಿದ್ದಾರೆ ಎಂದು ಭೀಮ್‌ ಆರ್ಮಿ ಆರೋಪಿಸಿದೆ.

ನವೆಂಬರ್ 3 ರಂದು ನಡೆಯುವ ಬುಲಂದ್‌ ಶಹರ್‌ನ ಸದರ್ ಕ್ಷೇತ್ರದ ಉಪಚುನಾವಣೆಯಲ್ಲಿ ಅಜಾದ್ ಸಮಾಜ್ ಪಕ್ಷದಿಂದ ಸ್ಪರ್ಧಿಸಿರುವ ಹಾಜಿ ಯಾಮಿನ್‌ರವರ ಪರವಾಗಿ ಚಂದ್ರಶೇಖರ್ ಆಜಾದ್‌ರವರು ಪ್ರಚಾರ ಮುಗಿಸಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಜಾದ್ ಮಾಧ್ಯಮ ಸಂಯೋಜಕ ಕು‍ಷ್ ತಿಳಿಸಿದ್ದಾರೆ.

ಬುಲಂದ್‌ ಶಹರ್‌ನ ಉಪಚುನಾವಣೆಗೆ ಆಜಾದ್ ಸಮಾಜ್ ಪಕ್ಷ ಧುಮುಕಿದೆ. ಇದು ಎದುರಾಳಿ ಪಕ್ಷಗಳನ್ನು ಭಯಭೀತರನ್ನಾಗಿಸಿದೆ. ಅಷ್ಟೇ ಅಲ್ಲದೆ ಇಂದಿನ ನಮ್ಮ ರ್ಯಾಲಿ ನೋಡಿ ಅವರ ನಿದ್ರೆಕೆಡಿಸಿದೆ. ಹಾಗಾಗಿ ಅವರು ನಮ್ಮ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದ್ದಾರೆ. ವಾತವಾರಣವನ್ನು ಕೆಡಿಸುವುದು ಅವರ ಉದ್ದೇಶ. ಅದಕ್ಕೆ ನಾವು ಆಸ್ಪದ ಕೊಡುವುದಿಲ್ಲ ಎಂದು ಚಂದ್ರಶೇಖರ್ ಆಜಾದ್ ಟ್ವೀಟ್‌ ಮಾಡಿದ್ದಾರೆ.

ಅಜಾದ್‌ರವರ ಬೆಂಗಾವಲು ವಾಹನದ ಮೇಲೆ ಗುಂಡು ಹಾರಿಸಿ ಅಪರಿಚಿತ ಗೂಂಡಾಗಳು ಪಲಾಯನಗೈದರು. ವಿಷಯ ತಿಳಿಯುತ್ತಿದ್ದಂತೆ ಭೀಮ್‌ ಆರ್ಮಿಯ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಭೀಮ್ ಆರ್ಮಿ ಪಕ್ಷವು ಈ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.


ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್


ಆದರೆ ಗುಂಡಿನ ದಾಳಿಯ ಘಟನೆಯನ್ನು ಬುಲಂದ್‌ಶಹರ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಎಸ್‌ಕೆ ಸಿಂಗ್ ನಿರಾಕರಿಸಿದ್ದಾರೆ. ಸ್ಥಳೀಯರು ಗುಂಡಿನ ದಾಳಿ ನಡೆದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (ಎಐಎಂಐಎಂ) ಅಭ್ಯರ್ಥಿ ದಿಲಾಶಾದ್ ಮತ್ತು ಅಜಾದ್ ಸಮಾಜ್ ಪಕ್ಷದ ಹಾಜಿ ಯಾಮಿನ್ ಅವರ ಬೆಂಬಲಿಗರ ನಡುವೆ ಜಗಳ ನಡೆದು ಪರಸ್ಪರ ಕುರ್ಚಿ ಎಸೆಯುವುದು ನಡೆದಿದೆ ಎಂದಿದ್ದಾರೆ.

ಬುಲಂದ್‌ ಶಹರ್‌ನ ಸದರ್ ಕ್ಷೇತ್ರದ ಬಿಜೆಪಿ ಶಾಸಕ ವೀರೇಂದ್ರ ಶಿರೋಲಿ ಮರಣ ಹೊಂದಿದ ಕಾರಣಕ್ಕಾಗಿ ಉಪಚುನಾವಣೆ ನಡೆಯತ್ತಿದೆ.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...