HomeಮುಖಪುಟTIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

TIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

- Advertisement -
- Advertisement -

ಟೈಮ್ ನಿಯತಕಾಲಿಕದ ವಾರ್ಷಿಕ 100 ಭವಿಷ್ಯ ರೂಪಿಸುವ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ, ಯುವ ದಲಿತ ನಾಯಕ ಚಂದ್ರಶೇಖರ್ ಆಜಾದ್ ಸ್ಥಾನಪಡೆದಿದ್ದಾರೆ. ಆಜಾದ್ ಜೊತೆಗೆ ವಕೀಲ ವಿಜಯ ಗದ್ದೆ, ಯುಕೆಯ ಹಣಕಾಸು ಸಚಿವ ರಿಷಿ ಸುನಕ್, ಇನ್‌ಸ್ಟಾಕಾರ್ಟ್ ಸಂಸ್ಥಾಪಕ ಮತ್ತು ಸಿಇಒ ಅಪೂರ್ವ ಮೆಹ್ತಾ, ವೈದ್ಯರುಗಳಾದ ಶಿಖಾ ಗುಪ್ತಾ, ರೋಹನ್ ಪಾವುಲೂರಿ ಭಾರತೀಯ ಮೂಲಕದ ಪರವಾಗಿ ಟೈಮ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬುಧವಾರ ಬಿಡುಗಡೆಯಾದ 2021ರ ಮುಂದಿನ ಭವಿಷ್ಯವನ್ನು ರೂಪಿಸುವ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಜನರ ಪಟ್ಟಿಯಲ್ಲಿ ಭಾರತೀಯ ಮೂಲಕ 6 ಜನರು ಸ್ಥಾನ ಪಡೆದಿದ್ದಾರೆ.

ಡಿಸೆಂಬರ್‌ 02, 1986ರಲ್ಲಿ ಚಂದ್ರಶೇಖರ್ ಅಜಾದ್‌ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಘದ್ಕೌಲಿ ಗ್ರಾಮದಲ್ಲಿ. ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಊರಿನ ಆರಂಭದಲ್ಲಿ ‘ಮಹಾ ಚಮ್ಮಾರರನ್ನು ಘದ್ಕೌಲಿಯು ಸ್ವಾಗತಿಸುತ್ತದೆ (ಘದ್ಕೌಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬೋರ್ಡು ಹಾಕುವ ಮೂಲಕ.

ಕಾನೂನು ಅಧ್ಯಯನ ಮಾಡಿದ ಇವರು 2014ರಲ್ಲಿ ಭೀಮ್‌ ಆರ್ಮಿ ಎನ್ನುವ ಸಂಘಟನೆ ಕಟ್ಟುವ ಮೂಲಕ ಮಿಲಿಟೆಂಟ್‌ ದಲಿತ ಹೋರಾಟಕ್ಕೆ ಧುಮುಕಿದರು. ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ಮೇಲ್ಜಾತಿ ಠಾಕೂರರು ದಲಿತರ ಮೇಲೆ ದೌರ್ಜನ್ಯವೆಸಗಿದ್ದರು. ತಂದನಂತರ ಮೇಲ್ಜಾತಿಗಳ ದೌರ್ಜನ್ಯಕ್ಕೆ ಭೀಮ್‌ ಆರ್ಮಿ ಹಿಂಸೆಯ ಮೂಲಕವೇ ತಿರುಗೇಟು ನೀಡಿತ್ತು. ಆಗ ಉತ್ತರ ಪ್ರದೇಶ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಬಂಧಿಸಿತ್ತು. ಬಿಡುಗಡೆಯ ನಂತರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ದೆಹಲಿಯಲ್ಲಿ ಧೀರೋದ್ಧಾತ ಹೋರಾಟ ನಡೆಸಿದ ಅವರು, ಅಜಾದ್ ಸಮಾಜ್ ಪಕ್ಷ ಹುಟ್ಟು ಹಾಕಿದ್ದಾರೆ. ಹತ್ರಾಸ್ ಸಾಮೂಹಿಕ ಅತ್ಯಾಚಾರದ ನಂತರ ಉತ್ತರ ಪ್ರದೇಶದಲ್ಲಿ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.‌

ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇರಿಸುವ ಒಬ್ಬ ಕಾರ್ಯಕರ್ತ ಎಂದು ತಮ್ಮನ್ನು ತಾವು ಕರೆದುಕೊಳ್ಳುವ ಅಜಾದ್‌ ದಲಿತ ಮುಸ್ಲಿಂ ಐಕ್ಯತೆಯ ಮೂಲಕ ಜಾತಿವಿನಾಶಕ್ಕಾಗಿ ತಮ್ಮ ಜೀವನ ಮುಡಿಪಿಟ್ಟಿದ್ದಾರೆ.


ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...