HomeಮುಖಪುಟTIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

TIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

- Advertisement -
- Advertisement -

ಟೈಮ್ ನಿಯತಕಾಲಿಕದ ವಾರ್ಷಿಕ 100 ಭವಿಷ್ಯ ರೂಪಿಸುವ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ, ಯುವ ದಲಿತ ನಾಯಕ ಚಂದ್ರಶೇಖರ್ ಆಜಾದ್ ಸ್ಥಾನಪಡೆದಿದ್ದಾರೆ. ಆಜಾದ್ ಜೊತೆಗೆ ವಕೀಲ ವಿಜಯ ಗದ್ದೆ, ಯುಕೆಯ ಹಣಕಾಸು ಸಚಿವ ರಿಷಿ ಸುನಕ್, ಇನ್‌ಸ್ಟಾಕಾರ್ಟ್ ಸಂಸ್ಥಾಪಕ ಮತ್ತು ಸಿಇಒ ಅಪೂರ್ವ ಮೆಹ್ತಾ, ವೈದ್ಯರುಗಳಾದ ಶಿಖಾ ಗುಪ್ತಾ, ರೋಹನ್ ಪಾವುಲೂರಿ ಭಾರತೀಯ ಮೂಲಕದ ಪರವಾಗಿ ಟೈಮ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬುಧವಾರ ಬಿಡುಗಡೆಯಾದ 2021ರ ಮುಂದಿನ ಭವಿಷ್ಯವನ್ನು ರೂಪಿಸುವ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಜನರ ಪಟ್ಟಿಯಲ್ಲಿ ಭಾರತೀಯ ಮೂಲಕ 6 ಜನರು ಸ್ಥಾನ ಪಡೆದಿದ್ದಾರೆ.

ಡಿಸೆಂಬರ್‌ 02, 1986ರಲ್ಲಿ ಚಂದ್ರಶೇಖರ್ ಅಜಾದ್‌ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಘದ್ಕೌಲಿ ಗ್ರಾಮದಲ್ಲಿ. ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಊರಿನ ಆರಂಭದಲ್ಲಿ ‘ಮಹಾ ಚಮ್ಮಾರರನ್ನು ಘದ್ಕೌಲಿಯು ಸ್ವಾಗತಿಸುತ್ತದೆ (ಘದ್ಕೌಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬೋರ್ಡು ಹಾಕುವ ಮೂಲಕ.

ಕಾನೂನು ಅಧ್ಯಯನ ಮಾಡಿದ ಇವರು 2014ರಲ್ಲಿ ಭೀಮ್‌ ಆರ್ಮಿ ಎನ್ನುವ ಸಂಘಟನೆ ಕಟ್ಟುವ ಮೂಲಕ ಮಿಲಿಟೆಂಟ್‌ ದಲಿತ ಹೋರಾಟಕ್ಕೆ ಧುಮುಕಿದರು. ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ಮೇಲ್ಜಾತಿ ಠಾಕೂರರು ದಲಿತರ ಮೇಲೆ ದೌರ್ಜನ್ಯವೆಸಗಿದ್ದರು. ತಂದನಂತರ ಮೇಲ್ಜಾತಿಗಳ ದೌರ್ಜನ್ಯಕ್ಕೆ ಭೀಮ್‌ ಆರ್ಮಿ ಹಿಂಸೆಯ ಮೂಲಕವೇ ತಿರುಗೇಟು ನೀಡಿತ್ತು. ಆಗ ಉತ್ತರ ಪ್ರದೇಶ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಬಂಧಿಸಿತ್ತು. ಬಿಡುಗಡೆಯ ನಂತರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ದೆಹಲಿಯಲ್ಲಿ ಧೀರೋದ್ಧಾತ ಹೋರಾಟ ನಡೆಸಿದ ಅವರು, ಅಜಾದ್ ಸಮಾಜ್ ಪಕ್ಷ ಹುಟ್ಟು ಹಾಕಿದ್ದಾರೆ. ಹತ್ರಾಸ್ ಸಾಮೂಹಿಕ ಅತ್ಯಾಚಾರದ ನಂತರ ಉತ್ತರ ಪ್ರದೇಶದಲ್ಲಿ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.‌

ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇರಿಸುವ ಒಬ್ಬ ಕಾರ್ಯಕರ್ತ ಎಂದು ತಮ್ಮನ್ನು ತಾವು ಕರೆದುಕೊಳ್ಳುವ ಅಜಾದ್‌ ದಲಿತ ಮುಸ್ಲಿಂ ಐಕ್ಯತೆಯ ಮೂಲಕ ಜಾತಿವಿನಾಶಕ್ಕಾಗಿ ತಮ್ಮ ಜೀವನ ಮುಡಿಪಿಟ್ಟಿದ್ದಾರೆ.


ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...