HomeಮುಖಪುಟTIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

TIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

- Advertisement -
- Advertisement -

ಟೈಮ್ ನಿಯತಕಾಲಿಕದ ವಾರ್ಷಿಕ 100 ಭವಿಷ್ಯ ರೂಪಿಸುವ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ, ಯುವ ದಲಿತ ನಾಯಕ ಚಂದ್ರಶೇಖರ್ ಆಜಾದ್ ಸ್ಥಾನಪಡೆದಿದ್ದಾರೆ. ಆಜಾದ್ ಜೊತೆಗೆ ವಕೀಲ ವಿಜಯ ಗದ್ದೆ, ಯುಕೆಯ ಹಣಕಾಸು ಸಚಿವ ರಿಷಿ ಸುನಕ್, ಇನ್‌ಸ್ಟಾಕಾರ್ಟ್ ಸಂಸ್ಥಾಪಕ ಮತ್ತು ಸಿಇಒ ಅಪೂರ್ವ ಮೆಹ್ತಾ, ವೈದ್ಯರುಗಳಾದ ಶಿಖಾ ಗುಪ್ತಾ, ರೋಹನ್ ಪಾವುಲೂರಿ ಭಾರತೀಯ ಮೂಲಕದ ಪರವಾಗಿ ಟೈಮ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬುಧವಾರ ಬಿಡುಗಡೆಯಾದ 2021ರ ಮುಂದಿನ ಭವಿಷ್ಯವನ್ನು ರೂಪಿಸುವ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಜನರ ಪಟ್ಟಿಯಲ್ಲಿ ಭಾರತೀಯ ಮೂಲಕ 6 ಜನರು ಸ್ಥಾನ ಪಡೆದಿದ್ದಾರೆ.

ಡಿಸೆಂಬರ್‌ 02, 1986ರಲ್ಲಿ ಚಂದ್ರಶೇಖರ್ ಅಜಾದ್‌ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಘದ್ಕೌಲಿ ಗ್ರಾಮದಲ್ಲಿ. ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಊರಿನ ಆರಂಭದಲ್ಲಿ ‘ಮಹಾ ಚಮ್ಮಾರರನ್ನು ಘದ್ಕೌಲಿಯು ಸ್ವಾಗತಿಸುತ್ತದೆ (ಘದ್ಕೌಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬೋರ್ಡು ಹಾಕುವ ಮೂಲಕ.

ಕಾನೂನು ಅಧ್ಯಯನ ಮಾಡಿದ ಇವರು 2014ರಲ್ಲಿ ಭೀಮ್‌ ಆರ್ಮಿ ಎನ್ನುವ ಸಂಘಟನೆ ಕಟ್ಟುವ ಮೂಲಕ ಮಿಲಿಟೆಂಟ್‌ ದಲಿತ ಹೋರಾಟಕ್ಕೆ ಧುಮುಕಿದರು. ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ಮೇಲ್ಜಾತಿ ಠಾಕೂರರು ದಲಿತರ ಮೇಲೆ ದೌರ್ಜನ್ಯವೆಸಗಿದ್ದರು. ತಂದನಂತರ ಮೇಲ್ಜಾತಿಗಳ ದೌರ್ಜನ್ಯಕ್ಕೆ ಭೀಮ್‌ ಆರ್ಮಿ ಹಿಂಸೆಯ ಮೂಲಕವೇ ತಿರುಗೇಟು ನೀಡಿತ್ತು. ಆಗ ಉತ್ತರ ಪ್ರದೇಶ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಬಂಧಿಸಿತ್ತು. ಬಿಡುಗಡೆಯ ನಂತರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ದೆಹಲಿಯಲ್ಲಿ ಧೀರೋದ್ಧಾತ ಹೋರಾಟ ನಡೆಸಿದ ಅವರು, ಅಜಾದ್ ಸಮಾಜ್ ಪಕ್ಷ ಹುಟ್ಟು ಹಾಕಿದ್ದಾರೆ. ಹತ್ರಾಸ್ ಸಾಮೂಹಿಕ ಅತ್ಯಾಚಾರದ ನಂತರ ಉತ್ತರ ಪ್ರದೇಶದಲ್ಲಿ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.‌

ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇರಿಸುವ ಒಬ್ಬ ಕಾರ್ಯಕರ್ತ ಎಂದು ತಮ್ಮನ್ನು ತಾವು ಕರೆದುಕೊಳ್ಳುವ ಅಜಾದ್‌ ದಲಿತ ಮುಸ್ಲಿಂ ಐಕ್ಯತೆಯ ಮೂಲಕ ಜಾತಿವಿನಾಶಕ್ಕಾಗಿ ತಮ್ಮ ಜೀವನ ಮುಡಿಪಿಟ್ಟಿದ್ದಾರೆ.


ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...