HomeಮುಖಪುಟTIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

TIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

- Advertisement -
- Advertisement -

ಟೈಮ್ ನಿಯತಕಾಲಿಕದ ವಾರ್ಷಿಕ 100 ಭವಿಷ್ಯ ರೂಪಿಸುವ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ, ಯುವ ದಲಿತ ನಾಯಕ ಚಂದ್ರಶೇಖರ್ ಆಜಾದ್ ಸ್ಥಾನಪಡೆದಿದ್ದಾರೆ. ಆಜಾದ್ ಜೊತೆಗೆ ವಕೀಲ ವಿಜಯ ಗದ್ದೆ, ಯುಕೆಯ ಹಣಕಾಸು ಸಚಿವ ರಿಷಿ ಸುನಕ್, ಇನ್‌ಸ್ಟಾಕಾರ್ಟ್ ಸಂಸ್ಥಾಪಕ ಮತ್ತು ಸಿಇಒ ಅಪೂರ್ವ ಮೆಹ್ತಾ, ವೈದ್ಯರುಗಳಾದ ಶಿಖಾ ಗುಪ್ತಾ, ರೋಹನ್ ಪಾವುಲೂರಿ ಭಾರತೀಯ ಮೂಲಕದ ಪರವಾಗಿ ಟೈಮ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬುಧವಾರ ಬಿಡುಗಡೆಯಾದ 2021ರ ಮುಂದಿನ ಭವಿಷ್ಯವನ್ನು ರೂಪಿಸುವ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಜನರ ಪಟ್ಟಿಯಲ್ಲಿ ಭಾರತೀಯ ಮೂಲಕ 6 ಜನರು ಸ್ಥಾನ ಪಡೆದಿದ್ದಾರೆ.

ಡಿಸೆಂಬರ್‌ 02, 1986ರಲ್ಲಿ ಚಂದ್ರಶೇಖರ್ ಅಜಾದ್‌ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಘದ್ಕೌಲಿ ಗ್ರಾಮದಲ್ಲಿ. ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಊರಿನ ಆರಂಭದಲ್ಲಿ ‘ಮಹಾ ಚಮ್ಮಾರರನ್ನು ಘದ್ಕೌಲಿಯು ಸ್ವಾಗತಿಸುತ್ತದೆ (ಘದ್ಕೌಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬೋರ್ಡು ಹಾಕುವ ಮೂಲಕ.

ಕಾನೂನು ಅಧ್ಯಯನ ಮಾಡಿದ ಇವರು 2014ರಲ್ಲಿ ಭೀಮ್‌ ಆರ್ಮಿ ಎನ್ನುವ ಸಂಘಟನೆ ಕಟ್ಟುವ ಮೂಲಕ ಮಿಲಿಟೆಂಟ್‌ ದಲಿತ ಹೋರಾಟಕ್ಕೆ ಧುಮುಕಿದರು. ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ಮೇಲ್ಜಾತಿ ಠಾಕೂರರು ದಲಿತರ ಮೇಲೆ ದೌರ್ಜನ್ಯವೆಸಗಿದ್ದರು. ತಂದನಂತರ ಮೇಲ್ಜಾತಿಗಳ ದೌರ್ಜನ್ಯಕ್ಕೆ ಭೀಮ್‌ ಆರ್ಮಿ ಹಿಂಸೆಯ ಮೂಲಕವೇ ತಿರುಗೇಟು ನೀಡಿತ್ತು. ಆಗ ಉತ್ತರ ಪ್ರದೇಶ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಬಂಧಿಸಿತ್ತು. ಬಿಡುಗಡೆಯ ನಂತರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ದೆಹಲಿಯಲ್ಲಿ ಧೀರೋದ್ಧಾತ ಹೋರಾಟ ನಡೆಸಿದ ಅವರು, ಅಜಾದ್ ಸಮಾಜ್ ಪಕ್ಷ ಹುಟ್ಟು ಹಾಕಿದ್ದಾರೆ. ಹತ್ರಾಸ್ ಸಾಮೂಹಿಕ ಅತ್ಯಾಚಾರದ ನಂತರ ಉತ್ತರ ಪ್ರದೇಶದಲ್ಲಿ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.‌

ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇರಿಸುವ ಒಬ್ಬ ಕಾರ್ಯಕರ್ತ ಎಂದು ತಮ್ಮನ್ನು ತಾವು ಕರೆದುಕೊಳ್ಳುವ ಅಜಾದ್‌ ದಲಿತ ಮುಸ್ಲಿಂ ಐಕ್ಯತೆಯ ಮೂಲಕ ಜಾತಿವಿನಾಶಕ್ಕಾಗಿ ತಮ್ಮ ಜೀವನ ಮುಡಿಪಿಟ್ಟಿದ್ದಾರೆ.


ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...