Homeಚಳವಳಿಭೀಮ್‌ ಆರ್ಮಿಯ ಚಂದ್ರಶೇಖರ್‌ ಅಜಾದ್‌ರಿಂದ ಹೊಸಪಕ್ಷದ ಘೋಷಣೆ : ದೆಹಲಿ ವಿಧಾನಸಭೆಗೆ ಸ್ಪರ್ಧೆ..

ಭೀಮ್‌ ಆರ್ಮಿಯ ಚಂದ್ರಶೇಖರ್‌ ಅಜಾದ್‌ರಿಂದ ಹೊಸಪಕ್ಷದ ಘೋಷಣೆ : ದೆಹಲಿ ವಿಧಾನಸಭೆಗೆ ಸ್ಪರ್ಧೆ..

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿದ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ನಿಲುವಿನಿಂದ ಸಿಟ್ಟಿಗೆದ್ದಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅವರು ಸ್ವಂತ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸುವುದ್ದಲ್ಲದೇ, ಈ ಪಕ್ಷ ಯುಪಿಯಲ್ಲಿ ನಡೆಯುವ ಮೊದಲ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

ಭೀಮ್‌ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಈಗ ಸಂಪೂರ್ಣವಾಗಿ ರಾಜಕೀಯ ಪ್ರವೇಶಿಸಲು ನಿರ್ಧರಿಸಿದ್ದಾರೆ. ಅವರು ಶೀಘ್ರದಲ್ಲೇ ತಮ್ಮ ಪಕ್ಷದ ಹೆಸರನ್ನು ಪ್ರಕಟಿಸಲಿದ್ದಾರೆ. ಇಲ್ಲಿಯವರೆಗೆ, ಭೀಮ್‌ ಆರ್ಮಿಯು ಬಿಎಸ್ಪಿಯನ್ನು ರಾಜಕೀಯ ಆಯ್ಕೆಯಾಗಿ ಬೆಂಬಲಿಸುತ್ತಿತ್ತು. ಆದರೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಬಿಎಸ್‌ಪಿ ಬೆಂಬಲಿಸಿದ್ದರಿಂದ ನೊಂದ ಅವರು ಹೊಸ ಪಕ್ಷ ಸ್ಥಾಪಿಸುವ ಪಣತೊಟ್ಟಿದ್ದಾರೆ.

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಶೇಖರ್ ಅವರ ಪಕ್ಷ ಹೆಚ್ಚು ಹೆಚ್ಚು ಸ್ಥಾನಗಳಿಗೆ ಸ್ಪರ್ಧಿಸಲಿದೆ. ಕೆಲವೇ ದಿನಗಳಲ್ಲಿ ಪಕ್ಷದ ಹೆಸರನ್ನು ಪ್ರಕಟಿಸಲಾಗುವುದು ಎಂದು ಚಂದ್ರ ಶೇಖರ್ ಅವರ ಸಹಾಯಕ ಕುಶ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ. ಈ ಪಕ್ಷ ಯುಪಿಯಲ್ಲಿ ನಡೆಯುವ ಮೊದಲ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಇದರ ನಂತರ, 2022 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಾಗುವುದು. ಚಂದ್ರಶೇಖರ್ ಅವರೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಎಂಬುದನ್ನು ನಂತರ ನಿರ್ಧರಿಸಲಾಗುತ್ತದೆ. ಪ್ರಸ್ತುತ ಲಖನೌದಲ್ಲಿ ಪಕ್ಷದ ಕಚೇರಿ ಸ್ಥಾಪಿಸಲು ಉದ್ದೇಶಿಸಿರುವ ಅವರು ಪಶ್ಚಿಮ ಯುಪಿಯಲ್ಲಿ ಭೀಮ್‌ ಆರ್ಮಿಗೆ ಬಲವಾದ ಹಿಡಿತವಿದೆ ಎಂದಿದ್ದಾರೆ.

ಇದನ್ನೂ ಓದಿ: ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ಈ ಕುರಿತು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಚಂದ್ರಶೇಖರ್ ಅಜಾದ್‌ ರಾವಣ್‌ ‘ನಾನು ಇಂದು ಹೊಸ ರಾಜಕೀಯ ಆಯ್ಕೆಗಳನ್ನು ಬಹುಜನ ಸಮಾಜಕ್ಕೆ ಘೋಷಿಸುತ್ತಿದ್ದೇನೆ. ಸಮಾಜಕ್ಕೆ ತಮ್ಮ ಜೀವನವನ್ನು ಅರ್ಪಿಸಿ ನಾಯಕತ್ವವನ್ನು ವಹಿಸುವ ಪ್ರಾಮಾಣಿಕ, ಹೋರಾಟನಿರತ ಮತ್ತು ಮಹತ್ವಕಾಂಕ್ಷೆಯುಳ್ಳ ಯುವಜನರಿಗೆ ಪಕ್ಷ ಸೇರಲು ಮನವಿ ಮಾಡುತ್ತೇನೆ. ಇನ್ನು ಮುಂದೆ ಶ್ರೀಮಂತರಲ್ಲ, ಕಾರ್ಯಕರ್ತರು ನಾಯಕನಾಗುತ್ತಾರೆ. ಜೈ ಭೀಮ್‌’ ಎಂದು ಘೋಷಿಸಿದ್ದಾರೆ.

ಸಂಸತ್ತಿನಲ್ಲಿ ಸಂವಿಧಾನ ಹತ್ಯೆಯಾಗುತ್ತಿದ್ದಾಗ, ಆ ಸಮಯದಲ್ಲಿ ಇಬ್ಬರು ಬಿಎಸ್ಪಿ ರಾಜ್ಯಸಭಾ ಸಂಸದರು ಸಂವಿಧಾನವನ್ನು ಉಳಿಸದೇ ಓಡಿ ಹೋದರು. ಮತ್ತು ಪೌರತ್ವ ಮಸೂದೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದರು. ಅವರು ಅಂಬೇಡ್ಕರ್, ಬಿಎಸ್ಪಿ ಸಂಸ್ಥಾಪಕ ಕಾನ್ಶಿರಾಮ್ ಮತ್ತು ದಲಿತರನ್ನು ವಂಚಿಸಿದ್ದಾರೆ ಎಂದು ಸಹ ಅವರು ಆರೋಪಿಸಿದ್ದಾರೆ. ಆರ್ಥಿಕ ಆಧಾರಲ್ಲಿ 10% ಮೀಸಲಾತಿ ನೀಡುವ ಸಂದರ್ಭ ಮತ್ತು ಕಾಶ್ಮೀರದ 370ನೇ ವಿಧಿ ರದ್ದಿನ ಸಂದರ್ಭದಲ್ಲಿಯೂ ಕೂಡ ಸಹೋದರಿ ಮಾಯಾವತಿಯವರು ಬಿಜೆಪಿಗೆ ಬೆಂಬಲ ನೀಡಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಹೆಸರಿಗಾಗಿ ಚಂದ್ರಶೇಖರ್ ಅಜಾದ್‌ರವರು ಸೋಷಿಯಲ್ ಮೀಡಿಯಾದಲ್ಲಿ ಸಲಹೆಗಳನ್ನು ಸಹ ಕೋರಿದ್ದಾರೆ. ಅವರ ಸಹಾಯಕ ಖುಷ್‌ ಸಹ ಉತ್ತರ ಪ್ರದೇಶದ ಚುನಾವಣೆಯಲ್ಲಿ ಭೀಮ್‌ ಆರ್ಮಿ ಸಹ ಸ್ಪರ್ಧಿಸಿದರೆ ಬಿಎಸ್‌ಪಿ ಅಥವಾ ಭೀಮ್‌ ಆರ್ಮಿ ಇವೆರಡರಲ್ಲಿ ಯಾವುದಕ್ಕೆ ಓಟು ಹಾಕುತ್ತೀರಿ ಎಂಬ ಪೊಲೀಂಗ್‌ ಸಹ ಆರಂಭಿಸಿದ್ದಾರೆ.

ಸಿಎಬಿ ಮತ್ತು ಎನ್‌ಆರ್‌ಸಿ ಸಂವಿಧಾನದ ವಿರುದ್ದವಿವೆ.
ಚಂದ್ರಶೇಖರ್ ಅವರ ಪ್ರಕಾರ, ಸಿಎಬಿ ಮತ್ತು ಎನ್ಆರ್‌ಸಿ ದೇಶದ ಸಂವಿಧಾನವನ್ನು ನಾಶಮಾಡುವ ಪಿತೂರಿ. ಈ ದೇಶದ ದಲಿತರು, ಬುಡಕಟ್ಟು ಜನಾಂಗದವರು, ಹಿಂದುಳಿದವರು, ಮುಸ್ಲಿಮರು ಇಲ್ಲಿ ಸ್ಥಳೀಯರಾಗಿದ್ದಾರೆ. ಹೊರಗಿನಿಂದ ಬಂದ ಮೇಲ್ಜಾತಿಯವರೆ ಆರ್ಯರಾಗಿದ್ದು, ಅವರ ಡಿಎನ್‌ಎ ಪರೀಕ್ಷೆ ಮಾಡಬೇಕು ಮತ್ತು ಅವರನ್ನು ಮೊದಲು ಎನ್‌ಆರ್‌ಸಿ ಅಡಿಯಲ್ಲಿ ತರಬೇಕು. ಸಂವಿಧಾನದ ರಕ್ಷಣೆಗಾಗಿ ಮತ್ತು ದೇಶದ ಅತಿದೊಡ್ಡ ಆಂದೋಲನಕ್ಕಾಗಿ ದೇಶದ ಬಹುಜನರು ಸಿದ್ದರಾಗಬೇಕು ಎಂದು ಕರೆ ನೀಡಿದ್ದಾರೆ.

ಮಾಯಾವತಿಯವರ ಬೆಂಬಲ ಸಿಗಲಿಲ್ಲ
ಚಂದ್ರಶೇಖರ್‌ರವರು ದಲಿತರ ಧ್ವನಿ ಎತ್ತರಿಸಲು ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಆಯೋಜಿಸಿದರು. ಆದರೆ ಅವರಿಗೆ ಎಂದಿಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯ ಬೆಂಬಲ ಸಿಗಲಿಲ್ಲ. ಹಲವಾರು ಬಾರಿ ಚಂದ್ರಶೇಖರ್ ಮಾಯಾವತಿಯವರನ್ನು ಭೇಟಿಯಾಗಲು ಪ್ರಯತ್ನಿಸಿದರೂ ಸಹ ಮಾಯಾವತಿಯವರು ಭೇಟಿಯಾಗಲಿಲ್ಲ. ಇದೇ ಕಾರಣಕ್ಕಾಗಿ ಬಹುಜನ ಸಮಾಜದ ಧ್ವನಿ ಹೆಚ್ಚಿಸಲು ಚಂದ್ರಶೇಖರ್ ಈಗ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದಾರೆ.

ಯಾರು ಈ ಚಂದ್ರಶೇಖರ್ ಅಜಾದ್‌ ರಾವಣ್‌?
ಚಂದ್ರಶೇಖರ್ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಧಕ್ಕುಲಿ ಗ್ರಾಮದಲ್ಲಿ. ಕಾನೂನು ಅಧ್ಯಯನ ಮಾಡಿದ ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಮೂಲ ಸ್ಥಳದಲ್ಲಿ ಒಂದು ಬೋರ್ಡ್ ಹಾಕಿದ್ದರು, ಅದರಲ್ಲಿ ಅವರು ‘ಮಹಾ ಚಮ್ಮಾರರನ್ನು ಧಡಕಲಿಯು ಸ್ವಾಗತಿಸುತ್ತದೆ (ಧಡಕಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬರೆದಿದ್ದಾರೆ. ಈ ಕ್ರಮವು ಗ್ರಾಮದಲ್ಲಿ ದಲಿತರು ಮತ್ತು ಠಾಕೂರ್‌ಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಿತು. ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದ್ದಾರೆ. ದಲಿತ-ಮುಸ್ಲಿಂ ಏಕತೆಯ ಪರವಾಗಿರುವ ಚಂದ್ರಶೇಖರ್ ಅವರು ಫೇಸ್‌ಬುಕ್ ಮತ್ತು ವಾಟ್ಸಪ್ ಮೂಲಕ ಜನರನ್ನು ಭೀಮ್‌ ಆರ್ಮಿಯೊಂದಿಗೆ ಸಂಪರ್ಕಿಸುವ ಕೆಲಸ ಮಾಡಿದರು.

ಇದನ್ನೂ ಓದಿ: ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ತನ್ನ ಮಿಲಿಂಟೆಂಟ್‌ ಹೋರಾಟಗಳ ಕಾರಣಕ್ಕಾಗಿ ಅತಿ ಶೀಘ್ರದಲ್ಲಿಯೇ ದೇಶಾದ್ಯಂತ ಯುವ ಅನುಯಾಯಿಗಳನ್ನು ಪಡೆದ ಇವರು ಮೇಲ್ಜಾತಿಗಳ ದೌರ್ಜನ್ಯಕ್ಕೆ ಹಿಂಸೆಯ ಮೂಲಕವೇ ತಿರುಗೇಟು ನೀಡಿ ಪ್ರಸಿದ್ದಿ ಪಡೆದಿದ್ದರು. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಅಧಿಕ ಕಾಲ ಜೈಲಿನಲ್ಲಿಟ್ಟಿತ್ತು. ಬಹುಜನರಿಗಾಗಿ ಎಷ್ಟು ಬಾರಿ ಬೇಕಾದರೂ ಜೈಲಿಗೆ ಹೋಗಲು ಸಿದ್ದವಿರುವ ಇವರು ಕೆಲವೇ ವರ್ಷಗಳಲ್ಲಿ ಅನೇಕ ಬಾರಿ ಜೈಲುವಾಸ ಅನುಭವಿಸಿದ್ದಾರೆ.

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ದಲಿತರು ಮತ್ತು ಮೇಲ್ಜಾತಿಗಳ ನಡುವೆ ಹಿಂಸಾಚಾರ ನಡೆದಿತ್ತು. ಈ ಸಮಯದಲ್ಲಿ ಭೀಮ್‌ ಆರ್ಮಿ ಎಂಬ ಹೆಸರಿನ ಸಂಘಟನೆ ಹೊರಹೊಮ್ಮಿತು. ಇದರ ಪೂರ್ಣ ಹೆಸರು ‘ಭಾರತ್ ಏಕ್ತಾ ಮಿಷನ್ ಭೀಮ್ ಆರ್ಮಿ’. ಈ ಸಂಘಟನೆಯ ಸ್ಥಾಪಕ ಮತ್ತು ಅಧ್ಯಕ್ಷರು ಚಂದ್ರಶೇಖರ್ ಅಜಾದ್‌. ಈ ಹಿಂದೆ ಅವರು ‘ರಾವಣ’ ಎಂಬ ಉಪನಾಮವನ್ನಿಟ್ಟುಕೊಂಡು ಪ್ರಸಿದ್ದರಾಗಿದ್ದರು. ನಂತರ ಅದನ್ನು ತೆಗೆದುಹಾಕಿದ್ದಾರೆ. ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇಸಿರುವ ಒಬ್ಬ ಕಾರ್ಯಕರ್ತ ಎಂದು ಅವರು ತಮ್ಮನ್ನು ತಾವು ಕರೆದುಕೊಳ್ಳುತ್ತಾರೆ.

ಕಳೆದೆರಡು ತಿಂಗಳ ಹಿಂದೆ ದೆಹಲಿಯ ದಲಿತರ ಪಾಲಿನ ದೇವಾಲಯವಾದ ರವಿದಾಸ ಮಂದಿರವನ್ನು ಹೈಕೋರ್ಟ್‌ ಸೂಚನೆಯ ಮೇರೆಗೆ ದೆಹಲಿ ಸ್ಥಳೀಯ ಆಡಳಿತ ನೆಮಸಮ ಮಾಡಿತ್ತು. ಇದರ ವಿರುದ್ಧ ನಡೆದ ಭಾರೀ ಜನಾಂದೋಲನದಲ್ಲಿ ಚಂದ್ರಶೇಖರ್‌ ಕೂಡ ಮಹತ್ವದ ಪಾತ್ರ ವಹಿಸಿದ್ದರು. ದಲಿತರ ಹೋರಾಟಕ್ಕೆ ಬೆದರಿದ ಕೇಂದ್ರ ಸರ್ಕಾರ ಅದೇ ಜಾಗದಲ್ಲಿ ದೇವಾಲಯದ ನಿರ್ಮಾಣಕ್ಕೆ ಅವಕಾಶಕೊಟ್ಟಿದೆ.

ಇದನ್ನೂ ಓದಿ: ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

ಇದೇ ವರ್ಷ ಆಗಸ್ಟ್‌ 15ರಂದು ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಭೂಮಿ ಹಕ್ಕಿಗಾಗಿ ದೊರೆಸ್ವಾಮಿಯವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮಧ್ಯರಾತ್ರಿ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಚಂದ್ರಶೇಖರ್‌ ಅಥಿತಿಯಾಗಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...