Homeಚಳವಳಿಭೀಮ್‌ ಆರ್ಮಿಯ ಚಂದ್ರಶೇಖರ್‌ ಅಜಾದ್‌ರಿಂದ ಹೊಸಪಕ್ಷದ ಘೋಷಣೆ : ದೆಹಲಿ ವಿಧಾನಸಭೆಗೆ ಸ್ಪರ್ಧೆ..

ಭೀಮ್‌ ಆರ್ಮಿಯ ಚಂದ್ರಶೇಖರ್‌ ಅಜಾದ್‌ರಿಂದ ಹೊಸಪಕ್ಷದ ಘೋಷಣೆ : ದೆಹಲಿ ವಿಧಾನಸಭೆಗೆ ಸ್ಪರ್ಧೆ..

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿದ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ನಿಲುವಿನಿಂದ ಸಿಟ್ಟಿಗೆದ್ದಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅವರು ಸ್ವಂತ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸುವುದ್ದಲ್ಲದೇ, ಈ ಪಕ್ಷ ಯುಪಿಯಲ್ಲಿ ನಡೆಯುವ ಮೊದಲ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

ಭೀಮ್‌ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಈಗ ಸಂಪೂರ್ಣವಾಗಿ ರಾಜಕೀಯ ಪ್ರವೇಶಿಸಲು ನಿರ್ಧರಿಸಿದ್ದಾರೆ. ಅವರು ಶೀಘ್ರದಲ್ಲೇ ತಮ್ಮ ಪಕ್ಷದ ಹೆಸರನ್ನು ಪ್ರಕಟಿಸಲಿದ್ದಾರೆ. ಇಲ್ಲಿಯವರೆಗೆ, ಭೀಮ್‌ ಆರ್ಮಿಯು ಬಿಎಸ್ಪಿಯನ್ನು ರಾಜಕೀಯ ಆಯ್ಕೆಯಾಗಿ ಬೆಂಬಲಿಸುತ್ತಿತ್ತು. ಆದರೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಬಿಎಸ್‌ಪಿ ಬೆಂಬಲಿಸಿದ್ದರಿಂದ ನೊಂದ ಅವರು ಹೊಸ ಪಕ್ಷ ಸ್ಥಾಪಿಸುವ ಪಣತೊಟ್ಟಿದ್ದಾರೆ.

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಶೇಖರ್ ಅವರ ಪಕ್ಷ ಹೆಚ್ಚು ಹೆಚ್ಚು ಸ್ಥಾನಗಳಿಗೆ ಸ್ಪರ್ಧಿಸಲಿದೆ. ಕೆಲವೇ ದಿನಗಳಲ್ಲಿ ಪಕ್ಷದ ಹೆಸರನ್ನು ಪ್ರಕಟಿಸಲಾಗುವುದು ಎಂದು ಚಂದ್ರ ಶೇಖರ್ ಅವರ ಸಹಾಯಕ ಕುಶ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ. ಈ ಪಕ್ಷ ಯುಪಿಯಲ್ಲಿ ನಡೆಯುವ ಮೊದಲ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಇದರ ನಂತರ, 2022 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಾಗುವುದು. ಚಂದ್ರಶೇಖರ್ ಅವರೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಎಂಬುದನ್ನು ನಂತರ ನಿರ್ಧರಿಸಲಾಗುತ್ತದೆ. ಪ್ರಸ್ತುತ ಲಖನೌದಲ್ಲಿ ಪಕ್ಷದ ಕಚೇರಿ ಸ್ಥಾಪಿಸಲು ಉದ್ದೇಶಿಸಿರುವ ಅವರು ಪಶ್ಚಿಮ ಯುಪಿಯಲ್ಲಿ ಭೀಮ್‌ ಆರ್ಮಿಗೆ ಬಲವಾದ ಹಿಡಿತವಿದೆ ಎಂದಿದ್ದಾರೆ.

ಇದನ್ನೂ ಓದಿ: ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ಈ ಕುರಿತು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಚಂದ್ರಶೇಖರ್ ಅಜಾದ್‌ ರಾವಣ್‌ ‘ನಾನು ಇಂದು ಹೊಸ ರಾಜಕೀಯ ಆಯ್ಕೆಗಳನ್ನು ಬಹುಜನ ಸಮಾಜಕ್ಕೆ ಘೋಷಿಸುತ್ತಿದ್ದೇನೆ. ಸಮಾಜಕ್ಕೆ ತಮ್ಮ ಜೀವನವನ್ನು ಅರ್ಪಿಸಿ ನಾಯಕತ್ವವನ್ನು ವಹಿಸುವ ಪ್ರಾಮಾಣಿಕ, ಹೋರಾಟನಿರತ ಮತ್ತು ಮಹತ್ವಕಾಂಕ್ಷೆಯುಳ್ಳ ಯುವಜನರಿಗೆ ಪಕ್ಷ ಸೇರಲು ಮನವಿ ಮಾಡುತ್ತೇನೆ. ಇನ್ನು ಮುಂದೆ ಶ್ರೀಮಂತರಲ್ಲ, ಕಾರ್ಯಕರ್ತರು ನಾಯಕನಾಗುತ್ತಾರೆ. ಜೈ ಭೀಮ್‌’ ಎಂದು ಘೋಷಿಸಿದ್ದಾರೆ.

ಸಂಸತ್ತಿನಲ್ಲಿ ಸಂವಿಧಾನ ಹತ್ಯೆಯಾಗುತ್ತಿದ್ದಾಗ, ಆ ಸಮಯದಲ್ಲಿ ಇಬ್ಬರು ಬಿಎಸ್ಪಿ ರಾಜ್ಯಸಭಾ ಸಂಸದರು ಸಂವಿಧಾನವನ್ನು ಉಳಿಸದೇ ಓಡಿ ಹೋದರು. ಮತ್ತು ಪೌರತ್ವ ಮಸೂದೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದರು. ಅವರು ಅಂಬೇಡ್ಕರ್, ಬಿಎಸ್ಪಿ ಸಂಸ್ಥಾಪಕ ಕಾನ್ಶಿರಾಮ್ ಮತ್ತು ದಲಿತರನ್ನು ವಂಚಿಸಿದ್ದಾರೆ ಎಂದು ಸಹ ಅವರು ಆರೋಪಿಸಿದ್ದಾರೆ. ಆರ್ಥಿಕ ಆಧಾರಲ್ಲಿ 10% ಮೀಸಲಾತಿ ನೀಡುವ ಸಂದರ್ಭ ಮತ್ತು ಕಾಶ್ಮೀರದ 370ನೇ ವಿಧಿ ರದ್ದಿನ ಸಂದರ್ಭದಲ್ಲಿಯೂ ಕೂಡ ಸಹೋದರಿ ಮಾಯಾವತಿಯವರು ಬಿಜೆಪಿಗೆ ಬೆಂಬಲ ನೀಡಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಹೆಸರಿಗಾಗಿ ಚಂದ್ರಶೇಖರ್ ಅಜಾದ್‌ರವರು ಸೋಷಿಯಲ್ ಮೀಡಿಯಾದಲ್ಲಿ ಸಲಹೆಗಳನ್ನು ಸಹ ಕೋರಿದ್ದಾರೆ. ಅವರ ಸಹಾಯಕ ಖುಷ್‌ ಸಹ ಉತ್ತರ ಪ್ರದೇಶದ ಚುನಾವಣೆಯಲ್ಲಿ ಭೀಮ್‌ ಆರ್ಮಿ ಸಹ ಸ್ಪರ್ಧಿಸಿದರೆ ಬಿಎಸ್‌ಪಿ ಅಥವಾ ಭೀಮ್‌ ಆರ್ಮಿ ಇವೆರಡರಲ್ಲಿ ಯಾವುದಕ್ಕೆ ಓಟು ಹಾಕುತ್ತೀರಿ ಎಂಬ ಪೊಲೀಂಗ್‌ ಸಹ ಆರಂಭಿಸಿದ್ದಾರೆ.

ಸಿಎಬಿ ಮತ್ತು ಎನ್‌ಆರ್‌ಸಿ ಸಂವಿಧಾನದ ವಿರುದ್ದವಿವೆ.
ಚಂದ್ರಶೇಖರ್ ಅವರ ಪ್ರಕಾರ, ಸಿಎಬಿ ಮತ್ತು ಎನ್ಆರ್‌ಸಿ ದೇಶದ ಸಂವಿಧಾನವನ್ನು ನಾಶಮಾಡುವ ಪಿತೂರಿ. ಈ ದೇಶದ ದಲಿತರು, ಬುಡಕಟ್ಟು ಜನಾಂಗದವರು, ಹಿಂದುಳಿದವರು, ಮುಸ್ಲಿಮರು ಇಲ್ಲಿ ಸ್ಥಳೀಯರಾಗಿದ್ದಾರೆ. ಹೊರಗಿನಿಂದ ಬಂದ ಮೇಲ್ಜಾತಿಯವರೆ ಆರ್ಯರಾಗಿದ್ದು, ಅವರ ಡಿಎನ್‌ಎ ಪರೀಕ್ಷೆ ಮಾಡಬೇಕು ಮತ್ತು ಅವರನ್ನು ಮೊದಲು ಎನ್‌ಆರ್‌ಸಿ ಅಡಿಯಲ್ಲಿ ತರಬೇಕು. ಸಂವಿಧಾನದ ರಕ್ಷಣೆಗಾಗಿ ಮತ್ತು ದೇಶದ ಅತಿದೊಡ್ಡ ಆಂದೋಲನಕ್ಕಾಗಿ ದೇಶದ ಬಹುಜನರು ಸಿದ್ದರಾಗಬೇಕು ಎಂದು ಕರೆ ನೀಡಿದ್ದಾರೆ.

ಮಾಯಾವತಿಯವರ ಬೆಂಬಲ ಸಿಗಲಿಲ್ಲ
ಚಂದ್ರಶೇಖರ್‌ರವರು ದಲಿತರ ಧ್ವನಿ ಎತ್ತರಿಸಲು ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಆಯೋಜಿಸಿದರು. ಆದರೆ ಅವರಿಗೆ ಎಂದಿಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯ ಬೆಂಬಲ ಸಿಗಲಿಲ್ಲ. ಹಲವಾರು ಬಾರಿ ಚಂದ್ರಶೇಖರ್ ಮಾಯಾವತಿಯವರನ್ನು ಭೇಟಿಯಾಗಲು ಪ್ರಯತ್ನಿಸಿದರೂ ಸಹ ಮಾಯಾವತಿಯವರು ಭೇಟಿಯಾಗಲಿಲ್ಲ. ಇದೇ ಕಾರಣಕ್ಕಾಗಿ ಬಹುಜನ ಸಮಾಜದ ಧ್ವನಿ ಹೆಚ್ಚಿಸಲು ಚಂದ್ರಶೇಖರ್ ಈಗ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದಾರೆ.

ಯಾರು ಈ ಚಂದ್ರಶೇಖರ್ ಅಜಾದ್‌ ರಾವಣ್‌?
ಚಂದ್ರಶೇಖರ್ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಧಕ್ಕುಲಿ ಗ್ರಾಮದಲ್ಲಿ. ಕಾನೂನು ಅಧ್ಯಯನ ಮಾಡಿದ ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಮೂಲ ಸ್ಥಳದಲ್ಲಿ ಒಂದು ಬೋರ್ಡ್ ಹಾಕಿದ್ದರು, ಅದರಲ್ಲಿ ಅವರು ‘ಮಹಾ ಚಮ್ಮಾರರನ್ನು ಧಡಕಲಿಯು ಸ್ವಾಗತಿಸುತ್ತದೆ (ಧಡಕಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬರೆದಿದ್ದಾರೆ. ಈ ಕ್ರಮವು ಗ್ರಾಮದಲ್ಲಿ ದಲಿತರು ಮತ್ತು ಠಾಕೂರ್‌ಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಿತು. ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದ್ದಾರೆ. ದಲಿತ-ಮುಸ್ಲಿಂ ಏಕತೆಯ ಪರವಾಗಿರುವ ಚಂದ್ರಶೇಖರ್ ಅವರು ಫೇಸ್‌ಬುಕ್ ಮತ್ತು ವಾಟ್ಸಪ್ ಮೂಲಕ ಜನರನ್ನು ಭೀಮ್‌ ಆರ್ಮಿಯೊಂದಿಗೆ ಸಂಪರ್ಕಿಸುವ ಕೆಲಸ ಮಾಡಿದರು.

ಇದನ್ನೂ ಓದಿ: ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ತನ್ನ ಮಿಲಿಂಟೆಂಟ್‌ ಹೋರಾಟಗಳ ಕಾರಣಕ್ಕಾಗಿ ಅತಿ ಶೀಘ್ರದಲ್ಲಿಯೇ ದೇಶಾದ್ಯಂತ ಯುವ ಅನುಯಾಯಿಗಳನ್ನು ಪಡೆದ ಇವರು ಮೇಲ್ಜಾತಿಗಳ ದೌರ್ಜನ್ಯಕ್ಕೆ ಹಿಂಸೆಯ ಮೂಲಕವೇ ತಿರುಗೇಟು ನೀಡಿ ಪ್ರಸಿದ್ದಿ ಪಡೆದಿದ್ದರು. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಅಧಿಕ ಕಾಲ ಜೈಲಿನಲ್ಲಿಟ್ಟಿತ್ತು. ಬಹುಜನರಿಗಾಗಿ ಎಷ್ಟು ಬಾರಿ ಬೇಕಾದರೂ ಜೈಲಿಗೆ ಹೋಗಲು ಸಿದ್ದವಿರುವ ಇವರು ಕೆಲವೇ ವರ್ಷಗಳಲ್ಲಿ ಅನೇಕ ಬಾರಿ ಜೈಲುವಾಸ ಅನುಭವಿಸಿದ್ದಾರೆ.

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ದಲಿತರು ಮತ್ತು ಮೇಲ್ಜಾತಿಗಳ ನಡುವೆ ಹಿಂಸಾಚಾರ ನಡೆದಿತ್ತು. ಈ ಸಮಯದಲ್ಲಿ ಭೀಮ್‌ ಆರ್ಮಿ ಎಂಬ ಹೆಸರಿನ ಸಂಘಟನೆ ಹೊರಹೊಮ್ಮಿತು. ಇದರ ಪೂರ್ಣ ಹೆಸರು ‘ಭಾರತ್ ಏಕ್ತಾ ಮಿಷನ್ ಭೀಮ್ ಆರ್ಮಿ’. ಈ ಸಂಘಟನೆಯ ಸ್ಥಾಪಕ ಮತ್ತು ಅಧ್ಯಕ್ಷರು ಚಂದ್ರಶೇಖರ್ ಅಜಾದ್‌. ಈ ಹಿಂದೆ ಅವರು ‘ರಾವಣ’ ಎಂಬ ಉಪನಾಮವನ್ನಿಟ್ಟುಕೊಂಡು ಪ್ರಸಿದ್ದರಾಗಿದ್ದರು. ನಂತರ ಅದನ್ನು ತೆಗೆದುಹಾಕಿದ್ದಾರೆ. ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇಸಿರುವ ಒಬ್ಬ ಕಾರ್ಯಕರ್ತ ಎಂದು ಅವರು ತಮ್ಮನ್ನು ತಾವು ಕರೆದುಕೊಳ್ಳುತ್ತಾರೆ.

ಕಳೆದೆರಡು ತಿಂಗಳ ಹಿಂದೆ ದೆಹಲಿಯ ದಲಿತರ ಪಾಲಿನ ದೇವಾಲಯವಾದ ರವಿದಾಸ ಮಂದಿರವನ್ನು ಹೈಕೋರ್ಟ್‌ ಸೂಚನೆಯ ಮೇರೆಗೆ ದೆಹಲಿ ಸ್ಥಳೀಯ ಆಡಳಿತ ನೆಮಸಮ ಮಾಡಿತ್ತು. ಇದರ ವಿರುದ್ಧ ನಡೆದ ಭಾರೀ ಜನಾಂದೋಲನದಲ್ಲಿ ಚಂದ್ರಶೇಖರ್‌ ಕೂಡ ಮಹತ್ವದ ಪಾತ್ರ ವಹಿಸಿದ್ದರು. ದಲಿತರ ಹೋರಾಟಕ್ಕೆ ಬೆದರಿದ ಕೇಂದ್ರ ಸರ್ಕಾರ ಅದೇ ಜಾಗದಲ್ಲಿ ದೇವಾಲಯದ ನಿರ್ಮಾಣಕ್ಕೆ ಅವಕಾಶಕೊಟ್ಟಿದೆ.

ಇದನ್ನೂ ಓದಿ: ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

ಇದೇ ವರ್ಷ ಆಗಸ್ಟ್‌ 15ರಂದು ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಭೂಮಿ ಹಕ್ಕಿಗಾಗಿ ದೊರೆಸ್ವಾಮಿಯವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮಧ್ಯರಾತ್ರಿ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಚಂದ್ರಶೇಖರ್‌ ಅಥಿತಿಯಾಗಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....