Homeಚಳವಳಿಭೀಮ್‌ ಆರ್ಮಿಯ ಚಂದ್ರಶೇಖರ್‌ ಅಜಾದ್‌ರಿಂದ ಹೊಸಪಕ್ಷದ ಘೋಷಣೆ : ದೆಹಲಿ ವಿಧಾನಸಭೆಗೆ ಸ್ಪರ್ಧೆ..

ಭೀಮ್‌ ಆರ್ಮಿಯ ಚಂದ್ರಶೇಖರ್‌ ಅಜಾದ್‌ರಿಂದ ಹೊಸಪಕ್ಷದ ಘೋಷಣೆ : ದೆಹಲಿ ವಿಧಾನಸಭೆಗೆ ಸ್ಪರ್ಧೆ..

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿದ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ನಿಲುವಿನಿಂದ ಸಿಟ್ಟಿಗೆದ್ದಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅವರು ಸ್ವಂತ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸುವುದ್ದಲ್ಲದೇ, ಈ ಪಕ್ಷ ಯುಪಿಯಲ್ಲಿ ನಡೆಯುವ ಮೊದಲ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

ಭೀಮ್‌ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಈಗ ಸಂಪೂರ್ಣವಾಗಿ ರಾಜಕೀಯ ಪ್ರವೇಶಿಸಲು ನಿರ್ಧರಿಸಿದ್ದಾರೆ. ಅವರು ಶೀಘ್ರದಲ್ಲೇ ತಮ್ಮ ಪಕ್ಷದ ಹೆಸರನ್ನು ಪ್ರಕಟಿಸಲಿದ್ದಾರೆ. ಇಲ್ಲಿಯವರೆಗೆ, ಭೀಮ್‌ ಆರ್ಮಿಯು ಬಿಎಸ್ಪಿಯನ್ನು ರಾಜಕೀಯ ಆಯ್ಕೆಯಾಗಿ ಬೆಂಬಲಿಸುತ್ತಿತ್ತು. ಆದರೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಬಿಎಸ್‌ಪಿ ಬೆಂಬಲಿಸಿದ್ದರಿಂದ ನೊಂದ ಅವರು ಹೊಸ ಪಕ್ಷ ಸ್ಥಾಪಿಸುವ ಪಣತೊಟ್ಟಿದ್ದಾರೆ.

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಶೇಖರ್ ಅವರ ಪಕ್ಷ ಹೆಚ್ಚು ಹೆಚ್ಚು ಸ್ಥಾನಗಳಿಗೆ ಸ್ಪರ್ಧಿಸಲಿದೆ. ಕೆಲವೇ ದಿನಗಳಲ್ಲಿ ಪಕ್ಷದ ಹೆಸರನ್ನು ಪ್ರಕಟಿಸಲಾಗುವುದು ಎಂದು ಚಂದ್ರ ಶೇಖರ್ ಅವರ ಸಹಾಯಕ ಕುಶ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ. ಈ ಪಕ್ಷ ಯುಪಿಯಲ್ಲಿ ನಡೆಯುವ ಮೊದಲ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಇದರ ನಂತರ, 2022 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಾಗುವುದು. ಚಂದ್ರಶೇಖರ್ ಅವರೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಎಂಬುದನ್ನು ನಂತರ ನಿರ್ಧರಿಸಲಾಗುತ್ತದೆ. ಪ್ರಸ್ತುತ ಲಖನೌದಲ್ಲಿ ಪಕ್ಷದ ಕಚೇರಿ ಸ್ಥಾಪಿಸಲು ಉದ್ದೇಶಿಸಿರುವ ಅವರು ಪಶ್ಚಿಮ ಯುಪಿಯಲ್ಲಿ ಭೀಮ್‌ ಆರ್ಮಿಗೆ ಬಲವಾದ ಹಿಡಿತವಿದೆ ಎಂದಿದ್ದಾರೆ.

ಇದನ್ನೂ ಓದಿ: ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ಈ ಕುರಿತು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಚಂದ್ರಶೇಖರ್ ಅಜಾದ್‌ ರಾವಣ್‌ ‘ನಾನು ಇಂದು ಹೊಸ ರಾಜಕೀಯ ಆಯ್ಕೆಗಳನ್ನು ಬಹುಜನ ಸಮಾಜಕ್ಕೆ ಘೋಷಿಸುತ್ತಿದ್ದೇನೆ. ಸಮಾಜಕ್ಕೆ ತಮ್ಮ ಜೀವನವನ್ನು ಅರ್ಪಿಸಿ ನಾಯಕತ್ವವನ್ನು ವಹಿಸುವ ಪ್ರಾಮಾಣಿಕ, ಹೋರಾಟನಿರತ ಮತ್ತು ಮಹತ್ವಕಾಂಕ್ಷೆಯುಳ್ಳ ಯುವಜನರಿಗೆ ಪಕ್ಷ ಸೇರಲು ಮನವಿ ಮಾಡುತ್ತೇನೆ. ಇನ್ನು ಮುಂದೆ ಶ್ರೀಮಂತರಲ್ಲ, ಕಾರ್ಯಕರ್ತರು ನಾಯಕನಾಗುತ್ತಾರೆ. ಜೈ ಭೀಮ್‌’ ಎಂದು ಘೋಷಿಸಿದ್ದಾರೆ.

ಸಂಸತ್ತಿನಲ್ಲಿ ಸಂವಿಧಾನ ಹತ್ಯೆಯಾಗುತ್ತಿದ್ದಾಗ, ಆ ಸಮಯದಲ್ಲಿ ಇಬ್ಬರು ಬಿಎಸ್ಪಿ ರಾಜ್ಯಸಭಾ ಸಂಸದರು ಸಂವಿಧಾನವನ್ನು ಉಳಿಸದೇ ಓಡಿ ಹೋದರು. ಮತ್ತು ಪೌರತ್ವ ಮಸೂದೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದರು. ಅವರು ಅಂಬೇಡ್ಕರ್, ಬಿಎಸ್ಪಿ ಸಂಸ್ಥಾಪಕ ಕಾನ್ಶಿರಾಮ್ ಮತ್ತು ದಲಿತರನ್ನು ವಂಚಿಸಿದ್ದಾರೆ ಎಂದು ಸಹ ಅವರು ಆರೋಪಿಸಿದ್ದಾರೆ. ಆರ್ಥಿಕ ಆಧಾರಲ್ಲಿ 10% ಮೀಸಲಾತಿ ನೀಡುವ ಸಂದರ್ಭ ಮತ್ತು ಕಾಶ್ಮೀರದ 370ನೇ ವಿಧಿ ರದ್ದಿನ ಸಂದರ್ಭದಲ್ಲಿಯೂ ಕೂಡ ಸಹೋದರಿ ಮಾಯಾವತಿಯವರು ಬಿಜೆಪಿಗೆ ಬೆಂಬಲ ನೀಡಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಹೆಸರಿಗಾಗಿ ಚಂದ್ರಶೇಖರ್ ಅಜಾದ್‌ರವರು ಸೋಷಿಯಲ್ ಮೀಡಿಯಾದಲ್ಲಿ ಸಲಹೆಗಳನ್ನು ಸಹ ಕೋರಿದ್ದಾರೆ. ಅವರ ಸಹಾಯಕ ಖುಷ್‌ ಸಹ ಉತ್ತರ ಪ್ರದೇಶದ ಚುನಾವಣೆಯಲ್ಲಿ ಭೀಮ್‌ ಆರ್ಮಿ ಸಹ ಸ್ಪರ್ಧಿಸಿದರೆ ಬಿಎಸ್‌ಪಿ ಅಥವಾ ಭೀಮ್‌ ಆರ್ಮಿ ಇವೆರಡರಲ್ಲಿ ಯಾವುದಕ್ಕೆ ಓಟು ಹಾಕುತ್ತೀರಿ ಎಂಬ ಪೊಲೀಂಗ್‌ ಸಹ ಆರಂಭಿಸಿದ್ದಾರೆ.

ಸಿಎಬಿ ಮತ್ತು ಎನ್‌ಆರ್‌ಸಿ ಸಂವಿಧಾನದ ವಿರುದ್ದವಿವೆ.
ಚಂದ್ರಶೇಖರ್ ಅವರ ಪ್ರಕಾರ, ಸಿಎಬಿ ಮತ್ತು ಎನ್ಆರ್‌ಸಿ ದೇಶದ ಸಂವಿಧಾನವನ್ನು ನಾಶಮಾಡುವ ಪಿತೂರಿ. ಈ ದೇಶದ ದಲಿತರು, ಬುಡಕಟ್ಟು ಜನಾಂಗದವರು, ಹಿಂದುಳಿದವರು, ಮುಸ್ಲಿಮರು ಇಲ್ಲಿ ಸ್ಥಳೀಯರಾಗಿದ್ದಾರೆ. ಹೊರಗಿನಿಂದ ಬಂದ ಮೇಲ್ಜಾತಿಯವರೆ ಆರ್ಯರಾಗಿದ್ದು, ಅವರ ಡಿಎನ್‌ಎ ಪರೀಕ್ಷೆ ಮಾಡಬೇಕು ಮತ್ತು ಅವರನ್ನು ಮೊದಲು ಎನ್‌ಆರ್‌ಸಿ ಅಡಿಯಲ್ಲಿ ತರಬೇಕು. ಸಂವಿಧಾನದ ರಕ್ಷಣೆಗಾಗಿ ಮತ್ತು ದೇಶದ ಅತಿದೊಡ್ಡ ಆಂದೋಲನಕ್ಕಾಗಿ ದೇಶದ ಬಹುಜನರು ಸಿದ್ದರಾಗಬೇಕು ಎಂದು ಕರೆ ನೀಡಿದ್ದಾರೆ.

ಮಾಯಾವತಿಯವರ ಬೆಂಬಲ ಸಿಗಲಿಲ್ಲ
ಚಂದ್ರಶೇಖರ್‌ರವರು ದಲಿತರ ಧ್ವನಿ ಎತ್ತರಿಸಲು ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಆಯೋಜಿಸಿದರು. ಆದರೆ ಅವರಿಗೆ ಎಂದಿಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯ ಬೆಂಬಲ ಸಿಗಲಿಲ್ಲ. ಹಲವಾರು ಬಾರಿ ಚಂದ್ರಶೇಖರ್ ಮಾಯಾವತಿಯವರನ್ನು ಭೇಟಿಯಾಗಲು ಪ್ರಯತ್ನಿಸಿದರೂ ಸಹ ಮಾಯಾವತಿಯವರು ಭೇಟಿಯಾಗಲಿಲ್ಲ. ಇದೇ ಕಾರಣಕ್ಕಾಗಿ ಬಹುಜನ ಸಮಾಜದ ಧ್ವನಿ ಹೆಚ್ಚಿಸಲು ಚಂದ್ರಶೇಖರ್ ಈಗ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದಾರೆ.

ಯಾರು ಈ ಚಂದ್ರಶೇಖರ್ ಅಜಾದ್‌ ರಾವಣ್‌?
ಚಂದ್ರಶೇಖರ್ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಧಕ್ಕುಲಿ ಗ್ರಾಮದಲ್ಲಿ. ಕಾನೂನು ಅಧ್ಯಯನ ಮಾಡಿದ ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಮೂಲ ಸ್ಥಳದಲ್ಲಿ ಒಂದು ಬೋರ್ಡ್ ಹಾಕಿದ್ದರು, ಅದರಲ್ಲಿ ಅವರು ‘ಮಹಾ ಚಮ್ಮಾರರನ್ನು ಧಡಕಲಿಯು ಸ್ವಾಗತಿಸುತ್ತದೆ (ಧಡಕಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬರೆದಿದ್ದಾರೆ. ಈ ಕ್ರಮವು ಗ್ರಾಮದಲ್ಲಿ ದಲಿತರು ಮತ್ತು ಠಾಕೂರ್‌ಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಿತು. ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದ್ದಾರೆ. ದಲಿತ-ಮುಸ್ಲಿಂ ಏಕತೆಯ ಪರವಾಗಿರುವ ಚಂದ್ರಶೇಖರ್ ಅವರು ಫೇಸ್‌ಬುಕ್ ಮತ್ತು ವಾಟ್ಸಪ್ ಮೂಲಕ ಜನರನ್ನು ಭೀಮ್‌ ಆರ್ಮಿಯೊಂದಿಗೆ ಸಂಪರ್ಕಿಸುವ ಕೆಲಸ ಮಾಡಿದರು.

ಇದನ್ನೂ ಓದಿ: ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ತನ್ನ ಮಿಲಿಂಟೆಂಟ್‌ ಹೋರಾಟಗಳ ಕಾರಣಕ್ಕಾಗಿ ಅತಿ ಶೀಘ್ರದಲ್ಲಿಯೇ ದೇಶಾದ್ಯಂತ ಯುವ ಅನುಯಾಯಿಗಳನ್ನು ಪಡೆದ ಇವರು ಮೇಲ್ಜಾತಿಗಳ ದೌರ್ಜನ್ಯಕ್ಕೆ ಹಿಂಸೆಯ ಮೂಲಕವೇ ತಿರುಗೇಟು ನೀಡಿ ಪ್ರಸಿದ್ದಿ ಪಡೆದಿದ್ದರು. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಅಧಿಕ ಕಾಲ ಜೈಲಿನಲ್ಲಿಟ್ಟಿತ್ತು. ಬಹುಜನರಿಗಾಗಿ ಎಷ್ಟು ಬಾರಿ ಬೇಕಾದರೂ ಜೈಲಿಗೆ ಹೋಗಲು ಸಿದ್ದವಿರುವ ಇವರು ಕೆಲವೇ ವರ್ಷಗಳಲ್ಲಿ ಅನೇಕ ಬಾರಿ ಜೈಲುವಾಸ ಅನುಭವಿಸಿದ್ದಾರೆ.

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ದಲಿತರು ಮತ್ತು ಮೇಲ್ಜಾತಿಗಳ ನಡುವೆ ಹಿಂಸಾಚಾರ ನಡೆದಿತ್ತು. ಈ ಸಮಯದಲ್ಲಿ ಭೀಮ್‌ ಆರ್ಮಿ ಎಂಬ ಹೆಸರಿನ ಸಂಘಟನೆ ಹೊರಹೊಮ್ಮಿತು. ಇದರ ಪೂರ್ಣ ಹೆಸರು ‘ಭಾರತ್ ಏಕ್ತಾ ಮಿಷನ್ ಭೀಮ್ ಆರ್ಮಿ’. ಈ ಸಂಘಟನೆಯ ಸ್ಥಾಪಕ ಮತ್ತು ಅಧ್ಯಕ್ಷರು ಚಂದ್ರಶೇಖರ್ ಅಜಾದ್‌. ಈ ಹಿಂದೆ ಅವರು ‘ರಾವಣ’ ಎಂಬ ಉಪನಾಮವನ್ನಿಟ್ಟುಕೊಂಡು ಪ್ರಸಿದ್ದರಾಗಿದ್ದರು. ನಂತರ ಅದನ್ನು ತೆಗೆದುಹಾಕಿದ್ದಾರೆ. ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇಸಿರುವ ಒಬ್ಬ ಕಾರ್ಯಕರ್ತ ಎಂದು ಅವರು ತಮ್ಮನ್ನು ತಾವು ಕರೆದುಕೊಳ್ಳುತ್ತಾರೆ.

ಕಳೆದೆರಡು ತಿಂಗಳ ಹಿಂದೆ ದೆಹಲಿಯ ದಲಿತರ ಪಾಲಿನ ದೇವಾಲಯವಾದ ರವಿದಾಸ ಮಂದಿರವನ್ನು ಹೈಕೋರ್ಟ್‌ ಸೂಚನೆಯ ಮೇರೆಗೆ ದೆಹಲಿ ಸ್ಥಳೀಯ ಆಡಳಿತ ನೆಮಸಮ ಮಾಡಿತ್ತು. ಇದರ ವಿರುದ್ಧ ನಡೆದ ಭಾರೀ ಜನಾಂದೋಲನದಲ್ಲಿ ಚಂದ್ರಶೇಖರ್‌ ಕೂಡ ಮಹತ್ವದ ಪಾತ್ರ ವಹಿಸಿದ್ದರು. ದಲಿತರ ಹೋರಾಟಕ್ಕೆ ಬೆದರಿದ ಕೇಂದ್ರ ಸರ್ಕಾರ ಅದೇ ಜಾಗದಲ್ಲಿ ದೇವಾಲಯದ ನಿರ್ಮಾಣಕ್ಕೆ ಅವಕಾಶಕೊಟ್ಟಿದೆ.

ಇದನ್ನೂ ಓದಿ: ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

ಇದೇ ವರ್ಷ ಆಗಸ್ಟ್‌ 15ರಂದು ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಭೂಮಿ ಹಕ್ಕಿಗಾಗಿ ದೊರೆಸ್ವಾಮಿಯವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮಧ್ಯರಾತ್ರಿ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಚಂದ್ರಶೇಖರ್‌ ಅಥಿತಿಯಾಗಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...