Homeಚಳವಳಿಭೀಮ್‌ ಆರ್ಮಿಯ ಚಂದ್ರಶೇಖರ್‌ ಅಜಾದ್‌ರಿಂದ ಹೊಸಪಕ್ಷದ ಘೋಷಣೆ : ದೆಹಲಿ ವಿಧಾನಸಭೆಗೆ ಸ್ಪರ್ಧೆ..

ಭೀಮ್‌ ಆರ್ಮಿಯ ಚಂದ್ರಶೇಖರ್‌ ಅಜಾದ್‌ರಿಂದ ಹೊಸಪಕ್ಷದ ಘೋಷಣೆ : ದೆಹಲಿ ವಿಧಾನಸಭೆಗೆ ಸ್ಪರ್ಧೆ..

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿದ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ನಿಲುವಿನಿಂದ ಸಿಟ್ಟಿಗೆದ್ದಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅವರು ಸ್ವಂತ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸುವುದ್ದಲ್ಲದೇ, ಈ ಪಕ್ಷ ಯುಪಿಯಲ್ಲಿ ನಡೆಯುವ ಮೊದಲ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

ಭೀಮ್‌ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಈಗ ಸಂಪೂರ್ಣವಾಗಿ ರಾಜಕೀಯ ಪ್ರವೇಶಿಸಲು ನಿರ್ಧರಿಸಿದ್ದಾರೆ. ಅವರು ಶೀಘ್ರದಲ್ಲೇ ತಮ್ಮ ಪಕ್ಷದ ಹೆಸರನ್ನು ಪ್ರಕಟಿಸಲಿದ್ದಾರೆ. ಇಲ್ಲಿಯವರೆಗೆ, ಭೀಮ್‌ ಆರ್ಮಿಯು ಬಿಎಸ್ಪಿಯನ್ನು ರಾಜಕೀಯ ಆಯ್ಕೆಯಾಗಿ ಬೆಂಬಲಿಸುತ್ತಿತ್ತು. ಆದರೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಬಿಎಸ್‌ಪಿ ಬೆಂಬಲಿಸಿದ್ದರಿಂದ ನೊಂದ ಅವರು ಹೊಸ ಪಕ್ಷ ಸ್ಥಾಪಿಸುವ ಪಣತೊಟ್ಟಿದ್ದಾರೆ.

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಶೇಖರ್ ಅವರ ಪಕ್ಷ ಹೆಚ್ಚು ಹೆಚ್ಚು ಸ್ಥಾನಗಳಿಗೆ ಸ್ಪರ್ಧಿಸಲಿದೆ. ಕೆಲವೇ ದಿನಗಳಲ್ಲಿ ಪಕ್ಷದ ಹೆಸರನ್ನು ಪ್ರಕಟಿಸಲಾಗುವುದು ಎಂದು ಚಂದ್ರ ಶೇಖರ್ ಅವರ ಸಹಾಯಕ ಕುಶ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ. ಈ ಪಕ್ಷ ಯುಪಿಯಲ್ಲಿ ನಡೆಯುವ ಮೊದಲ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಇದರ ನಂತರ, 2022 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಾಗುವುದು. ಚಂದ್ರಶೇಖರ್ ಅವರೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಎಂಬುದನ್ನು ನಂತರ ನಿರ್ಧರಿಸಲಾಗುತ್ತದೆ. ಪ್ರಸ್ತುತ ಲಖನೌದಲ್ಲಿ ಪಕ್ಷದ ಕಚೇರಿ ಸ್ಥಾಪಿಸಲು ಉದ್ದೇಶಿಸಿರುವ ಅವರು ಪಶ್ಚಿಮ ಯುಪಿಯಲ್ಲಿ ಭೀಮ್‌ ಆರ್ಮಿಗೆ ಬಲವಾದ ಹಿಡಿತವಿದೆ ಎಂದಿದ್ದಾರೆ.

ಇದನ್ನೂ ಓದಿ: ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ಈ ಕುರಿತು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಚಂದ್ರಶೇಖರ್ ಅಜಾದ್‌ ರಾವಣ್‌ ‘ನಾನು ಇಂದು ಹೊಸ ರಾಜಕೀಯ ಆಯ್ಕೆಗಳನ್ನು ಬಹುಜನ ಸಮಾಜಕ್ಕೆ ಘೋಷಿಸುತ್ತಿದ್ದೇನೆ. ಸಮಾಜಕ್ಕೆ ತಮ್ಮ ಜೀವನವನ್ನು ಅರ್ಪಿಸಿ ನಾಯಕತ್ವವನ್ನು ವಹಿಸುವ ಪ್ರಾಮಾಣಿಕ, ಹೋರಾಟನಿರತ ಮತ್ತು ಮಹತ್ವಕಾಂಕ್ಷೆಯುಳ್ಳ ಯುವಜನರಿಗೆ ಪಕ್ಷ ಸೇರಲು ಮನವಿ ಮಾಡುತ್ತೇನೆ. ಇನ್ನು ಮುಂದೆ ಶ್ರೀಮಂತರಲ್ಲ, ಕಾರ್ಯಕರ್ತರು ನಾಯಕನಾಗುತ್ತಾರೆ. ಜೈ ಭೀಮ್‌’ ಎಂದು ಘೋಷಿಸಿದ್ದಾರೆ.

ಸಂಸತ್ತಿನಲ್ಲಿ ಸಂವಿಧಾನ ಹತ್ಯೆಯಾಗುತ್ತಿದ್ದಾಗ, ಆ ಸಮಯದಲ್ಲಿ ಇಬ್ಬರು ಬಿಎಸ್ಪಿ ರಾಜ್ಯಸಭಾ ಸಂಸದರು ಸಂವಿಧಾನವನ್ನು ಉಳಿಸದೇ ಓಡಿ ಹೋದರು. ಮತ್ತು ಪೌರತ್ವ ಮಸೂದೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದರು. ಅವರು ಅಂಬೇಡ್ಕರ್, ಬಿಎಸ್ಪಿ ಸಂಸ್ಥಾಪಕ ಕಾನ್ಶಿರಾಮ್ ಮತ್ತು ದಲಿತರನ್ನು ವಂಚಿಸಿದ್ದಾರೆ ಎಂದು ಸಹ ಅವರು ಆರೋಪಿಸಿದ್ದಾರೆ. ಆರ್ಥಿಕ ಆಧಾರಲ್ಲಿ 10% ಮೀಸಲಾತಿ ನೀಡುವ ಸಂದರ್ಭ ಮತ್ತು ಕಾಶ್ಮೀರದ 370ನೇ ವಿಧಿ ರದ್ದಿನ ಸಂದರ್ಭದಲ್ಲಿಯೂ ಕೂಡ ಸಹೋದರಿ ಮಾಯಾವತಿಯವರು ಬಿಜೆಪಿಗೆ ಬೆಂಬಲ ನೀಡಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಹೆಸರಿಗಾಗಿ ಚಂದ್ರಶೇಖರ್ ಅಜಾದ್‌ರವರು ಸೋಷಿಯಲ್ ಮೀಡಿಯಾದಲ್ಲಿ ಸಲಹೆಗಳನ್ನು ಸಹ ಕೋರಿದ್ದಾರೆ. ಅವರ ಸಹಾಯಕ ಖುಷ್‌ ಸಹ ಉತ್ತರ ಪ್ರದೇಶದ ಚುನಾವಣೆಯಲ್ಲಿ ಭೀಮ್‌ ಆರ್ಮಿ ಸಹ ಸ್ಪರ್ಧಿಸಿದರೆ ಬಿಎಸ್‌ಪಿ ಅಥವಾ ಭೀಮ್‌ ಆರ್ಮಿ ಇವೆರಡರಲ್ಲಿ ಯಾವುದಕ್ಕೆ ಓಟು ಹಾಕುತ್ತೀರಿ ಎಂಬ ಪೊಲೀಂಗ್‌ ಸಹ ಆರಂಭಿಸಿದ್ದಾರೆ.

ಸಿಎಬಿ ಮತ್ತು ಎನ್‌ಆರ್‌ಸಿ ಸಂವಿಧಾನದ ವಿರುದ್ದವಿವೆ.
ಚಂದ್ರಶೇಖರ್ ಅವರ ಪ್ರಕಾರ, ಸಿಎಬಿ ಮತ್ತು ಎನ್ಆರ್‌ಸಿ ದೇಶದ ಸಂವಿಧಾನವನ್ನು ನಾಶಮಾಡುವ ಪಿತೂರಿ. ಈ ದೇಶದ ದಲಿತರು, ಬುಡಕಟ್ಟು ಜನಾಂಗದವರು, ಹಿಂದುಳಿದವರು, ಮುಸ್ಲಿಮರು ಇಲ್ಲಿ ಸ್ಥಳೀಯರಾಗಿದ್ದಾರೆ. ಹೊರಗಿನಿಂದ ಬಂದ ಮೇಲ್ಜಾತಿಯವರೆ ಆರ್ಯರಾಗಿದ್ದು, ಅವರ ಡಿಎನ್‌ಎ ಪರೀಕ್ಷೆ ಮಾಡಬೇಕು ಮತ್ತು ಅವರನ್ನು ಮೊದಲು ಎನ್‌ಆರ್‌ಸಿ ಅಡಿಯಲ್ಲಿ ತರಬೇಕು. ಸಂವಿಧಾನದ ರಕ್ಷಣೆಗಾಗಿ ಮತ್ತು ದೇಶದ ಅತಿದೊಡ್ಡ ಆಂದೋಲನಕ್ಕಾಗಿ ದೇಶದ ಬಹುಜನರು ಸಿದ್ದರಾಗಬೇಕು ಎಂದು ಕರೆ ನೀಡಿದ್ದಾರೆ.

ಮಾಯಾವತಿಯವರ ಬೆಂಬಲ ಸಿಗಲಿಲ್ಲ
ಚಂದ್ರಶೇಖರ್‌ರವರು ದಲಿತರ ಧ್ವನಿ ಎತ್ತರಿಸಲು ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಆಯೋಜಿಸಿದರು. ಆದರೆ ಅವರಿಗೆ ಎಂದಿಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯ ಬೆಂಬಲ ಸಿಗಲಿಲ್ಲ. ಹಲವಾರು ಬಾರಿ ಚಂದ್ರಶೇಖರ್ ಮಾಯಾವತಿಯವರನ್ನು ಭೇಟಿಯಾಗಲು ಪ್ರಯತ್ನಿಸಿದರೂ ಸಹ ಮಾಯಾವತಿಯವರು ಭೇಟಿಯಾಗಲಿಲ್ಲ. ಇದೇ ಕಾರಣಕ್ಕಾಗಿ ಬಹುಜನ ಸಮಾಜದ ಧ್ವನಿ ಹೆಚ್ಚಿಸಲು ಚಂದ್ರಶೇಖರ್ ಈಗ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದಾರೆ.

ಯಾರು ಈ ಚಂದ್ರಶೇಖರ್ ಅಜಾದ್‌ ರಾವಣ್‌?
ಚಂದ್ರಶೇಖರ್ ಜನಿಸಿದ್ದು ಸಹರಾನ್‌ಪುರದ ಚತ್ಮಾಲ್‌ಪುರದ ಬಳಿಯ ಧಕ್ಕುಲಿ ಗ್ರಾಮದಲ್ಲಿ. ಕಾನೂನು ಅಧ್ಯಯನ ಮಾಡಿದ ಅವರು ಮೊದಲು ಸುದ್ದಿಯಾಗಿದ್ದು 2015 ರಲ್ಲಿ. ಅವರು ತಮ್ಮ ಮೂಲ ಸ್ಥಳದಲ್ಲಿ ಒಂದು ಬೋರ್ಡ್ ಹಾಕಿದ್ದರು, ಅದರಲ್ಲಿ ಅವರು ‘ಮಹಾ ಚಮ್ಮಾರರನ್ನು ಧಡಕಲಿಯು ಸ್ವಾಗತಿಸುತ್ತದೆ (ಧಡಕಲಿ ವೆಲ್ಕಮ್ ಯು ದಿ ಗ್ರೇಟ್ ಚಾಮರ್ಸ್)’ ಎಂದು ಬರೆದಿದ್ದಾರೆ. ಈ ಕ್ರಮವು ಗ್ರಾಮದಲ್ಲಿ ದಲಿತರು ಮತ್ತು ಠಾಕೂರ್‌ಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಿತು. ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದ್ದಾರೆ. ದಲಿತ-ಮುಸ್ಲಿಂ ಏಕತೆಯ ಪರವಾಗಿರುವ ಚಂದ್ರಶೇಖರ್ ಅವರು ಫೇಸ್‌ಬುಕ್ ಮತ್ತು ವಾಟ್ಸಪ್ ಮೂಲಕ ಜನರನ್ನು ಭೀಮ್‌ ಆರ್ಮಿಯೊಂದಿಗೆ ಸಂಪರ್ಕಿಸುವ ಕೆಲಸ ಮಾಡಿದರು.

ಇದನ್ನೂ ಓದಿ: ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ತನ್ನ ಮಿಲಿಂಟೆಂಟ್‌ ಹೋರಾಟಗಳ ಕಾರಣಕ್ಕಾಗಿ ಅತಿ ಶೀಘ್ರದಲ್ಲಿಯೇ ದೇಶಾದ್ಯಂತ ಯುವ ಅನುಯಾಯಿಗಳನ್ನು ಪಡೆದ ಇವರು ಮೇಲ್ಜಾತಿಗಳ ದೌರ್ಜನ್ಯಕ್ಕೆ ಹಿಂಸೆಯ ಮೂಲಕವೇ ತಿರುಗೇಟು ನೀಡಿ ಪ್ರಸಿದ್ದಿ ಪಡೆದಿದ್ದರು. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ಇವರನ್ನು ಒಂದೂ ವರ್ಷಕ್ಕೂ ಅಧಿಕ ಕಾಲ ಜೈಲಿನಲ್ಲಿಟ್ಟಿತ್ತು. ಬಹುಜನರಿಗಾಗಿ ಎಷ್ಟು ಬಾರಿ ಬೇಕಾದರೂ ಜೈಲಿಗೆ ಹೋಗಲು ಸಿದ್ದವಿರುವ ಇವರು ಕೆಲವೇ ವರ್ಷಗಳಲ್ಲಿ ಅನೇಕ ಬಾರಿ ಜೈಲುವಾಸ ಅನುಭವಿಸಿದ್ದಾರೆ.

ದಲಿತರಿಗೆ ಶಿಕ್ಷಣ ಬೇಕು ಎಂಬುದನ್ನು ಮನಗಂಡಿರುವ ಭೀಮ್‌ ಆರ್ಮಿ ಉತ್ತರ ಪ್ರದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭೀಮ್‌ ಪಾಠಶಾಲಾಗಳನ್ನು ನಡೆಸುತ್ತಿದೆ.

ಸಹರಾನ್‌ಪುರದ ಶಬ್ಬೀರ್‌ಪುರ ಗ್ರಾಮದಲ್ಲಿ 2017 ರಲ್ಲಿ ದಲಿತರು ಮತ್ತು ಮೇಲ್ಜಾತಿಗಳ ನಡುವೆ ಹಿಂಸಾಚಾರ ನಡೆದಿತ್ತು. ಈ ಸಮಯದಲ್ಲಿ ಭೀಮ್‌ ಆರ್ಮಿ ಎಂಬ ಹೆಸರಿನ ಸಂಘಟನೆ ಹೊರಹೊಮ್ಮಿತು. ಇದರ ಪೂರ್ಣ ಹೆಸರು ‘ಭಾರತ್ ಏಕ್ತಾ ಮಿಷನ್ ಭೀಮ್ ಆರ್ಮಿ’. ಈ ಸಂಘಟನೆಯ ಸ್ಥಾಪಕ ಮತ್ತು ಅಧ್ಯಕ್ಷರು ಚಂದ್ರಶೇಖರ್ ಅಜಾದ್‌. ಈ ಹಿಂದೆ ಅವರು ‘ರಾವಣ’ ಎಂಬ ಉಪನಾಮವನ್ನಿಟ್ಟುಕೊಂಡು ಪ್ರಸಿದ್ದರಾಗಿದ್ದರು. ನಂತರ ಅದನ್ನು ತೆಗೆದುಹಾಕಿದ್ದಾರೆ. ಡಾ.ಬಿ.ಆರ್‌ ಅಂಬೇಡ್ಕರ್‌ ಮತ್ತು ಕಾನ್ಶಿರಾಮ್‌ರವರ ಆಶಯಗಳನ್ನು ಈಡೇಸಿರುವ ಒಬ್ಬ ಕಾರ್ಯಕರ್ತ ಎಂದು ಅವರು ತಮ್ಮನ್ನು ತಾವು ಕರೆದುಕೊಳ್ಳುತ್ತಾರೆ.

ಕಳೆದೆರಡು ತಿಂಗಳ ಹಿಂದೆ ದೆಹಲಿಯ ದಲಿತರ ಪಾಲಿನ ದೇವಾಲಯವಾದ ರವಿದಾಸ ಮಂದಿರವನ್ನು ಹೈಕೋರ್ಟ್‌ ಸೂಚನೆಯ ಮೇರೆಗೆ ದೆಹಲಿ ಸ್ಥಳೀಯ ಆಡಳಿತ ನೆಮಸಮ ಮಾಡಿತ್ತು. ಇದರ ವಿರುದ್ಧ ನಡೆದ ಭಾರೀ ಜನಾಂದೋಲನದಲ್ಲಿ ಚಂದ್ರಶೇಖರ್‌ ಕೂಡ ಮಹತ್ವದ ಪಾತ್ರ ವಹಿಸಿದ್ದರು. ದಲಿತರ ಹೋರಾಟಕ್ಕೆ ಬೆದರಿದ ಕೇಂದ್ರ ಸರ್ಕಾರ ಅದೇ ಜಾಗದಲ್ಲಿ ದೇವಾಲಯದ ನಿರ್ಮಾಣಕ್ಕೆ ಅವಕಾಶಕೊಟ್ಟಿದೆ.

ಇದನ್ನೂ ಓದಿ: ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

ಇದೇ ವರ್ಷ ಆಗಸ್ಟ್‌ 15ರಂದು ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಭೂಮಿ ಹಕ್ಕಿಗಾಗಿ ದೊರೆಸ್ವಾಮಿಯವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮಧ್ಯರಾತ್ರಿ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಚಂದ್ರಶೇಖರ್‌ ಅಥಿತಿಯಾಗಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...