Homeಮುಖಪುಟಭೀಮಾ ಕೋರೆಗಾಂವ್‌: 8 ಹೋರಾಟಗಾರರಿಗೆ ಡೀಫಾಲ್ಟ್ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್‌: 8 ಹೋರಾಟಗಾರರಿಗೆ ಡೀಫಾಲ್ಟ್ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದ ಎಂಟು ಆರೋಪಿಗಳು ಜಾಮೀನು ನಿರಾಕರಿಸಿದ ಆದೇಶವನ್ನು ಸರಿಪಡಿಸುವಂತೆ ಕೋರಿ ಸಲ್ಲಿಸಿದ ಮನವಿಯಲ್ಲಿ ಮಧ್ಯಪ್ರವೇಶಿಸಲು ಬಾಂಬೆ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿತರಾದ 16 ಜನರಲ್ಲಿ ಎಂಟು ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರು ಇದ್ದಾರೆ.

ಬಂಧಿತಕ್ಕೊಳಗಾಗಿರುವ ಹೋರಾಟಗಾರರು ಹಾಗೂ ಶಿಕ್ಷಣ ತಜ್ಞರನ್ನು ಪ್ರತಿನಿಧಿಸುವ ವಕೀಲರು ಪ್ರಸ್ತುತ ಮನವಿಯನ್ನು ವಿಲೇವಾರಿ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಎಂಟು ಮಂದಿ ಆರೋಪಿಗಳಾದ ಸುಧೀರ್ ಧವಳೆ, ವರವರ ರಾವ್, ರೋನಾ ವಿಲ್ಸನ್, ಸುರೇಂದ್ರ ಗಡ್ಲಿಂಗ್, ಶೋಮಾ ಸೇನ್, ಮಹೇಶ್ ರಾವುತ್, ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಡಿಸೆಂಬರ್ 1ರಂದು ಬಾಂಬೆ ಹೈಕೋರ್ಟ್ ಡೀಫಾಲ್ಟ್ ಜಾಮೀನು ನಿರಾಕರಿಸಿತ್ತು. ಅರ್ಜಿದಾರರು ಸಕಾಲದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆದರೆ, ಅದೇ ದಿನ, ಪ್ರಕರಣದಲ್ಲಿ ಬಂಧಿತರಾದ 16 ಜನರಲ್ಲಿ ಒಬ್ಬರಾದ ಕಾರ್ಯಕರ್ತೆ ಸುಧಾ ಭಾರದ್ವಾಜ್ ಅವರಿಗೆ ನ್ಯಾಯಾಲಯ ಡೀಫಾಲ್ಟ್ ಜಾಮೀನು ನೀಡಿತ್ತು. ಆರೋಪಪಟ್ಟಿ ಸಲ್ಲಿಸುವ ಮೊದಲು ಭಾರದ್ವಾಜ್ ಪುಣೆ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿ ಸಲ್ಲಿಸಿದ್ದನ್ನು ನ್ಯಾಯಾಲಯ ಗಮನಿಸಿತ್ತು. ಭಾರದ್ವಾಜ್ ಅವರ 90 ದಿನಗಳ ಬಂಧನ ಅವಧಿಯೂ ಮುಗಿದರೂ ಚಾರ್ಜ್‌ಶೀಟ್ ಸಲ್ಲಿಸದಿರುವುದರಿಂದ ಅವರಿಗೆ ಡೀಫಾಲ್ಟ್ ಜಾಮೀನು ನೀಡಲಾಗಿತ್ತು.

ಭಾರದ್ವಾಜ್ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿ, ಧವಳೆ, ವಿಲ್ಸನ್, ಗಾಡ್ಲಿಂಗ್, ಸೇನ್ ಮತ್ತು ರಾವುತ್ ಅವರು ತಮ್ಮ ಬಂಧನದ 90 ದಿನಗಳ ನಂತರ ಮತ್ತು ತಮ್ಮ ವಿರುದ್ಧ ಆರೋಪಪಟ್ಟಿ ಸಲ್ಲಿಸುವ ಆರು ವಾರಗಳ ಮೊದಲು ತಮ್ಮ ಡೀಫಾಲ್ಟ್ ಜಾಮೀನು ಅರ್ಜಿಗಳನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಗೊನ್ಸಾಲ್ವೆಸ್, ರಾವ್ ಮತ್ತು ಫೆರೀರಾ ಅವರೂ ಡೀಫಾಲ್ಟ್ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ. ಪುಣೆ ನ್ಯಾಯಾಲಯವು ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ಸಾಮಾನ್ಯ ಆದೇಶದಲ್ಲಿ ತಿರಸ್ಕರಿಸಿದೆ. ಆದಾಗ್ಯೂ, ಬಾಂಬೆ ಹೈಕೋರ್ಟ್ ಡಿಸೆಂಬರ್ 1 ರಂದು ಭಾರದ್ವಾಜ್ ಅವರಿಗೆ ಡೀಫಾಲ್ಟ್ ಜಾಮೀನು ನೀಡುವಾಗ ಪುಣೆ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ ಎಂದು ಕಾರ್ಯಕರ್ತರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...